Homeಮುಖಪುಟತುಮಕೂರು: ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯಲು ಸೊಗಡು ಶಿವಣ್ಣ ನಿರ್ಧಾರ

ತುಮಕೂರು: ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯಲು ಸೊಗಡು ಶಿವಣ್ಣ ನಿರ್ಧಾರ

- Advertisement -
- Advertisement -

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದತೆ ಬಿಜೆಪಿಯಲ್ಲಿ ಬಂಡಾಯದ ಬಿರುಗಾಳಿ ಎದ್ದಿದೆ. ಪಕ್ಷ ತೊರೆಯುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಅವರ ಸಾಲಿಗೆ ಮಾಜಿ ಸಚಿವ ಸೊಗಡು ಶಿವಣ್ಣ ಕೂಡ ಸೇರಿಕೊಂಡಿದ್ದಾರೆ.

ತುಮಕೂರು ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಕಳೆದ ಒಂದು ತಿಂಗಳಿನಿಂದಲೇ ಜೋಳಿಗೆ ಹಿಡಿದು ಪ್ರಚಾರ ಆರಂಭಿಸಿದ್ದರು. ಆದರೆ ಅವರ ಬದಲು ಸಂಸದ ಬಸವರಾಜುರವರ ಪುತ್ರ, ಹಾಲಿ ಶಾಸಕ ಜ್ಯೋತಿಗಣೇಶ್‌ಗೆ ಬಿಜೆಪಿ ಮಣೆ ಹಾಕಿದೆ. ಇದರಿಂದ ಬಂಡಾಯವೆದ್ದಿರುವ ಸೊಗಡು ಶಿವಣ್ಣ ಬಿಜೆಪಿ ತೊರೆಯುವುದಾಗಿ ಘೋಷಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ರಾಜೀನಾಮೆ ನೀಡುವುದು ಸತ್ಯ. ನೂರಕ್ಕೆ ನೂರು ಶೇಕಡಾ ನಾಳೆ ರಾಜೀನಾಮೆ ಕೊಡ್ತೀನಿ. ಚುನಾವಣೆಗೆ ಜೋಳಿಗೆ ಹಾಕಿಕೊಂಡು ನಿಂತುಕೊಳ್ಳುತ್ತೇನೆ. ನಮ್ಮ ಕ್ಷೇತ್ರದ ಮತದಾರ ದೇವರ ಸತ್ಯ ಮಾಡಿ ಹೇಳುತ್ತಿದ್ದೇನೆ. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ” ಎಂದು ಘೋಷಿಸಿದ್ದಾರೆ.

ನನಗೆ ಇವತ್ತು ರಾತ್ರಿಯವರೆಗೆ ಸಮಯ ಬೇಕು. ಏಕೆಂದರೆ ಬಿಜೆಪಿ ಪಕ್ಷದ ಬಾವುಟಗಳು ನನ್ನ ಮನೆಯಲ್ಲಿವೆ. ನಾನು ಕೊನೆಯವರೆಗೂ ಅದಕ್ಕೆ ಗೌರವ ಕೊಡಬೇಕು. ಹೀಗಾಗಿ ಅವುಗಳನ್ನ ಬೇರೆ ಕಡೆಗೆ ಶಿಫ್ಟ್ ಮಾಡಬೇಕಿದೆ. ಅದಾದ ನಂತರ ರಾಜೀನಾಮೆ ಘೋಷಿಸುತ್ತೇನೆ ಎಂದಿದ್ದಾರೆ.

ಸಂಘಪರಿವಾರದ ಹಿನ್ನಲೆಯ ಬಿಜೆಪಿ ಅಭ್ಯರ್ಥಿ ಸೊಗಡು ಶಿವಣ್ಣ 1994ರಲ್ಲಿ ಕಾಂಗ್ರೆಸ್‌ನ ಎಸ್.ಶಫಿ ಅಹಮದ್‌ರನ್ನು ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ನಂತರ 1999 ಮತ್ತು 2004ರಲ್ಲಿಯೂ ಸಹ ಕಾಂಗ್ರೆಸ್‌ನ ಎಸ್.ಶಫಿ ಅಹಮದ್‌ರ ಎದುರು ಗೆದ್ದು ಹ್ಯಾಟ್ರಿಕ್ ಸಾಧಿಸಿದರು. 2007ರಲ್ಲಿ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ತೋಟಗಾರಿಕೆ ಇಲಾಖೆ ಸಚಿವರಾಗಿದ್ದರು. ಅಲ್ಲದೆ 2008ರಲ್ಲಿ ಕಾಂಗ್ರೆಸ್‌ನ ಡಾ. ರಫಿಕ್ ಅಹ್ಮದ್ ವಿರುದ್ಧ ಕೇವಲ 1,949 ಮತಗಳ ಅಂತರದಿಂದ ಗೆದ್ದು ಸತತ ನಾಲ್ಕನೇ ಬಾರಿಗೆ ಶಾಸಕರೆನಿಸಿಕೊಂಡರು. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಪರಿಸರ ಖಾತೆ ಸಚಿವರಾಗಿದ್ದರು.

2013ರ ಚುನಾವಣೆ ವೇಳೆಗೆ ಬಿಜೆಪಿ ಇಬ್ಭಾಗವಾಗಿತ್ತು. ಬಿಜೆಪಿಯಿಂದ ಸೊಗಡು ಶಿವಣ್ಣ ಸ್ಪರ್ಧಿಸಿದರೆ, ಯಡಿಯೂರಪ್ಪನವರ ಕೆಜೆಪಿಯಿಂದ ಇಂಜಿನಿಯರ್ ಜಿ.ಬಿ.ಜ್ಯೋತಿ ಗಣೇಶ್ ಕಣಕ್ಕಿಳಿದಿದ್ದರು. ಇವರಿಬ್ಬರ ನಡುವಿನ ಮತ ವಿಭಜನೆಯ ಲಾಭ ಪಡೆದ ಕಾಂಗ್ರೆಸ್‌ನ ಡಾ. ರಫಿಕ್ ಅಹ್ಮದ್ ಕೇವಲ 3,608 ಮತಗಳಿಂದ ಗೆದ್ದು ಬಿಜೆಪಿ ನಾಗಾಲೋಟಕ್ಕೆ ಬ್ರೇಕ್ ಹಾಕಿದ್ದರು. 2018ರ ವೇಳೆಗೆ ಬಿಜೆಪಿಯೊಂದಿಗೆ ಕೆಜೆಪಿ ವಿಲೀನಗೊಂಡಿತ್ತು. ಆಗ ಸೊಗಡು ಶಿವಣ್ಣನವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಯಡಿಯೂರಪ್ಪ ಬಣದ ಜಿ.ಬಿ.ಜ್ಯೋತಿಗಣೇಶ್ ಬಿಜೆಪಿ ಅಭ್ಯರ್ಥಿಯಾದರು.

2018ರಲ್ಲಿ ಪಕ್ಷದ ವರಿಷ್ಠರ ಮಾತಿಗೆ ಬೆಲೆ ಕೊಟ್ಟು ಸ್ಪರ್ಧಿಸಲಿಲ್ಲ. ಆದರೆ ಈ ಬಾರಿ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಪಣ ತೊಟ್ಟಿದ್ದಾರೆ. ಶಿವಣ್ಣನವರ ಹಿಂದೆ ಆರ್‌ಎಸ್‌ಎಸ್ ಇದ್ದು, ಅವರು ಈಗಾಗಲೇ ವೋಟು ಕೊಡಿ, ನೋಟು ಕೊಡಿ ಎಂದು ಜೋಳಿಗೆ ಹಿಡಿದು ಪ್ರಚಾರ ಆರಂಭಿಸಿದ್ದಾರೆ.

ಇನ್ನು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಂಸದ ಮುದ್ದಹನುಮೇಗೌಡರು ಸಹ ಬಂಡಾಯದ ಸುಳಿವು ನೀಡಿದ್ದಾರೆ. ಕುಣಿಗಲ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತಮ್ಮ ತೋಟದ ಮನೆಯಲ್ಲಿ ಬೆಂಬಲಿಗರ ಸಭೆ ನಡೆಸಿದ್ದಾರೆ. ಕುಣಿಗಲ್‌ನಲ್ಲಿ ಕೃಷ್ಣಕುಮಾರ್‌ರವರಿಗೆ ಟಿಕೆಟ್ ಘೋಷಿಸಿದ ಹಿನ್ನೆಲೆಯಲ್ಲಿ ಮತ್ತೊರ್ವ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಜೇಶ್ ಗೌಡ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಜಗದೀಶ್ ಶೆಟ್ಟರ್ ಬಂಡಾಯ ಸ್ಪರ್ಧೆ ಸುಳಿವು ನೀಡಿದ್ದಾರೆ. ಗೂಳಿಹಟ್ಟಿ ಶೇಖರ್ ಬಂಡಾಯ ಅಭ್ಯರ್ಥಿಯಾಗುವುದಾಗಿ ಘೋಷಿಸಿದ್ದಾರೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಉಡುಪಿ ಟಿಕೆಟ್ ಸಿಗದ ರಘುಪತಿ ಭಟ್ ಕಣ್ಣೀರು ಹಾಕಿದ್ದಾರೆ. ನಿನ್ನೆಯೇ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈಗ ಸೊಗಡು ಶಿವಣ್ಣ ಏನು ಮಾಡುತ್ತಾರೆ ಕಾದು ನೋಡಬೇಕಿದೆ.

ಇದನ್ನೂ ಓದಿ: ತುಮಕೂರು ನಗರ: ಹೊಸ ಮುಖಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್ – ಬಿಜೆಪಿಯಲ್ಲಿ ಒಳಬೇಗುದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...