Homeಮುಖಪುಟತುಮಕೂರು: ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯಲು ಸೊಗಡು ಶಿವಣ್ಣ ನಿರ್ಧಾರ

ತುಮಕೂರು: ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯಲು ಸೊಗಡು ಶಿವಣ್ಣ ನಿರ್ಧಾರ

- Advertisement -
- Advertisement -

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದತೆ ಬಿಜೆಪಿಯಲ್ಲಿ ಬಂಡಾಯದ ಬಿರುಗಾಳಿ ಎದ್ದಿದೆ. ಪಕ್ಷ ತೊರೆಯುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಅವರ ಸಾಲಿಗೆ ಮಾಜಿ ಸಚಿವ ಸೊಗಡು ಶಿವಣ್ಣ ಕೂಡ ಸೇರಿಕೊಂಡಿದ್ದಾರೆ.

ತುಮಕೂರು ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಕಳೆದ ಒಂದು ತಿಂಗಳಿನಿಂದಲೇ ಜೋಳಿಗೆ ಹಿಡಿದು ಪ್ರಚಾರ ಆರಂಭಿಸಿದ್ದರು. ಆದರೆ ಅವರ ಬದಲು ಸಂಸದ ಬಸವರಾಜುರವರ ಪುತ್ರ, ಹಾಲಿ ಶಾಸಕ ಜ್ಯೋತಿಗಣೇಶ್‌ಗೆ ಬಿಜೆಪಿ ಮಣೆ ಹಾಕಿದೆ. ಇದರಿಂದ ಬಂಡಾಯವೆದ್ದಿರುವ ಸೊಗಡು ಶಿವಣ್ಣ ಬಿಜೆಪಿ ತೊರೆಯುವುದಾಗಿ ಘೋಷಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ರಾಜೀನಾಮೆ ನೀಡುವುದು ಸತ್ಯ. ನೂರಕ್ಕೆ ನೂರು ಶೇಕಡಾ ನಾಳೆ ರಾಜೀನಾಮೆ ಕೊಡ್ತೀನಿ. ಚುನಾವಣೆಗೆ ಜೋಳಿಗೆ ಹಾಕಿಕೊಂಡು ನಿಂತುಕೊಳ್ಳುತ್ತೇನೆ. ನಮ್ಮ ಕ್ಷೇತ್ರದ ಮತದಾರ ದೇವರ ಸತ್ಯ ಮಾಡಿ ಹೇಳುತ್ತಿದ್ದೇನೆ. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ” ಎಂದು ಘೋಷಿಸಿದ್ದಾರೆ.

ನನಗೆ ಇವತ್ತು ರಾತ್ರಿಯವರೆಗೆ ಸಮಯ ಬೇಕು. ಏಕೆಂದರೆ ಬಿಜೆಪಿ ಪಕ್ಷದ ಬಾವುಟಗಳು ನನ್ನ ಮನೆಯಲ್ಲಿವೆ. ನಾನು ಕೊನೆಯವರೆಗೂ ಅದಕ್ಕೆ ಗೌರವ ಕೊಡಬೇಕು. ಹೀಗಾಗಿ ಅವುಗಳನ್ನ ಬೇರೆ ಕಡೆಗೆ ಶಿಫ್ಟ್ ಮಾಡಬೇಕಿದೆ. ಅದಾದ ನಂತರ ರಾಜೀನಾಮೆ ಘೋಷಿಸುತ್ತೇನೆ ಎಂದಿದ್ದಾರೆ.

ಸಂಘಪರಿವಾರದ ಹಿನ್ನಲೆಯ ಬಿಜೆಪಿ ಅಭ್ಯರ್ಥಿ ಸೊಗಡು ಶಿವಣ್ಣ 1994ರಲ್ಲಿ ಕಾಂಗ್ರೆಸ್‌ನ ಎಸ್.ಶಫಿ ಅಹಮದ್‌ರನ್ನು ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ನಂತರ 1999 ಮತ್ತು 2004ರಲ್ಲಿಯೂ ಸಹ ಕಾಂಗ್ರೆಸ್‌ನ ಎಸ್.ಶಫಿ ಅಹಮದ್‌ರ ಎದುರು ಗೆದ್ದು ಹ್ಯಾಟ್ರಿಕ್ ಸಾಧಿಸಿದರು. 2007ರಲ್ಲಿ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ತೋಟಗಾರಿಕೆ ಇಲಾಖೆ ಸಚಿವರಾಗಿದ್ದರು. ಅಲ್ಲದೆ 2008ರಲ್ಲಿ ಕಾಂಗ್ರೆಸ್‌ನ ಡಾ. ರಫಿಕ್ ಅಹ್ಮದ್ ವಿರುದ್ಧ ಕೇವಲ 1,949 ಮತಗಳ ಅಂತರದಿಂದ ಗೆದ್ದು ಸತತ ನಾಲ್ಕನೇ ಬಾರಿಗೆ ಶಾಸಕರೆನಿಸಿಕೊಂಡರು. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಪರಿಸರ ಖಾತೆ ಸಚಿವರಾಗಿದ್ದರು.

2013ರ ಚುನಾವಣೆ ವೇಳೆಗೆ ಬಿಜೆಪಿ ಇಬ್ಭಾಗವಾಗಿತ್ತು. ಬಿಜೆಪಿಯಿಂದ ಸೊಗಡು ಶಿವಣ್ಣ ಸ್ಪರ್ಧಿಸಿದರೆ, ಯಡಿಯೂರಪ್ಪನವರ ಕೆಜೆಪಿಯಿಂದ ಇಂಜಿನಿಯರ್ ಜಿ.ಬಿ.ಜ್ಯೋತಿ ಗಣೇಶ್ ಕಣಕ್ಕಿಳಿದಿದ್ದರು. ಇವರಿಬ್ಬರ ನಡುವಿನ ಮತ ವಿಭಜನೆಯ ಲಾಭ ಪಡೆದ ಕಾಂಗ್ರೆಸ್‌ನ ಡಾ. ರಫಿಕ್ ಅಹ್ಮದ್ ಕೇವಲ 3,608 ಮತಗಳಿಂದ ಗೆದ್ದು ಬಿಜೆಪಿ ನಾಗಾಲೋಟಕ್ಕೆ ಬ್ರೇಕ್ ಹಾಕಿದ್ದರು. 2018ರ ವೇಳೆಗೆ ಬಿಜೆಪಿಯೊಂದಿಗೆ ಕೆಜೆಪಿ ವಿಲೀನಗೊಂಡಿತ್ತು. ಆಗ ಸೊಗಡು ಶಿವಣ್ಣನವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಯಡಿಯೂರಪ್ಪ ಬಣದ ಜಿ.ಬಿ.ಜ್ಯೋತಿಗಣೇಶ್ ಬಿಜೆಪಿ ಅಭ್ಯರ್ಥಿಯಾದರು.

2018ರಲ್ಲಿ ಪಕ್ಷದ ವರಿಷ್ಠರ ಮಾತಿಗೆ ಬೆಲೆ ಕೊಟ್ಟು ಸ್ಪರ್ಧಿಸಲಿಲ್ಲ. ಆದರೆ ಈ ಬಾರಿ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಪಣ ತೊಟ್ಟಿದ್ದಾರೆ. ಶಿವಣ್ಣನವರ ಹಿಂದೆ ಆರ್‌ಎಸ್‌ಎಸ್ ಇದ್ದು, ಅವರು ಈಗಾಗಲೇ ವೋಟು ಕೊಡಿ, ನೋಟು ಕೊಡಿ ಎಂದು ಜೋಳಿಗೆ ಹಿಡಿದು ಪ್ರಚಾರ ಆರಂಭಿಸಿದ್ದಾರೆ.

ಇನ್ನು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಂಸದ ಮುದ್ದಹನುಮೇಗೌಡರು ಸಹ ಬಂಡಾಯದ ಸುಳಿವು ನೀಡಿದ್ದಾರೆ. ಕುಣಿಗಲ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತಮ್ಮ ತೋಟದ ಮನೆಯಲ್ಲಿ ಬೆಂಬಲಿಗರ ಸಭೆ ನಡೆಸಿದ್ದಾರೆ. ಕುಣಿಗಲ್‌ನಲ್ಲಿ ಕೃಷ್ಣಕುಮಾರ್‌ರವರಿಗೆ ಟಿಕೆಟ್ ಘೋಷಿಸಿದ ಹಿನ್ನೆಲೆಯಲ್ಲಿ ಮತ್ತೊರ್ವ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಜೇಶ್ ಗೌಡ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಜಗದೀಶ್ ಶೆಟ್ಟರ್ ಬಂಡಾಯ ಸ್ಪರ್ಧೆ ಸುಳಿವು ನೀಡಿದ್ದಾರೆ. ಗೂಳಿಹಟ್ಟಿ ಶೇಖರ್ ಬಂಡಾಯ ಅಭ್ಯರ್ಥಿಯಾಗುವುದಾಗಿ ಘೋಷಿಸಿದ್ದಾರೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಉಡುಪಿ ಟಿಕೆಟ್ ಸಿಗದ ರಘುಪತಿ ಭಟ್ ಕಣ್ಣೀರು ಹಾಕಿದ್ದಾರೆ. ನಿನ್ನೆಯೇ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈಗ ಸೊಗಡು ಶಿವಣ್ಣ ಏನು ಮಾಡುತ್ತಾರೆ ಕಾದು ನೋಡಬೇಕಿದೆ.

ಇದನ್ನೂ ಓದಿ: ತುಮಕೂರು ನಗರ: ಹೊಸ ಮುಖಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್ – ಬಿಜೆಪಿಯಲ್ಲಿ ಒಳಬೇಗುದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...