Homeಮುಖಪುಟತುಮಕೂರು: ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯಲು ಸೊಗಡು ಶಿವಣ್ಣ ನಿರ್ಧಾರ

ತುಮಕೂರು: ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯಲು ಸೊಗಡು ಶಿವಣ್ಣ ನಿರ್ಧಾರ

- Advertisement -
- Advertisement -

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದತೆ ಬಿಜೆಪಿಯಲ್ಲಿ ಬಂಡಾಯದ ಬಿರುಗಾಳಿ ಎದ್ದಿದೆ. ಪಕ್ಷ ತೊರೆಯುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಅವರ ಸಾಲಿಗೆ ಮಾಜಿ ಸಚಿವ ಸೊಗಡು ಶಿವಣ್ಣ ಕೂಡ ಸೇರಿಕೊಂಡಿದ್ದಾರೆ.

ತುಮಕೂರು ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಕಳೆದ ಒಂದು ತಿಂಗಳಿನಿಂದಲೇ ಜೋಳಿಗೆ ಹಿಡಿದು ಪ್ರಚಾರ ಆರಂಭಿಸಿದ್ದರು. ಆದರೆ ಅವರ ಬದಲು ಸಂಸದ ಬಸವರಾಜುರವರ ಪುತ್ರ, ಹಾಲಿ ಶಾಸಕ ಜ್ಯೋತಿಗಣೇಶ್‌ಗೆ ಬಿಜೆಪಿ ಮಣೆ ಹಾಕಿದೆ. ಇದರಿಂದ ಬಂಡಾಯವೆದ್ದಿರುವ ಸೊಗಡು ಶಿವಣ್ಣ ಬಿಜೆಪಿ ತೊರೆಯುವುದಾಗಿ ಘೋಷಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ರಾಜೀನಾಮೆ ನೀಡುವುದು ಸತ್ಯ. ನೂರಕ್ಕೆ ನೂರು ಶೇಕಡಾ ನಾಳೆ ರಾಜೀನಾಮೆ ಕೊಡ್ತೀನಿ. ಚುನಾವಣೆಗೆ ಜೋಳಿಗೆ ಹಾಕಿಕೊಂಡು ನಿಂತುಕೊಳ್ಳುತ್ತೇನೆ. ನಮ್ಮ ಕ್ಷೇತ್ರದ ಮತದಾರ ದೇವರ ಸತ್ಯ ಮಾಡಿ ಹೇಳುತ್ತಿದ್ದೇನೆ. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ” ಎಂದು ಘೋಷಿಸಿದ್ದಾರೆ.

ನನಗೆ ಇವತ್ತು ರಾತ್ರಿಯವರೆಗೆ ಸಮಯ ಬೇಕು. ಏಕೆಂದರೆ ಬಿಜೆಪಿ ಪಕ್ಷದ ಬಾವುಟಗಳು ನನ್ನ ಮನೆಯಲ್ಲಿವೆ. ನಾನು ಕೊನೆಯವರೆಗೂ ಅದಕ್ಕೆ ಗೌರವ ಕೊಡಬೇಕು. ಹೀಗಾಗಿ ಅವುಗಳನ್ನ ಬೇರೆ ಕಡೆಗೆ ಶಿಫ್ಟ್ ಮಾಡಬೇಕಿದೆ. ಅದಾದ ನಂತರ ರಾಜೀನಾಮೆ ಘೋಷಿಸುತ್ತೇನೆ ಎಂದಿದ್ದಾರೆ.

ಸಂಘಪರಿವಾರದ ಹಿನ್ನಲೆಯ ಬಿಜೆಪಿ ಅಭ್ಯರ್ಥಿ ಸೊಗಡು ಶಿವಣ್ಣ 1994ರಲ್ಲಿ ಕಾಂಗ್ರೆಸ್‌ನ ಎಸ್.ಶಫಿ ಅಹಮದ್‌ರನ್ನು ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ನಂತರ 1999 ಮತ್ತು 2004ರಲ್ಲಿಯೂ ಸಹ ಕಾಂಗ್ರೆಸ್‌ನ ಎಸ್.ಶಫಿ ಅಹಮದ್‌ರ ಎದುರು ಗೆದ್ದು ಹ್ಯಾಟ್ರಿಕ್ ಸಾಧಿಸಿದರು. 2007ರಲ್ಲಿ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ತೋಟಗಾರಿಕೆ ಇಲಾಖೆ ಸಚಿವರಾಗಿದ್ದರು. ಅಲ್ಲದೆ 2008ರಲ್ಲಿ ಕಾಂಗ್ರೆಸ್‌ನ ಡಾ. ರಫಿಕ್ ಅಹ್ಮದ್ ವಿರುದ್ಧ ಕೇವಲ 1,949 ಮತಗಳ ಅಂತರದಿಂದ ಗೆದ್ದು ಸತತ ನಾಲ್ಕನೇ ಬಾರಿಗೆ ಶಾಸಕರೆನಿಸಿಕೊಂಡರು. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಪರಿಸರ ಖಾತೆ ಸಚಿವರಾಗಿದ್ದರು.

2013ರ ಚುನಾವಣೆ ವೇಳೆಗೆ ಬಿಜೆಪಿ ಇಬ್ಭಾಗವಾಗಿತ್ತು. ಬಿಜೆಪಿಯಿಂದ ಸೊಗಡು ಶಿವಣ್ಣ ಸ್ಪರ್ಧಿಸಿದರೆ, ಯಡಿಯೂರಪ್ಪನವರ ಕೆಜೆಪಿಯಿಂದ ಇಂಜಿನಿಯರ್ ಜಿ.ಬಿ.ಜ್ಯೋತಿ ಗಣೇಶ್ ಕಣಕ್ಕಿಳಿದಿದ್ದರು. ಇವರಿಬ್ಬರ ನಡುವಿನ ಮತ ವಿಭಜನೆಯ ಲಾಭ ಪಡೆದ ಕಾಂಗ್ರೆಸ್‌ನ ಡಾ. ರಫಿಕ್ ಅಹ್ಮದ್ ಕೇವಲ 3,608 ಮತಗಳಿಂದ ಗೆದ್ದು ಬಿಜೆಪಿ ನಾಗಾಲೋಟಕ್ಕೆ ಬ್ರೇಕ್ ಹಾಕಿದ್ದರು. 2018ರ ವೇಳೆಗೆ ಬಿಜೆಪಿಯೊಂದಿಗೆ ಕೆಜೆಪಿ ವಿಲೀನಗೊಂಡಿತ್ತು. ಆಗ ಸೊಗಡು ಶಿವಣ್ಣನವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಯಡಿಯೂರಪ್ಪ ಬಣದ ಜಿ.ಬಿ.ಜ್ಯೋತಿಗಣೇಶ್ ಬಿಜೆಪಿ ಅಭ್ಯರ್ಥಿಯಾದರು.

2018ರಲ್ಲಿ ಪಕ್ಷದ ವರಿಷ್ಠರ ಮಾತಿಗೆ ಬೆಲೆ ಕೊಟ್ಟು ಸ್ಪರ್ಧಿಸಲಿಲ್ಲ. ಆದರೆ ಈ ಬಾರಿ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಪಣ ತೊಟ್ಟಿದ್ದಾರೆ. ಶಿವಣ್ಣನವರ ಹಿಂದೆ ಆರ್‌ಎಸ್‌ಎಸ್ ಇದ್ದು, ಅವರು ಈಗಾಗಲೇ ವೋಟು ಕೊಡಿ, ನೋಟು ಕೊಡಿ ಎಂದು ಜೋಳಿಗೆ ಹಿಡಿದು ಪ್ರಚಾರ ಆರಂಭಿಸಿದ್ದಾರೆ.

ಇನ್ನು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಂಸದ ಮುದ್ದಹನುಮೇಗೌಡರು ಸಹ ಬಂಡಾಯದ ಸುಳಿವು ನೀಡಿದ್ದಾರೆ. ಕುಣಿಗಲ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತಮ್ಮ ತೋಟದ ಮನೆಯಲ್ಲಿ ಬೆಂಬಲಿಗರ ಸಭೆ ನಡೆಸಿದ್ದಾರೆ. ಕುಣಿಗಲ್‌ನಲ್ಲಿ ಕೃಷ್ಣಕುಮಾರ್‌ರವರಿಗೆ ಟಿಕೆಟ್ ಘೋಷಿಸಿದ ಹಿನ್ನೆಲೆಯಲ್ಲಿ ಮತ್ತೊರ್ವ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಜೇಶ್ ಗೌಡ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಜಗದೀಶ್ ಶೆಟ್ಟರ್ ಬಂಡಾಯ ಸ್ಪರ್ಧೆ ಸುಳಿವು ನೀಡಿದ್ದಾರೆ. ಗೂಳಿಹಟ್ಟಿ ಶೇಖರ್ ಬಂಡಾಯ ಅಭ್ಯರ್ಥಿಯಾಗುವುದಾಗಿ ಘೋಷಿಸಿದ್ದಾರೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಉಡುಪಿ ಟಿಕೆಟ್ ಸಿಗದ ರಘುಪತಿ ಭಟ್ ಕಣ್ಣೀರು ಹಾಕಿದ್ದಾರೆ. ನಿನ್ನೆಯೇ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈಗ ಸೊಗಡು ಶಿವಣ್ಣ ಏನು ಮಾಡುತ್ತಾರೆ ಕಾದು ನೋಡಬೇಕಿದೆ.

ಇದನ್ನೂ ಓದಿ: ತುಮಕೂರು ನಗರ: ಹೊಸ ಮುಖಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್ – ಬಿಜೆಪಿಯಲ್ಲಿ ಒಳಬೇಗುದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...