Homeಕರ್ನಾಟಕತುಮಕೂರಿನಲ್ಲಿ SP ಗ್ರಾಮ ವಾಸ್ತವ್ಯ: ಪ್ರಯೋಜನವೇನು, ಮಾಡಬೇಕಾದುದ್ದೇನು?

ತುಮಕೂರಿನಲ್ಲಿ SP ಗ್ರಾಮ ವಾಸ್ತವ್ಯ: ಪ್ರಯೋಜನವೇನು, ಮಾಡಬೇಕಾದುದ್ದೇನು?

ಹುತ್ತವ ಬಡಿದರೆ ಹಾವು ಸಾಯದು, ವಾಸ್ತವ್ಯ ಹೂಡಿದರೆ ಸಮಸ್ಯೆ ಬಗೆಹರಿಯದು ಎನ್ನುತ್ತಿವೆ ನಿದರ್ಶನಗಳು

- Advertisement -
- Advertisement -

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನಂ ವಂಶಿಕೃಷ್ಣ ಗ್ರಾಮ ವಾಸ್ತವ್ಯ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಪಾಲನೆ ಮಾಡಬಹುದಾದ ಒಬ್ಬ ಪೊಲೀಸ್ ವರಿಷ್ಠಾಧಿಕಾರಿ ಹೀಗೆ ಗ್ರಾಮ ವಾಸ್ತವ್ಯದ ಮೂಲಕ ಜನರೊಂದಿಗೆ ಬೆರೆತು ಸಮಸ್ಯೆ ತಿಳಿದುಕೊಳ್ಳುವ ಪ್ರಯತ್ನ ಮಾಡಿರುವುದು ಮೆಚ್ಚುವ ಸಂಗತಿಯಾದರೂ ನಿಜದ ಸಮಸ್ಯೆಗಳ ‘ಶಸ್ತ್ರಚಿಕಿತ್ಸೆ’ ಪರಿಹಾರ ದೊರಕುತ್ತದೆಯೇ? ಜನರು ಕೇಳುವ ಎಲ್ಲಾ ರೋಗಗಳಿಗೆ, ಪ್ರಶ್ನೆಗಳಿಗೆ ಪೊಲೀಸ್ ಅಧಿಕಾರಿಯಿಂದ ಪರಿಹಾರ ಸಾಧ್ಯವೇ ಎಂಬ ಪ್ರಶ್ನೆಗೆ ಉತ್ತರ ಶೂನ್ಯ.

ಪೊಲೀಸ್ ವ್ಯವಸ್ಥೆ ಜನಸ್ನೇಹಿಯಾಗಬೇಕೆಂಬ ಪ್ರಯತ್ನಗಳು ಇಂದು ನಿನ್ನೆಯವಲ್ಲ. ಅಧಿಕಾರ ಮತ್ತು ರಾಜಕೀಯ ವ್ಯಕ್ತಿಗಳ ಪ್ರಭಾವದಿಂದ ಪೊಲೀಸ್ ಠಾಣೆಗಳನ್ನು ಮುಕ್ತಗೊಳಿಸಬೇಕೆಂಬ ಮಾತುಗಳು ಹಿಂದಿನಿಂದ ಕೇಳಿಕೊಂಡೇ ಬರಲಾಗುತ್ತಿದೆ. ಆದರೆ ಇದುವರೆಗೂ ಪೊಲೀಸ್ ವ್ಯವಸ್ಥೆಯನ್ನು ರಾಜಕಾರಣದಿಂದ ಮುಕ್ತಗೊಳಿಸಲು ಸಾಧ್ಯವಾಗಿಲ್ಲ. ಪೊಲೀಸ್ ವ್ಯವಸ್ಥೆ ಮುಕ್ತಗೊಳ್ಳಲು ಮುಂದಾದಷ್ಟು ರಾಜಕಾರಣದ ಕಪಿಮುಷ್ಟಿಗೆ ಮತ್ತಷ್ಟು ಸಿಲುಕಿಕೊಳ್ಳುತಲಿದೆ. ಇನ್ನು ಪೊಲೀಸ್ ವ್ಯವಸ್ಥೆಯೇ ರಾಜಕಾರಣದ ಕಪಿಮುಷ್ಠಿಯಿಂದ ಬಿಡುಗಡೆಗೊಳ್ಳಲು ಹಿಂದೇಟು ಹಾಕುತ್ತಲೇ ಬರುತ್ತಿದೆ. ಎರಡು ಅಧಿಕಾರ ಕೇಂದ್ರಗಳು ತನ್ನನ್ನು ರಕ್ಷಣೆ ಮಾಡಿಕೊಳ್ಳಲು ಕೊಡುಕೊಳುವ ಮಾರ್ಗ ಸಹಜವೇ ಇರಬಹುದು.

ಠಾಣೆಗಳು ಜನಸ್ನೇಹಿಯಾಗಬೇಕು. ದೂರು ನೀಡಲು ಬರುವ ಜನರ ಸಮಸ್ಯೆಗಳನ್ನು ಆಪ್ತವಾಗಿ ಆಲಿಸಬೇಕು. ಸಂತ್ರಸ್ಥರಿಗೆ ನ್ಯಾಯಕೊಡಿಸಿಕೊಡುವ ನಿಟ್ಟಿನಲ್ಲಿ ಸಮರ್ಪಕ ಕೆಲಸ ಮಾಡಬೇಕು, ನೊಂದು ನ್ಯಾಯ ಅರಸಿ ಪೊಲೀಸ್ ಠಾಣೆಗೆ ಬರುವವರು ತೀರ ಬಡವರು, ಅಧಿಕಾರ ಬಲವುಳ್ಳವರಿಂದ ಶೋಷಣೆಗೆ ಒಳಗಾದವರು, ದೌರ್ಜನ್ಯಕ್ಕೆ ಒಳಗಾಗುವ ದಲಿತರು ನ್ಯಾಯಕ್ಕಾಗಿ ಠಾಣೆಗಳಿಗೆ ಬರುತ್ತಾರೆ. ಅವರ ದೂರನ್ನು ಠಾಣಾ ಅಧಿಕಾರಿಗಳು ದಾಖಲಿಸಬೇಕು. ಎಷ್ಟೇ ಪ್ರಭಾವಿಗಳಾದರೂ ದೌರ್ಜನ್ಯ ನಡೆಸಿದವರ ವಿರುದ್ಧ ಕ್ರಮ ಜರುಗಿಸಬೇಕು – ಹೀಗೆ ಹಿರಿಯ ಅಧಿಕಾರಿಗಳು ಮತ್ತು ರಾಜಕಾರಣಿಗಳು ಹೇಳುತ್ತಿದ್ದಾರೆಯೇ ವಿನಃ ಒಂದೂ ಅನುಷ್ಠಾನಕ್ಕೆ ಬಂದಿಲ್ಲ.

ಜಮೀನು ಗಲಾಟೆ, ದಾರಿ-ರಸ್ತೆ ವಿವಾದದ ಬಗ್ಗೆ ಹತ್ಯೆಗಳು ನಡೆಯುವ ಮಟ್ಟಕ್ಕೆ ಹೋಗುತ್ತವೆ. ಈ ಕುರಿತು ಎರಡು ಪಕ್ಷದವರು ನ್ಯಾಯಕ್ಕಾಗಿ ಪೊಲೀಸರ ಮೊರೆಹೋಗುತ್ತಾರೆ. ಸಂಬಂಧಪಟ್ಟ ಠಾಣಾ ಅಧಿಕಾರಿ ಪಕ್ಷಾತೀತ ನ್ಯಾಯ ಒದಗಿಸಲು ಪ್ರಯತ್ನಿಸಿದರೆ, ರಾಜಕಾರಣವೆಂಬುದು ಅಡ್ಡಿಯಾಗುತ್ತದೆ. ಪೋನ್ ಮೂಲಕವೇ ಎಲ್ಲವೂ ನಡೆದುಹೋಗುತ್ತದೆ. ಪೊಲೀಸರಿಂದ ಅರೆಸ್ಟ್ ಆದ ಗಂಟೆಯೊಳಗೆ ಆರೋಪಿಗಳು ಹೊರಗೆ ಓಡಾಡುತ್ತಾರೆ. ಇದೆಲ್ಲವೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿದಿರುವ ಸಂಗತಿಯೇ ಆಗಿದೆ. ಪೊಲೀಸ್ ವರಿಷ್ಠಾಧಿಕಾರಿ ಜನರ ಸ್ನೇಹ ಸಂಪಾದಿಸಲು ಗ್ರಾಮ ವಾಸ್ತವ್ಯ ಹೂಡುವುದು ಸರಿಯಾದ ಕ್ರಮವಾದರೂ ಅದು ತಾತ್ಕಾಲಿಕ ಶಮನವಷ್ಟೇ. ಅದರಿಂದ ಶಾಶ್ವತ ಪರಿಹಾರಗಳು ಕಂಡುಬರುವುದಿಲ್ಲ ಎಂದು ಸಾಮಾನ್ಯರು ಮಾತನಾಡಿಕೊಳ್ಳುವಂತೆ ಆಗಿದೆ.

ತುಮಕೂರು ಜಿಲ್ಲೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಬೆಂಗಳೂರಿಗೆ ಸೀಮಿತವಾಗಿದ್ದ ರಿಯಲ್ ಎಸ್ಟೇಟ್ ವ್ಯವಹಾರ ತುಮಕೂರಿಗೆ ಅಡಿಯಿಟ್ಟು ಸಣ್ಣಪುಟ್ಟ ರೌಡಿಗಳನ್ನು ಸೃಷ್ಟಿ ಮಾಡಿದೆ. ವ್ಯವಹಾರದ ಕಾರಣಕ್ಕಾಗಿ ಮಾಜಿ ಮೇಯರ್ ರವಿಯ ಹತ್ಯೆಯಾಯಿತು. ಅದು ಹಾಡುಹಗಲೇ. ಕಳೆದೊಂದು ವರ್ಷದಲ್ಲಿ ತುಮಕೂರಿನಲ್ಲಿ ನಡೆದಿರುವ ಹತ್ಯೆಗಳು ಇದೇ ಕಾರಣಕ್ಕಾಗಿಯೇ ನಡೆದವು. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ನಿಜ. ಆದರೆ ರೌಡಿಗಳ ಉಪಟಳ ನಿಂತಿಲ್ಲ. ಪುಂಡುಪೋಕರಿಗಳು ನಿತ್ಯದ ಜೂಜು, ಕುಡಿತಕ್ಕೆ ಹಣ ಹೊಂದಿಸಲು ಮಾಂಗಲ್ಯ ಸರಗಳಿಗೆ ಅಪಹರಿಸುತ್ತಿರುವುದು ನಗರದಲ್ಲಿ ನಡೆಯುತ್ತಲೇ ಇದೆ. ಪ್ರಭಾವಿ ವ್ಯಕ್ತಿಗಳ ಮಕ್ಕಳು ಇಸ್ಪೀಟ್, ಜೂಜಿನಲ್ಲಿ ಭಾಗಿಯಾಗಿದ್ದರೂ ಅವರನ್ನು ಬಂಧಿಸದೇ ಬಿಟ್ಟ ಸಾಕಷ್ಟು ಉದಾಹರಣೆಗಳು ಇವೆ ಎನ್ನುತ್ತಾರೆ ಹಿರಿಯ ಪತ್ರಕರ್ತರು.

ಪಾವಗಡ ತಾಲೂಕಿನಲ್ಲಿ ಬಹುತೇಕ ಗ್ರಾಮಗಳಲ್ಲಿ ಮಟ್ಕಾ, ಇಸ್ಪೀಟ್, ಜೂಜು ನಡೆಯುತ್ತಲೇ ಇದೆ. ‘ಹೊಂದಾಣಿಕೆ’ ಮನೋಭಾವವು ಅದು ನಿರಂತರವಾಗಿ ನಡೆಯಲು ಕಾರಣ. ಹೊಂದಾಣಿಕೆ ಎರಡು ಕಡೆಯಿಂದಲೂ ನಡೆಯುತ್ತಿದೆ. ಇದು ಎಲ್ಲರಿಗೂ ಗೊತ್ತಿರುವ ಸತ್ಯ. ಇಸ್ಪೀಟ್ ಆಡುವವರು, ಮಟ್ಕಾ ಚೀಟಿ ಬರೆಯುವವರು ಮತ್ತು ರಕ್ಷಕರು ‘ಹಸ್ತಲಾಘವ’ ಮಾಡಿದ್ದರಿಂದಲೇ ಎಲ್ಲವೂ ಅಡೆತಡೆಯಿಲ್ಲದೆ ನಡೆಯುತ್ತಿದೆ. ಹೇಮಾಹೇಮಿ ಅಧಿಕಾರಿಗಳು ಬಂದುಹೋದರೂ ಮಟ್ಕಾ ನಿಲ್ಲಿಸಲು ಸಾಧ್ಯವಾಗಿಲ್ಲ. ‘ಪಾಲುದಾರಿಕೆ’ ‘ಗುಡ್ಡೆ ಬಾಡು’ ಮೈತ್ರಿ, ಸುಸೂತ್ರವಾಗಿ ನಡೆಯುತ್ತಿದೆ. ಮಟ್ಕ ದೋಸ್ತಿಗಳ ಬಂಧನ, ಬಿಡುಗಡೆ, ಗಡಿಪಾರು ಎಲ್ಲವೂ ಆಗುತ್ತದೆ. ಆದರೂ ‘ವ್ಯವಹಾರ’ ಮಾತ್ರ ರಕ್ಷಕರ ನೆರಳಿನಲ್ಲೇ ನಡೆಯುತ್ತಿದೆ. ಕೋಟ್ಯಂತರ ವಹಿವಾಟು ನಡೆಯುವುದರಿಂದ ಪಾವಗಡ ಒಳ್ಳೆ ‘ಹುಲ್ಲುಗಾವಲು’ ಎಂಬ ಹೆಸರು  ಪಡೆದಿದೆ. .

ಅನಗತ್ಯವಾಗಿ ಪಾವಗಡ ತಾಲೂಕನ್ನು ಇಲ್ಲದ ಸಮಸ್ಯೆಗಳನ್ನು ಬಿಂಬಿಸುತ್ತಲೇ ‘ಲೂಟಿ’ಗೆ ಪರವಾನಗಿ ಪಡೆಯುತ್ತಲೇ ಇದ್ದಾರೆ. ಹೋದವರು ದುಂಡಗಾಗಿದ್ದಾರೆ. ಪನಿಷ್ಮೆಂಟ್ ಟ್ರಾನ್ಸಫರ್ ಒಂದು ರೀತಿಯಲ್ಲೇ ಒಳ್ಳೆಯದೇ ಆಗಿದೆ. ತಾಲೂಕು ಅಭಿವೃದ್ಧಿ ಕಾಣದಿದ್ದರೂ ಜೇಜುಗಳು ಅಭಿವೃದ್ಧಿ ಕಾಣುತ್ತಿವೆ. ಹೀಗಾಗಿ ಎಲ್ಲಾ ಹಂತದಿಂದಲೂ ಪಾವಗಡ ತಾಲೂಕಿಗೆ ಶಸ್ತ್ರಚಿಕಿತ್ಸೆ ನಡೆಯಬೇಕಿದೆ. ಆದರೆ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...