Homeಕರ್ನಾಟಕತುಮಕೂರಿನಲ್ಲಿ SP ಗ್ರಾಮ ವಾಸ್ತವ್ಯ: ಪ್ರಯೋಜನವೇನು, ಮಾಡಬೇಕಾದುದ್ದೇನು?

ತುಮಕೂರಿನಲ್ಲಿ SP ಗ್ರಾಮ ವಾಸ್ತವ್ಯ: ಪ್ರಯೋಜನವೇನು, ಮಾಡಬೇಕಾದುದ್ದೇನು?

ಹುತ್ತವ ಬಡಿದರೆ ಹಾವು ಸಾಯದು, ವಾಸ್ತವ್ಯ ಹೂಡಿದರೆ ಸಮಸ್ಯೆ ಬಗೆಹರಿಯದು ಎನ್ನುತ್ತಿವೆ ನಿದರ್ಶನಗಳು

- Advertisement -
- Advertisement -

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನಂ ವಂಶಿಕೃಷ್ಣ ಗ್ರಾಮ ವಾಸ್ತವ್ಯ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಪಾಲನೆ ಮಾಡಬಹುದಾದ ಒಬ್ಬ ಪೊಲೀಸ್ ವರಿಷ್ಠಾಧಿಕಾರಿ ಹೀಗೆ ಗ್ರಾಮ ವಾಸ್ತವ್ಯದ ಮೂಲಕ ಜನರೊಂದಿಗೆ ಬೆರೆತು ಸಮಸ್ಯೆ ತಿಳಿದುಕೊಳ್ಳುವ ಪ್ರಯತ್ನ ಮಾಡಿರುವುದು ಮೆಚ್ಚುವ ಸಂಗತಿಯಾದರೂ ನಿಜದ ಸಮಸ್ಯೆಗಳ ‘ಶಸ್ತ್ರಚಿಕಿತ್ಸೆ’ ಪರಿಹಾರ ದೊರಕುತ್ತದೆಯೇ? ಜನರು ಕೇಳುವ ಎಲ್ಲಾ ರೋಗಗಳಿಗೆ, ಪ್ರಶ್ನೆಗಳಿಗೆ ಪೊಲೀಸ್ ಅಧಿಕಾರಿಯಿಂದ ಪರಿಹಾರ ಸಾಧ್ಯವೇ ಎಂಬ ಪ್ರಶ್ನೆಗೆ ಉತ್ತರ ಶೂನ್ಯ.

ಪೊಲೀಸ್ ವ್ಯವಸ್ಥೆ ಜನಸ್ನೇಹಿಯಾಗಬೇಕೆಂಬ ಪ್ರಯತ್ನಗಳು ಇಂದು ನಿನ್ನೆಯವಲ್ಲ. ಅಧಿಕಾರ ಮತ್ತು ರಾಜಕೀಯ ವ್ಯಕ್ತಿಗಳ ಪ್ರಭಾವದಿಂದ ಪೊಲೀಸ್ ಠಾಣೆಗಳನ್ನು ಮುಕ್ತಗೊಳಿಸಬೇಕೆಂಬ ಮಾತುಗಳು ಹಿಂದಿನಿಂದ ಕೇಳಿಕೊಂಡೇ ಬರಲಾಗುತ್ತಿದೆ. ಆದರೆ ಇದುವರೆಗೂ ಪೊಲೀಸ್ ವ್ಯವಸ್ಥೆಯನ್ನು ರಾಜಕಾರಣದಿಂದ ಮುಕ್ತಗೊಳಿಸಲು ಸಾಧ್ಯವಾಗಿಲ್ಲ. ಪೊಲೀಸ್ ವ್ಯವಸ್ಥೆ ಮುಕ್ತಗೊಳ್ಳಲು ಮುಂದಾದಷ್ಟು ರಾಜಕಾರಣದ ಕಪಿಮುಷ್ಟಿಗೆ ಮತ್ತಷ್ಟು ಸಿಲುಕಿಕೊಳ್ಳುತಲಿದೆ. ಇನ್ನು ಪೊಲೀಸ್ ವ್ಯವಸ್ಥೆಯೇ ರಾಜಕಾರಣದ ಕಪಿಮುಷ್ಠಿಯಿಂದ ಬಿಡುಗಡೆಗೊಳ್ಳಲು ಹಿಂದೇಟು ಹಾಕುತ್ತಲೇ ಬರುತ್ತಿದೆ. ಎರಡು ಅಧಿಕಾರ ಕೇಂದ್ರಗಳು ತನ್ನನ್ನು ರಕ್ಷಣೆ ಮಾಡಿಕೊಳ್ಳಲು ಕೊಡುಕೊಳುವ ಮಾರ್ಗ ಸಹಜವೇ ಇರಬಹುದು.

ಠಾಣೆಗಳು ಜನಸ್ನೇಹಿಯಾಗಬೇಕು. ದೂರು ನೀಡಲು ಬರುವ ಜನರ ಸಮಸ್ಯೆಗಳನ್ನು ಆಪ್ತವಾಗಿ ಆಲಿಸಬೇಕು. ಸಂತ್ರಸ್ಥರಿಗೆ ನ್ಯಾಯಕೊಡಿಸಿಕೊಡುವ ನಿಟ್ಟಿನಲ್ಲಿ ಸಮರ್ಪಕ ಕೆಲಸ ಮಾಡಬೇಕು, ನೊಂದು ನ್ಯಾಯ ಅರಸಿ ಪೊಲೀಸ್ ಠಾಣೆಗೆ ಬರುವವರು ತೀರ ಬಡವರು, ಅಧಿಕಾರ ಬಲವುಳ್ಳವರಿಂದ ಶೋಷಣೆಗೆ ಒಳಗಾದವರು, ದೌರ್ಜನ್ಯಕ್ಕೆ ಒಳಗಾಗುವ ದಲಿತರು ನ್ಯಾಯಕ್ಕಾಗಿ ಠಾಣೆಗಳಿಗೆ ಬರುತ್ತಾರೆ. ಅವರ ದೂರನ್ನು ಠಾಣಾ ಅಧಿಕಾರಿಗಳು ದಾಖಲಿಸಬೇಕು. ಎಷ್ಟೇ ಪ್ರಭಾವಿಗಳಾದರೂ ದೌರ್ಜನ್ಯ ನಡೆಸಿದವರ ವಿರುದ್ಧ ಕ್ರಮ ಜರುಗಿಸಬೇಕು – ಹೀಗೆ ಹಿರಿಯ ಅಧಿಕಾರಿಗಳು ಮತ್ತು ರಾಜಕಾರಣಿಗಳು ಹೇಳುತ್ತಿದ್ದಾರೆಯೇ ವಿನಃ ಒಂದೂ ಅನುಷ್ಠಾನಕ್ಕೆ ಬಂದಿಲ್ಲ.

ಜಮೀನು ಗಲಾಟೆ, ದಾರಿ-ರಸ್ತೆ ವಿವಾದದ ಬಗ್ಗೆ ಹತ್ಯೆಗಳು ನಡೆಯುವ ಮಟ್ಟಕ್ಕೆ ಹೋಗುತ್ತವೆ. ಈ ಕುರಿತು ಎರಡು ಪಕ್ಷದವರು ನ್ಯಾಯಕ್ಕಾಗಿ ಪೊಲೀಸರ ಮೊರೆಹೋಗುತ್ತಾರೆ. ಸಂಬಂಧಪಟ್ಟ ಠಾಣಾ ಅಧಿಕಾರಿ ಪಕ್ಷಾತೀತ ನ್ಯಾಯ ಒದಗಿಸಲು ಪ್ರಯತ್ನಿಸಿದರೆ, ರಾಜಕಾರಣವೆಂಬುದು ಅಡ್ಡಿಯಾಗುತ್ತದೆ. ಪೋನ್ ಮೂಲಕವೇ ಎಲ್ಲವೂ ನಡೆದುಹೋಗುತ್ತದೆ. ಪೊಲೀಸರಿಂದ ಅರೆಸ್ಟ್ ಆದ ಗಂಟೆಯೊಳಗೆ ಆರೋಪಿಗಳು ಹೊರಗೆ ಓಡಾಡುತ್ತಾರೆ. ಇದೆಲ್ಲವೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿದಿರುವ ಸಂಗತಿಯೇ ಆಗಿದೆ. ಪೊಲೀಸ್ ವರಿಷ್ಠಾಧಿಕಾರಿ ಜನರ ಸ್ನೇಹ ಸಂಪಾದಿಸಲು ಗ್ರಾಮ ವಾಸ್ತವ್ಯ ಹೂಡುವುದು ಸರಿಯಾದ ಕ್ರಮವಾದರೂ ಅದು ತಾತ್ಕಾಲಿಕ ಶಮನವಷ್ಟೇ. ಅದರಿಂದ ಶಾಶ್ವತ ಪರಿಹಾರಗಳು ಕಂಡುಬರುವುದಿಲ್ಲ ಎಂದು ಸಾಮಾನ್ಯರು ಮಾತನಾಡಿಕೊಳ್ಳುವಂತೆ ಆಗಿದೆ.

ತುಮಕೂರು ಜಿಲ್ಲೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಬೆಂಗಳೂರಿಗೆ ಸೀಮಿತವಾಗಿದ್ದ ರಿಯಲ್ ಎಸ್ಟೇಟ್ ವ್ಯವಹಾರ ತುಮಕೂರಿಗೆ ಅಡಿಯಿಟ್ಟು ಸಣ್ಣಪುಟ್ಟ ರೌಡಿಗಳನ್ನು ಸೃಷ್ಟಿ ಮಾಡಿದೆ. ವ್ಯವಹಾರದ ಕಾರಣಕ್ಕಾಗಿ ಮಾಜಿ ಮೇಯರ್ ರವಿಯ ಹತ್ಯೆಯಾಯಿತು. ಅದು ಹಾಡುಹಗಲೇ. ಕಳೆದೊಂದು ವರ್ಷದಲ್ಲಿ ತುಮಕೂರಿನಲ್ಲಿ ನಡೆದಿರುವ ಹತ್ಯೆಗಳು ಇದೇ ಕಾರಣಕ್ಕಾಗಿಯೇ ನಡೆದವು. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ನಿಜ. ಆದರೆ ರೌಡಿಗಳ ಉಪಟಳ ನಿಂತಿಲ್ಲ. ಪುಂಡುಪೋಕರಿಗಳು ನಿತ್ಯದ ಜೂಜು, ಕುಡಿತಕ್ಕೆ ಹಣ ಹೊಂದಿಸಲು ಮಾಂಗಲ್ಯ ಸರಗಳಿಗೆ ಅಪಹರಿಸುತ್ತಿರುವುದು ನಗರದಲ್ಲಿ ನಡೆಯುತ್ತಲೇ ಇದೆ. ಪ್ರಭಾವಿ ವ್ಯಕ್ತಿಗಳ ಮಕ್ಕಳು ಇಸ್ಪೀಟ್, ಜೂಜಿನಲ್ಲಿ ಭಾಗಿಯಾಗಿದ್ದರೂ ಅವರನ್ನು ಬಂಧಿಸದೇ ಬಿಟ್ಟ ಸಾಕಷ್ಟು ಉದಾಹರಣೆಗಳು ಇವೆ ಎನ್ನುತ್ತಾರೆ ಹಿರಿಯ ಪತ್ರಕರ್ತರು.

ಪಾವಗಡ ತಾಲೂಕಿನಲ್ಲಿ ಬಹುತೇಕ ಗ್ರಾಮಗಳಲ್ಲಿ ಮಟ್ಕಾ, ಇಸ್ಪೀಟ್, ಜೂಜು ನಡೆಯುತ್ತಲೇ ಇದೆ. ‘ಹೊಂದಾಣಿಕೆ’ ಮನೋಭಾವವು ಅದು ನಿರಂತರವಾಗಿ ನಡೆಯಲು ಕಾರಣ. ಹೊಂದಾಣಿಕೆ ಎರಡು ಕಡೆಯಿಂದಲೂ ನಡೆಯುತ್ತಿದೆ. ಇದು ಎಲ್ಲರಿಗೂ ಗೊತ್ತಿರುವ ಸತ್ಯ. ಇಸ್ಪೀಟ್ ಆಡುವವರು, ಮಟ್ಕಾ ಚೀಟಿ ಬರೆಯುವವರು ಮತ್ತು ರಕ್ಷಕರು ‘ಹಸ್ತಲಾಘವ’ ಮಾಡಿದ್ದರಿಂದಲೇ ಎಲ್ಲವೂ ಅಡೆತಡೆಯಿಲ್ಲದೆ ನಡೆಯುತ್ತಿದೆ. ಹೇಮಾಹೇಮಿ ಅಧಿಕಾರಿಗಳು ಬಂದುಹೋದರೂ ಮಟ್ಕಾ ನಿಲ್ಲಿಸಲು ಸಾಧ್ಯವಾಗಿಲ್ಲ. ‘ಪಾಲುದಾರಿಕೆ’ ‘ಗುಡ್ಡೆ ಬಾಡು’ ಮೈತ್ರಿ, ಸುಸೂತ್ರವಾಗಿ ನಡೆಯುತ್ತಿದೆ. ಮಟ್ಕ ದೋಸ್ತಿಗಳ ಬಂಧನ, ಬಿಡುಗಡೆ, ಗಡಿಪಾರು ಎಲ್ಲವೂ ಆಗುತ್ತದೆ. ಆದರೂ ‘ವ್ಯವಹಾರ’ ಮಾತ್ರ ರಕ್ಷಕರ ನೆರಳಿನಲ್ಲೇ ನಡೆಯುತ್ತಿದೆ. ಕೋಟ್ಯಂತರ ವಹಿವಾಟು ನಡೆಯುವುದರಿಂದ ಪಾವಗಡ ಒಳ್ಳೆ ‘ಹುಲ್ಲುಗಾವಲು’ ಎಂಬ ಹೆಸರು  ಪಡೆದಿದೆ. .

ಅನಗತ್ಯವಾಗಿ ಪಾವಗಡ ತಾಲೂಕನ್ನು ಇಲ್ಲದ ಸಮಸ್ಯೆಗಳನ್ನು ಬಿಂಬಿಸುತ್ತಲೇ ‘ಲೂಟಿ’ಗೆ ಪರವಾನಗಿ ಪಡೆಯುತ್ತಲೇ ಇದ್ದಾರೆ. ಹೋದವರು ದುಂಡಗಾಗಿದ್ದಾರೆ. ಪನಿಷ್ಮೆಂಟ್ ಟ್ರಾನ್ಸಫರ್ ಒಂದು ರೀತಿಯಲ್ಲೇ ಒಳ್ಳೆಯದೇ ಆಗಿದೆ. ತಾಲೂಕು ಅಭಿವೃದ್ಧಿ ಕಾಣದಿದ್ದರೂ ಜೇಜುಗಳು ಅಭಿವೃದ್ಧಿ ಕಾಣುತ್ತಿವೆ. ಹೀಗಾಗಿ ಎಲ್ಲಾ ಹಂತದಿಂದಲೂ ಪಾವಗಡ ತಾಲೂಕಿಗೆ ಶಸ್ತ್ರಚಿಕಿತ್ಸೆ ನಡೆಯಬೇಕಿದೆ. ಆದರೆ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...