Homeಕರ್ನಾಟಕತುಮಕೂರಿನಲ್ಲಿ SP ಗ್ರಾಮ ವಾಸ್ತವ್ಯ: ಪ್ರಯೋಜನವೇನು, ಮಾಡಬೇಕಾದುದ್ದೇನು?

ತುಮಕೂರಿನಲ್ಲಿ SP ಗ್ರಾಮ ವಾಸ್ತವ್ಯ: ಪ್ರಯೋಜನವೇನು, ಮಾಡಬೇಕಾದುದ್ದೇನು?

ಹುತ್ತವ ಬಡಿದರೆ ಹಾವು ಸಾಯದು, ವಾಸ್ತವ್ಯ ಹೂಡಿದರೆ ಸಮಸ್ಯೆ ಬಗೆಹರಿಯದು ಎನ್ನುತ್ತಿವೆ ನಿದರ್ಶನಗಳು

- Advertisement -
- Advertisement -

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನಂ ವಂಶಿಕೃಷ್ಣ ಗ್ರಾಮ ವಾಸ್ತವ್ಯ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಪಾಲನೆ ಮಾಡಬಹುದಾದ ಒಬ್ಬ ಪೊಲೀಸ್ ವರಿಷ್ಠಾಧಿಕಾರಿ ಹೀಗೆ ಗ್ರಾಮ ವಾಸ್ತವ್ಯದ ಮೂಲಕ ಜನರೊಂದಿಗೆ ಬೆರೆತು ಸಮಸ್ಯೆ ತಿಳಿದುಕೊಳ್ಳುವ ಪ್ರಯತ್ನ ಮಾಡಿರುವುದು ಮೆಚ್ಚುವ ಸಂಗತಿಯಾದರೂ ನಿಜದ ಸಮಸ್ಯೆಗಳ ‘ಶಸ್ತ್ರಚಿಕಿತ್ಸೆ’ ಪರಿಹಾರ ದೊರಕುತ್ತದೆಯೇ? ಜನರು ಕೇಳುವ ಎಲ್ಲಾ ರೋಗಗಳಿಗೆ, ಪ್ರಶ್ನೆಗಳಿಗೆ ಪೊಲೀಸ್ ಅಧಿಕಾರಿಯಿಂದ ಪರಿಹಾರ ಸಾಧ್ಯವೇ ಎಂಬ ಪ್ರಶ್ನೆಗೆ ಉತ್ತರ ಶೂನ್ಯ.

ಪೊಲೀಸ್ ವ್ಯವಸ್ಥೆ ಜನಸ್ನೇಹಿಯಾಗಬೇಕೆಂಬ ಪ್ರಯತ್ನಗಳು ಇಂದು ನಿನ್ನೆಯವಲ್ಲ. ಅಧಿಕಾರ ಮತ್ತು ರಾಜಕೀಯ ವ್ಯಕ್ತಿಗಳ ಪ್ರಭಾವದಿಂದ ಪೊಲೀಸ್ ಠಾಣೆಗಳನ್ನು ಮುಕ್ತಗೊಳಿಸಬೇಕೆಂಬ ಮಾತುಗಳು ಹಿಂದಿನಿಂದ ಕೇಳಿಕೊಂಡೇ ಬರಲಾಗುತ್ತಿದೆ. ಆದರೆ ಇದುವರೆಗೂ ಪೊಲೀಸ್ ವ್ಯವಸ್ಥೆಯನ್ನು ರಾಜಕಾರಣದಿಂದ ಮುಕ್ತಗೊಳಿಸಲು ಸಾಧ್ಯವಾಗಿಲ್ಲ. ಪೊಲೀಸ್ ವ್ಯವಸ್ಥೆ ಮುಕ್ತಗೊಳ್ಳಲು ಮುಂದಾದಷ್ಟು ರಾಜಕಾರಣದ ಕಪಿಮುಷ್ಟಿಗೆ ಮತ್ತಷ್ಟು ಸಿಲುಕಿಕೊಳ್ಳುತಲಿದೆ. ಇನ್ನು ಪೊಲೀಸ್ ವ್ಯವಸ್ಥೆಯೇ ರಾಜಕಾರಣದ ಕಪಿಮುಷ್ಠಿಯಿಂದ ಬಿಡುಗಡೆಗೊಳ್ಳಲು ಹಿಂದೇಟು ಹಾಕುತ್ತಲೇ ಬರುತ್ತಿದೆ. ಎರಡು ಅಧಿಕಾರ ಕೇಂದ್ರಗಳು ತನ್ನನ್ನು ರಕ್ಷಣೆ ಮಾಡಿಕೊಳ್ಳಲು ಕೊಡುಕೊಳುವ ಮಾರ್ಗ ಸಹಜವೇ ಇರಬಹುದು.

ಠಾಣೆಗಳು ಜನಸ್ನೇಹಿಯಾಗಬೇಕು. ದೂರು ನೀಡಲು ಬರುವ ಜನರ ಸಮಸ್ಯೆಗಳನ್ನು ಆಪ್ತವಾಗಿ ಆಲಿಸಬೇಕು. ಸಂತ್ರಸ್ಥರಿಗೆ ನ್ಯಾಯಕೊಡಿಸಿಕೊಡುವ ನಿಟ್ಟಿನಲ್ಲಿ ಸಮರ್ಪಕ ಕೆಲಸ ಮಾಡಬೇಕು, ನೊಂದು ನ್ಯಾಯ ಅರಸಿ ಪೊಲೀಸ್ ಠಾಣೆಗೆ ಬರುವವರು ತೀರ ಬಡವರು, ಅಧಿಕಾರ ಬಲವುಳ್ಳವರಿಂದ ಶೋಷಣೆಗೆ ಒಳಗಾದವರು, ದೌರ್ಜನ್ಯಕ್ಕೆ ಒಳಗಾಗುವ ದಲಿತರು ನ್ಯಾಯಕ್ಕಾಗಿ ಠಾಣೆಗಳಿಗೆ ಬರುತ್ತಾರೆ. ಅವರ ದೂರನ್ನು ಠಾಣಾ ಅಧಿಕಾರಿಗಳು ದಾಖಲಿಸಬೇಕು. ಎಷ್ಟೇ ಪ್ರಭಾವಿಗಳಾದರೂ ದೌರ್ಜನ್ಯ ನಡೆಸಿದವರ ವಿರುದ್ಧ ಕ್ರಮ ಜರುಗಿಸಬೇಕು – ಹೀಗೆ ಹಿರಿಯ ಅಧಿಕಾರಿಗಳು ಮತ್ತು ರಾಜಕಾರಣಿಗಳು ಹೇಳುತ್ತಿದ್ದಾರೆಯೇ ವಿನಃ ಒಂದೂ ಅನುಷ್ಠಾನಕ್ಕೆ ಬಂದಿಲ್ಲ.

ಜಮೀನು ಗಲಾಟೆ, ದಾರಿ-ರಸ್ತೆ ವಿವಾದದ ಬಗ್ಗೆ ಹತ್ಯೆಗಳು ನಡೆಯುವ ಮಟ್ಟಕ್ಕೆ ಹೋಗುತ್ತವೆ. ಈ ಕುರಿತು ಎರಡು ಪಕ್ಷದವರು ನ್ಯಾಯಕ್ಕಾಗಿ ಪೊಲೀಸರ ಮೊರೆಹೋಗುತ್ತಾರೆ. ಸಂಬಂಧಪಟ್ಟ ಠಾಣಾ ಅಧಿಕಾರಿ ಪಕ್ಷಾತೀತ ನ್ಯಾಯ ಒದಗಿಸಲು ಪ್ರಯತ್ನಿಸಿದರೆ, ರಾಜಕಾರಣವೆಂಬುದು ಅಡ್ಡಿಯಾಗುತ್ತದೆ. ಪೋನ್ ಮೂಲಕವೇ ಎಲ್ಲವೂ ನಡೆದುಹೋಗುತ್ತದೆ. ಪೊಲೀಸರಿಂದ ಅರೆಸ್ಟ್ ಆದ ಗಂಟೆಯೊಳಗೆ ಆರೋಪಿಗಳು ಹೊರಗೆ ಓಡಾಡುತ್ತಾರೆ. ಇದೆಲ್ಲವೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿದಿರುವ ಸಂಗತಿಯೇ ಆಗಿದೆ. ಪೊಲೀಸ್ ವರಿಷ್ಠಾಧಿಕಾರಿ ಜನರ ಸ್ನೇಹ ಸಂಪಾದಿಸಲು ಗ್ರಾಮ ವಾಸ್ತವ್ಯ ಹೂಡುವುದು ಸರಿಯಾದ ಕ್ರಮವಾದರೂ ಅದು ತಾತ್ಕಾಲಿಕ ಶಮನವಷ್ಟೇ. ಅದರಿಂದ ಶಾಶ್ವತ ಪರಿಹಾರಗಳು ಕಂಡುಬರುವುದಿಲ್ಲ ಎಂದು ಸಾಮಾನ್ಯರು ಮಾತನಾಡಿಕೊಳ್ಳುವಂತೆ ಆಗಿದೆ.

ತುಮಕೂರು ಜಿಲ್ಲೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಬೆಂಗಳೂರಿಗೆ ಸೀಮಿತವಾಗಿದ್ದ ರಿಯಲ್ ಎಸ್ಟೇಟ್ ವ್ಯವಹಾರ ತುಮಕೂರಿಗೆ ಅಡಿಯಿಟ್ಟು ಸಣ್ಣಪುಟ್ಟ ರೌಡಿಗಳನ್ನು ಸೃಷ್ಟಿ ಮಾಡಿದೆ. ವ್ಯವಹಾರದ ಕಾರಣಕ್ಕಾಗಿ ಮಾಜಿ ಮೇಯರ್ ರವಿಯ ಹತ್ಯೆಯಾಯಿತು. ಅದು ಹಾಡುಹಗಲೇ. ಕಳೆದೊಂದು ವರ್ಷದಲ್ಲಿ ತುಮಕೂರಿನಲ್ಲಿ ನಡೆದಿರುವ ಹತ್ಯೆಗಳು ಇದೇ ಕಾರಣಕ್ಕಾಗಿಯೇ ನಡೆದವು. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ನಿಜ. ಆದರೆ ರೌಡಿಗಳ ಉಪಟಳ ನಿಂತಿಲ್ಲ. ಪುಂಡುಪೋಕರಿಗಳು ನಿತ್ಯದ ಜೂಜು, ಕುಡಿತಕ್ಕೆ ಹಣ ಹೊಂದಿಸಲು ಮಾಂಗಲ್ಯ ಸರಗಳಿಗೆ ಅಪಹರಿಸುತ್ತಿರುವುದು ನಗರದಲ್ಲಿ ನಡೆಯುತ್ತಲೇ ಇದೆ. ಪ್ರಭಾವಿ ವ್ಯಕ್ತಿಗಳ ಮಕ್ಕಳು ಇಸ್ಪೀಟ್, ಜೂಜಿನಲ್ಲಿ ಭಾಗಿಯಾಗಿದ್ದರೂ ಅವರನ್ನು ಬಂಧಿಸದೇ ಬಿಟ್ಟ ಸಾಕಷ್ಟು ಉದಾಹರಣೆಗಳು ಇವೆ ಎನ್ನುತ್ತಾರೆ ಹಿರಿಯ ಪತ್ರಕರ್ತರು.

ಪಾವಗಡ ತಾಲೂಕಿನಲ್ಲಿ ಬಹುತೇಕ ಗ್ರಾಮಗಳಲ್ಲಿ ಮಟ್ಕಾ, ಇಸ್ಪೀಟ್, ಜೂಜು ನಡೆಯುತ್ತಲೇ ಇದೆ. ‘ಹೊಂದಾಣಿಕೆ’ ಮನೋಭಾವವು ಅದು ನಿರಂತರವಾಗಿ ನಡೆಯಲು ಕಾರಣ. ಹೊಂದಾಣಿಕೆ ಎರಡು ಕಡೆಯಿಂದಲೂ ನಡೆಯುತ್ತಿದೆ. ಇದು ಎಲ್ಲರಿಗೂ ಗೊತ್ತಿರುವ ಸತ್ಯ. ಇಸ್ಪೀಟ್ ಆಡುವವರು, ಮಟ್ಕಾ ಚೀಟಿ ಬರೆಯುವವರು ಮತ್ತು ರಕ್ಷಕರು ‘ಹಸ್ತಲಾಘವ’ ಮಾಡಿದ್ದರಿಂದಲೇ ಎಲ್ಲವೂ ಅಡೆತಡೆಯಿಲ್ಲದೆ ನಡೆಯುತ್ತಿದೆ. ಹೇಮಾಹೇಮಿ ಅಧಿಕಾರಿಗಳು ಬಂದುಹೋದರೂ ಮಟ್ಕಾ ನಿಲ್ಲಿಸಲು ಸಾಧ್ಯವಾಗಿಲ್ಲ. ‘ಪಾಲುದಾರಿಕೆ’ ‘ಗುಡ್ಡೆ ಬಾಡು’ ಮೈತ್ರಿ, ಸುಸೂತ್ರವಾಗಿ ನಡೆಯುತ್ತಿದೆ. ಮಟ್ಕ ದೋಸ್ತಿಗಳ ಬಂಧನ, ಬಿಡುಗಡೆ, ಗಡಿಪಾರು ಎಲ್ಲವೂ ಆಗುತ್ತದೆ. ಆದರೂ ‘ವ್ಯವಹಾರ’ ಮಾತ್ರ ರಕ್ಷಕರ ನೆರಳಿನಲ್ಲೇ ನಡೆಯುತ್ತಿದೆ. ಕೋಟ್ಯಂತರ ವಹಿವಾಟು ನಡೆಯುವುದರಿಂದ ಪಾವಗಡ ಒಳ್ಳೆ ‘ಹುಲ್ಲುಗಾವಲು’ ಎಂಬ ಹೆಸರು  ಪಡೆದಿದೆ. .

ಅನಗತ್ಯವಾಗಿ ಪಾವಗಡ ತಾಲೂಕನ್ನು ಇಲ್ಲದ ಸಮಸ್ಯೆಗಳನ್ನು ಬಿಂಬಿಸುತ್ತಲೇ ‘ಲೂಟಿ’ಗೆ ಪರವಾನಗಿ ಪಡೆಯುತ್ತಲೇ ಇದ್ದಾರೆ. ಹೋದವರು ದುಂಡಗಾಗಿದ್ದಾರೆ. ಪನಿಷ್ಮೆಂಟ್ ಟ್ರಾನ್ಸಫರ್ ಒಂದು ರೀತಿಯಲ್ಲೇ ಒಳ್ಳೆಯದೇ ಆಗಿದೆ. ತಾಲೂಕು ಅಭಿವೃದ್ಧಿ ಕಾಣದಿದ್ದರೂ ಜೇಜುಗಳು ಅಭಿವೃದ್ಧಿ ಕಾಣುತ್ತಿವೆ. ಹೀಗಾಗಿ ಎಲ್ಲಾ ಹಂತದಿಂದಲೂ ಪಾವಗಡ ತಾಲೂಕಿಗೆ ಶಸ್ತ್ರಚಿಕಿತ್ಸೆ ನಡೆಯಬೇಕಿದೆ. ಆದರೆ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...