Homeಕರ್ನಾಟಕತುಮಕೂರಿನಲ್ಲಿ SP ಗ್ರಾಮ ವಾಸ್ತವ್ಯ: ಪ್ರಯೋಜನವೇನು, ಮಾಡಬೇಕಾದುದ್ದೇನು?

ತುಮಕೂರಿನಲ್ಲಿ SP ಗ್ರಾಮ ವಾಸ್ತವ್ಯ: ಪ್ರಯೋಜನವೇನು, ಮಾಡಬೇಕಾದುದ್ದೇನು?

ಹುತ್ತವ ಬಡಿದರೆ ಹಾವು ಸಾಯದು, ವಾಸ್ತವ್ಯ ಹೂಡಿದರೆ ಸಮಸ್ಯೆ ಬಗೆಹರಿಯದು ಎನ್ನುತ್ತಿವೆ ನಿದರ್ಶನಗಳು

- Advertisement -
- Advertisement -

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನಂ ವಂಶಿಕೃಷ್ಣ ಗ್ರಾಮ ವಾಸ್ತವ್ಯ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಪಾಲನೆ ಮಾಡಬಹುದಾದ ಒಬ್ಬ ಪೊಲೀಸ್ ವರಿಷ್ಠಾಧಿಕಾರಿ ಹೀಗೆ ಗ್ರಾಮ ವಾಸ್ತವ್ಯದ ಮೂಲಕ ಜನರೊಂದಿಗೆ ಬೆರೆತು ಸಮಸ್ಯೆ ತಿಳಿದುಕೊಳ್ಳುವ ಪ್ರಯತ್ನ ಮಾಡಿರುವುದು ಮೆಚ್ಚುವ ಸಂಗತಿಯಾದರೂ ನಿಜದ ಸಮಸ್ಯೆಗಳ ‘ಶಸ್ತ್ರಚಿಕಿತ್ಸೆ’ ಪರಿಹಾರ ದೊರಕುತ್ತದೆಯೇ? ಜನರು ಕೇಳುವ ಎಲ್ಲಾ ರೋಗಗಳಿಗೆ, ಪ್ರಶ್ನೆಗಳಿಗೆ ಪೊಲೀಸ್ ಅಧಿಕಾರಿಯಿಂದ ಪರಿಹಾರ ಸಾಧ್ಯವೇ ಎಂಬ ಪ್ರಶ್ನೆಗೆ ಉತ್ತರ ಶೂನ್ಯ.

ಪೊಲೀಸ್ ವ್ಯವಸ್ಥೆ ಜನಸ್ನೇಹಿಯಾಗಬೇಕೆಂಬ ಪ್ರಯತ್ನಗಳು ಇಂದು ನಿನ್ನೆಯವಲ್ಲ. ಅಧಿಕಾರ ಮತ್ತು ರಾಜಕೀಯ ವ್ಯಕ್ತಿಗಳ ಪ್ರಭಾವದಿಂದ ಪೊಲೀಸ್ ಠಾಣೆಗಳನ್ನು ಮುಕ್ತಗೊಳಿಸಬೇಕೆಂಬ ಮಾತುಗಳು ಹಿಂದಿನಿಂದ ಕೇಳಿಕೊಂಡೇ ಬರಲಾಗುತ್ತಿದೆ. ಆದರೆ ಇದುವರೆಗೂ ಪೊಲೀಸ್ ವ್ಯವಸ್ಥೆಯನ್ನು ರಾಜಕಾರಣದಿಂದ ಮುಕ್ತಗೊಳಿಸಲು ಸಾಧ್ಯವಾಗಿಲ್ಲ. ಪೊಲೀಸ್ ವ್ಯವಸ್ಥೆ ಮುಕ್ತಗೊಳ್ಳಲು ಮುಂದಾದಷ್ಟು ರಾಜಕಾರಣದ ಕಪಿಮುಷ್ಟಿಗೆ ಮತ್ತಷ್ಟು ಸಿಲುಕಿಕೊಳ್ಳುತಲಿದೆ. ಇನ್ನು ಪೊಲೀಸ್ ವ್ಯವಸ್ಥೆಯೇ ರಾಜಕಾರಣದ ಕಪಿಮುಷ್ಠಿಯಿಂದ ಬಿಡುಗಡೆಗೊಳ್ಳಲು ಹಿಂದೇಟು ಹಾಕುತ್ತಲೇ ಬರುತ್ತಿದೆ. ಎರಡು ಅಧಿಕಾರ ಕೇಂದ್ರಗಳು ತನ್ನನ್ನು ರಕ್ಷಣೆ ಮಾಡಿಕೊಳ್ಳಲು ಕೊಡುಕೊಳುವ ಮಾರ್ಗ ಸಹಜವೇ ಇರಬಹುದು.

ಠಾಣೆಗಳು ಜನಸ್ನೇಹಿಯಾಗಬೇಕು. ದೂರು ನೀಡಲು ಬರುವ ಜನರ ಸಮಸ್ಯೆಗಳನ್ನು ಆಪ್ತವಾಗಿ ಆಲಿಸಬೇಕು. ಸಂತ್ರಸ್ಥರಿಗೆ ನ್ಯಾಯಕೊಡಿಸಿಕೊಡುವ ನಿಟ್ಟಿನಲ್ಲಿ ಸಮರ್ಪಕ ಕೆಲಸ ಮಾಡಬೇಕು, ನೊಂದು ನ್ಯಾಯ ಅರಸಿ ಪೊಲೀಸ್ ಠಾಣೆಗೆ ಬರುವವರು ತೀರ ಬಡವರು, ಅಧಿಕಾರ ಬಲವುಳ್ಳವರಿಂದ ಶೋಷಣೆಗೆ ಒಳಗಾದವರು, ದೌರ್ಜನ್ಯಕ್ಕೆ ಒಳಗಾಗುವ ದಲಿತರು ನ್ಯಾಯಕ್ಕಾಗಿ ಠಾಣೆಗಳಿಗೆ ಬರುತ್ತಾರೆ. ಅವರ ದೂರನ್ನು ಠಾಣಾ ಅಧಿಕಾರಿಗಳು ದಾಖಲಿಸಬೇಕು. ಎಷ್ಟೇ ಪ್ರಭಾವಿಗಳಾದರೂ ದೌರ್ಜನ್ಯ ನಡೆಸಿದವರ ವಿರುದ್ಧ ಕ್ರಮ ಜರುಗಿಸಬೇಕು – ಹೀಗೆ ಹಿರಿಯ ಅಧಿಕಾರಿಗಳು ಮತ್ತು ರಾಜಕಾರಣಿಗಳು ಹೇಳುತ್ತಿದ್ದಾರೆಯೇ ವಿನಃ ಒಂದೂ ಅನುಷ್ಠಾನಕ್ಕೆ ಬಂದಿಲ್ಲ.

ಜಮೀನು ಗಲಾಟೆ, ದಾರಿ-ರಸ್ತೆ ವಿವಾದದ ಬಗ್ಗೆ ಹತ್ಯೆಗಳು ನಡೆಯುವ ಮಟ್ಟಕ್ಕೆ ಹೋಗುತ್ತವೆ. ಈ ಕುರಿತು ಎರಡು ಪಕ್ಷದವರು ನ್ಯಾಯಕ್ಕಾಗಿ ಪೊಲೀಸರ ಮೊರೆಹೋಗುತ್ತಾರೆ. ಸಂಬಂಧಪಟ್ಟ ಠಾಣಾ ಅಧಿಕಾರಿ ಪಕ್ಷಾತೀತ ನ್ಯಾಯ ಒದಗಿಸಲು ಪ್ರಯತ್ನಿಸಿದರೆ, ರಾಜಕಾರಣವೆಂಬುದು ಅಡ್ಡಿಯಾಗುತ್ತದೆ. ಪೋನ್ ಮೂಲಕವೇ ಎಲ್ಲವೂ ನಡೆದುಹೋಗುತ್ತದೆ. ಪೊಲೀಸರಿಂದ ಅರೆಸ್ಟ್ ಆದ ಗಂಟೆಯೊಳಗೆ ಆರೋಪಿಗಳು ಹೊರಗೆ ಓಡಾಡುತ್ತಾರೆ. ಇದೆಲ್ಲವೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿದಿರುವ ಸಂಗತಿಯೇ ಆಗಿದೆ. ಪೊಲೀಸ್ ವರಿಷ್ಠಾಧಿಕಾರಿ ಜನರ ಸ್ನೇಹ ಸಂಪಾದಿಸಲು ಗ್ರಾಮ ವಾಸ್ತವ್ಯ ಹೂಡುವುದು ಸರಿಯಾದ ಕ್ರಮವಾದರೂ ಅದು ತಾತ್ಕಾಲಿಕ ಶಮನವಷ್ಟೇ. ಅದರಿಂದ ಶಾಶ್ವತ ಪರಿಹಾರಗಳು ಕಂಡುಬರುವುದಿಲ್ಲ ಎಂದು ಸಾಮಾನ್ಯರು ಮಾತನಾಡಿಕೊಳ್ಳುವಂತೆ ಆಗಿದೆ.

ತುಮಕೂರು ಜಿಲ್ಲೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಬೆಂಗಳೂರಿಗೆ ಸೀಮಿತವಾಗಿದ್ದ ರಿಯಲ್ ಎಸ್ಟೇಟ್ ವ್ಯವಹಾರ ತುಮಕೂರಿಗೆ ಅಡಿಯಿಟ್ಟು ಸಣ್ಣಪುಟ್ಟ ರೌಡಿಗಳನ್ನು ಸೃಷ್ಟಿ ಮಾಡಿದೆ. ವ್ಯವಹಾರದ ಕಾರಣಕ್ಕಾಗಿ ಮಾಜಿ ಮೇಯರ್ ರವಿಯ ಹತ್ಯೆಯಾಯಿತು. ಅದು ಹಾಡುಹಗಲೇ. ಕಳೆದೊಂದು ವರ್ಷದಲ್ಲಿ ತುಮಕೂರಿನಲ್ಲಿ ನಡೆದಿರುವ ಹತ್ಯೆಗಳು ಇದೇ ಕಾರಣಕ್ಕಾಗಿಯೇ ನಡೆದವು. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ನಿಜ. ಆದರೆ ರೌಡಿಗಳ ಉಪಟಳ ನಿಂತಿಲ್ಲ. ಪುಂಡುಪೋಕರಿಗಳು ನಿತ್ಯದ ಜೂಜು, ಕುಡಿತಕ್ಕೆ ಹಣ ಹೊಂದಿಸಲು ಮಾಂಗಲ್ಯ ಸರಗಳಿಗೆ ಅಪಹರಿಸುತ್ತಿರುವುದು ನಗರದಲ್ಲಿ ನಡೆಯುತ್ತಲೇ ಇದೆ. ಪ್ರಭಾವಿ ವ್ಯಕ್ತಿಗಳ ಮಕ್ಕಳು ಇಸ್ಪೀಟ್, ಜೂಜಿನಲ್ಲಿ ಭಾಗಿಯಾಗಿದ್ದರೂ ಅವರನ್ನು ಬಂಧಿಸದೇ ಬಿಟ್ಟ ಸಾಕಷ್ಟು ಉದಾಹರಣೆಗಳು ಇವೆ ಎನ್ನುತ್ತಾರೆ ಹಿರಿಯ ಪತ್ರಕರ್ತರು.

ಪಾವಗಡ ತಾಲೂಕಿನಲ್ಲಿ ಬಹುತೇಕ ಗ್ರಾಮಗಳಲ್ಲಿ ಮಟ್ಕಾ, ಇಸ್ಪೀಟ್, ಜೂಜು ನಡೆಯುತ್ತಲೇ ಇದೆ. ‘ಹೊಂದಾಣಿಕೆ’ ಮನೋಭಾವವು ಅದು ನಿರಂತರವಾಗಿ ನಡೆಯಲು ಕಾರಣ. ಹೊಂದಾಣಿಕೆ ಎರಡು ಕಡೆಯಿಂದಲೂ ನಡೆಯುತ್ತಿದೆ. ಇದು ಎಲ್ಲರಿಗೂ ಗೊತ್ತಿರುವ ಸತ್ಯ. ಇಸ್ಪೀಟ್ ಆಡುವವರು, ಮಟ್ಕಾ ಚೀಟಿ ಬರೆಯುವವರು ಮತ್ತು ರಕ್ಷಕರು ‘ಹಸ್ತಲಾಘವ’ ಮಾಡಿದ್ದರಿಂದಲೇ ಎಲ್ಲವೂ ಅಡೆತಡೆಯಿಲ್ಲದೆ ನಡೆಯುತ್ತಿದೆ. ಹೇಮಾಹೇಮಿ ಅಧಿಕಾರಿಗಳು ಬಂದುಹೋದರೂ ಮಟ್ಕಾ ನಿಲ್ಲಿಸಲು ಸಾಧ್ಯವಾಗಿಲ್ಲ. ‘ಪಾಲುದಾರಿಕೆ’ ‘ಗುಡ್ಡೆ ಬಾಡು’ ಮೈತ್ರಿ, ಸುಸೂತ್ರವಾಗಿ ನಡೆಯುತ್ತಿದೆ. ಮಟ್ಕ ದೋಸ್ತಿಗಳ ಬಂಧನ, ಬಿಡುಗಡೆ, ಗಡಿಪಾರು ಎಲ್ಲವೂ ಆಗುತ್ತದೆ. ಆದರೂ ‘ವ್ಯವಹಾರ’ ಮಾತ್ರ ರಕ್ಷಕರ ನೆರಳಿನಲ್ಲೇ ನಡೆಯುತ್ತಿದೆ. ಕೋಟ್ಯಂತರ ವಹಿವಾಟು ನಡೆಯುವುದರಿಂದ ಪಾವಗಡ ಒಳ್ಳೆ ‘ಹುಲ್ಲುಗಾವಲು’ ಎಂಬ ಹೆಸರು  ಪಡೆದಿದೆ. .

ಅನಗತ್ಯವಾಗಿ ಪಾವಗಡ ತಾಲೂಕನ್ನು ಇಲ್ಲದ ಸಮಸ್ಯೆಗಳನ್ನು ಬಿಂಬಿಸುತ್ತಲೇ ‘ಲೂಟಿ’ಗೆ ಪರವಾನಗಿ ಪಡೆಯುತ್ತಲೇ ಇದ್ದಾರೆ. ಹೋದವರು ದುಂಡಗಾಗಿದ್ದಾರೆ. ಪನಿಷ್ಮೆಂಟ್ ಟ್ರಾನ್ಸಫರ್ ಒಂದು ರೀತಿಯಲ್ಲೇ ಒಳ್ಳೆಯದೇ ಆಗಿದೆ. ತಾಲೂಕು ಅಭಿವೃದ್ಧಿ ಕಾಣದಿದ್ದರೂ ಜೇಜುಗಳು ಅಭಿವೃದ್ಧಿ ಕಾಣುತ್ತಿವೆ. ಹೀಗಾಗಿ ಎಲ್ಲಾ ಹಂತದಿಂದಲೂ ಪಾವಗಡ ತಾಲೂಕಿಗೆ ಶಸ್ತ್ರಚಿಕಿತ್ಸೆ ನಡೆಯಬೇಕಿದೆ. ಆದರೆ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...