Homeಕರ್ನಾಟಕತುಮಕೂರಿನಲ್ಲಿ SP ಗ್ರಾಮ ವಾಸ್ತವ್ಯ: ಪ್ರಯೋಜನವೇನು, ಮಾಡಬೇಕಾದುದ್ದೇನು?

ತುಮಕೂರಿನಲ್ಲಿ SP ಗ್ರಾಮ ವಾಸ್ತವ್ಯ: ಪ್ರಯೋಜನವೇನು, ಮಾಡಬೇಕಾದುದ್ದೇನು?

ಹುತ್ತವ ಬಡಿದರೆ ಹಾವು ಸಾಯದು, ವಾಸ್ತವ್ಯ ಹೂಡಿದರೆ ಸಮಸ್ಯೆ ಬಗೆಹರಿಯದು ಎನ್ನುತ್ತಿವೆ ನಿದರ್ಶನಗಳು

- Advertisement -
- Advertisement -

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನಂ ವಂಶಿಕೃಷ್ಣ ಗ್ರಾಮ ವಾಸ್ತವ್ಯ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಪಾಲನೆ ಮಾಡಬಹುದಾದ ಒಬ್ಬ ಪೊಲೀಸ್ ವರಿಷ್ಠಾಧಿಕಾರಿ ಹೀಗೆ ಗ್ರಾಮ ವಾಸ್ತವ್ಯದ ಮೂಲಕ ಜನರೊಂದಿಗೆ ಬೆರೆತು ಸಮಸ್ಯೆ ತಿಳಿದುಕೊಳ್ಳುವ ಪ್ರಯತ್ನ ಮಾಡಿರುವುದು ಮೆಚ್ಚುವ ಸಂಗತಿಯಾದರೂ ನಿಜದ ಸಮಸ್ಯೆಗಳ ‘ಶಸ್ತ್ರಚಿಕಿತ್ಸೆ’ ಪರಿಹಾರ ದೊರಕುತ್ತದೆಯೇ? ಜನರು ಕೇಳುವ ಎಲ್ಲಾ ರೋಗಗಳಿಗೆ, ಪ್ರಶ್ನೆಗಳಿಗೆ ಪೊಲೀಸ್ ಅಧಿಕಾರಿಯಿಂದ ಪರಿಹಾರ ಸಾಧ್ಯವೇ ಎಂಬ ಪ್ರಶ್ನೆಗೆ ಉತ್ತರ ಶೂನ್ಯ.

ಪೊಲೀಸ್ ವ್ಯವಸ್ಥೆ ಜನಸ್ನೇಹಿಯಾಗಬೇಕೆಂಬ ಪ್ರಯತ್ನಗಳು ಇಂದು ನಿನ್ನೆಯವಲ್ಲ. ಅಧಿಕಾರ ಮತ್ತು ರಾಜಕೀಯ ವ್ಯಕ್ತಿಗಳ ಪ್ರಭಾವದಿಂದ ಪೊಲೀಸ್ ಠಾಣೆಗಳನ್ನು ಮುಕ್ತಗೊಳಿಸಬೇಕೆಂಬ ಮಾತುಗಳು ಹಿಂದಿನಿಂದ ಕೇಳಿಕೊಂಡೇ ಬರಲಾಗುತ್ತಿದೆ. ಆದರೆ ಇದುವರೆಗೂ ಪೊಲೀಸ್ ವ್ಯವಸ್ಥೆಯನ್ನು ರಾಜಕಾರಣದಿಂದ ಮುಕ್ತಗೊಳಿಸಲು ಸಾಧ್ಯವಾಗಿಲ್ಲ. ಪೊಲೀಸ್ ವ್ಯವಸ್ಥೆ ಮುಕ್ತಗೊಳ್ಳಲು ಮುಂದಾದಷ್ಟು ರಾಜಕಾರಣದ ಕಪಿಮುಷ್ಟಿಗೆ ಮತ್ತಷ್ಟು ಸಿಲುಕಿಕೊಳ್ಳುತಲಿದೆ. ಇನ್ನು ಪೊಲೀಸ್ ವ್ಯವಸ್ಥೆಯೇ ರಾಜಕಾರಣದ ಕಪಿಮುಷ್ಠಿಯಿಂದ ಬಿಡುಗಡೆಗೊಳ್ಳಲು ಹಿಂದೇಟು ಹಾಕುತ್ತಲೇ ಬರುತ್ತಿದೆ. ಎರಡು ಅಧಿಕಾರ ಕೇಂದ್ರಗಳು ತನ್ನನ್ನು ರಕ್ಷಣೆ ಮಾಡಿಕೊಳ್ಳಲು ಕೊಡುಕೊಳುವ ಮಾರ್ಗ ಸಹಜವೇ ಇರಬಹುದು.

ಠಾಣೆಗಳು ಜನಸ್ನೇಹಿಯಾಗಬೇಕು. ದೂರು ನೀಡಲು ಬರುವ ಜನರ ಸಮಸ್ಯೆಗಳನ್ನು ಆಪ್ತವಾಗಿ ಆಲಿಸಬೇಕು. ಸಂತ್ರಸ್ಥರಿಗೆ ನ್ಯಾಯಕೊಡಿಸಿಕೊಡುವ ನಿಟ್ಟಿನಲ್ಲಿ ಸಮರ್ಪಕ ಕೆಲಸ ಮಾಡಬೇಕು, ನೊಂದು ನ್ಯಾಯ ಅರಸಿ ಪೊಲೀಸ್ ಠಾಣೆಗೆ ಬರುವವರು ತೀರ ಬಡವರು, ಅಧಿಕಾರ ಬಲವುಳ್ಳವರಿಂದ ಶೋಷಣೆಗೆ ಒಳಗಾದವರು, ದೌರ್ಜನ್ಯಕ್ಕೆ ಒಳಗಾಗುವ ದಲಿತರು ನ್ಯಾಯಕ್ಕಾಗಿ ಠಾಣೆಗಳಿಗೆ ಬರುತ್ತಾರೆ. ಅವರ ದೂರನ್ನು ಠಾಣಾ ಅಧಿಕಾರಿಗಳು ದಾಖಲಿಸಬೇಕು. ಎಷ್ಟೇ ಪ್ರಭಾವಿಗಳಾದರೂ ದೌರ್ಜನ್ಯ ನಡೆಸಿದವರ ವಿರುದ್ಧ ಕ್ರಮ ಜರುಗಿಸಬೇಕು – ಹೀಗೆ ಹಿರಿಯ ಅಧಿಕಾರಿಗಳು ಮತ್ತು ರಾಜಕಾರಣಿಗಳು ಹೇಳುತ್ತಿದ್ದಾರೆಯೇ ವಿನಃ ಒಂದೂ ಅನುಷ್ಠಾನಕ್ಕೆ ಬಂದಿಲ್ಲ.

ಜಮೀನು ಗಲಾಟೆ, ದಾರಿ-ರಸ್ತೆ ವಿವಾದದ ಬಗ್ಗೆ ಹತ್ಯೆಗಳು ನಡೆಯುವ ಮಟ್ಟಕ್ಕೆ ಹೋಗುತ್ತವೆ. ಈ ಕುರಿತು ಎರಡು ಪಕ್ಷದವರು ನ್ಯಾಯಕ್ಕಾಗಿ ಪೊಲೀಸರ ಮೊರೆಹೋಗುತ್ತಾರೆ. ಸಂಬಂಧಪಟ್ಟ ಠಾಣಾ ಅಧಿಕಾರಿ ಪಕ್ಷಾತೀತ ನ್ಯಾಯ ಒದಗಿಸಲು ಪ್ರಯತ್ನಿಸಿದರೆ, ರಾಜಕಾರಣವೆಂಬುದು ಅಡ್ಡಿಯಾಗುತ್ತದೆ. ಪೋನ್ ಮೂಲಕವೇ ಎಲ್ಲವೂ ನಡೆದುಹೋಗುತ್ತದೆ. ಪೊಲೀಸರಿಂದ ಅರೆಸ್ಟ್ ಆದ ಗಂಟೆಯೊಳಗೆ ಆರೋಪಿಗಳು ಹೊರಗೆ ಓಡಾಡುತ್ತಾರೆ. ಇದೆಲ್ಲವೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿದಿರುವ ಸಂಗತಿಯೇ ಆಗಿದೆ. ಪೊಲೀಸ್ ವರಿಷ್ಠಾಧಿಕಾರಿ ಜನರ ಸ್ನೇಹ ಸಂಪಾದಿಸಲು ಗ್ರಾಮ ವಾಸ್ತವ್ಯ ಹೂಡುವುದು ಸರಿಯಾದ ಕ್ರಮವಾದರೂ ಅದು ತಾತ್ಕಾಲಿಕ ಶಮನವಷ್ಟೇ. ಅದರಿಂದ ಶಾಶ್ವತ ಪರಿಹಾರಗಳು ಕಂಡುಬರುವುದಿಲ್ಲ ಎಂದು ಸಾಮಾನ್ಯರು ಮಾತನಾಡಿಕೊಳ್ಳುವಂತೆ ಆಗಿದೆ.

ತುಮಕೂರು ಜಿಲ್ಲೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಬೆಂಗಳೂರಿಗೆ ಸೀಮಿತವಾಗಿದ್ದ ರಿಯಲ್ ಎಸ್ಟೇಟ್ ವ್ಯವಹಾರ ತುಮಕೂರಿಗೆ ಅಡಿಯಿಟ್ಟು ಸಣ್ಣಪುಟ್ಟ ರೌಡಿಗಳನ್ನು ಸೃಷ್ಟಿ ಮಾಡಿದೆ. ವ್ಯವಹಾರದ ಕಾರಣಕ್ಕಾಗಿ ಮಾಜಿ ಮೇಯರ್ ರವಿಯ ಹತ್ಯೆಯಾಯಿತು. ಅದು ಹಾಡುಹಗಲೇ. ಕಳೆದೊಂದು ವರ್ಷದಲ್ಲಿ ತುಮಕೂರಿನಲ್ಲಿ ನಡೆದಿರುವ ಹತ್ಯೆಗಳು ಇದೇ ಕಾರಣಕ್ಕಾಗಿಯೇ ನಡೆದವು. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ನಿಜ. ಆದರೆ ರೌಡಿಗಳ ಉಪಟಳ ನಿಂತಿಲ್ಲ. ಪುಂಡುಪೋಕರಿಗಳು ನಿತ್ಯದ ಜೂಜು, ಕುಡಿತಕ್ಕೆ ಹಣ ಹೊಂದಿಸಲು ಮಾಂಗಲ್ಯ ಸರಗಳಿಗೆ ಅಪಹರಿಸುತ್ತಿರುವುದು ನಗರದಲ್ಲಿ ನಡೆಯುತ್ತಲೇ ಇದೆ. ಪ್ರಭಾವಿ ವ್ಯಕ್ತಿಗಳ ಮಕ್ಕಳು ಇಸ್ಪೀಟ್, ಜೂಜಿನಲ್ಲಿ ಭಾಗಿಯಾಗಿದ್ದರೂ ಅವರನ್ನು ಬಂಧಿಸದೇ ಬಿಟ್ಟ ಸಾಕಷ್ಟು ಉದಾಹರಣೆಗಳು ಇವೆ ಎನ್ನುತ್ತಾರೆ ಹಿರಿಯ ಪತ್ರಕರ್ತರು.

ಪಾವಗಡ ತಾಲೂಕಿನಲ್ಲಿ ಬಹುತೇಕ ಗ್ರಾಮಗಳಲ್ಲಿ ಮಟ್ಕಾ, ಇಸ್ಪೀಟ್, ಜೂಜು ನಡೆಯುತ್ತಲೇ ಇದೆ. ‘ಹೊಂದಾಣಿಕೆ’ ಮನೋಭಾವವು ಅದು ನಿರಂತರವಾಗಿ ನಡೆಯಲು ಕಾರಣ. ಹೊಂದಾಣಿಕೆ ಎರಡು ಕಡೆಯಿಂದಲೂ ನಡೆಯುತ್ತಿದೆ. ಇದು ಎಲ್ಲರಿಗೂ ಗೊತ್ತಿರುವ ಸತ್ಯ. ಇಸ್ಪೀಟ್ ಆಡುವವರು, ಮಟ್ಕಾ ಚೀಟಿ ಬರೆಯುವವರು ಮತ್ತು ರಕ್ಷಕರು ‘ಹಸ್ತಲಾಘವ’ ಮಾಡಿದ್ದರಿಂದಲೇ ಎಲ್ಲವೂ ಅಡೆತಡೆಯಿಲ್ಲದೆ ನಡೆಯುತ್ತಿದೆ. ಹೇಮಾಹೇಮಿ ಅಧಿಕಾರಿಗಳು ಬಂದುಹೋದರೂ ಮಟ್ಕಾ ನಿಲ್ಲಿಸಲು ಸಾಧ್ಯವಾಗಿಲ್ಲ. ‘ಪಾಲುದಾರಿಕೆ’ ‘ಗುಡ್ಡೆ ಬಾಡು’ ಮೈತ್ರಿ, ಸುಸೂತ್ರವಾಗಿ ನಡೆಯುತ್ತಿದೆ. ಮಟ್ಕ ದೋಸ್ತಿಗಳ ಬಂಧನ, ಬಿಡುಗಡೆ, ಗಡಿಪಾರು ಎಲ್ಲವೂ ಆಗುತ್ತದೆ. ಆದರೂ ‘ವ್ಯವಹಾರ’ ಮಾತ್ರ ರಕ್ಷಕರ ನೆರಳಿನಲ್ಲೇ ನಡೆಯುತ್ತಿದೆ. ಕೋಟ್ಯಂತರ ವಹಿವಾಟು ನಡೆಯುವುದರಿಂದ ಪಾವಗಡ ಒಳ್ಳೆ ‘ಹುಲ್ಲುಗಾವಲು’ ಎಂಬ ಹೆಸರು  ಪಡೆದಿದೆ. .

ಅನಗತ್ಯವಾಗಿ ಪಾವಗಡ ತಾಲೂಕನ್ನು ಇಲ್ಲದ ಸಮಸ್ಯೆಗಳನ್ನು ಬಿಂಬಿಸುತ್ತಲೇ ‘ಲೂಟಿ’ಗೆ ಪರವಾನಗಿ ಪಡೆಯುತ್ತಲೇ ಇದ್ದಾರೆ. ಹೋದವರು ದುಂಡಗಾಗಿದ್ದಾರೆ. ಪನಿಷ್ಮೆಂಟ್ ಟ್ರಾನ್ಸಫರ್ ಒಂದು ರೀತಿಯಲ್ಲೇ ಒಳ್ಳೆಯದೇ ಆಗಿದೆ. ತಾಲೂಕು ಅಭಿವೃದ್ಧಿ ಕಾಣದಿದ್ದರೂ ಜೇಜುಗಳು ಅಭಿವೃದ್ಧಿ ಕಾಣುತ್ತಿವೆ. ಹೀಗಾಗಿ ಎಲ್ಲಾ ಹಂತದಿಂದಲೂ ಪಾವಗಡ ತಾಲೂಕಿಗೆ ಶಸ್ತ್ರಚಿಕಿತ್ಸೆ ನಡೆಯಬೇಕಿದೆ. ಆದರೆ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...