Homeಕರ್ನಾಟಕತುಮಕೂರಿನಲ್ಲಿ SP ಗ್ರಾಮ ವಾಸ್ತವ್ಯ: ಪ್ರಯೋಜನವೇನು, ಮಾಡಬೇಕಾದುದ್ದೇನು?

ತುಮಕೂರಿನಲ್ಲಿ SP ಗ್ರಾಮ ವಾಸ್ತವ್ಯ: ಪ್ರಯೋಜನವೇನು, ಮಾಡಬೇಕಾದುದ್ದೇನು?

ಹುತ್ತವ ಬಡಿದರೆ ಹಾವು ಸಾಯದು, ವಾಸ್ತವ್ಯ ಹೂಡಿದರೆ ಸಮಸ್ಯೆ ಬಗೆಹರಿಯದು ಎನ್ನುತ್ತಿವೆ ನಿದರ್ಶನಗಳು

- Advertisement -
- Advertisement -

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನಂ ವಂಶಿಕೃಷ್ಣ ಗ್ರಾಮ ವಾಸ್ತವ್ಯ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಪಾಲನೆ ಮಾಡಬಹುದಾದ ಒಬ್ಬ ಪೊಲೀಸ್ ವರಿಷ್ಠಾಧಿಕಾರಿ ಹೀಗೆ ಗ್ರಾಮ ವಾಸ್ತವ್ಯದ ಮೂಲಕ ಜನರೊಂದಿಗೆ ಬೆರೆತು ಸಮಸ್ಯೆ ತಿಳಿದುಕೊಳ್ಳುವ ಪ್ರಯತ್ನ ಮಾಡಿರುವುದು ಮೆಚ್ಚುವ ಸಂಗತಿಯಾದರೂ ನಿಜದ ಸಮಸ್ಯೆಗಳ ‘ಶಸ್ತ್ರಚಿಕಿತ್ಸೆ’ ಪರಿಹಾರ ದೊರಕುತ್ತದೆಯೇ? ಜನರು ಕೇಳುವ ಎಲ್ಲಾ ರೋಗಗಳಿಗೆ, ಪ್ರಶ್ನೆಗಳಿಗೆ ಪೊಲೀಸ್ ಅಧಿಕಾರಿಯಿಂದ ಪರಿಹಾರ ಸಾಧ್ಯವೇ ಎಂಬ ಪ್ರಶ್ನೆಗೆ ಉತ್ತರ ಶೂನ್ಯ.

ಪೊಲೀಸ್ ವ್ಯವಸ್ಥೆ ಜನಸ್ನೇಹಿಯಾಗಬೇಕೆಂಬ ಪ್ರಯತ್ನಗಳು ಇಂದು ನಿನ್ನೆಯವಲ್ಲ. ಅಧಿಕಾರ ಮತ್ತು ರಾಜಕೀಯ ವ್ಯಕ್ತಿಗಳ ಪ್ರಭಾವದಿಂದ ಪೊಲೀಸ್ ಠಾಣೆಗಳನ್ನು ಮುಕ್ತಗೊಳಿಸಬೇಕೆಂಬ ಮಾತುಗಳು ಹಿಂದಿನಿಂದ ಕೇಳಿಕೊಂಡೇ ಬರಲಾಗುತ್ತಿದೆ. ಆದರೆ ಇದುವರೆಗೂ ಪೊಲೀಸ್ ವ್ಯವಸ್ಥೆಯನ್ನು ರಾಜಕಾರಣದಿಂದ ಮುಕ್ತಗೊಳಿಸಲು ಸಾಧ್ಯವಾಗಿಲ್ಲ. ಪೊಲೀಸ್ ವ್ಯವಸ್ಥೆ ಮುಕ್ತಗೊಳ್ಳಲು ಮುಂದಾದಷ್ಟು ರಾಜಕಾರಣದ ಕಪಿಮುಷ್ಟಿಗೆ ಮತ್ತಷ್ಟು ಸಿಲುಕಿಕೊಳ್ಳುತಲಿದೆ. ಇನ್ನು ಪೊಲೀಸ್ ವ್ಯವಸ್ಥೆಯೇ ರಾಜಕಾರಣದ ಕಪಿಮುಷ್ಠಿಯಿಂದ ಬಿಡುಗಡೆಗೊಳ್ಳಲು ಹಿಂದೇಟು ಹಾಕುತ್ತಲೇ ಬರುತ್ತಿದೆ. ಎರಡು ಅಧಿಕಾರ ಕೇಂದ್ರಗಳು ತನ್ನನ್ನು ರಕ್ಷಣೆ ಮಾಡಿಕೊಳ್ಳಲು ಕೊಡುಕೊಳುವ ಮಾರ್ಗ ಸಹಜವೇ ಇರಬಹುದು.

ಠಾಣೆಗಳು ಜನಸ್ನೇಹಿಯಾಗಬೇಕು. ದೂರು ನೀಡಲು ಬರುವ ಜನರ ಸಮಸ್ಯೆಗಳನ್ನು ಆಪ್ತವಾಗಿ ಆಲಿಸಬೇಕು. ಸಂತ್ರಸ್ಥರಿಗೆ ನ್ಯಾಯಕೊಡಿಸಿಕೊಡುವ ನಿಟ್ಟಿನಲ್ಲಿ ಸಮರ್ಪಕ ಕೆಲಸ ಮಾಡಬೇಕು, ನೊಂದು ನ್ಯಾಯ ಅರಸಿ ಪೊಲೀಸ್ ಠಾಣೆಗೆ ಬರುವವರು ತೀರ ಬಡವರು, ಅಧಿಕಾರ ಬಲವುಳ್ಳವರಿಂದ ಶೋಷಣೆಗೆ ಒಳಗಾದವರು, ದೌರ್ಜನ್ಯಕ್ಕೆ ಒಳಗಾಗುವ ದಲಿತರು ನ್ಯಾಯಕ್ಕಾಗಿ ಠಾಣೆಗಳಿಗೆ ಬರುತ್ತಾರೆ. ಅವರ ದೂರನ್ನು ಠಾಣಾ ಅಧಿಕಾರಿಗಳು ದಾಖಲಿಸಬೇಕು. ಎಷ್ಟೇ ಪ್ರಭಾವಿಗಳಾದರೂ ದೌರ್ಜನ್ಯ ನಡೆಸಿದವರ ವಿರುದ್ಧ ಕ್ರಮ ಜರುಗಿಸಬೇಕು – ಹೀಗೆ ಹಿರಿಯ ಅಧಿಕಾರಿಗಳು ಮತ್ತು ರಾಜಕಾರಣಿಗಳು ಹೇಳುತ್ತಿದ್ದಾರೆಯೇ ವಿನಃ ಒಂದೂ ಅನುಷ್ಠಾನಕ್ಕೆ ಬಂದಿಲ್ಲ.

ಜಮೀನು ಗಲಾಟೆ, ದಾರಿ-ರಸ್ತೆ ವಿವಾದದ ಬಗ್ಗೆ ಹತ್ಯೆಗಳು ನಡೆಯುವ ಮಟ್ಟಕ್ಕೆ ಹೋಗುತ್ತವೆ. ಈ ಕುರಿತು ಎರಡು ಪಕ್ಷದವರು ನ್ಯಾಯಕ್ಕಾಗಿ ಪೊಲೀಸರ ಮೊರೆಹೋಗುತ್ತಾರೆ. ಸಂಬಂಧಪಟ್ಟ ಠಾಣಾ ಅಧಿಕಾರಿ ಪಕ್ಷಾತೀತ ನ್ಯಾಯ ಒದಗಿಸಲು ಪ್ರಯತ್ನಿಸಿದರೆ, ರಾಜಕಾರಣವೆಂಬುದು ಅಡ್ಡಿಯಾಗುತ್ತದೆ. ಪೋನ್ ಮೂಲಕವೇ ಎಲ್ಲವೂ ನಡೆದುಹೋಗುತ್ತದೆ. ಪೊಲೀಸರಿಂದ ಅರೆಸ್ಟ್ ಆದ ಗಂಟೆಯೊಳಗೆ ಆರೋಪಿಗಳು ಹೊರಗೆ ಓಡಾಡುತ್ತಾರೆ. ಇದೆಲ್ಲವೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿದಿರುವ ಸಂಗತಿಯೇ ಆಗಿದೆ. ಪೊಲೀಸ್ ವರಿಷ್ಠಾಧಿಕಾರಿ ಜನರ ಸ್ನೇಹ ಸಂಪಾದಿಸಲು ಗ್ರಾಮ ವಾಸ್ತವ್ಯ ಹೂಡುವುದು ಸರಿಯಾದ ಕ್ರಮವಾದರೂ ಅದು ತಾತ್ಕಾಲಿಕ ಶಮನವಷ್ಟೇ. ಅದರಿಂದ ಶಾಶ್ವತ ಪರಿಹಾರಗಳು ಕಂಡುಬರುವುದಿಲ್ಲ ಎಂದು ಸಾಮಾನ್ಯರು ಮಾತನಾಡಿಕೊಳ್ಳುವಂತೆ ಆಗಿದೆ.

ತುಮಕೂರು ಜಿಲ್ಲೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಬೆಂಗಳೂರಿಗೆ ಸೀಮಿತವಾಗಿದ್ದ ರಿಯಲ್ ಎಸ್ಟೇಟ್ ವ್ಯವಹಾರ ತುಮಕೂರಿಗೆ ಅಡಿಯಿಟ್ಟು ಸಣ್ಣಪುಟ್ಟ ರೌಡಿಗಳನ್ನು ಸೃಷ್ಟಿ ಮಾಡಿದೆ. ವ್ಯವಹಾರದ ಕಾರಣಕ್ಕಾಗಿ ಮಾಜಿ ಮೇಯರ್ ರವಿಯ ಹತ್ಯೆಯಾಯಿತು. ಅದು ಹಾಡುಹಗಲೇ. ಕಳೆದೊಂದು ವರ್ಷದಲ್ಲಿ ತುಮಕೂರಿನಲ್ಲಿ ನಡೆದಿರುವ ಹತ್ಯೆಗಳು ಇದೇ ಕಾರಣಕ್ಕಾಗಿಯೇ ನಡೆದವು. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ನಿಜ. ಆದರೆ ರೌಡಿಗಳ ಉಪಟಳ ನಿಂತಿಲ್ಲ. ಪುಂಡುಪೋಕರಿಗಳು ನಿತ್ಯದ ಜೂಜು, ಕುಡಿತಕ್ಕೆ ಹಣ ಹೊಂದಿಸಲು ಮಾಂಗಲ್ಯ ಸರಗಳಿಗೆ ಅಪಹರಿಸುತ್ತಿರುವುದು ನಗರದಲ್ಲಿ ನಡೆಯುತ್ತಲೇ ಇದೆ. ಪ್ರಭಾವಿ ವ್ಯಕ್ತಿಗಳ ಮಕ್ಕಳು ಇಸ್ಪೀಟ್, ಜೂಜಿನಲ್ಲಿ ಭಾಗಿಯಾಗಿದ್ದರೂ ಅವರನ್ನು ಬಂಧಿಸದೇ ಬಿಟ್ಟ ಸಾಕಷ್ಟು ಉದಾಹರಣೆಗಳು ಇವೆ ಎನ್ನುತ್ತಾರೆ ಹಿರಿಯ ಪತ್ರಕರ್ತರು.

ಪಾವಗಡ ತಾಲೂಕಿನಲ್ಲಿ ಬಹುತೇಕ ಗ್ರಾಮಗಳಲ್ಲಿ ಮಟ್ಕಾ, ಇಸ್ಪೀಟ್, ಜೂಜು ನಡೆಯುತ್ತಲೇ ಇದೆ. ‘ಹೊಂದಾಣಿಕೆ’ ಮನೋಭಾವವು ಅದು ನಿರಂತರವಾಗಿ ನಡೆಯಲು ಕಾರಣ. ಹೊಂದಾಣಿಕೆ ಎರಡು ಕಡೆಯಿಂದಲೂ ನಡೆಯುತ್ತಿದೆ. ಇದು ಎಲ್ಲರಿಗೂ ಗೊತ್ತಿರುವ ಸತ್ಯ. ಇಸ್ಪೀಟ್ ಆಡುವವರು, ಮಟ್ಕಾ ಚೀಟಿ ಬರೆಯುವವರು ಮತ್ತು ರಕ್ಷಕರು ‘ಹಸ್ತಲಾಘವ’ ಮಾಡಿದ್ದರಿಂದಲೇ ಎಲ್ಲವೂ ಅಡೆತಡೆಯಿಲ್ಲದೆ ನಡೆಯುತ್ತಿದೆ. ಹೇಮಾಹೇಮಿ ಅಧಿಕಾರಿಗಳು ಬಂದುಹೋದರೂ ಮಟ್ಕಾ ನಿಲ್ಲಿಸಲು ಸಾಧ್ಯವಾಗಿಲ್ಲ. ‘ಪಾಲುದಾರಿಕೆ’ ‘ಗುಡ್ಡೆ ಬಾಡು’ ಮೈತ್ರಿ, ಸುಸೂತ್ರವಾಗಿ ನಡೆಯುತ್ತಿದೆ. ಮಟ್ಕ ದೋಸ್ತಿಗಳ ಬಂಧನ, ಬಿಡುಗಡೆ, ಗಡಿಪಾರು ಎಲ್ಲವೂ ಆಗುತ್ತದೆ. ಆದರೂ ‘ವ್ಯವಹಾರ’ ಮಾತ್ರ ರಕ್ಷಕರ ನೆರಳಿನಲ್ಲೇ ನಡೆಯುತ್ತಿದೆ. ಕೋಟ್ಯಂತರ ವಹಿವಾಟು ನಡೆಯುವುದರಿಂದ ಪಾವಗಡ ಒಳ್ಳೆ ‘ಹುಲ್ಲುಗಾವಲು’ ಎಂಬ ಹೆಸರು  ಪಡೆದಿದೆ. .

ಅನಗತ್ಯವಾಗಿ ಪಾವಗಡ ತಾಲೂಕನ್ನು ಇಲ್ಲದ ಸಮಸ್ಯೆಗಳನ್ನು ಬಿಂಬಿಸುತ್ತಲೇ ‘ಲೂಟಿ’ಗೆ ಪರವಾನಗಿ ಪಡೆಯುತ್ತಲೇ ಇದ್ದಾರೆ. ಹೋದವರು ದುಂಡಗಾಗಿದ್ದಾರೆ. ಪನಿಷ್ಮೆಂಟ್ ಟ್ರಾನ್ಸಫರ್ ಒಂದು ರೀತಿಯಲ್ಲೇ ಒಳ್ಳೆಯದೇ ಆಗಿದೆ. ತಾಲೂಕು ಅಭಿವೃದ್ಧಿ ಕಾಣದಿದ್ದರೂ ಜೇಜುಗಳು ಅಭಿವೃದ್ಧಿ ಕಾಣುತ್ತಿವೆ. ಹೀಗಾಗಿ ಎಲ್ಲಾ ಹಂತದಿಂದಲೂ ಪಾವಗಡ ತಾಲೂಕಿಗೆ ಶಸ್ತ್ರಚಿಕಿತ್ಸೆ ನಡೆಯಬೇಕಿದೆ. ಆದರೆ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...