Homeಕರ್ನಾಟಕತುಮಕೂರಿನಲ್ಲಿ SP ಗ್ರಾಮ ವಾಸ್ತವ್ಯ: ಪ್ರಯೋಜನವೇನು, ಮಾಡಬೇಕಾದುದ್ದೇನು?

ತುಮಕೂರಿನಲ್ಲಿ SP ಗ್ರಾಮ ವಾಸ್ತವ್ಯ: ಪ್ರಯೋಜನವೇನು, ಮಾಡಬೇಕಾದುದ್ದೇನು?

ಹುತ್ತವ ಬಡಿದರೆ ಹಾವು ಸಾಯದು, ವಾಸ್ತವ್ಯ ಹೂಡಿದರೆ ಸಮಸ್ಯೆ ಬಗೆಹರಿಯದು ಎನ್ನುತ್ತಿವೆ ನಿದರ್ಶನಗಳು

- Advertisement -
- Advertisement -

ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನಂ ವಂಶಿಕೃಷ್ಣ ಗ್ರಾಮ ವಾಸ್ತವ್ಯ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಪಾಲನೆ ಮಾಡಬಹುದಾದ ಒಬ್ಬ ಪೊಲೀಸ್ ವರಿಷ್ಠಾಧಿಕಾರಿ ಹೀಗೆ ಗ್ರಾಮ ವಾಸ್ತವ್ಯದ ಮೂಲಕ ಜನರೊಂದಿಗೆ ಬೆರೆತು ಸಮಸ್ಯೆ ತಿಳಿದುಕೊಳ್ಳುವ ಪ್ರಯತ್ನ ಮಾಡಿರುವುದು ಮೆಚ್ಚುವ ಸಂಗತಿಯಾದರೂ ನಿಜದ ಸಮಸ್ಯೆಗಳ ‘ಶಸ್ತ್ರಚಿಕಿತ್ಸೆ’ ಪರಿಹಾರ ದೊರಕುತ್ತದೆಯೇ? ಜನರು ಕೇಳುವ ಎಲ್ಲಾ ರೋಗಗಳಿಗೆ, ಪ್ರಶ್ನೆಗಳಿಗೆ ಪೊಲೀಸ್ ಅಧಿಕಾರಿಯಿಂದ ಪರಿಹಾರ ಸಾಧ್ಯವೇ ಎಂಬ ಪ್ರಶ್ನೆಗೆ ಉತ್ತರ ಶೂನ್ಯ.

ಪೊಲೀಸ್ ವ್ಯವಸ್ಥೆ ಜನಸ್ನೇಹಿಯಾಗಬೇಕೆಂಬ ಪ್ರಯತ್ನಗಳು ಇಂದು ನಿನ್ನೆಯವಲ್ಲ. ಅಧಿಕಾರ ಮತ್ತು ರಾಜಕೀಯ ವ್ಯಕ್ತಿಗಳ ಪ್ರಭಾವದಿಂದ ಪೊಲೀಸ್ ಠಾಣೆಗಳನ್ನು ಮುಕ್ತಗೊಳಿಸಬೇಕೆಂಬ ಮಾತುಗಳು ಹಿಂದಿನಿಂದ ಕೇಳಿಕೊಂಡೇ ಬರಲಾಗುತ್ತಿದೆ. ಆದರೆ ಇದುವರೆಗೂ ಪೊಲೀಸ್ ವ್ಯವಸ್ಥೆಯನ್ನು ರಾಜಕಾರಣದಿಂದ ಮುಕ್ತಗೊಳಿಸಲು ಸಾಧ್ಯವಾಗಿಲ್ಲ. ಪೊಲೀಸ್ ವ್ಯವಸ್ಥೆ ಮುಕ್ತಗೊಳ್ಳಲು ಮುಂದಾದಷ್ಟು ರಾಜಕಾರಣದ ಕಪಿಮುಷ್ಟಿಗೆ ಮತ್ತಷ್ಟು ಸಿಲುಕಿಕೊಳ್ಳುತಲಿದೆ. ಇನ್ನು ಪೊಲೀಸ್ ವ್ಯವಸ್ಥೆಯೇ ರಾಜಕಾರಣದ ಕಪಿಮುಷ್ಠಿಯಿಂದ ಬಿಡುಗಡೆಗೊಳ್ಳಲು ಹಿಂದೇಟು ಹಾಕುತ್ತಲೇ ಬರುತ್ತಿದೆ. ಎರಡು ಅಧಿಕಾರ ಕೇಂದ್ರಗಳು ತನ್ನನ್ನು ರಕ್ಷಣೆ ಮಾಡಿಕೊಳ್ಳಲು ಕೊಡುಕೊಳುವ ಮಾರ್ಗ ಸಹಜವೇ ಇರಬಹುದು.

ಠಾಣೆಗಳು ಜನಸ್ನೇಹಿಯಾಗಬೇಕು. ದೂರು ನೀಡಲು ಬರುವ ಜನರ ಸಮಸ್ಯೆಗಳನ್ನು ಆಪ್ತವಾಗಿ ಆಲಿಸಬೇಕು. ಸಂತ್ರಸ್ಥರಿಗೆ ನ್ಯಾಯಕೊಡಿಸಿಕೊಡುವ ನಿಟ್ಟಿನಲ್ಲಿ ಸಮರ್ಪಕ ಕೆಲಸ ಮಾಡಬೇಕು, ನೊಂದು ನ್ಯಾಯ ಅರಸಿ ಪೊಲೀಸ್ ಠಾಣೆಗೆ ಬರುವವರು ತೀರ ಬಡವರು, ಅಧಿಕಾರ ಬಲವುಳ್ಳವರಿಂದ ಶೋಷಣೆಗೆ ಒಳಗಾದವರು, ದೌರ್ಜನ್ಯಕ್ಕೆ ಒಳಗಾಗುವ ದಲಿತರು ನ್ಯಾಯಕ್ಕಾಗಿ ಠಾಣೆಗಳಿಗೆ ಬರುತ್ತಾರೆ. ಅವರ ದೂರನ್ನು ಠಾಣಾ ಅಧಿಕಾರಿಗಳು ದಾಖಲಿಸಬೇಕು. ಎಷ್ಟೇ ಪ್ರಭಾವಿಗಳಾದರೂ ದೌರ್ಜನ್ಯ ನಡೆಸಿದವರ ವಿರುದ್ಧ ಕ್ರಮ ಜರುಗಿಸಬೇಕು – ಹೀಗೆ ಹಿರಿಯ ಅಧಿಕಾರಿಗಳು ಮತ್ತು ರಾಜಕಾರಣಿಗಳು ಹೇಳುತ್ತಿದ್ದಾರೆಯೇ ವಿನಃ ಒಂದೂ ಅನುಷ್ಠಾನಕ್ಕೆ ಬಂದಿಲ್ಲ.

ಜಮೀನು ಗಲಾಟೆ, ದಾರಿ-ರಸ್ತೆ ವಿವಾದದ ಬಗ್ಗೆ ಹತ್ಯೆಗಳು ನಡೆಯುವ ಮಟ್ಟಕ್ಕೆ ಹೋಗುತ್ತವೆ. ಈ ಕುರಿತು ಎರಡು ಪಕ್ಷದವರು ನ್ಯಾಯಕ್ಕಾಗಿ ಪೊಲೀಸರ ಮೊರೆಹೋಗುತ್ತಾರೆ. ಸಂಬಂಧಪಟ್ಟ ಠಾಣಾ ಅಧಿಕಾರಿ ಪಕ್ಷಾತೀತ ನ್ಯಾಯ ಒದಗಿಸಲು ಪ್ರಯತ್ನಿಸಿದರೆ, ರಾಜಕಾರಣವೆಂಬುದು ಅಡ್ಡಿಯಾಗುತ್ತದೆ. ಪೋನ್ ಮೂಲಕವೇ ಎಲ್ಲವೂ ನಡೆದುಹೋಗುತ್ತದೆ. ಪೊಲೀಸರಿಂದ ಅರೆಸ್ಟ್ ಆದ ಗಂಟೆಯೊಳಗೆ ಆರೋಪಿಗಳು ಹೊರಗೆ ಓಡಾಡುತ್ತಾರೆ. ಇದೆಲ್ಲವೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿದಿರುವ ಸಂಗತಿಯೇ ಆಗಿದೆ. ಪೊಲೀಸ್ ವರಿಷ್ಠಾಧಿಕಾರಿ ಜನರ ಸ್ನೇಹ ಸಂಪಾದಿಸಲು ಗ್ರಾಮ ವಾಸ್ತವ್ಯ ಹೂಡುವುದು ಸರಿಯಾದ ಕ್ರಮವಾದರೂ ಅದು ತಾತ್ಕಾಲಿಕ ಶಮನವಷ್ಟೇ. ಅದರಿಂದ ಶಾಶ್ವತ ಪರಿಹಾರಗಳು ಕಂಡುಬರುವುದಿಲ್ಲ ಎಂದು ಸಾಮಾನ್ಯರು ಮಾತನಾಡಿಕೊಳ್ಳುವಂತೆ ಆಗಿದೆ.

ತುಮಕೂರು ಜಿಲ್ಲೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಬೆಂಗಳೂರಿಗೆ ಸೀಮಿತವಾಗಿದ್ದ ರಿಯಲ್ ಎಸ್ಟೇಟ್ ವ್ಯವಹಾರ ತುಮಕೂರಿಗೆ ಅಡಿಯಿಟ್ಟು ಸಣ್ಣಪುಟ್ಟ ರೌಡಿಗಳನ್ನು ಸೃಷ್ಟಿ ಮಾಡಿದೆ. ವ್ಯವಹಾರದ ಕಾರಣಕ್ಕಾಗಿ ಮಾಜಿ ಮೇಯರ್ ರವಿಯ ಹತ್ಯೆಯಾಯಿತು. ಅದು ಹಾಡುಹಗಲೇ. ಕಳೆದೊಂದು ವರ್ಷದಲ್ಲಿ ತುಮಕೂರಿನಲ್ಲಿ ನಡೆದಿರುವ ಹತ್ಯೆಗಳು ಇದೇ ಕಾರಣಕ್ಕಾಗಿಯೇ ನಡೆದವು. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ನಿಜ. ಆದರೆ ರೌಡಿಗಳ ಉಪಟಳ ನಿಂತಿಲ್ಲ. ಪುಂಡುಪೋಕರಿಗಳು ನಿತ್ಯದ ಜೂಜು, ಕುಡಿತಕ್ಕೆ ಹಣ ಹೊಂದಿಸಲು ಮಾಂಗಲ್ಯ ಸರಗಳಿಗೆ ಅಪಹರಿಸುತ್ತಿರುವುದು ನಗರದಲ್ಲಿ ನಡೆಯುತ್ತಲೇ ಇದೆ. ಪ್ರಭಾವಿ ವ್ಯಕ್ತಿಗಳ ಮಕ್ಕಳು ಇಸ್ಪೀಟ್, ಜೂಜಿನಲ್ಲಿ ಭಾಗಿಯಾಗಿದ್ದರೂ ಅವರನ್ನು ಬಂಧಿಸದೇ ಬಿಟ್ಟ ಸಾಕಷ್ಟು ಉದಾಹರಣೆಗಳು ಇವೆ ಎನ್ನುತ್ತಾರೆ ಹಿರಿಯ ಪತ್ರಕರ್ತರು.

ಪಾವಗಡ ತಾಲೂಕಿನಲ್ಲಿ ಬಹುತೇಕ ಗ್ರಾಮಗಳಲ್ಲಿ ಮಟ್ಕಾ, ಇಸ್ಪೀಟ್, ಜೂಜು ನಡೆಯುತ್ತಲೇ ಇದೆ. ‘ಹೊಂದಾಣಿಕೆ’ ಮನೋಭಾವವು ಅದು ನಿರಂತರವಾಗಿ ನಡೆಯಲು ಕಾರಣ. ಹೊಂದಾಣಿಕೆ ಎರಡು ಕಡೆಯಿಂದಲೂ ನಡೆಯುತ್ತಿದೆ. ಇದು ಎಲ್ಲರಿಗೂ ಗೊತ್ತಿರುವ ಸತ್ಯ. ಇಸ್ಪೀಟ್ ಆಡುವವರು, ಮಟ್ಕಾ ಚೀಟಿ ಬರೆಯುವವರು ಮತ್ತು ರಕ್ಷಕರು ‘ಹಸ್ತಲಾಘವ’ ಮಾಡಿದ್ದರಿಂದಲೇ ಎಲ್ಲವೂ ಅಡೆತಡೆಯಿಲ್ಲದೆ ನಡೆಯುತ್ತಿದೆ. ಹೇಮಾಹೇಮಿ ಅಧಿಕಾರಿಗಳು ಬಂದುಹೋದರೂ ಮಟ್ಕಾ ನಿಲ್ಲಿಸಲು ಸಾಧ್ಯವಾಗಿಲ್ಲ. ‘ಪಾಲುದಾರಿಕೆ’ ‘ಗುಡ್ಡೆ ಬಾಡು’ ಮೈತ್ರಿ, ಸುಸೂತ್ರವಾಗಿ ನಡೆಯುತ್ತಿದೆ. ಮಟ್ಕ ದೋಸ್ತಿಗಳ ಬಂಧನ, ಬಿಡುಗಡೆ, ಗಡಿಪಾರು ಎಲ್ಲವೂ ಆಗುತ್ತದೆ. ಆದರೂ ‘ವ್ಯವಹಾರ’ ಮಾತ್ರ ರಕ್ಷಕರ ನೆರಳಿನಲ್ಲೇ ನಡೆಯುತ್ತಿದೆ. ಕೋಟ್ಯಂತರ ವಹಿವಾಟು ನಡೆಯುವುದರಿಂದ ಪಾವಗಡ ಒಳ್ಳೆ ‘ಹುಲ್ಲುಗಾವಲು’ ಎಂಬ ಹೆಸರು  ಪಡೆದಿದೆ. .

ಅನಗತ್ಯವಾಗಿ ಪಾವಗಡ ತಾಲೂಕನ್ನು ಇಲ್ಲದ ಸಮಸ್ಯೆಗಳನ್ನು ಬಿಂಬಿಸುತ್ತಲೇ ‘ಲೂಟಿ’ಗೆ ಪರವಾನಗಿ ಪಡೆಯುತ್ತಲೇ ಇದ್ದಾರೆ. ಹೋದವರು ದುಂಡಗಾಗಿದ್ದಾರೆ. ಪನಿಷ್ಮೆಂಟ್ ಟ್ರಾನ್ಸಫರ್ ಒಂದು ರೀತಿಯಲ್ಲೇ ಒಳ್ಳೆಯದೇ ಆಗಿದೆ. ತಾಲೂಕು ಅಭಿವೃದ್ಧಿ ಕಾಣದಿದ್ದರೂ ಜೇಜುಗಳು ಅಭಿವೃದ್ಧಿ ಕಾಣುತ್ತಿವೆ. ಹೀಗಾಗಿ ಎಲ್ಲಾ ಹಂತದಿಂದಲೂ ಪಾವಗಡ ತಾಲೂಕಿಗೆ ಶಸ್ತ್ರಚಿಕಿತ್ಸೆ ನಡೆಯಬೇಕಿದೆ. ಆದರೆ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...