Homeಮುಖಪುಟಸಾಹಿಲ್‌ ಚೀನಾದಿಂದ ತುಮಕೂರಿಗೆ ಬರುವುದಿಲ್ಲ ಎಂದಿದ್ದು ಏಕೆ? ಆತನ ಮಾತುಗಳಲ್ಲೇ ಕೇಳಿ

ಸಾಹಿಲ್‌ ಚೀನಾದಿಂದ ತುಮಕೂರಿಗೆ ಬರುವುದಿಲ್ಲ ಎಂದಿದ್ದು ಏಕೆ? ಆತನ ಮಾತುಗಳಲ್ಲೇ ಕೇಳಿ

- Advertisement -
- Advertisement -

ದೇಶಭಕ್ತಿ ತೋರಿಕೆಯದಲ್ಲ. ಅದನ್ನು ಬಹಿರಂಗವಾಗಿ ತೋರಿಸಬೇಕಾಗಿಯೂ ಇಲ್ಲ. ದೇಶಭಕ್ತಿ ವ್ಯಾಪಾರದ ಲಾಭಗಳಿಸುವ ಸರಕೂ ಅಲ್ಲ. ಅದು ಹೃದಯದಲ್ಲಿರಬೇಕು. ಸಂದರ್ಭ ಬಂದಾಗ ಅದಾಗಿ ತೆರೆದುಕೊಳ್ಳಬೇಕು. ಆದರೆ ಕೆಲವೊಂದು ವ್ಯಕ್ತಿ-ಸಂಘಟನೆಗಳು ಸಂಕೇತಗಳನ್ನು ಕೈಯಲ್ಲಿಡಿದು ದೇಶಭಕ್ತಿ ಇದೇ ಎಂದು ಕೂಗಿ ಹೇಳುತ್ತಿರುವ ಹೊತ್ತಿನಲ್ಲಿ ನಿಜದ ದೇಶಭಕ್ತಿ ಹೇಗಿರಬೇಕು ಎಂಬುದಕ್ಕೆ ಈತ ಸಾಕ್ಷಿಯಾಗಿದ್ದಾನೆ. ದೇಶವೆಂದರೆ ಗಡಿ ಮಾತ್ರವಲ್ಲ. ಅದರೊಳಗಿರುವ ಜನರಿಗೆ ತನ್ನಿಂದ ತೊಂದರೆಯಾಗುವುದಾದರೆ, ಸಂಕಷ್ಟ ಬರುವುದಾದರೆ ನಾನು ಅಲ್ಲಿಗೆ ಹೋಗಬಾರದು ಎಂಬ ದೃಢವಾದ ತೀರ್ಮಾನ ಕೈಗೊಳ್ಳುವುದು. ದೇಶ ಜನರ ಪರವಾಗಿ ಹೋರಾಡುವುದು ಎಂಬುದನ್ನು ಸಾಹಿಲ್ ಹುಸೇನ್ ಸಾಧಿಸಿ ತೋರಿದ್ದಾರೆ. ಅವರು ತೆಗೆದುಕೊಂಡಿರುವ ಕ್ರಮ ತನ್ನ ಕುಟುಂಬಕ್ಕೆ ನೋವಾದರೂ ದೇಶಕ್ಕೆ ಹಿತಬಯಸುವುದಾಗಿದೆ. ಇದೇ ನಿಜವಾದ ದೇಶಭಕ್ತಿ.

ಹೌದು, ತುಮಕೂರಿನ ಶಿಕ್ಷಕ ರಿಜ್ಞಾನ್ ಪಾಷಾ ಮತ್ತು ಸಮೀನಾ ಖಾನಂ ದಂಪತಿಯ ಎರಡನೇ ಪುತ್ರ ಸಾಹಿಲ್ ಹುಸೇನ್ ತಾನು ತೆಗೆದುಕೊಂಡು ನಿರ್ಧಾರದಿಂದ ನಕಲಿ ದೇಶಭಕ್ತರಿಗೆ ಮಾದರಿಯಾಗಿದ್ದಾರೆ. ದೇಶಭಕ್ತಿ ಕೂಗುವುದಲ್ಲ, ಸಂದರ್ಭ ಬಂದಾಗ ಮೆರೆಯುವುದು ಎಂಬುದನ್ನು ಸಾಬೀತುಪಡಿಸಿದ್ದಾರೆ. ತಾನಿರುವ ಸ್ಥಳದಿಂದ ತನ್ನ ದೇಶಕ್ಕೆ ಬಂದರೆ ಜನರು ಬಾಧಿತರಾಗುತ್ತಾರೆಂಬ ಸಾಹಿಲ್ ಹುಸೇನ್ ತಿಳುವಳಿಕೆ ಮೆಚ್ಚುವಂತಹದ್ದು. ಚಿಕ್ಕ ವಯಸ್ಸಿಗೆ ಇಂತಹ ತೀರ್ಮಾನ ಕೈಗೊಂಡಿರುವುದು ಆತನ ತಂದೆ-ತಾಯಿಗಳಲ್ಲಿ ಮಗನ ಬಗ್ಗೆ ಅಭಿಮಾನ ಉಕ್ಕಿ ಬಂದಿದೆ.

ಎಂಬಿಬಿಎಸ್ ವ್ಯಾಸಂಗ ಮಾಡಲೆಂದು ಕರ್ನಾಟಕದಿಂದ ಚೀನಾದ ವಾಸ್ಲಿ ಡಿಸ್ಟ್ರಿಕ್ ನಾನ್ ಚೆಂಗ್ ಪ್ರಾವಿನ್ಸ್ ಗೆ 5 ಮಂದಿ ಸ್ನೇಹಿತರು ತೆರಳುತ್ತಾರೆ. ಈ ಐವರಲ್ಲಿ ಇಬ್ಬರು ಯುವತಿಯರು ಮತ್ತು ಮೂವರು ಯುವಕರು ಸೇರಿರುತ್ತಾರೆ. ನಾಬ್ ಆಫ್ರಿನ್, ಅರುಣ್ ಕುಮಾರ್, ಲೋಕೇಶ್ ಮತ್ತು ತುಮಕೂರಿನಿಂದ ಸಾಹಿಲ್ ಹುಸೇನ್ ಜಿಯಾಂಗ್ ಯೂನಿವರ್ ಸಿಟಿ ಆಫ್ ಚೈನೀಸ್ ಟ್ರೆಡಿಷನ್ಸ್ ಮೆಡಿಸನ್ ವಿವಿಗೆ ಎಂಬಿಬಿಎಸ್ ಓದಲು ಹೋಗುತ್ತಾರೆ. ಈಗ ಅವರೆಲ್ಲರೂ 6ನೇ ಸೆಮಿಸ್ಟರ್ ಓದುತ್ತಿದ್ದಾರೆ. ಆದರೆ ಚೀನಾದಲ್ಲಿ ಕರೋನಾ ವೈರಸ್ ದಾಳಿ ಇಡುತ್ತಿದ್ದಂತೆಯೇ ವಿವಿಗೆ ರಜೆ ಘೋಷಿಸಲಾಗುತ್ತದೆ. ತನ್ನ ತವರು ದೇಶಗಳಿಗೆ ತೆರಳುವಂತೆ ಸೂಚಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಎಂಬಿಬಿಎಸ್ ವ್ಯಾಸಂಗಕ್ಕೆ ಹೋಗಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಅವರ ಪೋಷಕರು ಕೂಡಲೇ ಸ್ವದೇಶಕ್ಕೆ ವಾಪಸ್ ಕರೆಸಿಕೊಳ್ಳುತ್ತಾರೆ. ಕೊರೋನ ವೈರಸ್ ಇಡೀ ಚೀನಾವನ್ನೇ ಬಾಧಿಸುತ್ತಿರುವಾಗ ಸಾಹಿಲ್ ಹುಸೇನ್ ತನ್ನ ತವರಿಗೆ ಹೋಗದೇ ಇರಲು ತೀರ್ಮಾನಿಸುತ್ತಾರೆ. ಎಲ್ಲಾ ಪೋಷಕರಂತೆ ರಿಜ್ವನ್ ಪಾಷಾ ಅವರು ಕೂಡ ತನ್ನ ಮಗನಿಗೆ ಪೋನ್ ಮಾಡಿ ತುಮಕೂರಿಗೆ ವಾಪಸ್ ಆಗುವಂತೆ ಕೇಳಿಕೊಳ್ಳುತ್ತಾರೆ. ಆಗ ಸಾಹಿಲ್ ತನ್ನ ನಿರ್ಧಾರವನ್ನು ತಿಳಿಸುತ್ತಾರೆ. ಇದರಿಂದ ರಿಜ್ವನ್ ಪಾಷ ಅವರು ಅದಕ್ಕೆ ತಲೆದೂಗುತ್ತಾರೆ.

ತಂದೆ ರಿಜ್ವಾನ್ ಪಾಷ ಅವರಿಗೆ ಮಗ ಸಾಹಿಲ್ ಕಳಿಸಿರುವ ವಿಡಿಯೋದಲ್ಲಿ ಹೇಳಿರುವಂತೆ “ನಾನು ಇಲ್ಲಿ ಚನ್ನಾಗಿಯೇ ಇದ್ದೇನೆ. ಚೀನಾ ಸರ್ಕಾರ ಉತ್ತಮ ಕ್ರಮ ಕೈಗೊಂಡಿದೆ. ವಿಶ್ವವಿದ್ಯಾಲಯವೂ ನಮಗೆ ಬೆಂಬಲಕ್ಕೆ ನಿಂತಿದೆ. ನೀವು ಹೆದರಬೇಡಿ. ನಾನು ದೇಶಕ್ಕೆ ಬರಬೇಕಾದರೆ ಮೂರು ವಿಮಾನಗಳನ್ನು ಬದಲಿಸಿ ಬರಬೇಕು. ಇದರಿಂದ ನಾನು ಭಾರತಕ್ಕೆ ಬಂದರೆ ಅಲ್ಲಿಗೂ ಕೊರೋನ ವೈರಸ್ ಹರಡುತ್ತದೆ. ಹಾಗಾಗಿ ನಾನು ಬರುವುದಿಲ್ಲ. ನೀವು ಭಯಬೀಳಬೇಡಿ”  ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಶಿಕ್ಷಕ ರಿಜ್ವಾನ್ ಪಾಷ, ನಾನು ಮಗನಿಗೆ ಪೋನ್ ಮಾಡಿದೆ. ಬೇಗ ಚೀನಾ ಬಿಟ್ಟುಬರುವಂತೆ ಹೇಳಿದೆ. ಆದರೆ ಮಗ ಬರುವುದಿಲ್ಲ ಹೇಳಿದ. ನಾನು ಇರುವ ಜಾಗದಿಂದ ಬ್ಯಾಂಕಾಕ್‌ಗೆ ಬರಬೇಕು. ಅಲ್ಲಿಂದ ದೆಹಲಿ ಅಥವಾ ಮುಂಬೈಗೆ ಬರಬೇಕು. ನಾನು ದೇಶಕ್ಕೆ ಬಂದರೆ ತೊಂದರೆಯಾಗಬಹುದು. ಹಾಗಾಗಿ ನಾನು ಬರುತ್ತಿಲ್ಲ. ಇಲ್ಲಿ ನಾನು ಚೆನ್ನಾಗಿಯೇ ಇದ್ದೇನೆ. ನೀವು ಆರಾಮವಾಗಿರಿ ಎಂದು ಹೇಳಿದ. ನನಗೆ ಮಗನ ಬಗ್ಗೆ ಅಭಿಮಾನ ಉಕ್ಕಿಬಂತು. ಸಣ್ಣ ವಯಸ್ಸಿನಲ್ಲಿ ಇಷ್ಟೊಂದು ತಿಳುವಳಿಕೆ ಇದೆ. ದೇಶದ ಬಗ್ಗೆ ಆತನಿಗಿರುವ ಅಭಿಮಾನ ಕಂಡು ನನ್ನ ಕಣ್ಣು ನೀರಾಡಿತು. ಒಳ್ಳೆಯ ಮಗನನ್ನು ಪಡೆದಿದ್ದೇನೆ. ಆಯ್ತು ಚನ್ನಾಗಿರು ಎಂದು ಹೇಳಿದೆ ಎಂದು ತಿಳಿಸಿದರು.

ಈಗ ಚೀನಾದಲ್ಲಿ ಆರೋಗ್ಯಕರ ವಾತಾವರಣ ಇಲ್ಲ. ಸಾವಿರಾರು ಮಂದಿ ಕೊರೋನ ವೈರಸ್ ಗೆ ಬಲಿಯಾಗಿದ್ದಾರೆ. ಲಕ್ಷಾಂತರ ಮಂದಿ ಸೋಂಕಿನಿಂದ ನರಳುತ್ತಿದ್ದಾರೆ. ಕೊರೋನ ಸೋಂಕು ಇಡೀ ವಿಶ್ವಕ್ಕೆ ಹಬ್ಬುತ್ತಿದೆ. ಭಾರತದಲ್ಲೂ ಸುಮಾರು 80ಕ್ಕೂ ಹೆಚ್ಚು ಕೊರೋನ ವೈರಸ್ ಸೋಂಕಿನ ಪ್ರಕರಣಗಳು ಪತ್ತೆ ಆಗಿವೆ. ಜನರು ಭಯಭೀತರಾಗಿದ್ದಾರೆ. ಇಂತಹ ಸಂದರ್ಭದಲ್ಲೂ ತಾನು ಚೀನಾದಲ್ಲಿಯೇ ಇರುತ್ತೇನೆ. ಭಾರತಕ್ಕೆ ಬಂದರೆ ಕೋರೋನಾ ವೈರಸ್ ಹರಡಿದರೆ ನನ್ನ ಜನರು ಸಂಕಟ, ನೋವು ಅನುಭವಿಸುತ್ತಾರೆಂದು ತೀರ್ಮಾನಿಸಿರುವುದು ನಿಜವಾಗಿಯೇ ಆತನ ದೇಶಪ್ರೇಮಕ್ಕೆ ಬೆಲೆ ಕಟ್ಟುವಂತಿಲ್ಲ. ತಾನು ಎಷ್ಟೇ ಕಷ್ಟ ಎದುರಿಸಿದರೂ ನನ್ನ ಜನರಿಗೆ ನೋವಾಗದಿರಲಿ ಎಂಬ ಅಚಲ ನಿಲುವಿಗೆ ಹ್ಯಾಟ್ಸಪ್ ಹೇಳಲೇಬೇಕು. ನಿಜಕ್ಕೂ ರಿಜ್ವಾನ್ ಪಾಷ ಮತ್ತು ಸಮೀನಾ ಖಾನಂ ದಂಪತಿಗೆ ಅಭಿನಂದನೆ ಸಲ್ಲಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...