Homeಮುಖಪುಟಸಾಹಿಲ್‌ ಚೀನಾದಿಂದ ತುಮಕೂರಿಗೆ ಬರುವುದಿಲ್ಲ ಎಂದಿದ್ದು ಏಕೆ? ಆತನ ಮಾತುಗಳಲ್ಲೇ ಕೇಳಿ

ಸಾಹಿಲ್‌ ಚೀನಾದಿಂದ ತುಮಕೂರಿಗೆ ಬರುವುದಿಲ್ಲ ಎಂದಿದ್ದು ಏಕೆ? ಆತನ ಮಾತುಗಳಲ್ಲೇ ಕೇಳಿ

- Advertisement -
- Advertisement -

ದೇಶಭಕ್ತಿ ತೋರಿಕೆಯದಲ್ಲ. ಅದನ್ನು ಬಹಿರಂಗವಾಗಿ ತೋರಿಸಬೇಕಾಗಿಯೂ ಇಲ್ಲ. ದೇಶಭಕ್ತಿ ವ್ಯಾಪಾರದ ಲಾಭಗಳಿಸುವ ಸರಕೂ ಅಲ್ಲ. ಅದು ಹೃದಯದಲ್ಲಿರಬೇಕು. ಸಂದರ್ಭ ಬಂದಾಗ ಅದಾಗಿ ತೆರೆದುಕೊಳ್ಳಬೇಕು. ಆದರೆ ಕೆಲವೊಂದು ವ್ಯಕ್ತಿ-ಸಂಘಟನೆಗಳು ಸಂಕೇತಗಳನ್ನು ಕೈಯಲ್ಲಿಡಿದು ದೇಶಭಕ್ತಿ ಇದೇ ಎಂದು ಕೂಗಿ ಹೇಳುತ್ತಿರುವ ಹೊತ್ತಿನಲ್ಲಿ ನಿಜದ ದೇಶಭಕ್ತಿ ಹೇಗಿರಬೇಕು ಎಂಬುದಕ್ಕೆ ಈತ ಸಾಕ್ಷಿಯಾಗಿದ್ದಾನೆ. ದೇಶವೆಂದರೆ ಗಡಿ ಮಾತ್ರವಲ್ಲ. ಅದರೊಳಗಿರುವ ಜನರಿಗೆ ತನ್ನಿಂದ ತೊಂದರೆಯಾಗುವುದಾದರೆ, ಸಂಕಷ್ಟ ಬರುವುದಾದರೆ ನಾನು ಅಲ್ಲಿಗೆ ಹೋಗಬಾರದು ಎಂಬ ದೃಢವಾದ ತೀರ್ಮಾನ ಕೈಗೊಳ್ಳುವುದು. ದೇಶ ಜನರ ಪರವಾಗಿ ಹೋರಾಡುವುದು ಎಂಬುದನ್ನು ಸಾಹಿಲ್ ಹುಸೇನ್ ಸಾಧಿಸಿ ತೋರಿದ್ದಾರೆ. ಅವರು ತೆಗೆದುಕೊಂಡಿರುವ ಕ್ರಮ ತನ್ನ ಕುಟುಂಬಕ್ಕೆ ನೋವಾದರೂ ದೇಶಕ್ಕೆ ಹಿತಬಯಸುವುದಾಗಿದೆ. ಇದೇ ನಿಜವಾದ ದೇಶಭಕ್ತಿ.

ಹೌದು, ತುಮಕೂರಿನ ಶಿಕ್ಷಕ ರಿಜ್ಞಾನ್ ಪಾಷಾ ಮತ್ತು ಸಮೀನಾ ಖಾನಂ ದಂಪತಿಯ ಎರಡನೇ ಪುತ್ರ ಸಾಹಿಲ್ ಹುಸೇನ್ ತಾನು ತೆಗೆದುಕೊಂಡು ನಿರ್ಧಾರದಿಂದ ನಕಲಿ ದೇಶಭಕ್ತರಿಗೆ ಮಾದರಿಯಾಗಿದ್ದಾರೆ. ದೇಶಭಕ್ತಿ ಕೂಗುವುದಲ್ಲ, ಸಂದರ್ಭ ಬಂದಾಗ ಮೆರೆಯುವುದು ಎಂಬುದನ್ನು ಸಾಬೀತುಪಡಿಸಿದ್ದಾರೆ. ತಾನಿರುವ ಸ್ಥಳದಿಂದ ತನ್ನ ದೇಶಕ್ಕೆ ಬಂದರೆ ಜನರು ಬಾಧಿತರಾಗುತ್ತಾರೆಂಬ ಸಾಹಿಲ್ ಹುಸೇನ್ ತಿಳುವಳಿಕೆ ಮೆಚ್ಚುವಂತಹದ್ದು. ಚಿಕ್ಕ ವಯಸ್ಸಿಗೆ ಇಂತಹ ತೀರ್ಮಾನ ಕೈಗೊಂಡಿರುವುದು ಆತನ ತಂದೆ-ತಾಯಿಗಳಲ್ಲಿ ಮಗನ ಬಗ್ಗೆ ಅಭಿಮಾನ ಉಕ್ಕಿ ಬಂದಿದೆ.

ಎಂಬಿಬಿಎಸ್ ವ್ಯಾಸಂಗ ಮಾಡಲೆಂದು ಕರ್ನಾಟಕದಿಂದ ಚೀನಾದ ವಾಸ್ಲಿ ಡಿಸ್ಟ್ರಿಕ್ ನಾನ್ ಚೆಂಗ್ ಪ್ರಾವಿನ್ಸ್ ಗೆ 5 ಮಂದಿ ಸ್ನೇಹಿತರು ತೆರಳುತ್ತಾರೆ. ಈ ಐವರಲ್ಲಿ ಇಬ್ಬರು ಯುವತಿಯರು ಮತ್ತು ಮೂವರು ಯುವಕರು ಸೇರಿರುತ್ತಾರೆ. ನಾಬ್ ಆಫ್ರಿನ್, ಅರುಣ್ ಕುಮಾರ್, ಲೋಕೇಶ್ ಮತ್ತು ತುಮಕೂರಿನಿಂದ ಸಾಹಿಲ್ ಹುಸೇನ್ ಜಿಯಾಂಗ್ ಯೂನಿವರ್ ಸಿಟಿ ಆಫ್ ಚೈನೀಸ್ ಟ್ರೆಡಿಷನ್ಸ್ ಮೆಡಿಸನ್ ವಿವಿಗೆ ಎಂಬಿಬಿಎಸ್ ಓದಲು ಹೋಗುತ್ತಾರೆ. ಈಗ ಅವರೆಲ್ಲರೂ 6ನೇ ಸೆಮಿಸ್ಟರ್ ಓದುತ್ತಿದ್ದಾರೆ. ಆದರೆ ಚೀನಾದಲ್ಲಿ ಕರೋನಾ ವೈರಸ್ ದಾಳಿ ಇಡುತ್ತಿದ್ದಂತೆಯೇ ವಿವಿಗೆ ರಜೆ ಘೋಷಿಸಲಾಗುತ್ತದೆ. ತನ್ನ ತವರು ದೇಶಗಳಿಗೆ ತೆರಳುವಂತೆ ಸೂಚಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಎಂಬಿಬಿಎಸ್ ವ್ಯಾಸಂಗಕ್ಕೆ ಹೋಗಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಅವರ ಪೋಷಕರು ಕೂಡಲೇ ಸ್ವದೇಶಕ್ಕೆ ವಾಪಸ್ ಕರೆಸಿಕೊಳ್ಳುತ್ತಾರೆ. ಕೊರೋನ ವೈರಸ್ ಇಡೀ ಚೀನಾವನ್ನೇ ಬಾಧಿಸುತ್ತಿರುವಾಗ ಸಾಹಿಲ್ ಹುಸೇನ್ ತನ್ನ ತವರಿಗೆ ಹೋಗದೇ ಇರಲು ತೀರ್ಮಾನಿಸುತ್ತಾರೆ. ಎಲ್ಲಾ ಪೋಷಕರಂತೆ ರಿಜ್ವನ್ ಪಾಷಾ ಅವರು ಕೂಡ ತನ್ನ ಮಗನಿಗೆ ಪೋನ್ ಮಾಡಿ ತುಮಕೂರಿಗೆ ವಾಪಸ್ ಆಗುವಂತೆ ಕೇಳಿಕೊಳ್ಳುತ್ತಾರೆ. ಆಗ ಸಾಹಿಲ್ ತನ್ನ ನಿರ್ಧಾರವನ್ನು ತಿಳಿಸುತ್ತಾರೆ. ಇದರಿಂದ ರಿಜ್ವನ್ ಪಾಷ ಅವರು ಅದಕ್ಕೆ ತಲೆದೂಗುತ್ತಾರೆ.

ತಂದೆ ರಿಜ್ವಾನ್ ಪಾಷ ಅವರಿಗೆ ಮಗ ಸಾಹಿಲ್ ಕಳಿಸಿರುವ ವಿಡಿಯೋದಲ್ಲಿ ಹೇಳಿರುವಂತೆ “ನಾನು ಇಲ್ಲಿ ಚನ್ನಾಗಿಯೇ ಇದ್ದೇನೆ. ಚೀನಾ ಸರ್ಕಾರ ಉತ್ತಮ ಕ್ರಮ ಕೈಗೊಂಡಿದೆ. ವಿಶ್ವವಿದ್ಯಾಲಯವೂ ನಮಗೆ ಬೆಂಬಲಕ್ಕೆ ನಿಂತಿದೆ. ನೀವು ಹೆದರಬೇಡಿ. ನಾನು ದೇಶಕ್ಕೆ ಬರಬೇಕಾದರೆ ಮೂರು ವಿಮಾನಗಳನ್ನು ಬದಲಿಸಿ ಬರಬೇಕು. ಇದರಿಂದ ನಾನು ಭಾರತಕ್ಕೆ ಬಂದರೆ ಅಲ್ಲಿಗೂ ಕೊರೋನ ವೈರಸ್ ಹರಡುತ್ತದೆ. ಹಾಗಾಗಿ ನಾನು ಬರುವುದಿಲ್ಲ. ನೀವು ಭಯಬೀಳಬೇಡಿ”  ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಶಿಕ್ಷಕ ರಿಜ್ವಾನ್ ಪಾಷ, ನಾನು ಮಗನಿಗೆ ಪೋನ್ ಮಾಡಿದೆ. ಬೇಗ ಚೀನಾ ಬಿಟ್ಟುಬರುವಂತೆ ಹೇಳಿದೆ. ಆದರೆ ಮಗ ಬರುವುದಿಲ್ಲ ಹೇಳಿದ. ನಾನು ಇರುವ ಜಾಗದಿಂದ ಬ್ಯಾಂಕಾಕ್‌ಗೆ ಬರಬೇಕು. ಅಲ್ಲಿಂದ ದೆಹಲಿ ಅಥವಾ ಮುಂಬೈಗೆ ಬರಬೇಕು. ನಾನು ದೇಶಕ್ಕೆ ಬಂದರೆ ತೊಂದರೆಯಾಗಬಹುದು. ಹಾಗಾಗಿ ನಾನು ಬರುತ್ತಿಲ್ಲ. ಇಲ್ಲಿ ನಾನು ಚೆನ್ನಾಗಿಯೇ ಇದ್ದೇನೆ. ನೀವು ಆರಾಮವಾಗಿರಿ ಎಂದು ಹೇಳಿದ. ನನಗೆ ಮಗನ ಬಗ್ಗೆ ಅಭಿಮಾನ ಉಕ್ಕಿಬಂತು. ಸಣ್ಣ ವಯಸ್ಸಿನಲ್ಲಿ ಇಷ್ಟೊಂದು ತಿಳುವಳಿಕೆ ಇದೆ. ದೇಶದ ಬಗ್ಗೆ ಆತನಿಗಿರುವ ಅಭಿಮಾನ ಕಂಡು ನನ್ನ ಕಣ್ಣು ನೀರಾಡಿತು. ಒಳ್ಳೆಯ ಮಗನನ್ನು ಪಡೆದಿದ್ದೇನೆ. ಆಯ್ತು ಚನ್ನಾಗಿರು ಎಂದು ಹೇಳಿದೆ ಎಂದು ತಿಳಿಸಿದರು.

ಈಗ ಚೀನಾದಲ್ಲಿ ಆರೋಗ್ಯಕರ ವಾತಾವರಣ ಇಲ್ಲ. ಸಾವಿರಾರು ಮಂದಿ ಕೊರೋನ ವೈರಸ್ ಗೆ ಬಲಿಯಾಗಿದ್ದಾರೆ. ಲಕ್ಷಾಂತರ ಮಂದಿ ಸೋಂಕಿನಿಂದ ನರಳುತ್ತಿದ್ದಾರೆ. ಕೊರೋನ ಸೋಂಕು ಇಡೀ ವಿಶ್ವಕ್ಕೆ ಹಬ್ಬುತ್ತಿದೆ. ಭಾರತದಲ್ಲೂ ಸುಮಾರು 80ಕ್ಕೂ ಹೆಚ್ಚು ಕೊರೋನ ವೈರಸ್ ಸೋಂಕಿನ ಪ್ರಕರಣಗಳು ಪತ್ತೆ ಆಗಿವೆ. ಜನರು ಭಯಭೀತರಾಗಿದ್ದಾರೆ. ಇಂತಹ ಸಂದರ್ಭದಲ್ಲೂ ತಾನು ಚೀನಾದಲ್ಲಿಯೇ ಇರುತ್ತೇನೆ. ಭಾರತಕ್ಕೆ ಬಂದರೆ ಕೋರೋನಾ ವೈರಸ್ ಹರಡಿದರೆ ನನ್ನ ಜನರು ಸಂಕಟ, ನೋವು ಅನುಭವಿಸುತ್ತಾರೆಂದು ತೀರ್ಮಾನಿಸಿರುವುದು ನಿಜವಾಗಿಯೇ ಆತನ ದೇಶಪ್ರೇಮಕ್ಕೆ ಬೆಲೆ ಕಟ್ಟುವಂತಿಲ್ಲ. ತಾನು ಎಷ್ಟೇ ಕಷ್ಟ ಎದುರಿಸಿದರೂ ನನ್ನ ಜನರಿಗೆ ನೋವಾಗದಿರಲಿ ಎಂಬ ಅಚಲ ನಿಲುವಿಗೆ ಹ್ಯಾಟ್ಸಪ್ ಹೇಳಲೇಬೇಕು. ನಿಜಕ್ಕೂ ರಿಜ್ವಾನ್ ಪಾಷ ಮತ್ತು ಸಮೀನಾ ಖಾನಂ ದಂಪತಿಗೆ ಅಭಿನಂದನೆ ಸಲ್ಲಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...