Homeಕರ್ನಾಟಕತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ಬಿಜೆಪಿ ಉರುಳಿಸಿದ ದಾಳಕ್ಕೆ ಅನಿವಾರ್ಯವಾಗಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸಿಕ್ಕಿಕೊಳ್ಳುವಂತಾಗಿದೆ. ಗೊಲ್ಲರಿಗೆ ಜಿಪಂ ಅಧ್ಯಕ್ಷ ಹುದ್ದೆ ನೀಡುವುದನ್ನು ವಿರೋಧಿಸಿರುವವರಿಗೆ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತ ಸಿಗುವುದಿಲ್ಲ.

- Advertisement -
- Advertisement -

ತುಮಕೂರು ಜಿ.ಪಂ ಅಧ್ಯಕ್ಷರ ಬದಲಾವಣೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಧ್ಯಕ್ಷ ಸ್ಥಾನ ಬೇರೆಯವರಿಗೆ ಬಿಟ್ಟುಕೊಡಬೇಕು ಎಂಬ ಪಟ್ಟು ಆಡಳಿತ ಪಕ್ಷದ ಸದಸ್ಯರದ್ದು. ಇದಕ್ಕೆ ಪಕ್ಷಾತೀತವಾಗಿ ಎಲ್ಲರೂ ಸಹಿ ಮಾಡಿದ್ದಾರೆ. ಗೊಲ್ಲ ಸಮುದಾಯದ ಸದಸ್ಯರೊಬ್ಬರಿಗೆ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಬೇಕೆಂಬ ಕೂಗು ಎದ್ದಿದೆ. ಈ ಬಗ್ಗೆ ಬಿಜೆಪಿಯ ಕೂಗು ಜೋರಾಗಿಯೇ ಇದೆ. ದಿಢೀರನೇ ಗೊಲ್ಲರ ಮೇಲೆ ಬಿಜೆಪಿಗೆ ಪ್ರೀತಿ ಹೆಚ್ಚಾಗಲು ಕಾರಣ ರಹಸ್ಯವಾಗಿ ಉಳಿದಿಲ್ಲ. ಶಿರಾ ಉಪಚುನಾವಣೆಯಲ್ಲಿ ಗೊಲ್ಲರ ಮತ ಸೆಳೆಯಲು ಈ ತಂತ್ರ ಹೆಣೆಯಲಾಗಿದೆ.

ಅಧ್ಯಕ್ಷರನ್ನು ಬದಲಿಸಬೇಕೆಂಬ ಅವಿಶ್ವಾಸ ಪತ್ರಕ್ಕೆ ಎಲ್ಲಾ ಪಕ್ಷದ ಸದಸ್ಯರು ಸಹಿ ಹಾಕಿರುವುದು ವಿಶೇಷ. ಎಲ್ಲರಿಗೂ ಗೊಲ್ಲ ಸಮುದಾಯದ ಮೇಲೆ ಅತೀವ ಪ್ರೀತಿ ಉಕ್ಕಿ ಹರಿಯತೊಡಗಿದೆ. ಶಿರಾ ಕ್ಷೇತ್ರದಲ್ಲಿ ಗೊಲ್ಲ ಸಮುದಾಯದ ಮತಗಳ ಪ್ರಮಾಣ ಹೆಚ್ಚಾಗಿದ್ದು, 46 ಸಾವಿರ ಮತಗಳ ಮೇಲೆ ಎಲ್ಲ ಪಕ್ಷಗಳ ಕಣ್ಣುಬಿದ್ದಿದೆ. ಹಾಗಾಗಿ ಜಿ.ಪಂ ಅಧ್ಯಕ್ಷರ ಬದಲಾವಣೆಯ ವಿಷಯ ಕಾವು ಪಡೆದುಕೊಂಡಿದೆ.

ಕಳೆದ ಎರಡು ಸಭೆಗಳಿಗೆ ಜಿಲ್ಲಾ ಪಂಚಾಯಿತಿ ಸದಸ್ಯರು ಬೇಕೆಂದೇ ಹಾಜರಾಗಿಲ್ಲ. ಕೃತಕ ಕೋರಂ ಕೊರತೆ ಸೃಷ್ಟಿಸಿ, ಸಭೆ ನಡೆಯದಂತೆ ನೋಡಿಕೊಳ್ಳಲಾಗಿದೆ. ಸದಸ್ಯರುಗಳು ಜಿಲ್ಲಾ ಪಂಚಾಯತ್ ಅಧ್ಯಕ್ಷರ ವಿರುದ್ಧ ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊರೊನಾದ ಕಾರಣ ನೀಡಿ ಮೌನವಾಗಿದ್ದ ಸದಸ್ಯರು, ಶಿರಾ ಶಾಸಕರ ನಿಧನದ ನಂತರ ಅಧ್ಯಕ್ಷರನ್ನು ಬದಲಾಯಿಸಿಯೇ ತೀರಬೇಕು ಎಂದು ಪಟ್ಟುಹಿಡಿದು ಕುಳಿತಿದ್ದಾರೆ.

ಇದು ನೈಜ ಪ್ರೀತಿಯಲ್ಲ. ತೋರಿಕೆಯ ಪ್ರೀತಿ. ಚುನಾವಣೆ ಮುಗಿಯುವರೆಗೂ ಇರುವ ಪ್ರೀತಿ. ಈ ನಾಟಕ ಯಾರಿಗೆ ತಾನೇ ಗೊತ್ತಿಲ್ಲ. ಚುನಾವಣೆ ಬಂದರೆ ಬಿಜೆಪಿಗೆ ಗೊಲ್ಲರ ಮೇಲೆ ಪ್ರೀತಿ ಉಕ್ಕುತ್ತದೆ ಎಂಬ ಚರ್ಚೆಗೆ ವೇದಿಕೆ ಒದಗಿಸಿಕೊಟ್ಟಿದೆ.

ತುಮಕೂರು ಜಿ.ಪಂನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕಾರ ಹಿಡಿದಿವೆ. ಮೈತ್ರಿ ಧರ್ಮದಂತೆ ತಲಾ 30 ತಿಂಗಳು ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಯನ್ನು ಹಂಚಿಕೆ ಮಾಡಿಕೊಳ್ಳಲು ತೀರ್ಮಾನಿಸಿತ್ತು. ಆದರೆ ರಾಜಕೀಯ ಮೇಲಾಟದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರು ಒಪ್ಪಂದದಂತೆ ರಾಜಿನಾಮೆ ನೀಡಿ ಬೇರೆಯವರಿಗೆ ಸ್ಥಾನ ಬಿಟ್ಟುಕೊಡಲು ಹಿಂದೇಟು ಹಾಕುತ್ತಿದ್ದಾರೆ. ಸದ್ಯ ಜೆಡಿಎಸ್‌ನ ಲತಾ ರವಿಕುಮಾರ್ ಅಧ್ಯಕ್ಷ ಹುದ್ದೆಯಲ್ಲಿದ್ದಾರೆ. ಆದರೆ ಅಧ್ಯಕ್ಷ-ಉಪಾಧ್ಯಕ್ಷರಿಬ್ಬರೂ ರಾಜೀನಾಮೆಗೆ ಮುಂದಾಗುತ್ತಿಲ್ಲ.

ಬಿಜೆಪಿಯ ಶಾರದಾ ನರಸಿಂಹಮೂರ್ತಿ ಜಿ.ಪಂ ಉಪಾಧ್ಯಕ್ಷರಾಗಿದ್ದಾರೆ. ಇವರು ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್‌ಗೌಡರಿಗೆ ಆಪ್ತರು. ಅದೇ ಕಾರಣಕ್ಕೆ ರಾಜೀನಾಮೆ ನೀಡದೆ ಉಪಾಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆದರೆ ಬಜೆಪಿ ಪಕ್ಷವು ಅಧ್ಯಕ್ಷರು ಮಾತ್ರ ರಾಜಿನಾಮೆ ನೀಡುವಂತೆ ಒತ್ತಾಯಿಸುತ್ತಿದೆ. ಇದಕ್ಕೆ ಅಧ್ಯಕ್ಷರು ಸೊಪ್ಪು ಹಾಕುತ್ತಿಲ್ಲ.

ಗುಬ್ಬಿ ತಾಲೂಕಿನ ಬಿಜೆಪಿ ಜಿ.ಪಂ ಸದಸ್ಯೆ ಯಶೋದಮ್ಮ ಅವರಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂದು ಬಿಜೆಪಿ ಪ್ರತಿಪಾದಿಸುತ್ತಿದೆ. ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಗೊಲ್ಲ ಸಮುದಾಯದ ಮುಖಂಡ ಸಣ್ಣಮುದ್ದಯ್ಯ ಗೊಲ್ಲರಿಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದ್ದರು. ಸಣ್ಣಮುದ್ದಯ್ಯ ಬಿಜೆಪಿ ಬಗ್ಗೆ ಒಲವುಳ್ಳವರು. ಮಾಜಿ ಸಚಿವ ಸೊಗಡು ಶಿವಣ್ಣಗೆ ಆಪ್ತರಾಗಿರುವವರು. ಹಾಗಾಗಿ ಸೊಗಡು ಶಿವಣ್ಣ ಅವರು ಸಣ್ಣಮುದ್ದಯ್ಯ ಮೂಲಕ ಈ ವಿಷಯ ತೇಲಿಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಬಿಜೆಪಿ ಉರುಳಿಸಿದ ದಾಳಕ್ಕೆ ಅನಿವಾರ್ಯವಾಗಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸಿಕ್ಕಿಕೊಳ್ಳುವಂತಾಗಿದೆ. ಗೊಲ್ಲರಿಗೆ ಜಿಪಂ ಅಧ್ಯಕ್ಷ ಹುದ್ದೆ ನೀಡುವುದನ್ನು ವಿರೋಧಿಸಿರುವವರಿಗೆ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತ ಸಿಗುವುದಿಲ್ಲ. ಹಾಗಾಗಿಯೇ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಎಲ್ಲರೂ ಸಹಿ ಹಾಕಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಲಾಗಿದೆ.

“ಜಿಲ್ಲಾ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಇಬ್ಬರೂ ಒಟ್ಟಿಗೆ ರಾಜಿನಾಮೆ ನೀಡಿ ಮತ್ತೊಬ್ಬರಿಗೆ ಅವಕಾಶ ಮಾಡಿಕೊಡಬೇಕು. ಅದು ಬಿಟ್ಟು ಕೇವಲ ಅಧ್ಯಕ್ಷರ ಬದಲಾವಣೆಗೆ ಮಾತ್ರ ಆಗ್ರಹಿಸುವುದು ಸರಿಯಾದ ಕ್ರಮವಲ್ಲ. ಕೇವಲ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತಗಳನ್ನು ಪಡೆಯುವ ಉದ್ದೇಶದಿಂದ ಬಿಜೆಪಿ ಇಂತಹ ಗೊಂದಲಗಳನ್ನು ಸೃಷ್ಟಿಮಾಡಿದೆ. ಇತರೆ ಪಕ್ಷದ ಸದಸ್ಯರು ಕೂಡ ಸಹಿ ಹಾಕಿದ್ದಾರೆ. ಇದು ರಾಜಕೀಯ, ಏನೂ ಮಾಡಲು ಆಗುವುದಿಲ್ಲ” ಎಂಬುದು ಹೆಸರು ಹೇಳಲು ಇಚ್ಚಿಸದ ಜೆಡಿಎಸ್ ಮುಖಂಡರೊಬ್ಬರ ಅಭಿಪ್ರಾಯ.

“ಗೊಲ್ಲರಹಟ್ಟಿ, ಬಂಜಾರ ತಾಂಡಾಗಳು, ಕುರುಬರಹಟ್ಟಿ, ಹಾಡಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿಲ್ಲ.  ಗೊಲ್ಲರಹಟ್ಟಿಗಳು ಇಂದಿಗೂ ಗುಡಿಸಲು ಮುಕ್ತವಾಗಿಲ್ಲ. ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ ನರಳುತ್ತಿರುವ ಹಟ್ಟಿಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಕ್ರಮ ಕೈಗೊಂಡಿಲ್ಲ. ಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಮಾಡಬೇಕೆಂದು ಕಾಯ್ದೆಯಾಗಿದ್ದರೂ ಅದನ್ನು ಅನುಷ್ಠಾನಗೊಳಿಸಲು ಯಾರೂ ಮುಂದಾಗುತ್ತಿಲ್ಲ. ರಾಜಕೀಯ ಪಕ್ಷಗಳು ನಾಟಕ ಮಾಡುವುದನ್ನು ಬಿಡಬೇಕು” ಎಂದು ಗೊಲ್ಲ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಿಪಂ ಅಧ್ಯಕ್ಷರ ಬದಲಾವಣೆ ರಾಜಕೀಯ ಗಿಮಿಕ್. ಇನ್ನು ಎಂಟು ತಿಂಗಳು ಮಾತ್ರ ಅಧಿಕಾರವಧಿ ಇದೆ. ಈ ಅವಧಿಯಲ್ಲಿ ಅಧ್ಯಕ್ಷ ಹುದ್ದೆಯನ್ನು ಬೇರೆಯವರಿಗೆ ಬಿಟ್ಟುಕೊಟ್ಟರೆ ಯಾವ ಅಭಿವೃದ್ದಿ ಮಾಡಲು ಸಾಧ್ಯ. ಇದನ್ನು ಎಲ್ಲರೂ ಅರ್ಥಮಾಡಿಕೊಂಡರೆ ಒಳಿತು ಎಂದು ಪ್ರಜ್ಞಾವಂತರ ಸಮೂಹ ಹೇಳುತ್ತಿದೆ.


ಇದನ್ನೂ ಓದಿ: ತುಮಕೂರು ಸ್ಮಾರ್ಟ್ ಸಿಟಿ: ಕಳಪೆ ಕಾಮಗಾರಿಯಿಂದ ಅಧ್ವಾನಗೊಂಡ ನಗರ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...