Homeಕರ್ನಾಟಕತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ಬಿಜೆಪಿ ಉರುಳಿಸಿದ ದಾಳಕ್ಕೆ ಅನಿವಾರ್ಯವಾಗಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸಿಕ್ಕಿಕೊಳ್ಳುವಂತಾಗಿದೆ. ಗೊಲ್ಲರಿಗೆ ಜಿಪಂ ಅಧ್ಯಕ್ಷ ಹುದ್ದೆ ನೀಡುವುದನ್ನು ವಿರೋಧಿಸಿರುವವರಿಗೆ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತ ಸಿಗುವುದಿಲ್ಲ.

- Advertisement -
- Advertisement -

ತುಮಕೂರು ಜಿ.ಪಂ ಅಧ್ಯಕ್ಷರ ಬದಲಾವಣೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಧ್ಯಕ್ಷ ಸ್ಥಾನ ಬೇರೆಯವರಿಗೆ ಬಿಟ್ಟುಕೊಡಬೇಕು ಎಂಬ ಪಟ್ಟು ಆಡಳಿತ ಪಕ್ಷದ ಸದಸ್ಯರದ್ದು. ಇದಕ್ಕೆ ಪಕ್ಷಾತೀತವಾಗಿ ಎಲ್ಲರೂ ಸಹಿ ಮಾಡಿದ್ದಾರೆ. ಗೊಲ್ಲ ಸಮುದಾಯದ ಸದಸ್ಯರೊಬ್ಬರಿಗೆ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಬೇಕೆಂಬ ಕೂಗು ಎದ್ದಿದೆ. ಈ ಬಗ್ಗೆ ಬಿಜೆಪಿಯ ಕೂಗು ಜೋರಾಗಿಯೇ ಇದೆ. ದಿಢೀರನೇ ಗೊಲ್ಲರ ಮೇಲೆ ಬಿಜೆಪಿಗೆ ಪ್ರೀತಿ ಹೆಚ್ಚಾಗಲು ಕಾರಣ ರಹಸ್ಯವಾಗಿ ಉಳಿದಿಲ್ಲ. ಶಿರಾ ಉಪಚುನಾವಣೆಯಲ್ಲಿ ಗೊಲ್ಲರ ಮತ ಸೆಳೆಯಲು ಈ ತಂತ್ರ ಹೆಣೆಯಲಾಗಿದೆ.

ಅಧ್ಯಕ್ಷರನ್ನು ಬದಲಿಸಬೇಕೆಂಬ ಅವಿಶ್ವಾಸ ಪತ್ರಕ್ಕೆ ಎಲ್ಲಾ ಪಕ್ಷದ ಸದಸ್ಯರು ಸಹಿ ಹಾಕಿರುವುದು ವಿಶೇಷ. ಎಲ್ಲರಿಗೂ ಗೊಲ್ಲ ಸಮುದಾಯದ ಮೇಲೆ ಅತೀವ ಪ್ರೀತಿ ಉಕ್ಕಿ ಹರಿಯತೊಡಗಿದೆ. ಶಿರಾ ಕ್ಷೇತ್ರದಲ್ಲಿ ಗೊಲ್ಲ ಸಮುದಾಯದ ಮತಗಳ ಪ್ರಮಾಣ ಹೆಚ್ಚಾಗಿದ್ದು, 46 ಸಾವಿರ ಮತಗಳ ಮೇಲೆ ಎಲ್ಲ ಪಕ್ಷಗಳ ಕಣ್ಣುಬಿದ್ದಿದೆ. ಹಾಗಾಗಿ ಜಿ.ಪಂ ಅಧ್ಯಕ್ಷರ ಬದಲಾವಣೆಯ ವಿಷಯ ಕಾವು ಪಡೆದುಕೊಂಡಿದೆ.

ಕಳೆದ ಎರಡು ಸಭೆಗಳಿಗೆ ಜಿಲ್ಲಾ ಪಂಚಾಯಿತಿ ಸದಸ್ಯರು ಬೇಕೆಂದೇ ಹಾಜರಾಗಿಲ್ಲ. ಕೃತಕ ಕೋರಂ ಕೊರತೆ ಸೃಷ್ಟಿಸಿ, ಸಭೆ ನಡೆಯದಂತೆ ನೋಡಿಕೊಳ್ಳಲಾಗಿದೆ. ಸದಸ್ಯರುಗಳು ಜಿಲ್ಲಾ ಪಂಚಾಯತ್ ಅಧ್ಯಕ್ಷರ ವಿರುದ್ಧ ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊರೊನಾದ ಕಾರಣ ನೀಡಿ ಮೌನವಾಗಿದ್ದ ಸದಸ್ಯರು, ಶಿರಾ ಶಾಸಕರ ನಿಧನದ ನಂತರ ಅಧ್ಯಕ್ಷರನ್ನು ಬದಲಾಯಿಸಿಯೇ ತೀರಬೇಕು ಎಂದು ಪಟ್ಟುಹಿಡಿದು ಕುಳಿತಿದ್ದಾರೆ.

ಇದು ನೈಜ ಪ್ರೀತಿಯಲ್ಲ. ತೋರಿಕೆಯ ಪ್ರೀತಿ. ಚುನಾವಣೆ ಮುಗಿಯುವರೆಗೂ ಇರುವ ಪ್ರೀತಿ. ಈ ನಾಟಕ ಯಾರಿಗೆ ತಾನೇ ಗೊತ್ತಿಲ್ಲ. ಚುನಾವಣೆ ಬಂದರೆ ಬಿಜೆಪಿಗೆ ಗೊಲ್ಲರ ಮೇಲೆ ಪ್ರೀತಿ ಉಕ್ಕುತ್ತದೆ ಎಂಬ ಚರ್ಚೆಗೆ ವೇದಿಕೆ ಒದಗಿಸಿಕೊಟ್ಟಿದೆ.

ತುಮಕೂರು ಜಿ.ಪಂನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕಾರ ಹಿಡಿದಿವೆ. ಮೈತ್ರಿ ಧರ್ಮದಂತೆ ತಲಾ 30 ತಿಂಗಳು ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಯನ್ನು ಹಂಚಿಕೆ ಮಾಡಿಕೊಳ್ಳಲು ತೀರ್ಮಾನಿಸಿತ್ತು. ಆದರೆ ರಾಜಕೀಯ ಮೇಲಾಟದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರು ಒಪ್ಪಂದದಂತೆ ರಾಜಿನಾಮೆ ನೀಡಿ ಬೇರೆಯವರಿಗೆ ಸ್ಥಾನ ಬಿಟ್ಟುಕೊಡಲು ಹಿಂದೇಟು ಹಾಕುತ್ತಿದ್ದಾರೆ. ಸದ್ಯ ಜೆಡಿಎಸ್‌ನ ಲತಾ ರವಿಕುಮಾರ್ ಅಧ್ಯಕ್ಷ ಹುದ್ದೆಯಲ್ಲಿದ್ದಾರೆ. ಆದರೆ ಅಧ್ಯಕ್ಷ-ಉಪಾಧ್ಯಕ್ಷರಿಬ್ಬರೂ ರಾಜೀನಾಮೆಗೆ ಮುಂದಾಗುತ್ತಿಲ್ಲ.

ಬಿಜೆಪಿಯ ಶಾರದಾ ನರಸಿಂಹಮೂರ್ತಿ ಜಿ.ಪಂ ಉಪಾಧ್ಯಕ್ಷರಾಗಿದ್ದಾರೆ. ಇವರು ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್‌ಗೌಡರಿಗೆ ಆಪ್ತರು. ಅದೇ ಕಾರಣಕ್ಕೆ ರಾಜೀನಾಮೆ ನೀಡದೆ ಉಪಾಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆದರೆ ಬಜೆಪಿ ಪಕ್ಷವು ಅಧ್ಯಕ್ಷರು ಮಾತ್ರ ರಾಜಿನಾಮೆ ನೀಡುವಂತೆ ಒತ್ತಾಯಿಸುತ್ತಿದೆ. ಇದಕ್ಕೆ ಅಧ್ಯಕ್ಷರು ಸೊಪ್ಪು ಹಾಕುತ್ತಿಲ್ಲ.

ಗುಬ್ಬಿ ತಾಲೂಕಿನ ಬಿಜೆಪಿ ಜಿ.ಪಂ ಸದಸ್ಯೆ ಯಶೋದಮ್ಮ ಅವರಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂದು ಬಿಜೆಪಿ ಪ್ರತಿಪಾದಿಸುತ್ತಿದೆ. ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಗೊಲ್ಲ ಸಮುದಾಯದ ಮುಖಂಡ ಸಣ್ಣಮುದ್ದಯ್ಯ ಗೊಲ್ಲರಿಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದ್ದರು. ಸಣ್ಣಮುದ್ದಯ್ಯ ಬಿಜೆಪಿ ಬಗ್ಗೆ ಒಲವುಳ್ಳವರು. ಮಾಜಿ ಸಚಿವ ಸೊಗಡು ಶಿವಣ್ಣಗೆ ಆಪ್ತರಾಗಿರುವವರು. ಹಾಗಾಗಿ ಸೊಗಡು ಶಿವಣ್ಣ ಅವರು ಸಣ್ಣಮುದ್ದಯ್ಯ ಮೂಲಕ ಈ ವಿಷಯ ತೇಲಿಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಬಿಜೆಪಿ ಉರುಳಿಸಿದ ದಾಳಕ್ಕೆ ಅನಿವಾರ್ಯವಾಗಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸಿಕ್ಕಿಕೊಳ್ಳುವಂತಾಗಿದೆ. ಗೊಲ್ಲರಿಗೆ ಜಿಪಂ ಅಧ್ಯಕ್ಷ ಹುದ್ದೆ ನೀಡುವುದನ್ನು ವಿರೋಧಿಸಿರುವವರಿಗೆ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತ ಸಿಗುವುದಿಲ್ಲ. ಹಾಗಾಗಿಯೇ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಎಲ್ಲರೂ ಸಹಿ ಹಾಕಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಲಾಗಿದೆ.

“ಜಿಲ್ಲಾ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಇಬ್ಬರೂ ಒಟ್ಟಿಗೆ ರಾಜಿನಾಮೆ ನೀಡಿ ಮತ್ತೊಬ್ಬರಿಗೆ ಅವಕಾಶ ಮಾಡಿಕೊಡಬೇಕು. ಅದು ಬಿಟ್ಟು ಕೇವಲ ಅಧ್ಯಕ್ಷರ ಬದಲಾವಣೆಗೆ ಮಾತ್ರ ಆಗ್ರಹಿಸುವುದು ಸರಿಯಾದ ಕ್ರಮವಲ್ಲ. ಕೇವಲ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತಗಳನ್ನು ಪಡೆಯುವ ಉದ್ದೇಶದಿಂದ ಬಿಜೆಪಿ ಇಂತಹ ಗೊಂದಲಗಳನ್ನು ಸೃಷ್ಟಿಮಾಡಿದೆ. ಇತರೆ ಪಕ್ಷದ ಸದಸ್ಯರು ಕೂಡ ಸಹಿ ಹಾಕಿದ್ದಾರೆ. ಇದು ರಾಜಕೀಯ, ಏನೂ ಮಾಡಲು ಆಗುವುದಿಲ್ಲ” ಎಂಬುದು ಹೆಸರು ಹೇಳಲು ಇಚ್ಚಿಸದ ಜೆಡಿಎಸ್ ಮುಖಂಡರೊಬ್ಬರ ಅಭಿಪ್ರಾಯ.

“ಗೊಲ್ಲರಹಟ್ಟಿ, ಬಂಜಾರ ತಾಂಡಾಗಳು, ಕುರುಬರಹಟ್ಟಿ, ಹಾಡಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿಲ್ಲ.  ಗೊಲ್ಲರಹಟ್ಟಿಗಳು ಇಂದಿಗೂ ಗುಡಿಸಲು ಮುಕ್ತವಾಗಿಲ್ಲ. ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ ನರಳುತ್ತಿರುವ ಹಟ್ಟಿಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಕ್ರಮ ಕೈಗೊಂಡಿಲ್ಲ. ಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಮಾಡಬೇಕೆಂದು ಕಾಯ್ದೆಯಾಗಿದ್ದರೂ ಅದನ್ನು ಅನುಷ್ಠಾನಗೊಳಿಸಲು ಯಾರೂ ಮುಂದಾಗುತ್ತಿಲ್ಲ. ರಾಜಕೀಯ ಪಕ್ಷಗಳು ನಾಟಕ ಮಾಡುವುದನ್ನು ಬಿಡಬೇಕು” ಎಂದು ಗೊಲ್ಲ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಿಪಂ ಅಧ್ಯಕ್ಷರ ಬದಲಾವಣೆ ರಾಜಕೀಯ ಗಿಮಿಕ್. ಇನ್ನು ಎಂಟು ತಿಂಗಳು ಮಾತ್ರ ಅಧಿಕಾರವಧಿ ಇದೆ. ಈ ಅವಧಿಯಲ್ಲಿ ಅಧ್ಯಕ್ಷ ಹುದ್ದೆಯನ್ನು ಬೇರೆಯವರಿಗೆ ಬಿಟ್ಟುಕೊಟ್ಟರೆ ಯಾವ ಅಭಿವೃದ್ದಿ ಮಾಡಲು ಸಾಧ್ಯ. ಇದನ್ನು ಎಲ್ಲರೂ ಅರ್ಥಮಾಡಿಕೊಂಡರೆ ಒಳಿತು ಎಂದು ಪ್ರಜ್ಞಾವಂತರ ಸಮೂಹ ಹೇಳುತ್ತಿದೆ.


ಇದನ್ನೂ ಓದಿ: ತುಮಕೂರು ಸ್ಮಾರ್ಟ್ ಸಿಟಿ: ಕಳಪೆ ಕಾಮಗಾರಿಯಿಂದ ಅಧ್ವಾನಗೊಂಡ ನಗರ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...