Homeಕರ್ನಾಟಕತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ಬಿಜೆಪಿ ಉರುಳಿಸಿದ ದಾಳಕ್ಕೆ ಅನಿವಾರ್ಯವಾಗಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸಿಕ್ಕಿಕೊಳ್ಳುವಂತಾಗಿದೆ. ಗೊಲ್ಲರಿಗೆ ಜಿಪಂ ಅಧ್ಯಕ್ಷ ಹುದ್ದೆ ನೀಡುವುದನ್ನು ವಿರೋಧಿಸಿರುವವರಿಗೆ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತ ಸಿಗುವುದಿಲ್ಲ.

- Advertisement -
- Advertisement -

ತುಮಕೂರು ಜಿ.ಪಂ ಅಧ್ಯಕ್ಷರ ಬದಲಾವಣೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಧ್ಯಕ್ಷ ಸ್ಥಾನ ಬೇರೆಯವರಿಗೆ ಬಿಟ್ಟುಕೊಡಬೇಕು ಎಂಬ ಪಟ್ಟು ಆಡಳಿತ ಪಕ್ಷದ ಸದಸ್ಯರದ್ದು. ಇದಕ್ಕೆ ಪಕ್ಷಾತೀತವಾಗಿ ಎಲ್ಲರೂ ಸಹಿ ಮಾಡಿದ್ದಾರೆ. ಗೊಲ್ಲ ಸಮುದಾಯದ ಸದಸ್ಯರೊಬ್ಬರಿಗೆ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಬೇಕೆಂಬ ಕೂಗು ಎದ್ದಿದೆ. ಈ ಬಗ್ಗೆ ಬಿಜೆಪಿಯ ಕೂಗು ಜೋರಾಗಿಯೇ ಇದೆ. ದಿಢೀರನೇ ಗೊಲ್ಲರ ಮೇಲೆ ಬಿಜೆಪಿಗೆ ಪ್ರೀತಿ ಹೆಚ್ಚಾಗಲು ಕಾರಣ ರಹಸ್ಯವಾಗಿ ಉಳಿದಿಲ್ಲ. ಶಿರಾ ಉಪಚುನಾವಣೆಯಲ್ಲಿ ಗೊಲ್ಲರ ಮತ ಸೆಳೆಯಲು ಈ ತಂತ್ರ ಹೆಣೆಯಲಾಗಿದೆ.

ಅಧ್ಯಕ್ಷರನ್ನು ಬದಲಿಸಬೇಕೆಂಬ ಅವಿಶ್ವಾಸ ಪತ್ರಕ್ಕೆ ಎಲ್ಲಾ ಪಕ್ಷದ ಸದಸ್ಯರು ಸಹಿ ಹಾಕಿರುವುದು ವಿಶೇಷ. ಎಲ್ಲರಿಗೂ ಗೊಲ್ಲ ಸಮುದಾಯದ ಮೇಲೆ ಅತೀವ ಪ್ರೀತಿ ಉಕ್ಕಿ ಹರಿಯತೊಡಗಿದೆ. ಶಿರಾ ಕ್ಷೇತ್ರದಲ್ಲಿ ಗೊಲ್ಲ ಸಮುದಾಯದ ಮತಗಳ ಪ್ರಮಾಣ ಹೆಚ್ಚಾಗಿದ್ದು, 46 ಸಾವಿರ ಮತಗಳ ಮೇಲೆ ಎಲ್ಲ ಪಕ್ಷಗಳ ಕಣ್ಣುಬಿದ್ದಿದೆ. ಹಾಗಾಗಿ ಜಿ.ಪಂ ಅಧ್ಯಕ್ಷರ ಬದಲಾವಣೆಯ ವಿಷಯ ಕಾವು ಪಡೆದುಕೊಂಡಿದೆ.

ಕಳೆದ ಎರಡು ಸಭೆಗಳಿಗೆ ಜಿಲ್ಲಾ ಪಂಚಾಯಿತಿ ಸದಸ್ಯರು ಬೇಕೆಂದೇ ಹಾಜರಾಗಿಲ್ಲ. ಕೃತಕ ಕೋರಂ ಕೊರತೆ ಸೃಷ್ಟಿಸಿ, ಸಭೆ ನಡೆಯದಂತೆ ನೋಡಿಕೊಳ್ಳಲಾಗಿದೆ. ಸದಸ್ಯರುಗಳು ಜಿಲ್ಲಾ ಪಂಚಾಯತ್ ಅಧ್ಯಕ್ಷರ ವಿರುದ್ಧ ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊರೊನಾದ ಕಾರಣ ನೀಡಿ ಮೌನವಾಗಿದ್ದ ಸದಸ್ಯರು, ಶಿರಾ ಶಾಸಕರ ನಿಧನದ ನಂತರ ಅಧ್ಯಕ್ಷರನ್ನು ಬದಲಾಯಿಸಿಯೇ ತೀರಬೇಕು ಎಂದು ಪಟ್ಟುಹಿಡಿದು ಕುಳಿತಿದ್ದಾರೆ.

ಇದು ನೈಜ ಪ್ರೀತಿಯಲ್ಲ. ತೋರಿಕೆಯ ಪ್ರೀತಿ. ಚುನಾವಣೆ ಮುಗಿಯುವರೆಗೂ ಇರುವ ಪ್ರೀತಿ. ಈ ನಾಟಕ ಯಾರಿಗೆ ತಾನೇ ಗೊತ್ತಿಲ್ಲ. ಚುನಾವಣೆ ಬಂದರೆ ಬಿಜೆಪಿಗೆ ಗೊಲ್ಲರ ಮೇಲೆ ಪ್ರೀತಿ ಉಕ್ಕುತ್ತದೆ ಎಂಬ ಚರ್ಚೆಗೆ ವೇದಿಕೆ ಒದಗಿಸಿಕೊಟ್ಟಿದೆ.

ತುಮಕೂರು ಜಿ.ಪಂನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕಾರ ಹಿಡಿದಿವೆ. ಮೈತ್ರಿ ಧರ್ಮದಂತೆ ತಲಾ 30 ತಿಂಗಳು ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಯನ್ನು ಹಂಚಿಕೆ ಮಾಡಿಕೊಳ್ಳಲು ತೀರ್ಮಾನಿಸಿತ್ತು. ಆದರೆ ರಾಜಕೀಯ ಮೇಲಾಟದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರು ಒಪ್ಪಂದದಂತೆ ರಾಜಿನಾಮೆ ನೀಡಿ ಬೇರೆಯವರಿಗೆ ಸ್ಥಾನ ಬಿಟ್ಟುಕೊಡಲು ಹಿಂದೇಟು ಹಾಕುತ್ತಿದ್ದಾರೆ. ಸದ್ಯ ಜೆಡಿಎಸ್‌ನ ಲತಾ ರವಿಕುಮಾರ್ ಅಧ್ಯಕ್ಷ ಹುದ್ದೆಯಲ್ಲಿದ್ದಾರೆ. ಆದರೆ ಅಧ್ಯಕ್ಷ-ಉಪಾಧ್ಯಕ್ಷರಿಬ್ಬರೂ ರಾಜೀನಾಮೆಗೆ ಮುಂದಾಗುತ್ತಿಲ್ಲ.

ಬಿಜೆಪಿಯ ಶಾರದಾ ನರಸಿಂಹಮೂರ್ತಿ ಜಿ.ಪಂ ಉಪಾಧ್ಯಕ್ಷರಾಗಿದ್ದಾರೆ. ಇವರು ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್‌ಗೌಡರಿಗೆ ಆಪ್ತರು. ಅದೇ ಕಾರಣಕ್ಕೆ ರಾಜೀನಾಮೆ ನೀಡದೆ ಉಪಾಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆದರೆ ಬಜೆಪಿ ಪಕ್ಷವು ಅಧ್ಯಕ್ಷರು ಮಾತ್ರ ರಾಜಿನಾಮೆ ನೀಡುವಂತೆ ಒತ್ತಾಯಿಸುತ್ತಿದೆ. ಇದಕ್ಕೆ ಅಧ್ಯಕ್ಷರು ಸೊಪ್ಪು ಹಾಕುತ್ತಿಲ್ಲ.

ಗುಬ್ಬಿ ತಾಲೂಕಿನ ಬಿಜೆಪಿ ಜಿ.ಪಂ ಸದಸ್ಯೆ ಯಶೋದಮ್ಮ ಅವರಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂದು ಬಿಜೆಪಿ ಪ್ರತಿಪಾದಿಸುತ್ತಿದೆ. ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಗೊಲ್ಲ ಸಮುದಾಯದ ಮುಖಂಡ ಸಣ್ಣಮುದ್ದಯ್ಯ ಗೊಲ್ಲರಿಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದ್ದರು. ಸಣ್ಣಮುದ್ದಯ್ಯ ಬಿಜೆಪಿ ಬಗ್ಗೆ ಒಲವುಳ್ಳವರು. ಮಾಜಿ ಸಚಿವ ಸೊಗಡು ಶಿವಣ್ಣಗೆ ಆಪ್ತರಾಗಿರುವವರು. ಹಾಗಾಗಿ ಸೊಗಡು ಶಿವಣ್ಣ ಅವರು ಸಣ್ಣಮುದ್ದಯ್ಯ ಮೂಲಕ ಈ ವಿಷಯ ತೇಲಿಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಬಿಜೆಪಿ ಉರುಳಿಸಿದ ದಾಳಕ್ಕೆ ಅನಿವಾರ್ಯವಾಗಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸಿಕ್ಕಿಕೊಳ್ಳುವಂತಾಗಿದೆ. ಗೊಲ್ಲರಿಗೆ ಜಿಪಂ ಅಧ್ಯಕ್ಷ ಹುದ್ದೆ ನೀಡುವುದನ್ನು ವಿರೋಧಿಸಿರುವವರಿಗೆ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತ ಸಿಗುವುದಿಲ್ಲ. ಹಾಗಾಗಿಯೇ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಎಲ್ಲರೂ ಸಹಿ ಹಾಕಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಲಾಗಿದೆ.

“ಜಿಲ್ಲಾ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಇಬ್ಬರೂ ಒಟ್ಟಿಗೆ ರಾಜಿನಾಮೆ ನೀಡಿ ಮತ್ತೊಬ್ಬರಿಗೆ ಅವಕಾಶ ಮಾಡಿಕೊಡಬೇಕು. ಅದು ಬಿಟ್ಟು ಕೇವಲ ಅಧ್ಯಕ್ಷರ ಬದಲಾವಣೆಗೆ ಮಾತ್ರ ಆಗ್ರಹಿಸುವುದು ಸರಿಯಾದ ಕ್ರಮವಲ್ಲ. ಕೇವಲ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತಗಳನ್ನು ಪಡೆಯುವ ಉದ್ದೇಶದಿಂದ ಬಿಜೆಪಿ ಇಂತಹ ಗೊಂದಲಗಳನ್ನು ಸೃಷ್ಟಿಮಾಡಿದೆ. ಇತರೆ ಪಕ್ಷದ ಸದಸ್ಯರು ಕೂಡ ಸಹಿ ಹಾಕಿದ್ದಾರೆ. ಇದು ರಾಜಕೀಯ, ಏನೂ ಮಾಡಲು ಆಗುವುದಿಲ್ಲ” ಎಂಬುದು ಹೆಸರು ಹೇಳಲು ಇಚ್ಚಿಸದ ಜೆಡಿಎಸ್ ಮುಖಂಡರೊಬ್ಬರ ಅಭಿಪ್ರಾಯ.

“ಗೊಲ್ಲರಹಟ್ಟಿ, ಬಂಜಾರ ತಾಂಡಾಗಳು, ಕುರುಬರಹಟ್ಟಿ, ಹಾಡಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿಲ್ಲ.  ಗೊಲ್ಲರಹಟ್ಟಿಗಳು ಇಂದಿಗೂ ಗುಡಿಸಲು ಮುಕ್ತವಾಗಿಲ್ಲ. ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ ನರಳುತ್ತಿರುವ ಹಟ್ಟಿಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಕ್ರಮ ಕೈಗೊಂಡಿಲ್ಲ. ಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಮಾಡಬೇಕೆಂದು ಕಾಯ್ದೆಯಾಗಿದ್ದರೂ ಅದನ್ನು ಅನುಷ್ಠಾನಗೊಳಿಸಲು ಯಾರೂ ಮುಂದಾಗುತ್ತಿಲ್ಲ. ರಾಜಕೀಯ ಪಕ್ಷಗಳು ನಾಟಕ ಮಾಡುವುದನ್ನು ಬಿಡಬೇಕು” ಎಂದು ಗೊಲ್ಲ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಿಪಂ ಅಧ್ಯಕ್ಷರ ಬದಲಾವಣೆ ರಾಜಕೀಯ ಗಿಮಿಕ್. ಇನ್ನು ಎಂಟು ತಿಂಗಳು ಮಾತ್ರ ಅಧಿಕಾರವಧಿ ಇದೆ. ಈ ಅವಧಿಯಲ್ಲಿ ಅಧ್ಯಕ್ಷ ಹುದ್ದೆಯನ್ನು ಬೇರೆಯವರಿಗೆ ಬಿಟ್ಟುಕೊಟ್ಟರೆ ಯಾವ ಅಭಿವೃದ್ದಿ ಮಾಡಲು ಸಾಧ್ಯ. ಇದನ್ನು ಎಲ್ಲರೂ ಅರ್ಥಮಾಡಿಕೊಂಡರೆ ಒಳಿತು ಎಂದು ಪ್ರಜ್ಞಾವಂತರ ಸಮೂಹ ಹೇಳುತ್ತಿದೆ.


ಇದನ್ನೂ ಓದಿ: ತುಮಕೂರು ಸ್ಮಾರ್ಟ್ ಸಿಟಿ: ಕಳಪೆ ಕಾಮಗಾರಿಯಿಂದ ಅಧ್ವಾನಗೊಂಡ ನಗರ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...