Homeಕರ್ನಾಟಕತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ಬಿಜೆಪಿ ಉರುಳಿಸಿದ ದಾಳಕ್ಕೆ ಅನಿವಾರ್ಯವಾಗಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸಿಕ್ಕಿಕೊಳ್ಳುವಂತಾಗಿದೆ. ಗೊಲ್ಲರಿಗೆ ಜಿಪಂ ಅಧ್ಯಕ್ಷ ಹುದ್ದೆ ನೀಡುವುದನ್ನು ವಿರೋಧಿಸಿರುವವರಿಗೆ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತ ಸಿಗುವುದಿಲ್ಲ.

- Advertisement -
- Advertisement -

ತುಮಕೂರು ಜಿ.ಪಂ ಅಧ್ಯಕ್ಷರ ಬದಲಾವಣೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಧ್ಯಕ್ಷ ಸ್ಥಾನ ಬೇರೆಯವರಿಗೆ ಬಿಟ್ಟುಕೊಡಬೇಕು ಎಂಬ ಪಟ್ಟು ಆಡಳಿತ ಪಕ್ಷದ ಸದಸ್ಯರದ್ದು. ಇದಕ್ಕೆ ಪಕ್ಷಾತೀತವಾಗಿ ಎಲ್ಲರೂ ಸಹಿ ಮಾಡಿದ್ದಾರೆ. ಗೊಲ್ಲ ಸಮುದಾಯದ ಸದಸ್ಯರೊಬ್ಬರಿಗೆ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಬೇಕೆಂಬ ಕೂಗು ಎದ್ದಿದೆ. ಈ ಬಗ್ಗೆ ಬಿಜೆಪಿಯ ಕೂಗು ಜೋರಾಗಿಯೇ ಇದೆ. ದಿಢೀರನೇ ಗೊಲ್ಲರ ಮೇಲೆ ಬಿಜೆಪಿಗೆ ಪ್ರೀತಿ ಹೆಚ್ಚಾಗಲು ಕಾರಣ ರಹಸ್ಯವಾಗಿ ಉಳಿದಿಲ್ಲ. ಶಿರಾ ಉಪಚುನಾವಣೆಯಲ್ಲಿ ಗೊಲ್ಲರ ಮತ ಸೆಳೆಯಲು ಈ ತಂತ್ರ ಹೆಣೆಯಲಾಗಿದೆ.

ಅಧ್ಯಕ್ಷರನ್ನು ಬದಲಿಸಬೇಕೆಂಬ ಅವಿಶ್ವಾಸ ಪತ್ರಕ್ಕೆ ಎಲ್ಲಾ ಪಕ್ಷದ ಸದಸ್ಯರು ಸಹಿ ಹಾಕಿರುವುದು ವಿಶೇಷ. ಎಲ್ಲರಿಗೂ ಗೊಲ್ಲ ಸಮುದಾಯದ ಮೇಲೆ ಅತೀವ ಪ್ರೀತಿ ಉಕ್ಕಿ ಹರಿಯತೊಡಗಿದೆ. ಶಿರಾ ಕ್ಷೇತ್ರದಲ್ಲಿ ಗೊಲ್ಲ ಸಮುದಾಯದ ಮತಗಳ ಪ್ರಮಾಣ ಹೆಚ್ಚಾಗಿದ್ದು, 46 ಸಾವಿರ ಮತಗಳ ಮೇಲೆ ಎಲ್ಲ ಪಕ್ಷಗಳ ಕಣ್ಣುಬಿದ್ದಿದೆ. ಹಾಗಾಗಿ ಜಿ.ಪಂ ಅಧ್ಯಕ್ಷರ ಬದಲಾವಣೆಯ ವಿಷಯ ಕಾವು ಪಡೆದುಕೊಂಡಿದೆ.

ಕಳೆದ ಎರಡು ಸಭೆಗಳಿಗೆ ಜಿಲ್ಲಾ ಪಂಚಾಯಿತಿ ಸದಸ್ಯರು ಬೇಕೆಂದೇ ಹಾಜರಾಗಿಲ್ಲ. ಕೃತಕ ಕೋರಂ ಕೊರತೆ ಸೃಷ್ಟಿಸಿ, ಸಭೆ ನಡೆಯದಂತೆ ನೋಡಿಕೊಳ್ಳಲಾಗಿದೆ. ಸದಸ್ಯರುಗಳು ಜಿಲ್ಲಾ ಪಂಚಾಯತ್ ಅಧ್ಯಕ್ಷರ ವಿರುದ್ಧ ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊರೊನಾದ ಕಾರಣ ನೀಡಿ ಮೌನವಾಗಿದ್ದ ಸದಸ್ಯರು, ಶಿರಾ ಶಾಸಕರ ನಿಧನದ ನಂತರ ಅಧ್ಯಕ್ಷರನ್ನು ಬದಲಾಯಿಸಿಯೇ ತೀರಬೇಕು ಎಂದು ಪಟ್ಟುಹಿಡಿದು ಕುಳಿತಿದ್ದಾರೆ.

ಇದು ನೈಜ ಪ್ರೀತಿಯಲ್ಲ. ತೋರಿಕೆಯ ಪ್ರೀತಿ. ಚುನಾವಣೆ ಮುಗಿಯುವರೆಗೂ ಇರುವ ಪ್ರೀತಿ. ಈ ನಾಟಕ ಯಾರಿಗೆ ತಾನೇ ಗೊತ್ತಿಲ್ಲ. ಚುನಾವಣೆ ಬಂದರೆ ಬಿಜೆಪಿಗೆ ಗೊಲ್ಲರ ಮೇಲೆ ಪ್ರೀತಿ ಉಕ್ಕುತ್ತದೆ ಎಂಬ ಚರ್ಚೆಗೆ ವೇದಿಕೆ ಒದಗಿಸಿಕೊಟ್ಟಿದೆ.

ತುಮಕೂರು ಜಿ.ಪಂನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕಾರ ಹಿಡಿದಿವೆ. ಮೈತ್ರಿ ಧರ್ಮದಂತೆ ತಲಾ 30 ತಿಂಗಳು ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಯನ್ನು ಹಂಚಿಕೆ ಮಾಡಿಕೊಳ್ಳಲು ತೀರ್ಮಾನಿಸಿತ್ತು. ಆದರೆ ರಾಜಕೀಯ ಮೇಲಾಟದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರು ಒಪ್ಪಂದದಂತೆ ರಾಜಿನಾಮೆ ನೀಡಿ ಬೇರೆಯವರಿಗೆ ಸ್ಥಾನ ಬಿಟ್ಟುಕೊಡಲು ಹಿಂದೇಟು ಹಾಕುತ್ತಿದ್ದಾರೆ. ಸದ್ಯ ಜೆಡಿಎಸ್‌ನ ಲತಾ ರವಿಕುಮಾರ್ ಅಧ್ಯಕ್ಷ ಹುದ್ದೆಯಲ್ಲಿದ್ದಾರೆ. ಆದರೆ ಅಧ್ಯಕ್ಷ-ಉಪಾಧ್ಯಕ್ಷರಿಬ್ಬರೂ ರಾಜೀನಾಮೆಗೆ ಮುಂದಾಗುತ್ತಿಲ್ಲ.

ಬಿಜೆಪಿಯ ಶಾರದಾ ನರಸಿಂಹಮೂರ್ತಿ ಜಿ.ಪಂ ಉಪಾಧ್ಯಕ್ಷರಾಗಿದ್ದಾರೆ. ಇವರು ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್‌ಗೌಡರಿಗೆ ಆಪ್ತರು. ಅದೇ ಕಾರಣಕ್ಕೆ ರಾಜೀನಾಮೆ ನೀಡದೆ ಉಪಾಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆದರೆ ಬಜೆಪಿ ಪಕ್ಷವು ಅಧ್ಯಕ್ಷರು ಮಾತ್ರ ರಾಜಿನಾಮೆ ನೀಡುವಂತೆ ಒತ್ತಾಯಿಸುತ್ತಿದೆ. ಇದಕ್ಕೆ ಅಧ್ಯಕ್ಷರು ಸೊಪ್ಪು ಹಾಕುತ್ತಿಲ್ಲ.

ಗುಬ್ಬಿ ತಾಲೂಕಿನ ಬಿಜೆಪಿ ಜಿ.ಪಂ ಸದಸ್ಯೆ ಯಶೋದಮ್ಮ ಅವರಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂದು ಬಿಜೆಪಿ ಪ್ರತಿಪಾದಿಸುತ್ತಿದೆ. ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಗೊಲ್ಲ ಸಮುದಾಯದ ಮುಖಂಡ ಸಣ್ಣಮುದ್ದಯ್ಯ ಗೊಲ್ಲರಿಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದ್ದರು. ಸಣ್ಣಮುದ್ದಯ್ಯ ಬಿಜೆಪಿ ಬಗ್ಗೆ ಒಲವುಳ್ಳವರು. ಮಾಜಿ ಸಚಿವ ಸೊಗಡು ಶಿವಣ್ಣಗೆ ಆಪ್ತರಾಗಿರುವವರು. ಹಾಗಾಗಿ ಸೊಗಡು ಶಿವಣ್ಣ ಅವರು ಸಣ್ಣಮುದ್ದಯ್ಯ ಮೂಲಕ ಈ ವಿಷಯ ತೇಲಿಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಬಿಜೆಪಿ ಉರುಳಿಸಿದ ದಾಳಕ್ಕೆ ಅನಿವಾರ್ಯವಾಗಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸಿಕ್ಕಿಕೊಳ್ಳುವಂತಾಗಿದೆ. ಗೊಲ್ಲರಿಗೆ ಜಿಪಂ ಅಧ್ಯಕ್ಷ ಹುದ್ದೆ ನೀಡುವುದನ್ನು ವಿರೋಧಿಸಿರುವವರಿಗೆ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತ ಸಿಗುವುದಿಲ್ಲ. ಹಾಗಾಗಿಯೇ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಎಲ್ಲರೂ ಸಹಿ ಹಾಕಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಲಾಗಿದೆ.

“ಜಿಲ್ಲಾ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಇಬ್ಬರೂ ಒಟ್ಟಿಗೆ ರಾಜಿನಾಮೆ ನೀಡಿ ಮತ್ತೊಬ್ಬರಿಗೆ ಅವಕಾಶ ಮಾಡಿಕೊಡಬೇಕು. ಅದು ಬಿಟ್ಟು ಕೇವಲ ಅಧ್ಯಕ್ಷರ ಬದಲಾವಣೆಗೆ ಮಾತ್ರ ಆಗ್ರಹಿಸುವುದು ಸರಿಯಾದ ಕ್ರಮವಲ್ಲ. ಕೇವಲ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತಗಳನ್ನು ಪಡೆಯುವ ಉದ್ದೇಶದಿಂದ ಬಿಜೆಪಿ ಇಂತಹ ಗೊಂದಲಗಳನ್ನು ಸೃಷ್ಟಿಮಾಡಿದೆ. ಇತರೆ ಪಕ್ಷದ ಸದಸ್ಯರು ಕೂಡ ಸಹಿ ಹಾಕಿದ್ದಾರೆ. ಇದು ರಾಜಕೀಯ, ಏನೂ ಮಾಡಲು ಆಗುವುದಿಲ್ಲ” ಎಂಬುದು ಹೆಸರು ಹೇಳಲು ಇಚ್ಚಿಸದ ಜೆಡಿಎಸ್ ಮುಖಂಡರೊಬ್ಬರ ಅಭಿಪ್ರಾಯ.

“ಗೊಲ್ಲರಹಟ್ಟಿ, ಬಂಜಾರ ತಾಂಡಾಗಳು, ಕುರುಬರಹಟ್ಟಿ, ಹಾಡಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿಲ್ಲ.  ಗೊಲ್ಲರಹಟ್ಟಿಗಳು ಇಂದಿಗೂ ಗುಡಿಸಲು ಮುಕ್ತವಾಗಿಲ್ಲ. ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ ನರಳುತ್ತಿರುವ ಹಟ್ಟಿಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಕ್ರಮ ಕೈಗೊಂಡಿಲ್ಲ. ಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಮಾಡಬೇಕೆಂದು ಕಾಯ್ದೆಯಾಗಿದ್ದರೂ ಅದನ್ನು ಅನುಷ್ಠಾನಗೊಳಿಸಲು ಯಾರೂ ಮುಂದಾಗುತ್ತಿಲ್ಲ. ರಾಜಕೀಯ ಪಕ್ಷಗಳು ನಾಟಕ ಮಾಡುವುದನ್ನು ಬಿಡಬೇಕು” ಎಂದು ಗೊಲ್ಲ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಿಪಂ ಅಧ್ಯಕ್ಷರ ಬದಲಾವಣೆ ರಾಜಕೀಯ ಗಿಮಿಕ್. ಇನ್ನು ಎಂಟು ತಿಂಗಳು ಮಾತ್ರ ಅಧಿಕಾರವಧಿ ಇದೆ. ಈ ಅವಧಿಯಲ್ಲಿ ಅಧ್ಯಕ್ಷ ಹುದ್ದೆಯನ್ನು ಬೇರೆಯವರಿಗೆ ಬಿಟ್ಟುಕೊಟ್ಟರೆ ಯಾವ ಅಭಿವೃದ್ದಿ ಮಾಡಲು ಸಾಧ್ಯ. ಇದನ್ನು ಎಲ್ಲರೂ ಅರ್ಥಮಾಡಿಕೊಂಡರೆ ಒಳಿತು ಎಂದು ಪ್ರಜ್ಞಾವಂತರ ಸಮೂಹ ಹೇಳುತ್ತಿದೆ.


ಇದನ್ನೂ ಓದಿ: ತುಮಕೂರು ಸ್ಮಾರ್ಟ್ ಸಿಟಿ: ಕಳಪೆ ಕಾಮಗಾರಿಯಿಂದ ಅಧ್ವಾನಗೊಂಡ ನಗರ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...