Homeಕರ್ನಾಟಕತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ಬಿಜೆಪಿ ಉರುಳಿಸಿದ ದಾಳಕ್ಕೆ ಅನಿವಾರ್ಯವಾಗಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸಿಕ್ಕಿಕೊಳ್ಳುವಂತಾಗಿದೆ. ಗೊಲ್ಲರಿಗೆ ಜಿಪಂ ಅಧ್ಯಕ್ಷ ಹುದ್ದೆ ನೀಡುವುದನ್ನು ವಿರೋಧಿಸಿರುವವರಿಗೆ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತ ಸಿಗುವುದಿಲ್ಲ.

- Advertisement -
- Advertisement -

ತುಮಕೂರು ಜಿ.ಪಂ ಅಧ್ಯಕ್ಷರ ಬದಲಾವಣೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಧ್ಯಕ್ಷ ಸ್ಥಾನ ಬೇರೆಯವರಿಗೆ ಬಿಟ್ಟುಕೊಡಬೇಕು ಎಂಬ ಪಟ್ಟು ಆಡಳಿತ ಪಕ್ಷದ ಸದಸ್ಯರದ್ದು. ಇದಕ್ಕೆ ಪಕ್ಷಾತೀತವಾಗಿ ಎಲ್ಲರೂ ಸಹಿ ಮಾಡಿದ್ದಾರೆ. ಗೊಲ್ಲ ಸಮುದಾಯದ ಸದಸ್ಯರೊಬ್ಬರಿಗೆ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಬೇಕೆಂಬ ಕೂಗು ಎದ್ದಿದೆ. ಈ ಬಗ್ಗೆ ಬಿಜೆಪಿಯ ಕೂಗು ಜೋರಾಗಿಯೇ ಇದೆ. ದಿಢೀರನೇ ಗೊಲ್ಲರ ಮೇಲೆ ಬಿಜೆಪಿಗೆ ಪ್ರೀತಿ ಹೆಚ್ಚಾಗಲು ಕಾರಣ ರಹಸ್ಯವಾಗಿ ಉಳಿದಿಲ್ಲ. ಶಿರಾ ಉಪಚುನಾವಣೆಯಲ್ಲಿ ಗೊಲ್ಲರ ಮತ ಸೆಳೆಯಲು ಈ ತಂತ್ರ ಹೆಣೆಯಲಾಗಿದೆ.

ಅಧ್ಯಕ್ಷರನ್ನು ಬದಲಿಸಬೇಕೆಂಬ ಅವಿಶ್ವಾಸ ಪತ್ರಕ್ಕೆ ಎಲ್ಲಾ ಪಕ್ಷದ ಸದಸ್ಯರು ಸಹಿ ಹಾಕಿರುವುದು ವಿಶೇಷ. ಎಲ್ಲರಿಗೂ ಗೊಲ್ಲ ಸಮುದಾಯದ ಮೇಲೆ ಅತೀವ ಪ್ರೀತಿ ಉಕ್ಕಿ ಹರಿಯತೊಡಗಿದೆ. ಶಿರಾ ಕ್ಷೇತ್ರದಲ್ಲಿ ಗೊಲ್ಲ ಸಮುದಾಯದ ಮತಗಳ ಪ್ರಮಾಣ ಹೆಚ್ಚಾಗಿದ್ದು, 46 ಸಾವಿರ ಮತಗಳ ಮೇಲೆ ಎಲ್ಲ ಪಕ್ಷಗಳ ಕಣ್ಣುಬಿದ್ದಿದೆ. ಹಾಗಾಗಿ ಜಿ.ಪಂ ಅಧ್ಯಕ್ಷರ ಬದಲಾವಣೆಯ ವಿಷಯ ಕಾವು ಪಡೆದುಕೊಂಡಿದೆ.

ಕಳೆದ ಎರಡು ಸಭೆಗಳಿಗೆ ಜಿಲ್ಲಾ ಪಂಚಾಯಿತಿ ಸದಸ್ಯರು ಬೇಕೆಂದೇ ಹಾಜರಾಗಿಲ್ಲ. ಕೃತಕ ಕೋರಂ ಕೊರತೆ ಸೃಷ್ಟಿಸಿ, ಸಭೆ ನಡೆಯದಂತೆ ನೋಡಿಕೊಳ್ಳಲಾಗಿದೆ. ಸದಸ್ಯರುಗಳು ಜಿಲ್ಲಾ ಪಂಚಾಯತ್ ಅಧ್ಯಕ್ಷರ ವಿರುದ್ಧ ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊರೊನಾದ ಕಾರಣ ನೀಡಿ ಮೌನವಾಗಿದ್ದ ಸದಸ್ಯರು, ಶಿರಾ ಶಾಸಕರ ನಿಧನದ ನಂತರ ಅಧ್ಯಕ್ಷರನ್ನು ಬದಲಾಯಿಸಿಯೇ ತೀರಬೇಕು ಎಂದು ಪಟ್ಟುಹಿಡಿದು ಕುಳಿತಿದ್ದಾರೆ.

ಇದು ನೈಜ ಪ್ರೀತಿಯಲ್ಲ. ತೋರಿಕೆಯ ಪ್ರೀತಿ. ಚುನಾವಣೆ ಮುಗಿಯುವರೆಗೂ ಇರುವ ಪ್ರೀತಿ. ಈ ನಾಟಕ ಯಾರಿಗೆ ತಾನೇ ಗೊತ್ತಿಲ್ಲ. ಚುನಾವಣೆ ಬಂದರೆ ಬಿಜೆಪಿಗೆ ಗೊಲ್ಲರ ಮೇಲೆ ಪ್ರೀತಿ ಉಕ್ಕುತ್ತದೆ ಎಂಬ ಚರ್ಚೆಗೆ ವೇದಿಕೆ ಒದಗಿಸಿಕೊಟ್ಟಿದೆ.

ತುಮಕೂರು ಜಿ.ಪಂನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕಾರ ಹಿಡಿದಿವೆ. ಮೈತ್ರಿ ಧರ್ಮದಂತೆ ತಲಾ 30 ತಿಂಗಳು ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಯನ್ನು ಹಂಚಿಕೆ ಮಾಡಿಕೊಳ್ಳಲು ತೀರ್ಮಾನಿಸಿತ್ತು. ಆದರೆ ರಾಜಕೀಯ ಮೇಲಾಟದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರು ಒಪ್ಪಂದದಂತೆ ರಾಜಿನಾಮೆ ನೀಡಿ ಬೇರೆಯವರಿಗೆ ಸ್ಥಾನ ಬಿಟ್ಟುಕೊಡಲು ಹಿಂದೇಟು ಹಾಕುತ್ತಿದ್ದಾರೆ. ಸದ್ಯ ಜೆಡಿಎಸ್‌ನ ಲತಾ ರವಿಕುಮಾರ್ ಅಧ್ಯಕ್ಷ ಹುದ್ದೆಯಲ್ಲಿದ್ದಾರೆ. ಆದರೆ ಅಧ್ಯಕ್ಷ-ಉಪಾಧ್ಯಕ್ಷರಿಬ್ಬರೂ ರಾಜೀನಾಮೆಗೆ ಮುಂದಾಗುತ್ತಿಲ್ಲ.

ಬಿಜೆಪಿಯ ಶಾರದಾ ನರಸಿಂಹಮೂರ್ತಿ ಜಿ.ಪಂ ಉಪಾಧ್ಯಕ್ಷರಾಗಿದ್ದಾರೆ. ಇವರು ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್‌ಗೌಡರಿಗೆ ಆಪ್ತರು. ಅದೇ ಕಾರಣಕ್ಕೆ ರಾಜೀನಾಮೆ ನೀಡದೆ ಉಪಾಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆದರೆ ಬಜೆಪಿ ಪಕ್ಷವು ಅಧ್ಯಕ್ಷರು ಮಾತ್ರ ರಾಜಿನಾಮೆ ನೀಡುವಂತೆ ಒತ್ತಾಯಿಸುತ್ತಿದೆ. ಇದಕ್ಕೆ ಅಧ್ಯಕ್ಷರು ಸೊಪ್ಪು ಹಾಕುತ್ತಿಲ್ಲ.

ಗುಬ್ಬಿ ತಾಲೂಕಿನ ಬಿಜೆಪಿ ಜಿ.ಪಂ ಸದಸ್ಯೆ ಯಶೋದಮ್ಮ ಅವರಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂದು ಬಿಜೆಪಿ ಪ್ರತಿಪಾದಿಸುತ್ತಿದೆ. ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಗೊಲ್ಲ ಸಮುದಾಯದ ಮುಖಂಡ ಸಣ್ಣಮುದ್ದಯ್ಯ ಗೊಲ್ಲರಿಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದ್ದರು. ಸಣ್ಣಮುದ್ದಯ್ಯ ಬಿಜೆಪಿ ಬಗ್ಗೆ ಒಲವುಳ್ಳವರು. ಮಾಜಿ ಸಚಿವ ಸೊಗಡು ಶಿವಣ್ಣಗೆ ಆಪ್ತರಾಗಿರುವವರು. ಹಾಗಾಗಿ ಸೊಗಡು ಶಿವಣ್ಣ ಅವರು ಸಣ್ಣಮುದ್ದಯ್ಯ ಮೂಲಕ ಈ ವಿಷಯ ತೇಲಿಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಬಿಜೆಪಿ ಉರುಳಿಸಿದ ದಾಳಕ್ಕೆ ಅನಿವಾರ್ಯವಾಗಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸಿಕ್ಕಿಕೊಳ್ಳುವಂತಾಗಿದೆ. ಗೊಲ್ಲರಿಗೆ ಜಿಪಂ ಅಧ್ಯಕ್ಷ ಹುದ್ದೆ ನೀಡುವುದನ್ನು ವಿರೋಧಿಸಿರುವವರಿಗೆ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತ ಸಿಗುವುದಿಲ್ಲ. ಹಾಗಾಗಿಯೇ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಎಲ್ಲರೂ ಸಹಿ ಹಾಕಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಲಾಗಿದೆ.

“ಜಿಲ್ಲಾ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಇಬ್ಬರೂ ಒಟ್ಟಿಗೆ ರಾಜಿನಾಮೆ ನೀಡಿ ಮತ್ತೊಬ್ಬರಿಗೆ ಅವಕಾಶ ಮಾಡಿಕೊಡಬೇಕು. ಅದು ಬಿಟ್ಟು ಕೇವಲ ಅಧ್ಯಕ್ಷರ ಬದಲಾವಣೆಗೆ ಮಾತ್ರ ಆಗ್ರಹಿಸುವುದು ಸರಿಯಾದ ಕ್ರಮವಲ್ಲ. ಕೇವಲ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತಗಳನ್ನು ಪಡೆಯುವ ಉದ್ದೇಶದಿಂದ ಬಿಜೆಪಿ ಇಂತಹ ಗೊಂದಲಗಳನ್ನು ಸೃಷ್ಟಿಮಾಡಿದೆ. ಇತರೆ ಪಕ್ಷದ ಸದಸ್ಯರು ಕೂಡ ಸಹಿ ಹಾಕಿದ್ದಾರೆ. ಇದು ರಾಜಕೀಯ, ಏನೂ ಮಾಡಲು ಆಗುವುದಿಲ್ಲ” ಎಂಬುದು ಹೆಸರು ಹೇಳಲು ಇಚ್ಚಿಸದ ಜೆಡಿಎಸ್ ಮುಖಂಡರೊಬ್ಬರ ಅಭಿಪ್ರಾಯ.

“ಗೊಲ್ಲರಹಟ್ಟಿ, ಬಂಜಾರ ತಾಂಡಾಗಳು, ಕುರುಬರಹಟ್ಟಿ, ಹಾಡಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿಲ್ಲ.  ಗೊಲ್ಲರಹಟ್ಟಿಗಳು ಇಂದಿಗೂ ಗುಡಿಸಲು ಮುಕ್ತವಾಗಿಲ್ಲ. ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ ನರಳುತ್ತಿರುವ ಹಟ್ಟಿಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಕ್ರಮ ಕೈಗೊಂಡಿಲ್ಲ. ಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಮಾಡಬೇಕೆಂದು ಕಾಯ್ದೆಯಾಗಿದ್ದರೂ ಅದನ್ನು ಅನುಷ್ಠಾನಗೊಳಿಸಲು ಯಾರೂ ಮುಂದಾಗುತ್ತಿಲ್ಲ. ರಾಜಕೀಯ ಪಕ್ಷಗಳು ನಾಟಕ ಮಾಡುವುದನ್ನು ಬಿಡಬೇಕು” ಎಂದು ಗೊಲ್ಲ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಿಪಂ ಅಧ್ಯಕ್ಷರ ಬದಲಾವಣೆ ರಾಜಕೀಯ ಗಿಮಿಕ್. ಇನ್ನು ಎಂಟು ತಿಂಗಳು ಮಾತ್ರ ಅಧಿಕಾರವಧಿ ಇದೆ. ಈ ಅವಧಿಯಲ್ಲಿ ಅಧ್ಯಕ್ಷ ಹುದ್ದೆಯನ್ನು ಬೇರೆಯವರಿಗೆ ಬಿಟ್ಟುಕೊಟ್ಟರೆ ಯಾವ ಅಭಿವೃದ್ದಿ ಮಾಡಲು ಸಾಧ್ಯ. ಇದನ್ನು ಎಲ್ಲರೂ ಅರ್ಥಮಾಡಿಕೊಂಡರೆ ಒಳಿತು ಎಂದು ಪ್ರಜ್ಞಾವಂತರ ಸಮೂಹ ಹೇಳುತ್ತಿದೆ.


ಇದನ್ನೂ ಓದಿ: ತುಮಕೂರು ಸ್ಮಾರ್ಟ್ ಸಿಟಿ: ಕಳಪೆ ಕಾಮಗಾರಿಯಿಂದ ಅಧ್ವಾನಗೊಂಡ ನಗರ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...