Homeಕರ್ನಾಟಕಪ್ರಚಾರದ ಹುಚ್ಚಿಗೆ ತಹಶೀಲ್ದಾರ್‌ ಜೊತೆ ಫೋಟೊ : ವ್ಯಕ್ತಿಯೊರ್ವ ಐಸೋಲೇಷನ್‌ಗೆ ಒಳಗಾಗಿದ್ದು ಹೀಗೆ..

ಪ್ರಚಾರದ ಹುಚ್ಚಿಗೆ ತಹಶೀಲ್ದಾರ್‌ ಜೊತೆ ಫೋಟೊ : ವ್ಯಕ್ತಿಯೊರ್ವ ಐಸೋಲೇಷನ್‌ಗೆ ಒಳಗಾಗಿದ್ದು ಹೀಗೆ..

- Advertisement -
- Advertisement -

ಪ್ರಚಾರದ ಹುಚ್ಚಿಗಾಗಿ ತಹಶೀಲ್ದಾರ್‌ ಜೊತೆ ಫೋಟೊ ತೆಗೆಸಿಕೊಂಡಿದ್ದ ವ್ಯಕ್ತಿಯೊರ್ವ ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಐಸೋಲೇಷನ್‌ಗೆ ಒಳಗಾಗಿರುವ ಘಟನೆ ಇಂದು ಜರುಗಿದೆ.

ತುಮಕೂರಿನ ಯುವ ರಾಜಕಾರಣಿಗೆ ತಾನು ಫೋಟೋದಲ್ಲಿ ಕಾಣಿಕೊಳ್ಳಬೇಕು, ಎಲ್ಲರ ಜೊತೆ ಗುರುತಿಸಿಕೊಳ್ಳಬೇಕು ಎಂಬ ಆಸೆ. ಅದೇ ಕಾರಣಕ್ಕಾಗಿ ತುಮಕೂರು ಗಡಿಯ ಆಂದ್ರದ ತಹಶೀಲ್ದಾರ್ ಹಿಂದೆ ಸುತ್ತುತ್ತಾ ಅವರು ಹೋದಲೆಲ್ಲಾ ಹೋಗಿ ಮಾಸ್ಕ್ ಮತ್ತು ಆಹಾರ ಕಿಟ್ ಹಂಚುತ್ತಿದ್ದ. ಪತ್ರಿಕೆಯವರು ಬಂದಾಗ ತಹಶೀಲ್ದಾರ್‌ ಜೊತೆಗೆ ಫೋಟೊ ತೆಗೆಸಿಕೊಳ್ಳುತ್ತಿದ್ದ. ಇದೆಲ್ಲ ಮುಗಿದ ನಂತರ ತುಮಕೂರಿನ ಯಲ್ಲಾಪುರದಲ್ಲಿ ನೆಲೆಸಿದ್ದ ಎಂದು ತಿಳಿದುಬಂದಿದೆ.

ಆಂಧ್ರಪ್ರದೇಶದ ರೊಳ್ಳೆ ಮಂಡಲ್ ನಲ್ಲಿ ಮಹಿಳಾ ತಹಶೀಲ್ದಾರ್ ಒಬ್ಬರು ಮಾಸ್ಕ್ ಮತ್ತು ಆಹಾರ ಕಿಟ್ ಹಂಚಿದ್ದರು. ನಂತರ ಅವರಲ್ಲಿ ಕೊರೊನಾ ಸೋಂಕು ಇರುವುದು ಪರೀಕ್ಷೆಯಿಂದ ಕಂಡುಬಂದಿತ್ತು. ಹೀಗಾಗಿ ತಹಶೀಲ್ದಾರ್ ಜೊತೆ ಓಡಾಡಿದ್ದ ಎಲ್ಲಾ ವ್ಯಕ್ತಿಗಳನ್ನು ಪತ್ತೆ ಹಚ್ಚಲು ಆರಂಭಿಸಿದ್ದರು. ತಹಶೀಲ್ದಾರ್‌ ಜೊತೆ ಹಲವು ಫೋಟೊಗಳಲಿದ್ದ ಆ ವ್ಯಕ್ತಿಯು ತುಮಕೂರಿನ ಯಲ್ಲಾಪುರದಲ್ಲಿರುವುದು ತಿಳಿದ ಪೋಲಿಸರು ಮತ್ತು ಆರೋಗ್ಯ ಅಧಿಕಾರಿಗಳು ಇಂದು ಬೆಳಿಗ್ಗೆ ಆತನನ್ನು ಪತ್ತೆಹಚ್ಚಿ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ದಾಖಲಿಸಿದ್ದಾರೆ.

ಆರೋಗ್ಯ ಅಧಿಕಾರಿಗಳು ಈ ಯುವ ರಾಜಕಾರಣಿಯ ಗಂಟಲುದ್ರವ ಮತ್ತು ರಕ್ತದ ಮಾದರಿಯನ್ನು ತೆಗೆದುಕೊಂಡು ಬೆಂಗಳೂರಿನ ವೈರಾಲಜಿ ವಿಭಾಗಕ್ಕೆ ಕಳಿಸಲಾಗಿದ್ದು ಕೊರೊನಾ ವರದಿಗಾಗಿ ನಿರೀಕ್ಷೆ ಮಾಡುತ್ತಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಇಬ್ಬರು ಪಾಸಿಟಿವ್ ಪ್ರಕರಣಗಳಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಸೋಂಕಿತ ಯುವಕ ಗುಣಮುಖನಾಗಿ ಮನೆ ಸೇರಿದ್ದಾನೆ.


ಇದನ್ನೂ ಓದಿ: ಕೊರೊನ ವೈರಸ್‌ಗೆ ತುಮಕೂರು ಜಿಲ್ಲೆಯಲ್ಲಿ ಮೊದಲ ಸಾವು


ಮತ್ತೊಬ್ಬ ವ್ಯಕ್ತಿ ಶ್ರೀರಂಗಪಟ್ಟಣದಿಂದ ಗೂಳೂರಿಗೆ ಕಾಲ್ನಡಿಗೆಯಲ್ಲಿ ಬಂದಿದ್ದು, ಅವರನ್ನು ಕೂಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಶ್ರೀರಂಗಪಟ್ಟಣದಲ್ಲಿ ಕೂಲಿಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ತುಮಕೂರಿನಲ್ಲಿ 118 ಮಂದಿಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎನ್ನಲಾಗಿದೆ. ಪಾವಗಡ, ಶಿರಾ ಮತ್ತು ಮಧುಗಿರಿ ತಾಲೂಕುಗಳ ಮೇಲೆ ತೀವ್ರ ನಿಗಾ ಇಡಲಾಗಿದೆ.

ವಿಡಿಯೊ ನೋಡಿ: ನಿಮಗೆ ಕೊರೊನಾ ಸೋಂಕು ಬಂದರೆ ಏನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...