Homeಮುಖಪುಟತುಮಕೂರು ಮಹಾನಗರ ಪಾಲಿಕೆ: 2 ತಿಂಗಳಲ್ಲೇ 9 ಕೋಟಿ ರೂ. ಸಮಾಪ್ತಿ!

ತುಮಕೂರು ಮಹಾನಗರ ಪಾಲಿಕೆ: 2 ತಿಂಗಳಲ್ಲೇ 9 ಕೋಟಿ ರೂ. ಸಮಾಪ್ತಿ!

ಭೂಬಾಲನ್ ವರ್ಗಾವಣೆಯಾಗುವ ಸಮಯದಲ್ಲಿ ಪಾಲಿಕೆಯಲ್ಲಿ ಸುಮಾರು 9 ರಿಂದ 12 ಕೋಟಿ ರೂಪಾಯಿ ಹಣ ಉಳಿದಿತ್ತು. ಅವರು ಮತ್ತೆ ವಾಪಸ್‌ ಬರುವ ವೇಳೆಗೆ ಎಲ್ಲಾ ಮಂಗಮಾಯವಾಗಿದೆ!

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆಯಲ್ಲಿ ದಿಕ್ಕುತಪ್ಪಿದ ಆಡಳಿತ ಮತ್ತು ಹಣಕಾಸು ನಿರ್ವಹಣೆಯನ್ನು ಸರಿದಾರಿಗೆ ತರಲು ಆಯುಕ್ತ ಭೂಬಾಲನ್ ಹೆಣಗುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಐರನ್ ಮೈಂಡ್ ಗಳ ಬಿಗಿಹಿಡಿತ ದಿಂದ ಭೂಬಾಲನ್ ಸುಸೂತ್ರವಾಗಿ; ಸ್ವತಂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಎರಡನೇ ಬಾರಿಗೆ ಪಾಲಿಕೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಭೂಬಾಲನ್ ರಾಜಕಾರಣಿಗಳ ಅಸಹಕಾರ ಮನೋಭಾವದಿಂದ ಕೆಲಸ ಮಾಡಲು ಅಷ್ಟೊಂದು ಉತ್ಸುಕತೆ ತೋರುತ್ತಿಲ್ಲ ಎಂಬ ಚರ್ಚೆ ಜೋರಾಗಿಯೇ ನಡೆದಿದೆ.

ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಭೂಬಾಲನ್ ತುಮಕೂರು ಪಾಲಿಕೆಯಿಂದ ವರ್ಗಾವಣೆ ಗೊಂಡರು. ಇದು ಮೇಲ್ನೋಟದ ವಿವರಣೆ. ಆದರೆ ಇವರು ವರ್ಗಾವಣೆಗೊಂಡರು ಎನ್ನುವುದಕ್ಕಿಂತ ಎತ್ತಂಗಡಿ ಮಾಡಿಸಿದರು ಎನ್ನುವುದೇ ಸೂಕ್ತ. ಇದರ ಹಿಂದೆ ‘ಬಸವಜ್ಯೋತಿ’ ಪ್ರಭಾವ ಇದರ ಹಿಂದೆ ಇತ್ತು. ಸಾದಾಸೀದ ಪ್ರಾಮಾಣಿಕ ಅಧಿಕಾರಿ ಭೂಬಾಲನ್ ‘ಬಸವಜ್ಯೋತಿ’ ಮುಂದೆ ಶರಣಾಗಿರಲಿಲ್ಲ. ತಿನ್ನುವುದಿಲ್ಲ; ತಿನ್ನಲು ಬಿಡುವುದಿಲ್ಲ’ ಎಂಬ ಮಾತುಗಳು ಈ ಅಧಿಕಾರಿಗೆ ಹೇಳಿಮಾಡಿಸಿದಂತಿತ್ತು. ಹೀಗಾಗಿ ‘ಪ್ರಭಾವಳಿ’ ಬೀರಿ  ‘ರಿಲ್ಯಾಕ್ಸ್’ ಪಡೆಯಲು ವರ್ಗಾವಣೆ ನಡೆದುಹೋಗಿತ್ತು.

ಇದನ್ನೂ ಓದಿ: ತುಮಕೂರಿನ ಪ್ರಾಮಾಣಿಕ ಅಧಿಕಾರಿಯ ಎತ್ತಂಗಡಿಯ ಹಿಂದಿದ್ದಾರೆ ರಿಯಲ್ ಎಸ್ಟೇಟ್ ರಾಜಕಾರಣಿಗಳು..

ಭೂಬಾಲನ್ ವರ್ಗಾವಣೆಯಾಗುವ ಸಮಯದಲ್ಲಿ ಪಾಲಿಕೆಯಲ್ಲಿ ಸುಮಾರು 9 ರಿಂದ 12 ಕೋಟಿ ರೂಪಾಯಿ ಪಾಲಿಕೆಯ ಖಜಾನೆಯಲ್ಲಿತ್ತು. ಜನರಿಂದ ನೀರು ಮೊದಲಾದ ತೆರಿಗೆಗಳನ್ನು ಕಟ್ಟುನಿಟ್ಟಾಗಿ ವಸೂಲಿ ಮಾಡಿ ಇಷ್ಟೊಂದು ಹಣವನ್ನು ಉಳಿಸಿ ಹೋಗಿದ್ದರು. ಹೋಗುವಾಗ ಯೋಗಾನಂದ ಎಂಬ ಅಧಿಕಾರಿಗೆ ಪಾಲಿಕೆಯ ಅಧಿಕಾರ ಹಸ್ತಾಂತರಿಸಿದ್ದರು. ಯೋಗಾನಂದರಿಗೆ ಯೋಗ ಖುಲಾಯಿಸಿತ್ತು. ಯೋಗಾನಂದರವರು ಆನಂದಲ್ಲಿ ತೇಲತೊಡಗಿದರು. ಸು’ಯೋಗ’ ಬರಬಹುದೆಂದು ನಂಬಿದ್ದವರಿಗೆ ನಿರಾಸೆಯಾಯಿತು.’ಸತ್ಯ’ ಗೊತ್ತಾದ ಮೇಲೆ ಯೋಗಾನಂದರಿಗೆ ಗೇಟ್ ಪಾಸ್ ಕೊಡಿಸಿದರು. ಜನ ಇವರನ್ನು ಅಯೋಗಾನಂದ ಎಂದೇ ಗೇಲಿ ಮಾಡುವುದುಂಟು.

ಜನಪ್ರಿಯ ಆಯುಕ್ತ ಭೂಬಾಲನ್‌

ಇಷ್ಟೊತ್ತಿಗಾಗಲೇ ಪಾಲಿಕೆ ಆಡಳಿತ ಹಳ್ಳ ಹಿಡಿದಿತ್ತು. ಆಗ ತುಮಕೂರು ಉಪವಿಭಾಗಾಧಿಕಾರಿ ಶಿವಕುಮಾರ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಇವರು ಬಂದ ಮೇಲೆ ಭೂಬಾಲನ್ ಉಳಿಸಿಹೋಗಿದ್ದ ಸುಮಾರು 9 ರಿಂದ 12 ಕೋಟಿ ರೂ ಹಣ ‘ಕರಗಿ’ಹೋಯಿತು. ಎರಡು ಮೂರು ತಿಂಗಳೊತ್ತಿನಲ್ಲಿ ಕೋಟಿಕೋಟಿ ಹಣ ಧನದಾಹಿಗಳ ಕೈಗೆ ಸೇರಿತ್ತು. ಐರನ್ ಮೈಂಡ್ ಗಳ ಅಸೆಯೂ ಈಡೇರಿತ್ತು. ಪಾಲಿಕೆ ಖಜಾನೆ ಖಾಲಿಖಾಲಿ ಆಗಿದೆ. ಇಷ್ಟೊಂದು ಮೊತ್ತ ಯಾವ ಬಾಬ್ತಿಗೆ ವೆಚ್ಚವಾಯ್ತು ಅಂಬೋ ಲೆಕ್ಕವನ್ನು ಯಾರಿಗೆ ಕೇಳೋದು ಎಂದು ಜನರಂತೂ ಮಾತನಾಡಿಕೊಳ್ಳುತ್ತಿದ್ದಾರೆ.

ಇಂಥೆಂಬೋ ಹೊತ್ತಿನಲ್ಲಿ ತುಮಕೂರು ನಗರಪಾಲಿಕೆಯ ಆಯುಕ್ತರಾಗಿ ಭೂಬಾಲನ್ ಎರಡನೇ ಅವಧಿಗೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡು ಕೆಲಸ ನಿರ್ವಹಿಸುತ್ತಿದ್ದಾರೆ. ಮೊದಲು ಇದ್ದ ಹುಮ್ಮಸ್ಸು, ಉತ್ಸಾಹ ಸ್ವಲ್ಪ ಕಡಿಮೆಯಾಗಿದೆ. ಗಾಂಧಿನಗರದಲ್ಲಿ ಬಿಜೆಪಿ ಮುಖಂಡರೊಬ್ಬರು ಪಿಜಿ ನಡೆಸುತ್ತಿದ್ದರು. ಇದರ ಬಗ್ಗೆ ಮರಗಳಿಗೆ ಪಿಜಿ ಫಲಕಗಳು ನೇತುಹಾಕಿ ಉಚಿತ ಜಾಹಿರಾತು ನೀಡಿದರು. ತಮ್ಮದೇ ಆಡಳಿತ, ತಮ್ಮದೇ ಸಂಸದರು, ತಮ್ಮದೇ ಶಾಸಕರು ಕೇಳುವವರು ಯಾರು ಎಂಬ ಹುಂಬುತನದಿಂದ ಮರಮರಗಳಿಗೂ ಬೋರ್ಡ್ ಗಳು ನೇತುಬಿದ್ದವು.

ಇದೆಲ್ಲವನ್ನು ನೋಡಿದ ಆಯುಕ್ತ ಬೂಬಾಲನ್ ಸೀದಾ ಗಾಂಧೀನಗರಕ್ಕೆ ಹೋಗಿ ಎಚ್ಚರಿಕೆ ನೀಡಿದರು. ಕೂಡಲೇ ಮರಗಳಿಗೆ ನೇತುಹಾಕಿರುವ ಫಲಕಗಳನ್ನು ತೆರವುಗೊಳಿಸುವಂತೆ ಹೇಳಿಬಂದರು. ಇದು ಆ ಬಿಜೆಪಿ ಮುಖಂಡನನ್ನು ಕೆರಳಿಸಿತು. ಪಾಲಿಕೆ ಕಚೇರಿಗೆ ಹೋಗಿ ಆಯುಕ್ತರಿಗೆ ಧಮಕಿ ಹಾಕಿದರು. ಅದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವ್ಯಾಪಕ ಖಂಡನೆ ವ್ಯಕ್ತವಾದ ಮೇಲೆ ‘ಆಂಜನೇಯ’ ಹೋಗಿ ಕ್ಷಮೆಯಾಚಿಸಿದ.

ಆಗ ಆಯುಕ್ತ ಭೂಬಾಲನ್ ಬಿಜೆಪಿ ಮುಖಂಡನಿಗೆ ತರಾಟೆಗೆ ತೆಗೆದುಕೊಂಡು ನೀರಿಳಿಸಿದರು. ನಿಮ್ಮದೇ ಸರ್ಕಾರ ಇದೆ. ನಿಮ್ಮವರೇ ‘ಎಲ್ಲರೂ’ ಇದ್ದಾರೆ. ಟ್ರಾನ್ಸ್ ಫರ್ ಮಾಡಿಸು. ನನಗೆ ಇಲ್ಲೇ ಇರಬೇಕೆಂದೇ ಇಲ್ಲ. ಮತ್ತೆ ಹೀಗೆಲ್ಲ ಮಾಡಬೇಡ ಎಂದು ಎಚ್ಚರಿಸಿದ್ದಾರೆ. ಆದರೆ ಈಗ ಬಂದಿರುವ ವರ್ತಮಾನವೆಂದರೆ ಇಂಥವರ ನಡುವೆ ಹೇಗೆ ಕೆಲಸ ಮಾಡುವುದು? ಕೆಲಸ ಮಾಡಲು ಮನಸ್ಸೇ ಬರುತ್ತಿಲ್ಲ ಎಂದು ಭೂಬಾಲನ್ ಕೆಲವರಲ್ಲಿ ಹೇಳಿಕೊಂಡು ನೋವು ತೋಡಿಕೊಂಡಿದ್ದಾರೆ. ಈಗ ‘ಬಸವಜ್ಯೋತಿ’ ಮತ್ತಷ್ಟು ಪ್ರಖರವಾಗಿ ಬೆಳಗುತ್ತಿದೆ. ಸೂಟ್ ಕೇಸ್ ಗಳ ಕೈಬದಲಾವಣೆ ಎಲ್ಲವನ್ನೂ ಒಂದಾಗಿಸುತ್ತದೆ ಎಂದು ಪಾಲಿಕೆ ಆವರಣದಲ್ಲಿ ಮಗುಮ್ಮಾಗಿ ನಗುವವರ ಸಂಖ್ಯೆ ಹೆಚ್ಚಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...