Homeಮುಖಪುಟತುಮಕೂರು ಮಹಾನಗರ ಪಾಲಿಕೆ: 2 ತಿಂಗಳಲ್ಲೇ 9 ಕೋಟಿ ರೂ. ಸಮಾಪ್ತಿ!

ತುಮಕೂರು ಮಹಾನಗರ ಪಾಲಿಕೆ: 2 ತಿಂಗಳಲ್ಲೇ 9 ಕೋಟಿ ರೂ. ಸಮಾಪ್ತಿ!

ಭೂಬಾಲನ್ ವರ್ಗಾವಣೆಯಾಗುವ ಸಮಯದಲ್ಲಿ ಪಾಲಿಕೆಯಲ್ಲಿ ಸುಮಾರು 9 ರಿಂದ 12 ಕೋಟಿ ರೂಪಾಯಿ ಹಣ ಉಳಿದಿತ್ತು. ಅವರು ಮತ್ತೆ ವಾಪಸ್‌ ಬರುವ ವೇಳೆಗೆ ಎಲ್ಲಾ ಮಂಗಮಾಯವಾಗಿದೆ!

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆಯಲ್ಲಿ ದಿಕ್ಕುತಪ್ಪಿದ ಆಡಳಿತ ಮತ್ತು ಹಣಕಾಸು ನಿರ್ವಹಣೆಯನ್ನು ಸರಿದಾರಿಗೆ ತರಲು ಆಯುಕ್ತ ಭೂಬಾಲನ್ ಹೆಣಗುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಐರನ್ ಮೈಂಡ್ ಗಳ ಬಿಗಿಹಿಡಿತ ದಿಂದ ಭೂಬಾಲನ್ ಸುಸೂತ್ರವಾಗಿ; ಸ್ವತಂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಎರಡನೇ ಬಾರಿಗೆ ಪಾಲಿಕೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಭೂಬಾಲನ್ ರಾಜಕಾರಣಿಗಳ ಅಸಹಕಾರ ಮನೋಭಾವದಿಂದ ಕೆಲಸ ಮಾಡಲು ಅಷ್ಟೊಂದು ಉತ್ಸುಕತೆ ತೋರುತ್ತಿಲ್ಲ ಎಂಬ ಚರ್ಚೆ ಜೋರಾಗಿಯೇ ನಡೆದಿದೆ.

ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಭೂಬಾಲನ್ ತುಮಕೂರು ಪಾಲಿಕೆಯಿಂದ ವರ್ಗಾವಣೆ ಗೊಂಡರು. ಇದು ಮೇಲ್ನೋಟದ ವಿವರಣೆ. ಆದರೆ ಇವರು ವರ್ಗಾವಣೆಗೊಂಡರು ಎನ್ನುವುದಕ್ಕಿಂತ ಎತ್ತಂಗಡಿ ಮಾಡಿಸಿದರು ಎನ್ನುವುದೇ ಸೂಕ್ತ. ಇದರ ಹಿಂದೆ ‘ಬಸವಜ್ಯೋತಿ’ ಪ್ರಭಾವ ಇದರ ಹಿಂದೆ ಇತ್ತು. ಸಾದಾಸೀದ ಪ್ರಾಮಾಣಿಕ ಅಧಿಕಾರಿ ಭೂಬಾಲನ್ ‘ಬಸವಜ್ಯೋತಿ’ ಮುಂದೆ ಶರಣಾಗಿರಲಿಲ್ಲ. ತಿನ್ನುವುದಿಲ್ಲ; ತಿನ್ನಲು ಬಿಡುವುದಿಲ್ಲ’ ಎಂಬ ಮಾತುಗಳು ಈ ಅಧಿಕಾರಿಗೆ ಹೇಳಿಮಾಡಿಸಿದಂತಿತ್ತು. ಹೀಗಾಗಿ ‘ಪ್ರಭಾವಳಿ’ ಬೀರಿ  ‘ರಿಲ್ಯಾಕ್ಸ್’ ಪಡೆಯಲು ವರ್ಗಾವಣೆ ನಡೆದುಹೋಗಿತ್ತು.

ಇದನ್ನೂ ಓದಿ: ತುಮಕೂರಿನ ಪ್ರಾಮಾಣಿಕ ಅಧಿಕಾರಿಯ ಎತ್ತಂಗಡಿಯ ಹಿಂದಿದ್ದಾರೆ ರಿಯಲ್ ಎಸ್ಟೇಟ್ ರಾಜಕಾರಣಿಗಳು..

ಭೂಬಾಲನ್ ವರ್ಗಾವಣೆಯಾಗುವ ಸಮಯದಲ್ಲಿ ಪಾಲಿಕೆಯಲ್ಲಿ ಸುಮಾರು 9 ರಿಂದ 12 ಕೋಟಿ ರೂಪಾಯಿ ಪಾಲಿಕೆಯ ಖಜಾನೆಯಲ್ಲಿತ್ತು. ಜನರಿಂದ ನೀರು ಮೊದಲಾದ ತೆರಿಗೆಗಳನ್ನು ಕಟ್ಟುನಿಟ್ಟಾಗಿ ವಸೂಲಿ ಮಾಡಿ ಇಷ್ಟೊಂದು ಹಣವನ್ನು ಉಳಿಸಿ ಹೋಗಿದ್ದರು. ಹೋಗುವಾಗ ಯೋಗಾನಂದ ಎಂಬ ಅಧಿಕಾರಿಗೆ ಪಾಲಿಕೆಯ ಅಧಿಕಾರ ಹಸ್ತಾಂತರಿಸಿದ್ದರು. ಯೋಗಾನಂದರಿಗೆ ಯೋಗ ಖುಲಾಯಿಸಿತ್ತು. ಯೋಗಾನಂದರವರು ಆನಂದಲ್ಲಿ ತೇಲತೊಡಗಿದರು. ಸು’ಯೋಗ’ ಬರಬಹುದೆಂದು ನಂಬಿದ್ದವರಿಗೆ ನಿರಾಸೆಯಾಯಿತು.’ಸತ್ಯ’ ಗೊತ್ತಾದ ಮೇಲೆ ಯೋಗಾನಂದರಿಗೆ ಗೇಟ್ ಪಾಸ್ ಕೊಡಿಸಿದರು. ಜನ ಇವರನ್ನು ಅಯೋಗಾನಂದ ಎಂದೇ ಗೇಲಿ ಮಾಡುವುದುಂಟು.

ಜನಪ್ರಿಯ ಆಯುಕ್ತ ಭೂಬಾಲನ್‌

ಇಷ್ಟೊತ್ತಿಗಾಗಲೇ ಪಾಲಿಕೆ ಆಡಳಿತ ಹಳ್ಳ ಹಿಡಿದಿತ್ತು. ಆಗ ತುಮಕೂರು ಉಪವಿಭಾಗಾಧಿಕಾರಿ ಶಿವಕುಮಾರ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಇವರು ಬಂದ ಮೇಲೆ ಭೂಬಾಲನ್ ಉಳಿಸಿಹೋಗಿದ್ದ ಸುಮಾರು 9 ರಿಂದ 12 ಕೋಟಿ ರೂ ಹಣ ‘ಕರಗಿ’ಹೋಯಿತು. ಎರಡು ಮೂರು ತಿಂಗಳೊತ್ತಿನಲ್ಲಿ ಕೋಟಿಕೋಟಿ ಹಣ ಧನದಾಹಿಗಳ ಕೈಗೆ ಸೇರಿತ್ತು. ಐರನ್ ಮೈಂಡ್ ಗಳ ಅಸೆಯೂ ಈಡೇರಿತ್ತು. ಪಾಲಿಕೆ ಖಜಾನೆ ಖಾಲಿಖಾಲಿ ಆಗಿದೆ. ಇಷ್ಟೊಂದು ಮೊತ್ತ ಯಾವ ಬಾಬ್ತಿಗೆ ವೆಚ್ಚವಾಯ್ತು ಅಂಬೋ ಲೆಕ್ಕವನ್ನು ಯಾರಿಗೆ ಕೇಳೋದು ಎಂದು ಜನರಂತೂ ಮಾತನಾಡಿಕೊಳ್ಳುತ್ತಿದ್ದಾರೆ.

ಇಂಥೆಂಬೋ ಹೊತ್ತಿನಲ್ಲಿ ತುಮಕೂರು ನಗರಪಾಲಿಕೆಯ ಆಯುಕ್ತರಾಗಿ ಭೂಬಾಲನ್ ಎರಡನೇ ಅವಧಿಗೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡು ಕೆಲಸ ನಿರ್ವಹಿಸುತ್ತಿದ್ದಾರೆ. ಮೊದಲು ಇದ್ದ ಹುಮ್ಮಸ್ಸು, ಉತ್ಸಾಹ ಸ್ವಲ್ಪ ಕಡಿಮೆಯಾಗಿದೆ. ಗಾಂಧಿನಗರದಲ್ಲಿ ಬಿಜೆಪಿ ಮುಖಂಡರೊಬ್ಬರು ಪಿಜಿ ನಡೆಸುತ್ತಿದ್ದರು. ಇದರ ಬಗ್ಗೆ ಮರಗಳಿಗೆ ಪಿಜಿ ಫಲಕಗಳು ನೇತುಹಾಕಿ ಉಚಿತ ಜಾಹಿರಾತು ನೀಡಿದರು. ತಮ್ಮದೇ ಆಡಳಿತ, ತಮ್ಮದೇ ಸಂಸದರು, ತಮ್ಮದೇ ಶಾಸಕರು ಕೇಳುವವರು ಯಾರು ಎಂಬ ಹುಂಬುತನದಿಂದ ಮರಮರಗಳಿಗೂ ಬೋರ್ಡ್ ಗಳು ನೇತುಬಿದ್ದವು.

ಇದೆಲ್ಲವನ್ನು ನೋಡಿದ ಆಯುಕ್ತ ಬೂಬಾಲನ್ ಸೀದಾ ಗಾಂಧೀನಗರಕ್ಕೆ ಹೋಗಿ ಎಚ್ಚರಿಕೆ ನೀಡಿದರು. ಕೂಡಲೇ ಮರಗಳಿಗೆ ನೇತುಹಾಕಿರುವ ಫಲಕಗಳನ್ನು ತೆರವುಗೊಳಿಸುವಂತೆ ಹೇಳಿಬಂದರು. ಇದು ಆ ಬಿಜೆಪಿ ಮುಖಂಡನನ್ನು ಕೆರಳಿಸಿತು. ಪಾಲಿಕೆ ಕಚೇರಿಗೆ ಹೋಗಿ ಆಯುಕ್ತರಿಗೆ ಧಮಕಿ ಹಾಕಿದರು. ಅದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವ್ಯಾಪಕ ಖಂಡನೆ ವ್ಯಕ್ತವಾದ ಮೇಲೆ ‘ಆಂಜನೇಯ’ ಹೋಗಿ ಕ್ಷಮೆಯಾಚಿಸಿದ.

ಆಗ ಆಯುಕ್ತ ಭೂಬಾಲನ್ ಬಿಜೆಪಿ ಮುಖಂಡನಿಗೆ ತರಾಟೆಗೆ ತೆಗೆದುಕೊಂಡು ನೀರಿಳಿಸಿದರು. ನಿಮ್ಮದೇ ಸರ್ಕಾರ ಇದೆ. ನಿಮ್ಮವರೇ ‘ಎಲ್ಲರೂ’ ಇದ್ದಾರೆ. ಟ್ರಾನ್ಸ್ ಫರ್ ಮಾಡಿಸು. ನನಗೆ ಇಲ್ಲೇ ಇರಬೇಕೆಂದೇ ಇಲ್ಲ. ಮತ್ತೆ ಹೀಗೆಲ್ಲ ಮಾಡಬೇಡ ಎಂದು ಎಚ್ಚರಿಸಿದ್ದಾರೆ. ಆದರೆ ಈಗ ಬಂದಿರುವ ವರ್ತಮಾನವೆಂದರೆ ಇಂಥವರ ನಡುವೆ ಹೇಗೆ ಕೆಲಸ ಮಾಡುವುದು? ಕೆಲಸ ಮಾಡಲು ಮನಸ್ಸೇ ಬರುತ್ತಿಲ್ಲ ಎಂದು ಭೂಬಾಲನ್ ಕೆಲವರಲ್ಲಿ ಹೇಳಿಕೊಂಡು ನೋವು ತೋಡಿಕೊಂಡಿದ್ದಾರೆ. ಈಗ ‘ಬಸವಜ್ಯೋತಿ’ ಮತ್ತಷ್ಟು ಪ್ರಖರವಾಗಿ ಬೆಳಗುತ್ತಿದೆ. ಸೂಟ್ ಕೇಸ್ ಗಳ ಕೈಬದಲಾವಣೆ ಎಲ್ಲವನ್ನೂ ಒಂದಾಗಿಸುತ್ತದೆ ಎಂದು ಪಾಲಿಕೆ ಆವರಣದಲ್ಲಿ ಮಗುಮ್ಮಾಗಿ ನಗುವವರ ಸಂಖ್ಯೆ ಹೆಚ್ಚಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...