Homeಮುಖಪುಟತುಮಕೂರು ಮಹಾನಗರ ಪಾಲಿಕೆ: 2 ತಿಂಗಳಲ್ಲೇ 9 ಕೋಟಿ ರೂ. ಸಮಾಪ್ತಿ!

ತುಮಕೂರು ಮಹಾನಗರ ಪಾಲಿಕೆ: 2 ತಿಂಗಳಲ್ಲೇ 9 ಕೋಟಿ ರೂ. ಸಮಾಪ್ತಿ!

ಭೂಬಾಲನ್ ವರ್ಗಾವಣೆಯಾಗುವ ಸಮಯದಲ್ಲಿ ಪಾಲಿಕೆಯಲ್ಲಿ ಸುಮಾರು 9 ರಿಂದ 12 ಕೋಟಿ ರೂಪಾಯಿ ಹಣ ಉಳಿದಿತ್ತು. ಅವರು ಮತ್ತೆ ವಾಪಸ್‌ ಬರುವ ವೇಳೆಗೆ ಎಲ್ಲಾ ಮಂಗಮಾಯವಾಗಿದೆ!

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆಯಲ್ಲಿ ದಿಕ್ಕುತಪ್ಪಿದ ಆಡಳಿತ ಮತ್ತು ಹಣಕಾಸು ನಿರ್ವಹಣೆಯನ್ನು ಸರಿದಾರಿಗೆ ತರಲು ಆಯುಕ್ತ ಭೂಬಾಲನ್ ಹೆಣಗುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಐರನ್ ಮೈಂಡ್ ಗಳ ಬಿಗಿಹಿಡಿತ ದಿಂದ ಭೂಬಾಲನ್ ಸುಸೂತ್ರವಾಗಿ; ಸ್ವತಂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಎರಡನೇ ಬಾರಿಗೆ ಪಾಲಿಕೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಭೂಬಾಲನ್ ರಾಜಕಾರಣಿಗಳ ಅಸಹಕಾರ ಮನೋಭಾವದಿಂದ ಕೆಲಸ ಮಾಡಲು ಅಷ್ಟೊಂದು ಉತ್ಸುಕತೆ ತೋರುತ್ತಿಲ್ಲ ಎಂಬ ಚರ್ಚೆ ಜೋರಾಗಿಯೇ ನಡೆದಿದೆ.

ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಭೂಬಾಲನ್ ತುಮಕೂರು ಪಾಲಿಕೆಯಿಂದ ವರ್ಗಾವಣೆ ಗೊಂಡರು. ಇದು ಮೇಲ್ನೋಟದ ವಿವರಣೆ. ಆದರೆ ಇವರು ವರ್ಗಾವಣೆಗೊಂಡರು ಎನ್ನುವುದಕ್ಕಿಂತ ಎತ್ತಂಗಡಿ ಮಾಡಿಸಿದರು ಎನ್ನುವುದೇ ಸೂಕ್ತ. ಇದರ ಹಿಂದೆ ‘ಬಸವಜ್ಯೋತಿ’ ಪ್ರಭಾವ ಇದರ ಹಿಂದೆ ಇತ್ತು. ಸಾದಾಸೀದ ಪ್ರಾಮಾಣಿಕ ಅಧಿಕಾರಿ ಭೂಬಾಲನ್ ‘ಬಸವಜ್ಯೋತಿ’ ಮುಂದೆ ಶರಣಾಗಿರಲಿಲ್ಲ. ತಿನ್ನುವುದಿಲ್ಲ; ತಿನ್ನಲು ಬಿಡುವುದಿಲ್ಲ’ ಎಂಬ ಮಾತುಗಳು ಈ ಅಧಿಕಾರಿಗೆ ಹೇಳಿಮಾಡಿಸಿದಂತಿತ್ತು. ಹೀಗಾಗಿ ‘ಪ್ರಭಾವಳಿ’ ಬೀರಿ  ‘ರಿಲ್ಯಾಕ್ಸ್’ ಪಡೆಯಲು ವರ್ಗಾವಣೆ ನಡೆದುಹೋಗಿತ್ತು.

ಇದನ್ನೂ ಓದಿ: ತುಮಕೂರಿನ ಪ್ರಾಮಾಣಿಕ ಅಧಿಕಾರಿಯ ಎತ್ತಂಗಡಿಯ ಹಿಂದಿದ್ದಾರೆ ರಿಯಲ್ ಎಸ್ಟೇಟ್ ರಾಜಕಾರಣಿಗಳು..

ಭೂಬಾಲನ್ ವರ್ಗಾವಣೆಯಾಗುವ ಸಮಯದಲ್ಲಿ ಪಾಲಿಕೆಯಲ್ಲಿ ಸುಮಾರು 9 ರಿಂದ 12 ಕೋಟಿ ರೂಪಾಯಿ ಪಾಲಿಕೆಯ ಖಜಾನೆಯಲ್ಲಿತ್ತು. ಜನರಿಂದ ನೀರು ಮೊದಲಾದ ತೆರಿಗೆಗಳನ್ನು ಕಟ್ಟುನಿಟ್ಟಾಗಿ ವಸೂಲಿ ಮಾಡಿ ಇಷ್ಟೊಂದು ಹಣವನ್ನು ಉಳಿಸಿ ಹೋಗಿದ್ದರು. ಹೋಗುವಾಗ ಯೋಗಾನಂದ ಎಂಬ ಅಧಿಕಾರಿಗೆ ಪಾಲಿಕೆಯ ಅಧಿಕಾರ ಹಸ್ತಾಂತರಿಸಿದ್ದರು. ಯೋಗಾನಂದರಿಗೆ ಯೋಗ ಖುಲಾಯಿಸಿತ್ತು. ಯೋಗಾನಂದರವರು ಆನಂದಲ್ಲಿ ತೇಲತೊಡಗಿದರು. ಸು’ಯೋಗ’ ಬರಬಹುದೆಂದು ನಂಬಿದ್ದವರಿಗೆ ನಿರಾಸೆಯಾಯಿತು.’ಸತ್ಯ’ ಗೊತ್ತಾದ ಮೇಲೆ ಯೋಗಾನಂದರಿಗೆ ಗೇಟ್ ಪಾಸ್ ಕೊಡಿಸಿದರು. ಜನ ಇವರನ್ನು ಅಯೋಗಾನಂದ ಎಂದೇ ಗೇಲಿ ಮಾಡುವುದುಂಟು.

ಜನಪ್ರಿಯ ಆಯುಕ್ತ ಭೂಬಾಲನ್‌

ಇಷ್ಟೊತ್ತಿಗಾಗಲೇ ಪಾಲಿಕೆ ಆಡಳಿತ ಹಳ್ಳ ಹಿಡಿದಿತ್ತು. ಆಗ ತುಮಕೂರು ಉಪವಿಭಾಗಾಧಿಕಾರಿ ಶಿವಕುಮಾರ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಇವರು ಬಂದ ಮೇಲೆ ಭೂಬಾಲನ್ ಉಳಿಸಿಹೋಗಿದ್ದ ಸುಮಾರು 9 ರಿಂದ 12 ಕೋಟಿ ರೂ ಹಣ ‘ಕರಗಿ’ಹೋಯಿತು. ಎರಡು ಮೂರು ತಿಂಗಳೊತ್ತಿನಲ್ಲಿ ಕೋಟಿಕೋಟಿ ಹಣ ಧನದಾಹಿಗಳ ಕೈಗೆ ಸೇರಿತ್ತು. ಐರನ್ ಮೈಂಡ್ ಗಳ ಅಸೆಯೂ ಈಡೇರಿತ್ತು. ಪಾಲಿಕೆ ಖಜಾನೆ ಖಾಲಿಖಾಲಿ ಆಗಿದೆ. ಇಷ್ಟೊಂದು ಮೊತ್ತ ಯಾವ ಬಾಬ್ತಿಗೆ ವೆಚ್ಚವಾಯ್ತು ಅಂಬೋ ಲೆಕ್ಕವನ್ನು ಯಾರಿಗೆ ಕೇಳೋದು ಎಂದು ಜನರಂತೂ ಮಾತನಾಡಿಕೊಳ್ಳುತ್ತಿದ್ದಾರೆ.

ಇಂಥೆಂಬೋ ಹೊತ್ತಿನಲ್ಲಿ ತುಮಕೂರು ನಗರಪಾಲಿಕೆಯ ಆಯುಕ್ತರಾಗಿ ಭೂಬಾಲನ್ ಎರಡನೇ ಅವಧಿಗೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡು ಕೆಲಸ ನಿರ್ವಹಿಸುತ್ತಿದ್ದಾರೆ. ಮೊದಲು ಇದ್ದ ಹುಮ್ಮಸ್ಸು, ಉತ್ಸಾಹ ಸ್ವಲ್ಪ ಕಡಿಮೆಯಾಗಿದೆ. ಗಾಂಧಿನಗರದಲ್ಲಿ ಬಿಜೆಪಿ ಮುಖಂಡರೊಬ್ಬರು ಪಿಜಿ ನಡೆಸುತ್ತಿದ್ದರು. ಇದರ ಬಗ್ಗೆ ಮರಗಳಿಗೆ ಪಿಜಿ ಫಲಕಗಳು ನೇತುಹಾಕಿ ಉಚಿತ ಜಾಹಿರಾತು ನೀಡಿದರು. ತಮ್ಮದೇ ಆಡಳಿತ, ತಮ್ಮದೇ ಸಂಸದರು, ತಮ್ಮದೇ ಶಾಸಕರು ಕೇಳುವವರು ಯಾರು ಎಂಬ ಹುಂಬುತನದಿಂದ ಮರಮರಗಳಿಗೂ ಬೋರ್ಡ್ ಗಳು ನೇತುಬಿದ್ದವು.

ಇದೆಲ್ಲವನ್ನು ನೋಡಿದ ಆಯುಕ್ತ ಬೂಬಾಲನ್ ಸೀದಾ ಗಾಂಧೀನಗರಕ್ಕೆ ಹೋಗಿ ಎಚ್ಚರಿಕೆ ನೀಡಿದರು. ಕೂಡಲೇ ಮರಗಳಿಗೆ ನೇತುಹಾಕಿರುವ ಫಲಕಗಳನ್ನು ತೆರವುಗೊಳಿಸುವಂತೆ ಹೇಳಿಬಂದರು. ಇದು ಆ ಬಿಜೆಪಿ ಮುಖಂಡನನ್ನು ಕೆರಳಿಸಿತು. ಪಾಲಿಕೆ ಕಚೇರಿಗೆ ಹೋಗಿ ಆಯುಕ್ತರಿಗೆ ಧಮಕಿ ಹಾಕಿದರು. ಅದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವ್ಯಾಪಕ ಖಂಡನೆ ವ್ಯಕ್ತವಾದ ಮೇಲೆ ‘ಆಂಜನೇಯ’ ಹೋಗಿ ಕ್ಷಮೆಯಾಚಿಸಿದ.

ಆಗ ಆಯುಕ್ತ ಭೂಬಾಲನ್ ಬಿಜೆಪಿ ಮುಖಂಡನಿಗೆ ತರಾಟೆಗೆ ತೆಗೆದುಕೊಂಡು ನೀರಿಳಿಸಿದರು. ನಿಮ್ಮದೇ ಸರ್ಕಾರ ಇದೆ. ನಿಮ್ಮವರೇ ‘ಎಲ್ಲರೂ’ ಇದ್ದಾರೆ. ಟ್ರಾನ್ಸ್ ಫರ್ ಮಾಡಿಸು. ನನಗೆ ಇಲ್ಲೇ ಇರಬೇಕೆಂದೇ ಇಲ್ಲ. ಮತ್ತೆ ಹೀಗೆಲ್ಲ ಮಾಡಬೇಡ ಎಂದು ಎಚ್ಚರಿಸಿದ್ದಾರೆ. ಆದರೆ ಈಗ ಬಂದಿರುವ ವರ್ತಮಾನವೆಂದರೆ ಇಂಥವರ ನಡುವೆ ಹೇಗೆ ಕೆಲಸ ಮಾಡುವುದು? ಕೆಲಸ ಮಾಡಲು ಮನಸ್ಸೇ ಬರುತ್ತಿಲ್ಲ ಎಂದು ಭೂಬಾಲನ್ ಕೆಲವರಲ್ಲಿ ಹೇಳಿಕೊಂಡು ನೋವು ತೋಡಿಕೊಂಡಿದ್ದಾರೆ. ಈಗ ‘ಬಸವಜ್ಯೋತಿ’ ಮತ್ತಷ್ಟು ಪ್ರಖರವಾಗಿ ಬೆಳಗುತ್ತಿದೆ. ಸೂಟ್ ಕೇಸ್ ಗಳ ಕೈಬದಲಾವಣೆ ಎಲ್ಲವನ್ನೂ ಒಂದಾಗಿಸುತ್ತದೆ ಎಂದು ಪಾಲಿಕೆ ಆವರಣದಲ್ಲಿ ಮಗುಮ್ಮಾಗಿ ನಗುವವರ ಸಂಖ್ಯೆ ಹೆಚ್ಚಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...