Homeಮುಖಪುಟತುಮಕೂರು ಮಹಾನಗರ ಪಾಲಿಕೆ: 2 ತಿಂಗಳಲ್ಲೇ 9 ಕೋಟಿ ರೂ. ಸಮಾಪ್ತಿ!

ತುಮಕೂರು ಮಹಾನಗರ ಪಾಲಿಕೆ: 2 ತಿಂಗಳಲ್ಲೇ 9 ಕೋಟಿ ರೂ. ಸಮಾಪ್ತಿ!

ಭೂಬಾಲನ್ ವರ್ಗಾವಣೆಯಾಗುವ ಸಮಯದಲ್ಲಿ ಪಾಲಿಕೆಯಲ್ಲಿ ಸುಮಾರು 9 ರಿಂದ 12 ಕೋಟಿ ರೂಪಾಯಿ ಹಣ ಉಳಿದಿತ್ತು. ಅವರು ಮತ್ತೆ ವಾಪಸ್‌ ಬರುವ ವೇಳೆಗೆ ಎಲ್ಲಾ ಮಂಗಮಾಯವಾಗಿದೆ!

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆಯಲ್ಲಿ ದಿಕ್ಕುತಪ್ಪಿದ ಆಡಳಿತ ಮತ್ತು ಹಣಕಾಸು ನಿರ್ವಹಣೆಯನ್ನು ಸರಿದಾರಿಗೆ ತರಲು ಆಯುಕ್ತ ಭೂಬಾಲನ್ ಹೆಣಗುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಐರನ್ ಮೈಂಡ್ ಗಳ ಬಿಗಿಹಿಡಿತ ದಿಂದ ಭೂಬಾಲನ್ ಸುಸೂತ್ರವಾಗಿ; ಸ್ವತಂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಎರಡನೇ ಬಾರಿಗೆ ಪಾಲಿಕೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಭೂಬಾಲನ್ ರಾಜಕಾರಣಿಗಳ ಅಸಹಕಾರ ಮನೋಭಾವದಿಂದ ಕೆಲಸ ಮಾಡಲು ಅಷ್ಟೊಂದು ಉತ್ಸುಕತೆ ತೋರುತ್ತಿಲ್ಲ ಎಂಬ ಚರ್ಚೆ ಜೋರಾಗಿಯೇ ನಡೆದಿದೆ.

ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಭೂಬಾಲನ್ ತುಮಕೂರು ಪಾಲಿಕೆಯಿಂದ ವರ್ಗಾವಣೆ ಗೊಂಡರು. ಇದು ಮೇಲ್ನೋಟದ ವಿವರಣೆ. ಆದರೆ ಇವರು ವರ್ಗಾವಣೆಗೊಂಡರು ಎನ್ನುವುದಕ್ಕಿಂತ ಎತ್ತಂಗಡಿ ಮಾಡಿಸಿದರು ಎನ್ನುವುದೇ ಸೂಕ್ತ. ಇದರ ಹಿಂದೆ ‘ಬಸವಜ್ಯೋತಿ’ ಪ್ರಭಾವ ಇದರ ಹಿಂದೆ ಇತ್ತು. ಸಾದಾಸೀದ ಪ್ರಾಮಾಣಿಕ ಅಧಿಕಾರಿ ಭೂಬಾಲನ್ ‘ಬಸವಜ್ಯೋತಿ’ ಮುಂದೆ ಶರಣಾಗಿರಲಿಲ್ಲ. ತಿನ್ನುವುದಿಲ್ಲ; ತಿನ್ನಲು ಬಿಡುವುದಿಲ್ಲ’ ಎಂಬ ಮಾತುಗಳು ಈ ಅಧಿಕಾರಿಗೆ ಹೇಳಿಮಾಡಿಸಿದಂತಿತ್ತು. ಹೀಗಾಗಿ ‘ಪ್ರಭಾವಳಿ’ ಬೀರಿ  ‘ರಿಲ್ಯಾಕ್ಸ್’ ಪಡೆಯಲು ವರ್ಗಾವಣೆ ನಡೆದುಹೋಗಿತ್ತು.

ಇದನ್ನೂ ಓದಿ: ತುಮಕೂರಿನ ಪ್ರಾಮಾಣಿಕ ಅಧಿಕಾರಿಯ ಎತ್ತಂಗಡಿಯ ಹಿಂದಿದ್ದಾರೆ ರಿಯಲ್ ಎಸ್ಟೇಟ್ ರಾಜಕಾರಣಿಗಳು..

ಭೂಬಾಲನ್ ವರ್ಗಾವಣೆಯಾಗುವ ಸಮಯದಲ್ಲಿ ಪಾಲಿಕೆಯಲ್ಲಿ ಸುಮಾರು 9 ರಿಂದ 12 ಕೋಟಿ ರೂಪಾಯಿ ಪಾಲಿಕೆಯ ಖಜಾನೆಯಲ್ಲಿತ್ತು. ಜನರಿಂದ ನೀರು ಮೊದಲಾದ ತೆರಿಗೆಗಳನ್ನು ಕಟ್ಟುನಿಟ್ಟಾಗಿ ವಸೂಲಿ ಮಾಡಿ ಇಷ್ಟೊಂದು ಹಣವನ್ನು ಉಳಿಸಿ ಹೋಗಿದ್ದರು. ಹೋಗುವಾಗ ಯೋಗಾನಂದ ಎಂಬ ಅಧಿಕಾರಿಗೆ ಪಾಲಿಕೆಯ ಅಧಿಕಾರ ಹಸ್ತಾಂತರಿಸಿದ್ದರು. ಯೋಗಾನಂದರಿಗೆ ಯೋಗ ಖುಲಾಯಿಸಿತ್ತು. ಯೋಗಾನಂದರವರು ಆನಂದಲ್ಲಿ ತೇಲತೊಡಗಿದರು. ಸು’ಯೋಗ’ ಬರಬಹುದೆಂದು ನಂಬಿದ್ದವರಿಗೆ ನಿರಾಸೆಯಾಯಿತು.’ಸತ್ಯ’ ಗೊತ್ತಾದ ಮೇಲೆ ಯೋಗಾನಂದರಿಗೆ ಗೇಟ್ ಪಾಸ್ ಕೊಡಿಸಿದರು. ಜನ ಇವರನ್ನು ಅಯೋಗಾನಂದ ಎಂದೇ ಗೇಲಿ ಮಾಡುವುದುಂಟು.

ಜನಪ್ರಿಯ ಆಯುಕ್ತ ಭೂಬಾಲನ್‌

ಇಷ್ಟೊತ್ತಿಗಾಗಲೇ ಪಾಲಿಕೆ ಆಡಳಿತ ಹಳ್ಳ ಹಿಡಿದಿತ್ತು. ಆಗ ತುಮಕೂರು ಉಪವಿಭಾಗಾಧಿಕಾರಿ ಶಿವಕುಮಾರ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಇವರು ಬಂದ ಮೇಲೆ ಭೂಬಾಲನ್ ಉಳಿಸಿಹೋಗಿದ್ದ ಸುಮಾರು 9 ರಿಂದ 12 ಕೋಟಿ ರೂ ಹಣ ‘ಕರಗಿ’ಹೋಯಿತು. ಎರಡು ಮೂರು ತಿಂಗಳೊತ್ತಿನಲ್ಲಿ ಕೋಟಿಕೋಟಿ ಹಣ ಧನದಾಹಿಗಳ ಕೈಗೆ ಸೇರಿತ್ತು. ಐರನ್ ಮೈಂಡ್ ಗಳ ಅಸೆಯೂ ಈಡೇರಿತ್ತು. ಪಾಲಿಕೆ ಖಜಾನೆ ಖಾಲಿಖಾಲಿ ಆಗಿದೆ. ಇಷ್ಟೊಂದು ಮೊತ್ತ ಯಾವ ಬಾಬ್ತಿಗೆ ವೆಚ್ಚವಾಯ್ತು ಅಂಬೋ ಲೆಕ್ಕವನ್ನು ಯಾರಿಗೆ ಕೇಳೋದು ಎಂದು ಜನರಂತೂ ಮಾತನಾಡಿಕೊಳ್ಳುತ್ತಿದ್ದಾರೆ.

ಇಂಥೆಂಬೋ ಹೊತ್ತಿನಲ್ಲಿ ತುಮಕೂರು ನಗರಪಾಲಿಕೆಯ ಆಯುಕ್ತರಾಗಿ ಭೂಬಾಲನ್ ಎರಡನೇ ಅವಧಿಗೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡು ಕೆಲಸ ನಿರ್ವಹಿಸುತ್ತಿದ್ದಾರೆ. ಮೊದಲು ಇದ್ದ ಹುಮ್ಮಸ್ಸು, ಉತ್ಸಾಹ ಸ್ವಲ್ಪ ಕಡಿಮೆಯಾಗಿದೆ. ಗಾಂಧಿನಗರದಲ್ಲಿ ಬಿಜೆಪಿ ಮುಖಂಡರೊಬ್ಬರು ಪಿಜಿ ನಡೆಸುತ್ತಿದ್ದರು. ಇದರ ಬಗ್ಗೆ ಮರಗಳಿಗೆ ಪಿಜಿ ಫಲಕಗಳು ನೇತುಹಾಕಿ ಉಚಿತ ಜಾಹಿರಾತು ನೀಡಿದರು. ತಮ್ಮದೇ ಆಡಳಿತ, ತಮ್ಮದೇ ಸಂಸದರು, ತಮ್ಮದೇ ಶಾಸಕರು ಕೇಳುವವರು ಯಾರು ಎಂಬ ಹುಂಬುತನದಿಂದ ಮರಮರಗಳಿಗೂ ಬೋರ್ಡ್ ಗಳು ನೇತುಬಿದ್ದವು.

ಇದೆಲ್ಲವನ್ನು ನೋಡಿದ ಆಯುಕ್ತ ಬೂಬಾಲನ್ ಸೀದಾ ಗಾಂಧೀನಗರಕ್ಕೆ ಹೋಗಿ ಎಚ್ಚರಿಕೆ ನೀಡಿದರು. ಕೂಡಲೇ ಮರಗಳಿಗೆ ನೇತುಹಾಕಿರುವ ಫಲಕಗಳನ್ನು ತೆರವುಗೊಳಿಸುವಂತೆ ಹೇಳಿಬಂದರು. ಇದು ಆ ಬಿಜೆಪಿ ಮುಖಂಡನನ್ನು ಕೆರಳಿಸಿತು. ಪಾಲಿಕೆ ಕಚೇರಿಗೆ ಹೋಗಿ ಆಯುಕ್ತರಿಗೆ ಧಮಕಿ ಹಾಕಿದರು. ಅದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವ್ಯಾಪಕ ಖಂಡನೆ ವ್ಯಕ್ತವಾದ ಮೇಲೆ ‘ಆಂಜನೇಯ’ ಹೋಗಿ ಕ್ಷಮೆಯಾಚಿಸಿದ.

ಆಗ ಆಯುಕ್ತ ಭೂಬಾಲನ್ ಬಿಜೆಪಿ ಮುಖಂಡನಿಗೆ ತರಾಟೆಗೆ ತೆಗೆದುಕೊಂಡು ನೀರಿಳಿಸಿದರು. ನಿಮ್ಮದೇ ಸರ್ಕಾರ ಇದೆ. ನಿಮ್ಮವರೇ ‘ಎಲ್ಲರೂ’ ಇದ್ದಾರೆ. ಟ್ರಾನ್ಸ್ ಫರ್ ಮಾಡಿಸು. ನನಗೆ ಇಲ್ಲೇ ಇರಬೇಕೆಂದೇ ಇಲ್ಲ. ಮತ್ತೆ ಹೀಗೆಲ್ಲ ಮಾಡಬೇಡ ಎಂದು ಎಚ್ಚರಿಸಿದ್ದಾರೆ. ಆದರೆ ಈಗ ಬಂದಿರುವ ವರ್ತಮಾನವೆಂದರೆ ಇಂಥವರ ನಡುವೆ ಹೇಗೆ ಕೆಲಸ ಮಾಡುವುದು? ಕೆಲಸ ಮಾಡಲು ಮನಸ್ಸೇ ಬರುತ್ತಿಲ್ಲ ಎಂದು ಭೂಬಾಲನ್ ಕೆಲವರಲ್ಲಿ ಹೇಳಿಕೊಂಡು ನೋವು ತೋಡಿಕೊಂಡಿದ್ದಾರೆ. ಈಗ ‘ಬಸವಜ್ಯೋತಿ’ ಮತ್ತಷ್ಟು ಪ್ರಖರವಾಗಿ ಬೆಳಗುತ್ತಿದೆ. ಸೂಟ್ ಕೇಸ್ ಗಳ ಕೈಬದಲಾವಣೆ ಎಲ್ಲವನ್ನೂ ಒಂದಾಗಿಸುತ್ತದೆ ಎಂದು ಪಾಲಿಕೆ ಆವರಣದಲ್ಲಿ ಮಗುಮ್ಮಾಗಿ ನಗುವವರ ಸಂಖ್ಯೆ ಹೆಚ್ಚಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...