Homeಮುಖಪುಟತುಮಕೂರು ಮಹಾನಗರ ಪಾಲಿಕೆ: 2 ತಿಂಗಳಲ್ಲೇ 9 ಕೋಟಿ ರೂ. ಸಮಾಪ್ತಿ!

ತುಮಕೂರು ಮಹಾನಗರ ಪಾಲಿಕೆ: 2 ತಿಂಗಳಲ್ಲೇ 9 ಕೋಟಿ ರೂ. ಸಮಾಪ್ತಿ!

ಭೂಬಾಲನ್ ವರ್ಗಾವಣೆಯಾಗುವ ಸಮಯದಲ್ಲಿ ಪಾಲಿಕೆಯಲ್ಲಿ ಸುಮಾರು 9 ರಿಂದ 12 ಕೋಟಿ ರೂಪಾಯಿ ಹಣ ಉಳಿದಿತ್ತು. ಅವರು ಮತ್ತೆ ವಾಪಸ್‌ ಬರುವ ವೇಳೆಗೆ ಎಲ್ಲಾ ಮಂಗಮಾಯವಾಗಿದೆ!

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆಯಲ್ಲಿ ದಿಕ್ಕುತಪ್ಪಿದ ಆಡಳಿತ ಮತ್ತು ಹಣಕಾಸು ನಿರ್ವಹಣೆಯನ್ನು ಸರಿದಾರಿಗೆ ತರಲು ಆಯುಕ್ತ ಭೂಬಾಲನ್ ಹೆಣಗುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಐರನ್ ಮೈಂಡ್ ಗಳ ಬಿಗಿಹಿಡಿತ ದಿಂದ ಭೂಬಾಲನ್ ಸುಸೂತ್ರವಾಗಿ; ಸ್ವತಂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಎರಡನೇ ಬಾರಿಗೆ ಪಾಲಿಕೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಭೂಬಾಲನ್ ರಾಜಕಾರಣಿಗಳ ಅಸಹಕಾರ ಮನೋಭಾವದಿಂದ ಕೆಲಸ ಮಾಡಲು ಅಷ್ಟೊಂದು ಉತ್ಸುಕತೆ ತೋರುತ್ತಿಲ್ಲ ಎಂಬ ಚರ್ಚೆ ಜೋರಾಗಿಯೇ ನಡೆದಿದೆ.

ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಭೂಬಾಲನ್ ತುಮಕೂರು ಪಾಲಿಕೆಯಿಂದ ವರ್ಗಾವಣೆ ಗೊಂಡರು. ಇದು ಮೇಲ್ನೋಟದ ವಿವರಣೆ. ಆದರೆ ಇವರು ವರ್ಗಾವಣೆಗೊಂಡರು ಎನ್ನುವುದಕ್ಕಿಂತ ಎತ್ತಂಗಡಿ ಮಾಡಿಸಿದರು ಎನ್ನುವುದೇ ಸೂಕ್ತ. ಇದರ ಹಿಂದೆ ‘ಬಸವಜ್ಯೋತಿ’ ಪ್ರಭಾವ ಇದರ ಹಿಂದೆ ಇತ್ತು. ಸಾದಾಸೀದ ಪ್ರಾಮಾಣಿಕ ಅಧಿಕಾರಿ ಭೂಬಾಲನ್ ‘ಬಸವಜ್ಯೋತಿ’ ಮುಂದೆ ಶರಣಾಗಿರಲಿಲ್ಲ. ತಿನ್ನುವುದಿಲ್ಲ; ತಿನ್ನಲು ಬಿಡುವುದಿಲ್ಲ’ ಎಂಬ ಮಾತುಗಳು ಈ ಅಧಿಕಾರಿಗೆ ಹೇಳಿಮಾಡಿಸಿದಂತಿತ್ತು. ಹೀಗಾಗಿ ‘ಪ್ರಭಾವಳಿ’ ಬೀರಿ  ‘ರಿಲ್ಯಾಕ್ಸ್’ ಪಡೆಯಲು ವರ್ಗಾವಣೆ ನಡೆದುಹೋಗಿತ್ತು.

ಇದನ್ನೂ ಓದಿ: ತುಮಕೂರಿನ ಪ್ರಾಮಾಣಿಕ ಅಧಿಕಾರಿಯ ಎತ್ತಂಗಡಿಯ ಹಿಂದಿದ್ದಾರೆ ರಿಯಲ್ ಎಸ್ಟೇಟ್ ರಾಜಕಾರಣಿಗಳು..

ಭೂಬಾಲನ್ ವರ್ಗಾವಣೆಯಾಗುವ ಸಮಯದಲ್ಲಿ ಪಾಲಿಕೆಯಲ್ಲಿ ಸುಮಾರು 9 ರಿಂದ 12 ಕೋಟಿ ರೂಪಾಯಿ ಪಾಲಿಕೆಯ ಖಜಾನೆಯಲ್ಲಿತ್ತು. ಜನರಿಂದ ನೀರು ಮೊದಲಾದ ತೆರಿಗೆಗಳನ್ನು ಕಟ್ಟುನಿಟ್ಟಾಗಿ ವಸೂಲಿ ಮಾಡಿ ಇಷ್ಟೊಂದು ಹಣವನ್ನು ಉಳಿಸಿ ಹೋಗಿದ್ದರು. ಹೋಗುವಾಗ ಯೋಗಾನಂದ ಎಂಬ ಅಧಿಕಾರಿಗೆ ಪಾಲಿಕೆಯ ಅಧಿಕಾರ ಹಸ್ತಾಂತರಿಸಿದ್ದರು. ಯೋಗಾನಂದರಿಗೆ ಯೋಗ ಖುಲಾಯಿಸಿತ್ತು. ಯೋಗಾನಂದರವರು ಆನಂದಲ್ಲಿ ತೇಲತೊಡಗಿದರು. ಸು’ಯೋಗ’ ಬರಬಹುದೆಂದು ನಂಬಿದ್ದವರಿಗೆ ನಿರಾಸೆಯಾಯಿತು.’ಸತ್ಯ’ ಗೊತ್ತಾದ ಮೇಲೆ ಯೋಗಾನಂದರಿಗೆ ಗೇಟ್ ಪಾಸ್ ಕೊಡಿಸಿದರು. ಜನ ಇವರನ್ನು ಅಯೋಗಾನಂದ ಎಂದೇ ಗೇಲಿ ಮಾಡುವುದುಂಟು.

ಜನಪ್ರಿಯ ಆಯುಕ್ತ ಭೂಬಾಲನ್‌

ಇಷ್ಟೊತ್ತಿಗಾಗಲೇ ಪಾಲಿಕೆ ಆಡಳಿತ ಹಳ್ಳ ಹಿಡಿದಿತ್ತು. ಆಗ ತುಮಕೂರು ಉಪವಿಭಾಗಾಧಿಕಾರಿ ಶಿವಕುಮಾರ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಇವರು ಬಂದ ಮೇಲೆ ಭೂಬಾಲನ್ ಉಳಿಸಿಹೋಗಿದ್ದ ಸುಮಾರು 9 ರಿಂದ 12 ಕೋಟಿ ರೂ ಹಣ ‘ಕರಗಿ’ಹೋಯಿತು. ಎರಡು ಮೂರು ತಿಂಗಳೊತ್ತಿನಲ್ಲಿ ಕೋಟಿಕೋಟಿ ಹಣ ಧನದಾಹಿಗಳ ಕೈಗೆ ಸೇರಿತ್ತು. ಐರನ್ ಮೈಂಡ್ ಗಳ ಅಸೆಯೂ ಈಡೇರಿತ್ತು. ಪಾಲಿಕೆ ಖಜಾನೆ ಖಾಲಿಖಾಲಿ ಆಗಿದೆ. ಇಷ್ಟೊಂದು ಮೊತ್ತ ಯಾವ ಬಾಬ್ತಿಗೆ ವೆಚ್ಚವಾಯ್ತು ಅಂಬೋ ಲೆಕ್ಕವನ್ನು ಯಾರಿಗೆ ಕೇಳೋದು ಎಂದು ಜನರಂತೂ ಮಾತನಾಡಿಕೊಳ್ಳುತ್ತಿದ್ದಾರೆ.

ಇಂಥೆಂಬೋ ಹೊತ್ತಿನಲ್ಲಿ ತುಮಕೂರು ನಗರಪಾಲಿಕೆಯ ಆಯುಕ್ತರಾಗಿ ಭೂಬಾಲನ್ ಎರಡನೇ ಅವಧಿಗೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡು ಕೆಲಸ ನಿರ್ವಹಿಸುತ್ತಿದ್ದಾರೆ. ಮೊದಲು ಇದ್ದ ಹುಮ್ಮಸ್ಸು, ಉತ್ಸಾಹ ಸ್ವಲ್ಪ ಕಡಿಮೆಯಾಗಿದೆ. ಗಾಂಧಿನಗರದಲ್ಲಿ ಬಿಜೆಪಿ ಮುಖಂಡರೊಬ್ಬರು ಪಿಜಿ ನಡೆಸುತ್ತಿದ್ದರು. ಇದರ ಬಗ್ಗೆ ಮರಗಳಿಗೆ ಪಿಜಿ ಫಲಕಗಳು ನೇತುಹಾಕಿ ಉಚಿತ ಜಾಹಿರಾತು ನೀಡಿದರು. ತಮ್ಮದೇ ಆಡಳಿತ, ತಮ್ಮದೇ ಸಂಸದರು, ತಮ್ಮದೇ ಶಾಸಕರು ಕೇಳುವವರು ಯಾರು ಎಂಬ ಹುಂಬುತನದಿಂದ ಮರಮರಗಳಿಗೂ ಬೋರ್ಡ್ ಗಳು ನೇತುಬಿದ್ದವು.

ಇದೆಲ್ಲವನ್ನು ನೋಡಿದ ಆಯುಕ್ತ ಬೂಬಾಲನ್ ಸೀದಾ ಗಾಂಧೀನಗರಕ್ಕೆ ಹೋಗಿ ಎಚ್ಚರಿಕೆ ನೀಡಿದರು. ಕೂಡಲೇ ಮರಗಳಿಗೆ ನೇತುಹಾಕಿರುವ ಫಲಕಗಳನ್ನು ತೆರವುಗೊಳಿಸುವಂತೆ ಹೇಳಿಬಂದರು. ಇದು ಆ ಬಿಜೆಪಿ ಮುಖಂಡನನ್ನು ಕೆರಳಿಸಿತು. ಪಾಲಿಕೆ ಕಚೇರಿಗೆ ಹೋಗಿ ಆಯುಕ್ತರಿಗೆ ಧಮಕಿ ಹಾಕಿದರು. ಅದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವ್ಯಾಪಕ ಖಂಡನೆ ವ್ಯಕ್ತವಾದ ಮೇಲೆ ‘ಆಂಜನೇಯ’ ಹೋಗಿ ಕ್ಷಮೆಯಾಚಿಸಿದ.

ಆಗ ಆಯುಕ್ತ ಭೂಬಾಲನ್ ಬಿಜೆಪಿ ಮುಖಂಡನಿಗೆ ತರಾಟೆಗೆ ತೆಗೆದುಕೊಂಡು ನೀರಿಳಿಸಿದರು. ನಿಮ್ಮದೇ ಸರ್ಕಾರ ಇದೆ. ನಿಮ್ಮವರೇ ‘ಎಲ್ಲರೂ’ ಇದ್ದಾರೆ. ಟ್ರಾನ್ಸ್ ಫರ್ ಮಾಡಿಸು. ನನಗೆ ಇಲ್ಲೇ ಇರಬೇಕೆಂದೇ ಇಲ್ಲ. ಮತ್ತೆ ಹೀಗೆಲ್ಲ ಮಾಡಬೇಡ ಎಂದು ಎಚ್ಚರಿಸಿದ್ದಾರೆ. ಆದರೆ ಈಗ ಬಂದಿರುವ ವರ್ತಮಾನವೆಂದರೆ ಇಂಥವರ ನಡುವೆ ಹೇಗೆ ಕೆಲಸ ಮಾಡುವುದು? ಕೆಲಸ ಮಾಡಲು ಮನಸ್ಸೇ ಬರುತ್ತಿಲ್ಲ ಎಂದು ಭೂಬಾಲನ್ ಕೆಲವರಲ್ಲಿ ಹೇಳಿಕೊಂಡು ನೋವು ತೋಡಿಕೊಂಡಿದ್ದಾರೆ. ಈಗ ‘ಬಸವಜ್ಯೋತಿ’ ಮತ್ತಷ್ಟು ಪ್ರಖರವಾಗಿ ಬೆಳಗುತ್ತಿದೆ. ಸೂಟ್ ಕೇಸ್ ಗಳ ಕೈಬದಲಾವಣೆ ಎಲ್ಲವನ್ನೂ ಒಂದಾಗಿಸುತ್ತದೆ ಎಂದು ಪಾಲಿಕೆ ಆವರಣದಲ್ಲಿ ಮಗುಮ್ಮಾಗಿ ನಗುವವರ ಸಂಖ್ಯೆ ಹೆಚ್ಚಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...