Homeಮುಖಪುಟತುಮಕೂರು ಮಹಾನಗರ ಪಾಲಿಕೆ: 2 ತಿಂಗಳಲ್ಲೇ 9 ಕೋಟಿ ರೂ. ಸಮಾಪ್ತಿ!

ತುಮಕೂರು ಮಹಾನಗರ ಪಾಲಿಕೆ: 2 ತಿಂಗಳಲ್ಲೇ 9 ಕೋಟಿ ರೂ. ಸಮಾಪ್ತಿ!

ಭೂಬಾಲನ್ ವರ್ಗಾವಣೆಯಾಗುವ ಸಮಯದಲ್ಲಿ ಪಾಲಿಕೆಯಲ್ಲಿ ಸುಮಾರು 9 ರಿಂದ 12 ಕೋಟಿ ರೂಪಾಯಿ ಹಣ ಉಳಿದಿತ್ತು. ಅವರು ಮತ್ತೆ ವಾಪಸ್‌ ಬರುವ ವೇಳೆಗೆ ಎಲ್ಲಾ ಮಂಗಮಾಯವಾಗಿದೆ!

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆಯಲ್ಲಿ ದಿಕ್ಕುತಪ್ಪಿದ ಆಡಳಿತ ಮತ್ತು ಹಣಕಾಸು ನಿರ್ವಹಣೆಯನ್ನು ಸರಿದಾರಿಗೆ ತರಲು ಆಯುಕ್ತ ಭೂಬಾಲನ್ ಹೆಣಗುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಐರನ್ ಮೈಂಡ್ ಗಳ ಬಿಗಿಹಿಡಿತ ದಿಂದ ಭೂಬಾಲನ್ ಸುಸೂತ್ರವಾಗಿ; ಸ್ವತಂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಎರಡನೇ ಬಾರಿಗೆ ಪಾಲಿಕೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಭೂಬಾಲನ್ ರಾಜಕಾರಣಿಗಳ ಅಸಹಕಾರ ಮನೋಭಾವದಿಂದ ಕೆಲಸ ಮಾಡಲು ಅಷ್ಟೊಂದು ಉತ್ಸುಕತೆ ತೋರುತ್ತಿಲ್ಲ ಎಂಬ ಚರ್ಚೆ ಜೋರಾಗಿಯೇ ನಡೆದಿದೆ.

ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಭೂಬಾಲನ್ ತುಮಕೂರು ಪಾಲಿಕೆಯಿಂದ ವರ್ಗಾವಣೆ ಗೊಂಡರು. ಇದು ಮೇಲ್ನೋಟದ ವಿವರಣೆ. ಆದರೆ ಇವರು ವರ್ಗಾವಣೆಗೊಂಡರು ಎನ್ನುವುದಕ್ಕಿಂತ ಎತ್ತಂಗಡಿ ಮಾಡಿಸಿದರು ಎನ್ನುವುದೇ ಸೂಕ್ತ. ಇದರ ಹಿಂದೆ ‘ಬಸವಜ್ಯೋತಿ’ ಪ್ರಭಾವ ಇದರ ಹಿಂದೆ ಇತ್ತು. ಸಾದಾಸೀದ ಪ್ರಾಮಾಣಿಕ ಅಧಿಕಾರಿ ಭೂಬಾಲನ್ ‘ಬಸವಜ್ಯೋತಿ’ ಮುಂದೆ ಶರಣಾಗಿರಲಿಲ್ಲ. ತಿನ್ನುವುದಿಲ್ಲ; ತಿನ್ನಲು ಬಿಡುವುದಿಲ್ಲ’ ಎಂಬ ಮಾತುಗಳು ಈ ಅಧಿಕಾರಿಗೆ ಹೇಳಿಮಾಡಿಸಿದಂತಿತ್ತು. ಹೀಗಾಗಿ ‘ಪ್ರಭಾವಳಿ’ ಬೀರಿ  ‘ರಿಲ್ಯಾಕ್ಸ್’ ಪಡೆಯಲು ವರ್ಗಾವಣೆ ನಡೆದುಹೋಗಿತ್ತು.

ಇದನ್ನೂ ಓದಿ: ತುಮಕೂರಿನ ಪ್ರಾಮಾಣಿಕ ಅಧಿಕಾರಿಯ ಎತ್ತಂಗಡಿಯ ಹಿಂದಿದ್ದಾರೆ ರಿಯಲ್ ಎಸ್ಟೇಟ್ ರಾಜಕಾರಣಿಗಳು..

ಭೂಬಾಲನ್ ವರ್ಗಾವಣೆಯಾಗುವ ಸಮಯದಲ್ಲಿ ಪಾಲಿಕೆಯಲ್ಲಿ ಸುಮಾರು 9 ರಿಂದ 12 ಕೋಟಿ ರೂಪಾಯಿ ಪಾಲಿಕೆಯ ಖಜಾನೆಯಲ್ಲಿತ್ತು. ಜನರಿಂದ ನೀರು ಮೊದಲಾದ ತೆರಿಗೆಗಳನ್ನು ಕಟ್ಟುನಿಟ್ಟಾಗಿ ವಸೂಲಿ ಮಾಡಿ ಇಷ್ಟೊಂದು ಹಣವನ್ನು ಉಳಿಸಿ ಹೋಗಿದ್ದರು. ಹೋಗುವಾಗ ಯೋಗಾನಂದ ಎಂಬ ಅಧಿಕಾರಿಗೆ ಪಾಲಿಕೆಯ ಅಧಿಕಾರ ಹಸ್ತಾಂತರಿಸಿದ್ದರು. ಯೋಗಾನಂದರಿಗೆ ಯೋಗ ಖುಲಾಯಿಸಿತ್ತು. ಯೋಗಾನಂದರವರು ಆನಂದಲ್ಲಿ ತೇಲತೊಡಗಿದರು. ಸು’ಯೋಗ’ ಬರಬಹುದೆಂದು ನಂಬಿದ್ದವರಿಗೆ ನಿರಾಸೆಯಾಯಿತು.’ಸತ್ಯ’ ಗೊತ್ತಾದ ಮೇಲೆ ಯೋಗಾನಂದರಿಗೆ ಗೇಟ್ ಪಾಸ್ ಕೊಡಿಸಿದರು. ಜನ ಇವರನ್ನು ಅಯೋಗಾನಂದ ಎಂದೇ ಗೇಲಿ ಮಾಡುವುದುಂಟು.

ಜನಪ್ರಿಯ ಆಯುಕ್ತ ಭೂಬಾಲನ್‌

ಇಷ್ಟೊತ್ತಿಗಾಗಲೇ ಪಾಲಿಕೆ ಆಡಳಿತ ಹಳ್ಳ ಹಿಡಿದಿತ್ತು. ಆಗ ತುಮಕೂರು ಉಪವಿಭಾಗಾಧಿಕಾರಿ ಶಿವಕುಮಾರ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಇವರು ಬಂದ ಮೇಲೆ ಭೂಬಾಲನ್ ಉಳಿಸಿಹೋಗಿದ್ದ ಸುಮಾರು 9 ರಿಂದ 12 ಕೋಟಿ ರೂ ಹಣ ‘ಕರಗಿ’ಹೋಯಿತು. ಎರಡು ಮೂರು ತಿಂಗಳೊತ್ತಿನಲ್ಲಿ ಕೋಟಿಕೋಟಿ ಹಣ ಧನದಾಹಿಗಳ ಕೈಗೆ ಸೇರಿತ್ತು. ಐರನ್ ಮೈಂಡ್ ಗಳ ಅಸೆಯೂ ಈಡೇರಿತ್ತು. ಪಾಲಿಕೆ ಖಜಾನೆ ಖಾಲಿಖಾಲಿ ಆಗಿದೆ. ಇಷ್ಟೊಂದು ಮೊತ್ತ ಯಾವ ಬಾಬ್ತಿಗೆ ವೆಚ್ಚವಾಯ್ತು ಅಂಬೋ ಲೆಕ್ಕವನ್ನು ಯಾರಿಗೆ ಕೇಳೋದು ಎಂದು ಜನರಂತೂ ಮಾತನಾಡಿಕೊಳ್ಳುತ್ತಿದ್ದಾರೆ.

ಇಂಥೆಂಬೋ ಹೊತ್ತಿನಲ್ಲಿ ತುಮಕೂರು ನಗರಪಾಲಿಕೆಯ ಆಯುಕ್ತರಾಗಿ ಭೂಬಾಲನ್ ಎರಡನೇ ಅವಧಿಗೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡು ಕೆಲಸ ನಿರ್ವಹಿಸುತ್ತಿದ್ದಾರೆ. ಮೊದಲು ಇದ್ದ ಹುಮ್ಮಸ್ಸು, ಉತ್ಸಾಹ ಸ್ವಲ್ಪ ಕಡಿಮೆಯಾಗಿದೆ. ಗಾಂಧಿನಗರದಲ್ಲಿ ಬಿಜೆಪಿ ಮುಖಂಡರೊಬ್ಬರು ಪಿಜಿ ನಡೆಸುತ್ತಿದ್ದರು. ಇದರ ಬಗ್ಗೆ ಮರಗಳಿಗೆ ಪಿಜಿ ಫಲಕಗಳು ನೇತುಹಾಕಿ ಉಚಿತ ಜಾಹಿರಾತು ನೀಡಿದರು. ತಮ್ಮದೇ ಆಡಳಿತ, ತಮ್ಮದೇ ಸಂಸದರು, ತಮ್ಮದೇ ಶಾಸಕರು ಕೇಳುವವರು ಯಾರು ಎಂಬ ಹುಂಬುತನದಿಂದ ಮರಮರಗಳಿಗೂ ಬೋರ್ಡ್ ಗಳು ನೇತುಬಿದ್ದವು.

ಇದೆಲ್ಲವನ್ನು ನೋಡಿದ ಆಯುಕ್ತ ಬೂಬಾಲನ್ ಸೀದಾ ಗಾಂಧೀನಗರಕ್ಕೆ ಹೋಗಿ ಎಚ್ಚರಿಕೆ ನೀಡಿದರು. ಕೂಡಲೇ ಮರಗಳಿಗೆ ನೇತುಹಾಕಿರುವ ಫಲಕಗಳನ್ನು ತೆರವುಗೊಳಿಸುವಂತೆ ಹೇಳಿಬಂದರು. ಇದು ಆ ಬಿಜೆಪಿ ಮುಖಂಡನನ್ನು ಕೆರಳಿಸಿತು. ಪಾಲಿಕೆ ಕಚೇರಿಗೆ ಹೋಗಿ ಆಯುಕ್ತರಿಗೆ ಧಮಕಿ ಹಾಕಿದರು. ಅದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವ್ಯಾಪಕ ಖಂಡನೆ ವ್ಯಕ್ತವಾದ ಮೇಲೆ ‘ಆಂಜನೇಯ’ ಹೋಗಿ ಕ್ಷಮೆಯಾಚಿಸಿದ.

ಆಗ ಆಯುಕ್ತ ಭೂಬಾಲನ್ ಬಿಜೆಪಿ ಮುಖಂಡನಿಗೆ ತರಾಟೆಗೆ ತೆಗೆದುಕೊಂಡು ನೀರಿಳಿಸಿದರು. ನಿಮ್ಮದೇ ಸರ್ಕಾರ ಇದೆ. ನಿಮ್ಮವರೇ ‘ಎಲ್ಲರೂ’ ಇದ್ದಾರೆ. ಟ್ರಾನ್ಸ್ ಫರ್ ಮಾಡಿಸು. ನನಗೆ ಇಲ್ಲೇ ಇರಬೇಕೆಂದೇ ಇಲ್ಲ. ಮತ್ತೆ ಹೀಗೆಲ್ಲ ಮಾಡಬೇಡ ಎಂದು ಎಚ್ಚರಿಸಿದ್ದಾರೆ. ಆದರೆ ಈಗ ಬಂದಿರುವ ವರ್ತಮಾನವೆಂದರೆ ಇಂಥವರ ನಡುವೆ ಹೇಗೆ ಕೆಲಸ ಮಾಡುವುದು? ಕೆಲಸ ಮಾಡಲು ಮನಸ್ಸೇ ಬರುತ್ತಿಲ್ಲ ಎಂದು ಭೂಬಾಲನ್ ಕೆಲವರಲ್ಲಿ ಹೇಳಿಕೊಂಡು ನೋವು ತೋಡಿಕೊಂಡಿದ್ದಾರೆ. ಈಗ ‘ಬಸವಜ್ಯೋತಿ’ ಮತ್ತಷ್ಟು ಪ್ರಖರವಾಗಿ ಬೆಳಗುತ್ತಿದೆ. ಸೂಟ್ ಕೇಸ್ ಗಳ ಕೈಬದಲಾವಣೆ ಎಲ್ಲವನ್ನೂ ಒಂದಾಗಿಸುತ್ತದೆ ಎಂದು ಪಾಲಿಕೆ ಆವರಣದಲ್ಲಿ ಮಗುಮ್ಮಾಗಿ ನಗುವವರ ಸಂಖ್ಯೆ ಹೆಚ್ಚಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...