Homeಮುಖಪುಟತುಮಕೂರು ಮಹಾನಗರ ಪಾಲಿಕೆ: 2 ತಿಂಗಳಲ್ಲೇ 9 ಕೋಟಿ ರೂ. ಸಮಾಪ್ತಿ!

ತುಮಕೂರು ಮಹಾನಗರ ಪಾಲಿಕೆ: 2 ತಿಂಗಳಲ್ಲೇ 9 ಕೋಟಿ ರೂ. ಸಮಾಪ್ತಿ!

ಭೂಬಾಲನ್ ವರ್ಗಾವಣೆಯಾಗುವ ಸಮಯದಲ್ಲಿ ಪಾಲಿಕೆಯಲ್ಲಿ ಸುಮಾರು 9 ರಿಂದ 12 ಕೋಟಿ ರೂಪಾಯಿ ಹಣ ಉಳಿದಿತ್ತು. ಅವರು ಮತ್ತೆ ವಾಪಸ್‌ ಬರುವ ವೇಳೆಗೆ ಎಲ್ಲಾ ಮಂಗಮಾಯವಾಗಿದೆ!

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆಯಲ್ಲಿ ದಿಕ್ಕುತಪ್ಪಿದ ಆಡಳಿತ ಮತ್ತು ಹಣಕಾಸು ನಿರ್ವಹಣೆಯನ್ನು ಸರಿದಾರಿಗೆ ತರಲು ಆಯುಕ್ತ ಭೂಬಾಲನ್ ಹೆಣಗುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಐರನ್ ಮೈಂಡ್ ಗಳ ಬಿಗಿಹಿಡಿತ ದಿಂದ ಭೂಬಾಲನ್ ಸುಸೂತ್ರವಾಗಿ; ಸ್ವತಂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಎರಡನೇ ಬಾರಿಗೆ ಪಾಲಿಕೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಭೂಬಾಲನ್ ರಾಜಕಾರಣಿಗಳ ಅಸಹಕಾರ ಮನೋಭಾವದಿಂದ ಕೆಲಸ ಮಾಡಲು ಅಷ್ಟೊಂದು ಉತ್ಸುಕತೆ ತೋರುತ್ತಿಲ್ಲ ಎಂಬ ಚರ್ಚೆ ಜೋರಾಗಿಯೇ ನಡೆದಿದೆ.

ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಭೂಬಾಲನ್ ತುಮಕೂರು ಪಾಲಿಕೆಯಿಂದ ವರ್ಗಾವಣೆ ಗೊಂಡರು. ಇದು ಮೇಲ್ನೋಟದ ವಿವರಣೆ. ಆದರೆ ಇವರು ವರ್ಗಾವಣೆಗೊಂಡರು ಎನ್ನುವುದಕ್ಕಿಂತ ಎತ್ತಂಗಡಿ ಮಾಡಿಸಿದರು ಎನ್ನುವುದೇ ಸೂಕ್ತ. ಇದರ ಹಿಂದೆ ‘ಬಸವಜ್ಯೋತಿ’ ಪ್ರಭಾವ ಇದರ ಹಿಂದೆ ಇತ್ತು. ಸಾದಾಸೀದ ಪ್ರಾಮಾಣಿಕ ಅಧಿಕಾರಿ ಭೂಬಾಲನ್ ‘ಬಸವಜ್ಯೋತಿ’ ಮುಂದೆ ಶರಣಾಗಿರಲಿಲ್ಲ. ತಿನ್ನುವುದಿಲ್ಲ; ತಿನ್ನಲು ಬಿಡುವುದಿಲ್ಲ’ ಎಂಬ ಮಾತುಗಳು ಈ ಅಧಿಕಾರಿಗೆ ಹೇಳಿಮಾಡಿಸಿದಂತಿತ್ತು. ಹೀಗಾಗಿ ‘ಪ್ರಭಾವಳಿ’ ಬೀರಿ  ‘ರಿಲ್ಯಾಕ್ಸ್’ ಪಡೆಯಲು ವರ್ಗಾವಣೆ ನಡೆದುಹೋಗಿತ್ತು.

ಇದನ್ನೂ ಓದಿ: ತುಮಕೂರಿನ ಪ್ರಾಮಾಣಿಕ ಅಧಿಕಾರಿಯ ಎತ್ತಂಗಡಿಯ ಹಿಂದಿದ್ದಾರೆ ರಿಯಲ್ ಎಸ್ಟೇಟ್ ರಾಜಕಾರಣಿಗಳು..

ಭೂಬಾಲನ್ ವರ್ಗಾವಣೆಯಾಗುವ ಸಮಯದಲ್ಲಿ ಪಾಲಿಕೆಯಲ್ಲಿ ಸುಮಾರು 9 ರಿಂದ 12 ಕೋಟಿ ರೂಪಾಯಿ ಪಾಲಿಕೆಯ ಖಜಾನೆಯಲ್ಲಿತ್ತು. ಜನರಿಂದ ನೀರು ಮೊದಲಾದ ತೆರಿಗೆಗಳನ್ನು ಕಟ್ಟುನಿಟ್ಟಾಗಿ ವಸೂಲಿ ಮಾಡಿ ಇಷ್ಟೊಂದು ಹಣವನ್ನು ಉಳಿಸಿ ಹೋಗಿದ್ದರು. ಹೋಗುವಾಗ ಯೋಗಾನಂದ ಎಂಬ ಅಧಿಕಾರಿಗೆ ಪಾಲಿಕೆಯ ಅಧಿಕಾರ ಹಸ್ತಾಂತರಿಸಿದ್ದರು. ಯೋಗಾನಂದರಿಗೆ ಯೋಗ ಖುಲಾಯಿಸಿತ್ತು. ಯೋಗಾನಂದರವರು ಆನಂದಲ್ಲಿ ತೇಲತೊಡಗಿದರು. ಸು’ಯೋಗ’ ಬರಬಹುದೆಂದು ನಂಬಿದ್ದವರಿಗೆ ನಿರಾಸೆಯಾಯಿತು.’ಸತ್ಯ’ ಗೊತ್ತಾದ ಮೇಲೆ ಯೋಗಾನಂದರಿಗೆ ಗೇಟ್ ಪಾಸ್ ಕೊಡಿಸಿದರು. ಜನ ಇವರನ್ನು ಅಯೋಗಾನಂದ ಎಂದೇ ಗೇಲಿ ಮಾಡುವುದುಂಟು.

ಜನಪ್ರಿಯ ಆಯುಕ್ತ ಭೂಬಾಲನ್‌

ಇಷ್ಟೊತ್ತಿಗಾಗಲೇ ಪಾಲಿಕೆ ಆಡಳಿತ ಹಳ್ಳ ಹಿಡಿದಿತ್ತು. ಆಗ ತುಮಕೂರು ಉಪವಿಭಾಗಾಧಿಕಾರಿ ಶಿವಕುಮಾರ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಇವರು ಬಂದ ಮೇಲೆ ಭೂಬಾಲನ್ ಉಳಿಸಿಹೋಗಿದ್ದ ಸುಮಾರು 9 ರಿಂದ 12 ಕೋಟಿ ರೂ ಹಣ ‘ಕರಗಿ’ಹೋಯಿತು. ಎರಡು ಮೂರು ತಿಂಗಳೊತ್ತಿನಲ್ಲಿ ಕೋಟಿಕೋಟಿ ಹಣ ಧನದಾಹಿಗಳ ಕೈಗೆ ಸೇರಿತ್ತು. ಐರನ್ ಮೈಂಡ್ ಗಳ ಅಸೆಯೂ ಈಡೇರಿತ್ತು. ಪಾಲಿಕೆ ಖಜಾನೆ ಖಾಲಿಖಾಲಿ ಆಗಿದೆ. ಇಷ್ಟೊಂದು ಮೊತ್ತ ಯಾವ ಬಾಬ್ತಿಗೆ ವೆಚ್ಚವಾಯ್ತು ಅಂಬೋ ಲೆಕ್ಕವನ್ನು ಯಾರಿಗೆ ಕೇಳೋದು ಎಂದು ಜನರಂತೂ ಮಾತನಾಡಿಕೊಳ್ಳುತ್ತಿದ್ದಾರೆ.

ಇಂಥೆಂಬೋ ಹೊತ್ತಿನಲ್ಲಿ ತುಮಕೂರು ನಗರಪಾಲಿಕೆಯ ಆಯುಕ್ತರಾಗಿ ಭೂಬಾಲನ್ ಎರಡನೇ ಅವಧಿಗೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡು ಕೆಲಸ ನಿರ್ವಹಿಸುತ್ತಿದ್ದಾರೆ. ಮೊದಲು ಇದ್ದ ಹುಮ್ಮಸ್ಸು, ಉತ್ಸಾಹ ಸ್ವಲ್ಪ ಕಡಿಮೆಯಾಗಿದೆ. ಗಾಂಧಿನಗರದಲ್ಲಿ ಬಿಜೆಪಿ ಮುಖಂಡರೊಬ್ಬರು ಪಿಜಿ ನಡೆಸುತ್ತಿದ್ದರು. ಇದರ ಬಗ್ಗೆ ಮರಗಳಿಗೆ ಪಿಜಿ ಫಲಕಗಳು ನೇತುಹಾಕಿ ಉಚಿತ ಜಾಹಿರಾತು ನೀಡಿದರು. ತಮ್ಮದೇ ಆಡಳಿತ, ತಮ್ಮದೇ ಸಂಸದರು, ತಮ್ಮದೇ ಶಾಸಕರು ಕೇಳುವವರು ಯಾರು ಎಂಬ ಹುಂಬುತನದಿಂದ ಮರಮರಗಳಿಗೂ ಬೋರ್ಡ್ ಗಳು ನೇತುಬಿದ್ದವು.

ಇದೆಲ್ಲವನ್ನು ನೋಡಿದ ಆಯುಕ್ತ ಬೂಬಾಲನ್ ಸೀದಾ ಗಾಂಧೀನಗರಕ್ಕೆ ಹೋಗಿ ಎಚ್ಚರಿಕೆ ನೀಡಿದರು. ಕೂಡಲೇ ಮರಗಳಿಗೆ ನೇತುಹಾಕಿರುವ ಫಲಕಗಳನ್ನು ತೆರವುಗೊಳಿಸುವಂತೆ ಹೇಳಿಬಂದರು. ಇದು ಆ ಬಿಜೆಪಿ ಮುಖಂಡನನ್ನು ಕೆರಳಿಸಿತು. ಪಾಲಿಕೆ ಕಚೇರಿಗೆ ಹೋಗಿ ಆಯುಕ್ತರಿಗೆ ಧಮಕಿ ಹಾಕಿದರು. ಅದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವ್ಯಾಪಕ ಖಂಡನೆ ವ್ಯಕ್ತವಾದ ಮೇಲೆ ‘ಆಂಜನೇಯ’ ಹೋಗಿ ಕ್ಷಮೆಯಾಚಿಸಿದ.

ಆಗ ಆಯುಕ್ತ ಭೂಬಾಲನ್ ಬಿಜೆಪಿ ಮುಖಂಡನಿಗೆ ತರಾಟೆಗೆ ತೆಗೆದುಕೊಂಡು ನೀರಿಳಿಸಿದರು. ನಿಮ್ಮದೇ ಸರ್ಕಾರ ಇದೆ. ನಿಮ್ಮವರೇ ‘ಎಲ್ಲರೂ’ ಇದ್ದಾರೆ. ಟ್ರಾನ್ಸ್ ಫರ್ ಮಾಡಿಸು. ನನಗೆ ಇಲ್ಲೇ ಇರಬೇಕೆಂದೇ ಇಲ್ಲ. ಮತ್ತೆ ಹೀಗೆಲ್ಲ ಮಾಡಬೇಡ ಎಂದು ಎಚ್ಚರಿಸಿದ್ದಾರೆ. ಆದರೆ ಈಗ ಬಂದಿರುವ ವರ್ತಮಾನವೆಂದರೆ ಇಂಥವರ ನಡುವೆ ಹೇಗೆ ಕೆಲಸ ಮಾಡುವುದು? ಕೆಲಸ ಮಾಡಲು ಮನಸ್ಸೇ ಬರುತ್ತಿಲ್ಲ ಎಂದು ಭೂಬಾಲನ್ ಕೆಲವರಲ್ಲಿ ಹೇಳಿಕೊಂಡು ನೋವು ತೋಡಿಕೊಂಡಿದ್ದಾರೆ. ಈಗ ‘ಬಸವಜ್ಯೋತಿ’ ಮತ್ತಷ್ಟು ಪ್ರಖರವಾಗಿ ಬೆಳಗುತ್ತಿದೆ. ಸೂಟ್ ಕೇಸ್ ಗಳ ಕೈಬದಲಾವಣೆ ಎಲ್ಲವನ್ನೂ ಒಂದಾಗಿಸುತ್ತದೆ ಎಂದು ಪಾಲಿಕೆ ಆವರಣದಲ್ಲಿ ಮಗುಮ್ಮಾಗಿ ನಗುವವರ ಸಂಖ್ಯೆ ಹೆಚ್ಚಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...