Homeಅಂತರಾಷ್ಟ್ರೀಯಹೊತ್ತಿ ಉರಿದ ಟರ್ಕಿ - ಕಾಡ್ಗಿಚ್ಚಿನಿಂದಾಗಿ ಸಾವಿಗೀಡಾದವರ ಸಂಖ್ಯೆ 8 ಕ್ಕೆ ಏರಿಕೆ

ಹೊತ್ತಿ ಉರಿದ ಟರ್ಕಿ – ಕಾಡ್ಗಿಚ್ಚಿನಿಂದಾಗಿ ಸಾವಿಗೀಡಾದವರ ಸಂಖ್ಯೆ 8 ಕ್ಕೆ ಏರಿಕೆ

- Advertisement -
- Advertisement -

ಟರ್ಕಿಯ ದಕ್ಷಿಣ ಕರಾವಳಿಯಲ್ಲಿ ಭುಗಿಲೆದ್ದಿರುವ ಕಾಡ್ಗಿಚ್ಚು ಸತತ ಐದನೇ ದಿನವು ಮುಂದುವರೆದಿದ್ದು, ಕಾಡ್ಗಿಚ್ಚಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಎಂಟಕ್ಕೆ ಏರಿದೆ ಎಂದು ರಾಯಿಟರ್ಸ್ ಭಾನುವಾರ ವರದಿ ಮಾಡಿದೆ.

ಟರ್ಕಿಯ ಆರೋಗ್ಯ ಸಚಿವ ಫಹ್ರೆಟಿನ್ ಕೋಕಾ ಅವರು, ದಕ್ಷಿಣ ಟರ್ಕಿಯ ಪಟ್ಟಣವಾದ ಮಾನವ್‌ಗತ್‌ನಲ್ಲಿ ಭಾನುವಾರ ಕಾಡ್ಗಿಚ್ಚಿನಿಂದಾಗಿ ಇನ್ನೂ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಗಾಯಗೊಂಡಿರುವ 10 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಟರ್ಕಿ ಕೃಷಿ ಮತ್ತು ಅರಣ್ಯ ಸಚಿವ ಬೇಕಿರ್ ಪಕ್ಡೆಮಿರ್ಲಿ ಮಾತನಾಡಿ, “ಮಾನವ್‌ಗತ್, ಮರ್ಮರಿಸ್ ಮತ್ತು ಮಿಲಸ್‌ನಲ್ಲಿ ಬೆಂಕಿ ಹೊತ್ತಿಉರಿಯುತ್ತಿದ್ದು, ಇದರಿಂದಾಗಿ ಸುತ್ತಮುತ್ತಲಿನ ಹೋಟೆಲ್‌ಗಳು ಮತ್ತು ವಸತಿ ಪ್ರದೇಶಗಳನ್ನು ಸ್ಥಳಾಂತರಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ಬುಧವಾರ ಕಾಡ್ಗಿಚ್ಚು ಆರಂಭವಾದಾಗಿನಿಂದ ಸಾವಿರಾರು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಭಾನುವಾರ ವರದಿಯಾದ ಎರಡು ಸಾವುಗಳಿಗೆ ಮೊದಲು, ಮಾನವ್‌ಗತ್‌ನಿಂದ ಐದು ಜನರು ಮತ್ತು ಮರ್ಮರಿಸ್‌ನ ಒಬ್ಬರು ಮೃತಪಟ್ಟಿದ್ದು ವರದಿಯಾಗಿತ್ತು.

ಕನಿಷ್ಠ 828 ಅಗ್ನಿಶಾಮಕ ವಾಹನಗಳು, 13 ವಿಮಾನಗಳು, 45 ಹೆಲಿಕಾಪ್ಟರ್‌ಗಳು ಮತ್ತು ಡ್ರೋನ್‌ಗಳು ಬೆಂಕಿಯನ್ನು ನಿಯಂತ್ರಿಸಲು ಹೋರಾಡುತ್ತಿದೆ ಎಂದು ಪಕ್ಡೆಮಿರ್ಲಿ ಹೇಳಿದ್ದಾರೆ. ಹೆಚ್ಚುವರಿಯಾಗಿ, ನೆರೆಯ ರಾಷ್ಟ್ರಗಳಾದ ರಷ್ಯಾ, ಉಕ್ರೇನ್, ಇರಾನ್ ಮತ್ತು ಅಝರ್‌‌ಬೈಜಾನ್‌‌‌ ಅಗ್ನಿಶಾಮಕ ತಂಡಗಳನ್ನು ಕಳುಹಿಸಿದೆ. ಇದರ ಜೊತೆಗೆ ಸ್ಥಳೀಯರು ಸಹ ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ. ಮೂರು ಅಗ್ನಿಶಾಮಕ ವಿಮಾನಗಳನ್ನು ಯುರೋಪಿಯನ್ ಯೂನಿಯನ್ (ಇಯು) ಸಜ್ಜುಗೊಳಿಸಿದೆ.

ಟರ್ಕಿ ಸರ್ಕಾರವು ಬೆಂಕಿಯಿಂದ ಉಂಟಾಗುವ ಎಲ್ಲಾ ನಷ್ಟವನ್ನು ಭರಿಸಲಾಗುವುದು ಮತ್ತು ಹಾನಿಗೊಳಗಾದ ಮನೆಗಳನ್ನು ಪುನರ್ನಿರ್ಮಿಸಲಾಗುವುದು ಎಂದು ಪ್ರತಿಜ್ಞೆ ಮಾಡಿದೆ.

ಈ ಬೇಸಿಗೆಯಲ್ಲಿ ಕಾಡ್ಗಿಚ್ಚಿನಿಂದಾಗಿ ಹಾನಿಗೊಳಗಾದ ಅನೇಕ ಮೆಡಿಟರೇನಿಯನ್ ದೇಶಗಳಲ್ಲಿ ಟರ್ಕಿ ಕೂಡ ಒಂದಾಗಿದೆ. ಈ ಹಿಂದೆ ಗ್ರೀಸ್, ಲೆಬನಾನ್, ಸಿರಿಯಾ, ಇಟಲಿ ಮತ್ತು ಸೈಪ್ರಸ್ ದೇಶಗಳಲ್ಲೂ ಕಾಡ್ಗಿಚ್ಚು ಸಂಭವಿಸಿತ್ತು. ಬೆಂಕಿಯಿಂದಾಗಿ ಗ್ರೀಸ್‌ನ ವಾತಾವರಣದಲ್ಲಿ ಉಷ್ಣತೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಭ್ರಷ್ಟಾಚಾರ ಪ್ರಶ್ನಿಸಿದ ಪತ್ರಕರ್ತನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಲ್ಲೆ: ಅವ್ಯಾಹತವಾಗಿ ನಡೆದಿದೆ ಅರಣ್ಯ ಲೂಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...