Homeಅಂತರಾಷ್ಟ್ರೀಯಹೊತ್ತಿ ಉರಿದ ಟರ್ಕಿ - ಕಾಡ್ಗಿಚ್ಚಿನಿಂದಾಗಿ ಸಾವಿಗೀಡಾದವರ ಸಂಖ್ಯೆ 8 ಕ್ಕೆ ಏರಿಕೆ

ಹೊತ್ತಿ ಉರಿದ ಟರ್ಕಿ – ಕಾಡ್ಗಿಚ್ಚಿನಿಂದಾಗಿ ಸಾವಿಗೀಡಾದವರ ಸಂಖ್ಯೆ 8 ಕ್ಕೆ ಏರಿಕೆ

- Advertisement -
- Advertisement -

ಟರ್ಕಿಯ ದಕ್ಷಿಣ ಕರಾವಳಿಯಲ್ಲಿ ಭುಗಿಲೆದ್ದಿರುವ ಕಾಡ್ಗಿಚ್ಚು ಸತತ ಐದನೇ ದಿನವು ಮುಂದುವರೆದಿದ್ದು, ಕಾಡ್ಗಿಚ್ಚಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಎಂಟಕ್ಕೆ ಏರಿದೆ ಎಂದು ರಾಯಿಟರ್ಸ್ ಭಾನುವಾರ ವರದಿ ಮಾಡಿದೆ.

ಟರ್ಕಿಯ ಆರೋಗ್ಯ ಸಚಿವ ಫಹ್ರೆಟಿನ್ ಕೋಕಾ ಅವರು, ದಕ್ಷಿಣ ಟರ್ಕಿಯ ಪಟ್ಟಣವಾದ ಮಾನವ್‌ಗತ್‌ನಲ್ಲಿ ಭಾನುವಾರ ಕಾಡ್ಗಿಚ್ಚಿನಿಂದಾಗಿ ಇನ್ನೂ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಗಾಯಗೊಂಡಿರುವ 10 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಟರ್ಕಿ ಕೃಷಿ ಮತ್ತು ಅರಣ್ಯ ಸಚಿವ ಬೇಕಿರ್ ಪಕ್ಡೆಮಿರ್ಲಿ ಮಾತನಾಡಿ, “ಮಾನವ್‌ಗತ್, ಮರ್ಮರಿಸ್ ಮತ್ತು ಮಿಲಸ್‌ನಲ್ಲಿ ಬೆಂಕಿ ಹೊತ್ತಿಉರಿಯುತ್ತಿದ್ದು, ಇದರಿಂದಾಗಿ ಸುತ್ತಮುತ್ತಲಿನ ಹೋಟೆಲ್‌ಗಳು ಮತ್ತು ವಸತಿ ಪ್ರದೇಶಗಳನ್ನು ಸ್ಥಳಾಂತರಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ಬುಧವಾರ ಕಾಡ್ಗಿಚ್ಚು ಆರಂಭವಾದಾಗಿನಿಂದ ಸಾವಿರಾರು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಭಾನುವಾರ ವರದಿಯಾದ ಎರಡು ಸಾವುಗಳಿಗೆ ಮೊದಲು, ಮಾನವ್‌ಗತ್‌ನಿಂದ ಐದು ಜನರು ಮತ್ತು ಮರ್ಮರಿಸ್‌ನ ಒಬ್ಬರು ಮೃತಪಟ್ಟಿದ್ದು ವರದಿಯಾಗಿತ್ತು.

ಕನಿಷ್ಠ 828 ಅಗ್ನಿಶಾಮಕ ವಾಹನಗಳು, 13 ವಿಮಾನಗಳು, 45 ಹೆಲಿಕಾಪ್ಟರ್‌ಗಳು ಮತ್ತು ಡ್ರೋನ್‌ಗಳು ಬೆಂಕಿಯನ್ನು ನಿಯಂತ್ರಿಸಲು ಹೋರಾಡುತ್ತಿದೆ ಎಂದು ಪಕ್ಡೆಮಿರ್ಲಿ ಹೇಳಿದ್ದಾರೆ. ಹೆಚ್ಚುವರಿಯಾಗಿ, ನೆರೆಯ ರಾಷ್ಟ್ರಗಳಾದ ರಷ್ಯಾ, ಉಕ್ರೇನ್, ಇರಾನ್ ಮತ್ತು ಅಝರ್‌‌ಬೈಜಾನ್‌‌‌ ಅಗ್ನಿಶಾಮಕ ತಂಡಗಳನ್ನು ಕಳುಹಿಸಿದೆ. ಇದರ ಜೊತೆಗೆ ಸ್ಥಳೀಯರು ಸಹ ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ. ಮೂರು ಅಗ್ನಿಶಾಮಕ ವಿಮಾನಗಳನ್ನು ಯುರೋಪಿಯನ್ ಯೂನಿಯನ್ (ಇಯು) ಸಜ್ಜುಗೊಳಿಸಿದೆ.

ಟರ್ಕಿ ಸರ್ಕಾರವು ಬೆಂಕಿಯಿಂದ ಉಂಟಾಗುವ ಎಲ್ಲಾ ನಷ್ಟವನ್ನು ಭರಿಸಲಾಗುವುದು ಮತ್ತು ಹಾನಿಗೊಳಗಾದ ಮನೆಗಳನ್ನು ಪುನರ್ನಿರ್ಮಿಸಲಾಗುವುದು ಎಂದು ಪ್ರತಿಜ್ಞೆ ಮಾಡಿದೆ.

ಈ ಬೇಸಿಗೆಯಲ್ಲಿ ಕಾಡ್ಗಿಚ್ಚಿನಿಂದಾಗಿ ಹಾನಿಗೊಳಗಾದ ಅನೇಕ ಮೆಡಿಟರೇನಿಯನ್ ದೇಶಗಳಲ್ಲಿ ಟರ್ಕಿ ಕೂಡ ಒಂದಾಗಿದೆ. ಈ ಹಿಂದೆ ಗ್ರೀಸ್, ಲೆಬನಾನ್, ಸಿರಿಯಾ, ಇಟಲಿ ಮತ್ತು ಸೈಪ್ರಸ್ ದೇಶಗಳಲ್ಲೂ ಕಾಡ್ಗಿಚ್ಚು ಸಂಭವಿಸಿತ್ತು. ಬೆಂಕಿಯಿಂದಾಗಿ ಗ್ರೀಸ್‌ನ ವಾತಾವರಣದಲ್ಲಿ ಉಷ್ಣತೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಭ್ರಷ್ಟಾಚಾರ ಪ್ರಶ್ನಿಸಿದ ಪತ್ರಕರ್ತನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಲ್ಲೆ: ಅವ್ಯಾಹತವಾಗಿ ನಡೆದಿದೆ ಅರಣ್ಯ ಲೂಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...