Homeಅಂತರಾಷ್ಟ್ರೀಯಹೊತ್ತಿ ಉರಿದ ಟರ್ಕಿ - ಕಾಡ್ಗಿಚ್ಚಿನಿಂದಾಗಿ ಸಾವಿಗೀಡಾದವರ ಸಂಖ್ಯೆ 8 ಕ್ಕೆ ಏರಿಕೆ

ಹೊತ್ತಿ ಉರಿದ ಟರ್ಕಿ – ಕಾಡ್ಗಿಚ್ಚಿನಿಂದಾಗಿ ಸಾವಿಗೀಡಾದವರ ಸಂಖ್ಯೆ 8 ಕ್ಕೆ ಏರಿಕೆ

- Advertisement -
- Advertisement -

ಟರ್ಕಿಯ ದಕ್ಷಿಣ ಕರಾವಳಿಯಲ್ಲಿ ಭುಗಿಲೆದ್ದಿರುವ ಕಾಡ್ಗಿಚ್ಚು ಸತತ ಐದನೇ ದಿನವು ಮುಂದುವರೆದಿದ್ದು, ಕಾಡ್ಗಿಚ್ಚಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಎಂಟಕ್ಕೆ ಏರಿದೆ ಎಂದು ರಾಯಿಟರ್ಸ್ ಭಾನುವಾರ ವರದಿ ಮಾಡಿದೆ.

ಟರ್ಕಿಯ ಆರೋಗ್ಯ ಸಚಿವ ಫಹ್ರೆಟಿನ್ ಕೋಕಾ ಅವರು, ದಕ್ಷಿಣ ಟರ್ಕಿಯ ಪಟ್ಟಣವಾದ ಮಾನವ್‌ಗತ್‌ನಲ್ಲಿ ಭಾನುವಾರ ಕಾಡ್ಗಿಚ್ಚಿನಿಂದಾಗಿ ಇನ್ನೂ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಗಾಯಗೊಂಡಿರುವ 10 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಟರ್ಕಿ ಕೃಷಿ ಮತ್ತು ಅರಣ್ಯ ಸಚಿವ ಬೇಕಿರ್ ಪಕ್ಡೆಮಿರ್ಲಿ ಮಾತನಾಡಿ, “ಮಾನವ್‌ಗತ್, ಮರ್ಮರಿಸ್ ಮತ್ತು ಮಿಲಸ್‌ನಲ್ಲಿ ಬೆಂಕಿ ಹೊತ್ತಿಉರಿಯುತ್ತಿದ್ದು, ಇದರಿಂದಾಗಿ ಸುತ್ತಮುತ್ತಲಿನ ಹೋಟೆಲ್‌ಗಳು ಮತ್ತು ವಸತಿ ಪ್ರದೇಶಗಳನ್ನು ಸ್ಥಳಾಂತರಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ಬುಧವಾರ ಕಾಡ್ಗಿಚ್ಚು ಆರಂಭವಾದಾಗಿನಿಂದ ಸಾವಿರಾರು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಭಾನುವಾರ ವರದಿಯಾದ ಎರಡು ಸಾವುಗಳಿಗೆ ಮೊದಲು, ಮಾನವ್‌ಗತ್‌ನಿಂದ ಐದು ಜನರು ಮತ್ತು ಮರ್ಮರಿಸ್‌ನ ಒಬ್ಬರು ಮೃತಪಟ್ಟಿದ್ದು ವರದಿಯಾಗಿತ್ತು.

ಕನಿಷ್ಠ 828 ಅಗ್ನಿಶಾಮಕ ವಾಹನಗಳು, 13 ವಿಮಾನಗಳು, 45 ಹೆಲಿಕಾಪ್ಟರ್‌ಗಳು ಮತ್ತು ಡ್ರೋನ್‌ಗಳು ಬೆಂಕಿಯನ್ನು ನಿಯಂತ್ರಿಸಲು ಹೋರಾಡುತ್ತಿದೆ ಎಂದು ಪಕ್ಡೆಮಿರ್ಲಿ ಹೇಳಿದ್ದಾರೆ. ಹೆಚ್ಚುವರಿಯಾಗಿ, ನೆರೆಯ ರಾಷ್ಟ್ರಗಳಾದ ರಷ್ಯಾ, ಉಕ್ರೇನ್, ಇರಾನ್ ಮತ್ತು ಅಝರ್‌‌ಬೈಜಾನ್‌‌‌ ಅಗ್ನಿಶಾಮಕ ತಂಡಗಳನ್ನು ಕಳುಹಿಸಿದೆ. ಇದರ ಜೊತೆಗೆ ಸ್ಥಳೀಯರು ಸಹ ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ. ಮೂರು ಅಗ್ನಿಶಾಮಕ ವಿಮಾನಗಳನ್ನು ಯುರೋಪಿಯನ್ ಯೂನಿಯನ್ (ಇಯು) ಸಜ್ಜುಗೊಳಿಸಿದೆ.

ಟರ್ಕಿ ಸರ್ಕಾರವು ಬೆಂಕಿಯಿಂದ ಉಂಟಾಗುವ ಎಲ್ಲಾ ನಷ್ಟವನ್ನು ಭರಿಸಲಾಗುವುದು ಮತ್ತು ಹಾನಿಗೊಳಗಾದ ಮನೆಗಳನ್ನು ಪುನರ್ನಿರ್ಮಿಸಲಾಗುವುದು ಎಂದು ಪ್ರತಿಜ್ಞೆ ಮಾಡಿದೆ.

ಈ ಬೇಸಿಗೆಯಲ್ಲಿ ಕಾಡ್ಗಿಚ್ಚಿನಿಂದಾಗಿ ಹಾನಿಗೊಳಗಾದ ಅನೇಕ ಮೆಡಿಟರೇನಿಯನ್ ದೇಶಗಳಲ್ಲಿ ಟರ್ಕಿ ಕೂಡ ಒಂದಾಗಿದೆ. ಈ ಹಿಂದೆ ಗ್ರೀಸ್, ಲೆಬನಾನ್, ಸಿರಿಯಾ, ಇಟಲಿ ಮತ್ತು ಸೈಪ್ರಸ್ ದೇಶಗಳಲ್ಲೂ ಕಾಡ್ಗಿಚ್ಚು ಸಂಭವಿಸಿತ್ತು. ಬೆಂಕಿಯಿಂದಾಗಿ ಗ್ರೀಸ್‌ನ ವಾತಾವರಣದಲ್ಲಿ ಉಷ್ಣತೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಭ್ರಷ್ಟಾಚಾರ ಪ್ರಶ್ನಿಸಿದ ಪತ್ರಕರ್ತನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಲ್ಲೆ: ಅವ್ಯಾಹತವಾಗಿ ನಡೆದಿದೆ ಅರಣ್ಯ ಲೂಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...