Homeಅಂತರಾಷ್ಟ್ರೀಯಹೊತ್ತಿ ಉರಿದ ಟರ್ಕಿ - ಕಾಡ್ಗಿಚ್ಚಿನಿಂದಾಗಿ ಸಾವಿಗೀಡಾದವರ ಸಂಖ್ಯೆ 8 ಕ್ಕೆ ಏರಿಕೆ

ಹೊತ್ತಿ ಉರಿದ ಟರ್ಕಿ – ಕಾಡ್ಗಿಚ್ಚಿನಿಂದಾಗಿ ಸಾವಿಗೀಡಾದವರ ಸಂಖ್ಯೆ 8 ಕ್ಕೆ ಏರಿಕೆ

- Advertisement -
- Advertisement -

ಟರ್ಕಿಯ ದಕ್ಷಿಣ ಕರಾವಳಿಯಲ್ಲಿ ಭುಗಿಲೆದ್ದಿರುವ ಕಾಡ್ಗಿಚ್ಚು ಸತತ ಐದನೇ ದಿನವು ಮುಂದುವರೆದಿದ್ದು, ಕಾಡ್ಗಿಚ್ಚಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಎಂಟಕ್ಕೆ ಏರಿದೆ ಎಂದು ರಾಯಿಟರ್ಸ್ ಭಾನುವಾರ ವರದಿ ಮಾಡಿದೆ.

ಟರ್ಕಿಯ ಆರೋಗ್ಯ ಸಚಿವ ಫಹ್ರೆಟಿನ್ ಕೋಕಾ ಅವರು, ದಕ್ಷಿಣ ಟರ್ಕಿಯ ಪಟ್ಟಣವಾದ ಮಾನವ್‌ಗತ್‌ನಲ್ಲಿ ಭಾನುವಾರ ಕಾಡ್ಗಿಚ್ಚಿನಿಂದಾಗಿ ಇನ್ನೂ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಗಾಯಗೊಂಡಿರುವ 10 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಟರ್ಕಿ ಕೃಷಿ ಮತ್ತು ಅರಣ್ಯ ಸಚಿವ ಬೇಕಿರ್ ಪಕ್ಡೆಮಿರ್ಲಿ ಮಾತನಾಡಿ, “ಮಾನವ್‌ಗತ್, ಮರ್ಮರಿಸ್ ಮತ್ತು ಮಿಲಸ್‌ನಲ್ಲಿ ಬೆಂಕಿ ಹೊತ್ತಿಉರಿಯುತ್ತಿದ್ದು, ಇದರಿಂದಾಗಿ ಸುತ್ತಮುತ್ತಲಿನ ಹೋಟೆಲ್‌ಗಳು ಮತ್ತು ವಸತಿ ಪ್ರದೇಶಗಳನ್ನು ಸ್ಥಳಾಂತರಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ಬುಧವಾರ ಕಾಡ್ಗಿಚ್ಚು ಆರಂಭವಾದಾಗಿನಿಂದ ಸಾವಿರಾರು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಭಾನುವಾರ ವರದಿಯಾದ ಎರಡು ಸಾವುಗಳಿಗೆ ಮೊದಲು, ಮಾನವ್‌ಗತ್‌ನಿಂದ ಐದು ಜನರು ಮತ್ತು ಮರ್ಮರಿಸ್‌ನ ಒಬ್ಬರು ಮೃತಪಟ್ಟಿದ್ದು ವರದಿಯಾಗಿತ್ತು.

ಕನಿಷ್ಠ 828 ಅಗ್ನಿಶಾಮಕ ವಾಹನಗಳು, 13 ವಿಮಾನಗಳು, 45 ಹೆಲಿಕಾಪ್ಟರ್‌ಗಳು ಮತ್ತು ಡ್ರೋನ್‌ಗಳು ಬೆಂಕಿಯನ್ನು ನಿಯಂತ್ರಿಸಲು ಹೋರಾಡುತ್ತಿದೆ ಎಂದು ಪಕ್ಡೆಮಿರ್ಲಿ ಹೇಳಿದ್ದಾರೆ. ಹೆಚ್ಚುವರಿಯಾಗಿ, ನೆರೆಯ ರಾಷ್ಟ್ರಗಳಾದ ರಷ್ಯಾ, ಉಕ್ರೇನ್, ಇರಾನ್ ಮತ್ತು ಅಝರ್‌‌ಬೈಜಾನ್‌‌‌ ಅಗ್ನಿಶಾಮಕ ತಂಡಗಳನ್ನು ಕಳುಹಿಸಿದೆ. ಇದರ ಜೊತೆಗೆ ಸ್ಥಳೀಯರು ಸಹ ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ. ಮೂರು ಅಗ್ನಿಶಾಮಕ ವಿಮಾನಗಳನ್ನು ಯುರೋಪಿಯನ್ ಯೂನಿಯನ್ (ಇಯು) ಸಜ್ಜುಗೊಳಿಸಿದೆ.

ಟರ್ಕಿ ಸರ್ಕಾರವು ಬೆಂಕಿಯಿಂದ ಉಂಟಾಗುವ ಎಲ್ಲಾ ನಷ್ಟವನ್ನು ಭರಿಸಲಾಗುವುದು ಮತ್ತು ಹಾನಿಗೊಳಗಾದ ಮನೆಗಳನ್ನು ಪುನರ್ನಿರ್ಮಿಸಲಾಗುವುದು ಎಂದು ಪ್ರತಿಜ್ಞೆ ಮಾಡಿದೆ.

ಈ ಬೇಸಿಗೆಯಲ್ಲಿ ಕಾಡ್ಗಿಚ್ಚಿನಿಂದಾಗಿ ಹಾನಿಗೊಳಗಾದ ಅನೇಕ ಮೆಡಿಟರೇನಿಯನ್ ದೇಶಗಳಲ್ಲಿ ಟರ್ಕಿ ಕೂಡ ಒಂದಾಗಿದೆ. ಈ ಹಿಂದೆ ಗ್ರೀಸ್, ಲೆಬನಾನ್, ಸಿರಿಯಾ, ಇಟಲಿ ಮತ್ತು ಸೈಪ್ರಸ್ ದೇಶಗಳಲ್ಲೂ ಕಾಡ್ಗಿಚ್ಚು ಸಂಭವಿಸಿತ್ತು. ಬೆಂಕಿಯಿಂದಾಗಿ ಗ್ರೀಸ್‌ನ ವಾತಾವರಣದಲ್ಲಿ ಉಷ್ಣತೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಭ್ರಷ್ಟಾಚಾರ ಪ್ರಶ್ನಿಸಿದ ಪತ್ರಕರ್ತನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಲ್ಲೆ: ಅವ್ಯಾಹತವಾಗಿ ನಡೆದಿದೆ ಅರಣ್ಯ ಲೂಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...