Homeಮುಖಪುಟಟರ್ಕಿ ಮತ್ತು ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 23,831ಕ್ಕೆ ಏರಿಕೆ

ಟರ್ಕಿ ಮತ್ತು ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 23,831ಕ್ಕೆ ಏರಿಕೆ

- Advertisement -
- Advertisement -

ಸೋಮವಾರ ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ 7.8 ತೀವ್ರತೆಯ ಭೂಕಂಪದಿಂದ ಸಾವಿರಾರು ಜನರು ಪ್ರಣ ಕಳೆದುಕೊಂಡಿದ್ದಾರೆ. ಶನಿವಾರದವರೆಗೆ ಸಾವಿನ ಸಂಖ್ಯೆ 23,831ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟರ್ಕಿಯಲ್ಲಿ 20,318ಕ್ಕೂ ಜನರು ಸಾವಿಗೀಡಾಗಿದ್ದು, 80,052 ಜನರು ಗಾಯಗೊಂಡಿದ್ದಾರೆ ಎಂದು ದೇಶದ ವಿಪತ್ತು ಸಂಸ್ಥೆ ಮಾಹಿತಿ ನೀಡಿದೆ.

ಸಿರಿಯಾದಲ್ಲಿ ಒಟ್ಟು 3,513 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ವಾಯುವ್ಯ ಪ್ರದೇಶದ ಬಂಡುಕೋರರ ಹಿಡಿತದಲ್ಲಿರುವ 2,166 ಜನರ ಸಾವುಗಳಾಗಿವೆ. ಸ್ವಯಂಸೇವಕ ಸಂಸ್ಥೆ ಸಿರಿಯಾ ಸಿವಿಲ್ ಡಿಫೆನ್ಸ್ ಪ್ರಕಾರ, ಇದನ್ನು ವೈಟ್ ಹೆಲ್ಮೆಟ್ ಎಂದೂ ಕರೆಯುತ್ತಾರೆ.

ಸಿರಿಯಾದ ಸರ್ಕಾರಿ ನಿಯಂತ್ರಿತ ಭಾಗಗಳಲ್ಲಿ 1,347 ಸಾವುಗಳು ಸಂಭವಿಸಿವೆ ಎಂದು ಸಿರಿಯನ್ ರಾಜ್ಯ ಮಾಧ್ಯಮ ವರದಿ ಮಾಡಿದೆ.

ಇದನ್ನೂ ಓದಿ: ಇಂದು ಟರ್ಕಿಯಲ್ಲಿ ಮತ್ತೆ 5.6 ಭೂಕಂಪನ: 3 ತಿಂಗಳ ತುರ್ತು ಪರಿಸ್ಥಿತಿ ಘೋಷಣೆ

ಸೋಮವಾರ ಸಂಭವಿಸಿದ ಈ ವಿನಾಶಕಾರಿ ಭೂಕಂಪದಿಂದ ಮಧ್ಯಾಹ್ನದ ನಂತರ ದಕ್ಷಿಣ ಟರ್ಕಿಯಲ್ಲಿ ವ್ಯಾಪಕ ವಿನಾಶ ಉಂಟಾಯಿತು. ಹತ್ತಿರದ ದೇಶಗಳಲ್ಲೂ ಭೂಕಂಪನದ ಅನುಭವವಾಗಿದೆ.

ಈ ಭೂಕಂಪವು ಶತಮಾನದ ಏಳನೇ ಅತ್ಯಂತ ಮಾರಣಾಂತಿಕ ನೈಸರ್ಗಿಕ ವಿಕೋಪವಾಗಿದೆ. ಜಪಾನ್‌ನ 2011 ರ ಕಂಪನ, ಸುನಾಮಿ ಮತ್ತು 2003ರ ಇರಾನ್ ಭೂಕಂಪ 31,000 ಜನರನ್ನು ಬಲಿತೆಗೆದುಕೊಂಡಿದೆ.

ಈ ಅನಾಹುತದ ಸುದ್ದಿಗಳು ಎಲ್ಲರನ್ನೂ ಕುಗ್ಗಿಸುತ್ತಿರುವಾಗಲೇ, ಶುಕ್ರವಾರ ರಾತ್ರಿ ಕಟ್ಟಡದ ಅವಶೇಷಗಳಲ್ಲಿ ಸಿಕ್ಕಿಬಿದ್ದ 10 ದಿನದ ನವಜಾತ ಶಿಶುವನ್ನು ರಕ್ಷಕರು ಹೊರತೆಗೆದಾಗ ಭರವಸೆ ಮೂಡಿಸಿದೆ.

ಮಗು ಯಾಗಿಜ್ ಉಲಾಸ್‌ನ್ನು ಥರ್ಮಲ್ ಕಂಬಳಿಯಲ್ಲಿ ಸುತ್ತಿಕೊಂಡು ಸುರಕ್ಷಿತವಾಗಿ ಫೀಲ್ಡ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ತುರ್ತು ಕಾರ್ಯಕರ್ತರು ಮಗುವಿನ ಅವನ ತಾಯಿಯನ್ನು ಸಹ ಕರೆದುಕೊಂಡು ಹೋದರು. ಮಗು ಅರೆಪ್ರಜ್ಞಾಸ್ಥಿಯಲ್ಲಿದ್ದು, ಸ್ಟ್ರೆಚರ್‌ನಲ್ಲಿ ತೆಗೆದುಕೊಂಡು ಹೋಗಲಾಯಿತು.

ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ ಗುರುವಾರ ಬೆಳಿಗ್ಗೆ, ಗಾಜಿಯಾಂಟೆಪ್‌ನಲ್ಲಿನ ಅವಶೇಷಗಳಿಂದ 6 ವರ್ಷದ ಬಾಲಕಿಯನ್ನು ಜೀವಂತವಾಗಿ ಹೊರತೆಗೆಯುವಲ್ಲಿ ಯಶಸ್ವಿಯಾದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯಿಂದ ಇಸ್ಲಾಮೋಫೋಬಿಕ್ ಹೇಳಿಕೆ : ತೀವ್ರ ಆಕ್ರೋಶ

ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ 'ಶಾಂತಿ ಸಭೆ'ಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು 'ಇಸ್ಲಾಮೋಫೋಬಿಕ್' ಹೇಳಿಕೆ ನೀಡಿರುವುದು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅಧಿಕಾರಿಯ ಹೇಳಿಕೆ ರಾಜಕೀಯ ನಾಯಕರು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...