Homeಮುಖಪುಟಟರ್ಕಿ ಮತ್ತು ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 23,831ಕ್ಕೆ ಏರಿಕೆ

ಟರ್ಕಿ ಮತ್ತು ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 23,831ಕ್ಕೆ ಏರಿಕೆ

- Advertisement -
- Advertisement -

ಸೋಮವಾರ ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ 7.8 ತೀವ್ರತೆಯ ಭೂಕಂಪದಿಂದ ಸಾವಿರಾರು ಜನರು ಪ್ರಣ ಕಳೆದುಕೊಂಡಿದ್ದಾರೆ. ಶನಿವಾರದವರೆಗೆ ಸಾವಿನ ಸಂಖ್ಯೆ 23,831ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟರ್ಕಿಯಲ್ಲಿ 20,318ಕ್ಕೂ ಜನರು ಸಾವಿಗೀಡಾಗಿದ್ದು, 80,052 ಜನರು ಗಾಯಗೊಂಡಿದ್ದಾರೆ ಎಂದು ದೇಶದ ವಿಪತ್ತು ಸಂಸ್ಥೆ ಮಾಹಿತಿ ನೀಡಿದೆ.

ಸಿರಿಯಾದಲ್ಲಿ ಒಟ್ಟು 3,513 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ವಾಯುವ್ಯ ಪ್ರದೇಶದ ಬಂಡುಕೋರರ ಹಿಡಿತದಲ್ಲಿರುವ 2,166 ಜನರ ಸಾವುಗಳಾಗಿವೆ. ಸ್ವಯಂಸೇವಕ ಸಂಸ್ಥೆ ಸಿರಿಯಾ ಸಿವಿಲ್ ಡಿಫೆನ್ಸ್ ಪ್ರಕಾರ, ಇದನ್ನು ವೈಟ್ ಹೆಲ್ಮೆಟ್ ಎಂದೂ ಕರೆಯುತ್ತಾರೆ.

ಸಿರಿಯಾದ ಸರ್ಕಾರಿ ನಿಯಂತ್ರಿತ ಭಾಗಗಳಲ್ಲಿ 1,347 ಸಾವುಗಳು ಸಂಭವಿಸಿವೆ ಎಂದು ಸಿರಿಯನ್ ರಾಜ್ಯ ಮಾಧ್ಯಮ ವರದಿ ಮಾಡಿದೆ.

ಇದನ್ನೂ ಓದಿ: ಇಂದು ಟರ್ಕಿಯಲ್ಲಿ ಮತ್ತೆ 5.6 ಭೂಕಂಪನ: 3 ತಿಂಗಳ ತುರ್ತು ಪರಿಸ್ಥಿತಿ ಘೋಷಣೆ

ಸೋಮವಾರ ಸಂಭವಿಸಿದ ಈ ವಿನಾಶಕಾರಿ ಭೂಕಂಪದಿಂದ ಮಧ್ಯಾಹ್ನದ ನಂತರ ದಕ್ಷಿಣ ಟರ್ಕಿಯಲ್ಲಿ ವ್ಯಾಪಕ ವಿನಾಶ ಉಂಟಾಯಿತು. ಹತ್ತಿರದ ದೇಶಗಳಲ್ಲೂ ಭೂಕಂಪನದ ಅನುಭವವಾಗಿದೆ.

ಈ ಭೂಕಂಪವು ಶತಮಾನದ ಏಳನೇ ಅತ್ಯಂತ ಮಾರಣಾಂತಿಕ ನೈಸರ್ಗಿಕ ವಿಕೋಪವಾಗಿದೆ. ಜಪಾನ್‌ನ 2011 ರ ಕಂಪನ, ಸುನಾಮಿ ಮತ್ತು 2003ರ ಇರಾನ್ ಭೂಕಂಪ 31,000 ಜನರನ್ನು ಬಲಿತೆಗೆದುಕೊಂಡಿದೆ.

ಈ ಅನಾಹುತದ ಸುದ್ದಿಗಳು ಎಲ್ಲರನ್ನೂ ಕುಗ್ಗಿಸುತ್ತಿರುವಾಗಲೇ, ಶುಕ್ರವಾರ ರಾತ್ರಿ ಕಟ್ಟಡದ ಅವಶೇಷಗಳಲ್ಲಿ ಸಿಕ್ಕಿಬಿದ್ದ 10 ದಿನದ ನವಜಾತ ಶಿಶುವನ್ನು ರಕ್ಷಕರು ಹೊರತೆಗೆದಾಗ ಭರವಸೆ ಮೂಡಿಸಿದೆ.

ಮಗು ಯಾಗಿಜ್ ಉಲಾಸ್‌ನ್ನು ಥರ್ಮಲ್ ಕಂಬಳಿಯಲ್ಲಿ ಸುತ್ತಿಕೊಂಡು ಸುರಕ್ಷಿತವಾಗಿ ಫೀಲ್ಡ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ತುರ್ತು ಕಾರ್ಯಕರ್ತರು ಮಗುವಿನ ಅವನ ತಾಯಿಯನ್ನು ಸಹ ಕರೆದುಕೊಂಡು ಹೋದರು. ಮಗು ಅರೆಪ್ರಜ್ಞಾಸ್ಥಿಯಲ್ಲಿದ್ದು, ಸ್ಟ್ರೆಚರ್‌ನಲ್ಲಿ ತೆಗೆದುಕೊಂಡು ಹೋಗಲಾಯಿತು.

ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ ಗುರುವಾರ ಬೆಳಿಗ್ಗೆ, ಗಾಜಿಯಾಂಟೆಪ್‌ನಲ್ಲಿನ ಅವಶೇಷಗಳಿಂದ 6 ವರ್ಷದ ಬಾಲಕಿಯನ್ನು ಜೀವಂತವಾಗಿ ಹೊರತೆಗೆಯುವಲ್ಲಿ ಯಶಸ್ವಿಯಾದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...