Homeಅಂತರಾಷ್ಟ್ರೀಯಟರ್ಕಿ ಭೂಕಂಪ: ಮೃತರ ಸಂಖ್ಯೆ 60ಕ್ಕೆ ಏರಿಕೆ, 900ಕ್ಕೂ ಹೆಚ್ಚು ಗಾಯಾಳುಗಳು

ಟರ್ಕಿ ಭೂಕಂಪ: ಮೃತರ ಸಂಖ್ಯೆ 60ಕ್ಕೆ ಏರಿಕೆ, 900ಕ್ಕೂ ಹೆಚ್ಚು ಗಾಯಾಳುಗಳು

- Advertisement -
- Advertisement -

ಟರ್ಕಿಯ ಕರಾವಳಿ ಮತ್ತು ಗ್ರೀಕ್ ದ್ವೀಪದ ಮಧ್ಯಭಾಗ ಏಜಿಯನ್ ಸಮುದ್ರದಲ್ಲಿ ಶುಕ್ರವಾರ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಮೃತರ ಸಂಖ್ಯೆ ಸುಮಾರು 60ಕ್ಕೆ ಏರಿಕೆಯಾಗಿದೆ. ಸುಮಾರು 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಭೂಕಂಪನದಿಂದ ಪಶ್ಚಿಮ ಟರ್ಕಿಯಲ್ಲಿ ಕಟ್ಟಡ ಕುಸಿದು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 70 ವರ್ಷದ ವೃದ್ಧರನ್ನು 34 ಗಂಟೆಗಳ ನಂತರ ರಕ್ಷಣಾ ಕಾರ್ಯಕರ್ತರು ಹೊರತೆಗೆದಿದ್ದಾರೆ. ಟರ್ಕಿಯ ಮೂರನೇ ಅತಿದೊಡ್ಡ ನಗರವಾದ ಇಜ್ಮಿರ್‌ನಲ್ಲಿ ಕುಸಿದಿರುವ ಮತ್ತು ಹಾನಿಗೊಳಗಾಗಿರುವ ಒಂಬತ್ತು ಕಟ್ಟಡಗಳಲ್ಲಿ ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಈ ವೇಳೆ ಒಬ್ಬ ವೃದ್ಧರನ್ನು ರಕ್ಷಣೆ ಮಾಡಲಾಗಿದೆ.

ಆದರೆ, ಬದುಕುಳಿದವರಿಗಿಂತ ಭಾನುವಾರ ಹೆಚ್ಚಿನ ಮೃತ ದೇಹಗಳನ್ನು ಕಂಡುಬರುತ್ತಿವೆ ಎಂದು ಟರ್ಕಿಯ ವಿಪತ್ತು ಮತ್ತು ತುರ್ತುಸ್ಥಿತಿ ನಿರ್ವಹಣಾ ಪ್ರೆಸಿಡೆನ್ಸಿ ತಿಳಿಸಿದೆ. ಇಜ್ಮಿರ್‌ನ ಸೆಫೆರಿಹಿಸರ್‌ನಲ್ಲಿ ಸಂಭವಿಸಿದ ಸಣ್ಣ ಸುನಾಮಿಯಲ್ಲಿ, ಗ್ರೀಕ್‌ ದ್ವೀಪದಲ್ಲಿ ಒಬ್ಬ ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಏಜಿಯನ್ ಈಶಾನ್ಯ ಭಾಗದ ಸಮೋಸ್‌ನಲ್ಲಿ ಶುಕ್ರವಾರ ಮಧ್ಯಾಹ್ನ 6.9 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದರ ಕೇಂದ್ರಬಿಂದು 16.ಕಿ.ಮೀ ಆಳದಲ್ಲಿ ಪತ್ತೆಯಾಗಿತ್ತು. ಸಮೋಸ್‌ನಲ್ಲಿ ಶುಕ್ರವಾರ ಇಬ್ಬರು ಯುವಕರು ಬಲಿಯಾಗಿದ್ದು, ಕನಿಷ್ಠ 19 ಮಂದಿ ಗಾಯಗೊಂಡಿದ್ದಾರೆ.

ಭಾನುವಾರ ಅವಶೇಷಗಳಡಿಯಿಂದ ಹೊರತೆಗೆಯಲಾಗಿರುವ 70 ವರ್ಷದ ವೃದ್ಧ ಅಹ್ಮೆತ್ ಸಿಟಿಮ್‌ “ನಾನು ಎಂದಿಗೂ ಭರವಸೆ ಕಳೆದುಕೊಂಡಿಲ್ಲ” ಎಂದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟರ್ಕಿಯ ಆರೋಗ್ಯ ಸಚಿವ ಫಹ್ರೆಟಿನ್ ಕೋಕಾ ಟ್ವೀಟ್ ಮಾಡಿದ್ದಾರೆ.

ಭೂಕಂಪದಿಂದ ಕೆಟ್ಟದಾಗಿ ಹಾನಿಗೊಳಗಿರುವ 26 ಕಟ್ಟಡಗಳನ್ನು ನೆಲಸಮ ಮಾಡಲಾಗುವುದು ಎಂದು ಟರ್ಕಿಯ ಉಪಾಧ್ಯಕ್ಷ ಫುವಾಟ್ ಒಕ್ಟೇ ಹೇಳಿದ್ದಾರೆ. ಅವಶೇಷಗಳ ಅಡಿ ಸಿಲುಕಿದವರಿಗಾಗಿ ಶೋಧಕಾರ್ಯ ಮುಂದುವರೆಯುತ್ತಿದೆ.


ಇದನ್ನೂ ಓದಿ: ಪಾಕಿಸ್ತಾನ: ಮದರಸಾದಲ್ಲಿ ಬಾಂಬ್ ಸ್ಫೋಟ, ಮಕ್ಕಳು ಸೇರಿ 7 ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...