Homeಅಂತರಾಷ್ಟ್ರೀಯಟರ್ಕಿ ಭೂಕಂಪ: ಮೃತರ ಸಂಖ್ಯೆ 60ಕ್ಕೆ ಏರಿಕೆ, 900ಕ್ಕೂ ಹೆಚ್ಚು ಗಾಯಾಳುಗಳು

ಟರ್ಕಿ ಭೂಕಂಪ: ಮೃತರ ಸಂಖ್ಯೆ 60ಕ್ಕೆ ಏರಿಕೆ, 900ಕ್ಕೂ ಹೆಚ್ಚು ಗಾಯಾಳುಗಳು

- Advertisement -
- Advertisement -

ಟರ್ಕಿಯ ಕರಾವಳಿ ಮತ್ತು ಗ್ರೀಕ್ ದ್ವೀಪದ ಮಧ್ಯಭಾಗ ಏಜಿಯನ್ ಸಮುದ್ರದಲ್ಲಿ ಶುಕ್ರವಾರ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಮೃತರ ಸಂಖ್ಯೆ ಸುಮಾರು 60ಕ್ಕೆ ಏರಿಕೆಯಾಗಿದೆ. ಸುಮಾರು 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಭೂಕಂಪನದಿಂದ ಪಶ್ಚಿಮ ಟರ್ಕಿಯಲ್ಲಿ ಕಟ್ಟಡ ಕುಸಿದು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 70 ವರ್ಷದ ವೃದ್ಧರನ್ನು 34 ಗಂಟೆಗಳ ನಂತರ ರಕ್ಷಣಾ ಕಾರ್ಯಕರ್ತರು ಹೊರತೆಗೆದಿದ್ದಾರೆ. ಟರ್ಕಿಯ ಮೂರನೇ ಅತಿದೊಡ್ಡ ನಗರವಾದ ಇಜ್ಮಿರ್‌ನಲ್ಲಿ ಕುಸಿದಿರುವ ಮತ್ತು ಹಾನಿಗೊಳಗಾಗಿರುವ ಒಂಬತ್ತು ಕಟ್ಟಡಗಳಲ್ಲಿ ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಈ ವೇಳೆ ಒಬ್ಬ ವೃದ್ಧರನ್ನು ರಕ್ಷಣೆ ಮಾಡಲಾಗಿದೆ.

ಆದರೆ, ಬದುಕುಳಿದವರಿಗಿಂತ ಭಾನುವಾರ ಹೆಚ್ಚಿನ ಮೃತ ದೇಹಗಳನ್ನು ಕಂಡುಬರುತ್ತಿವೆ ಎಂದು ಟರ್ಕಿಯ ವಿಪತ್ತು ಮತ್ತು ತುರ್ತುಸ್ಥಿತಿ ನಿರ್ವಹಣಾ ಪ್ರೆಸಿಡೆನ್ಸಿ ತಿಳಿಸಿದೆ. ಇಜ್ಮಿರ್‌ನ ಸೆಫೆರಿಹಿಸರ್‌ನಲ್ಲಿ ಸಂಭವಿಸಿದ ಸಣ್ಣ ಸುನಾಮಿಯಲ್ಲಿ, ಗ್ರೀಕ್‌ ದ್ವೀಪದಲ್ಲಿ ಒಬ್ಬ ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಏಜಿಯನ್ ಈಶಾನ್ಯ ಭಾಗದ ಸಮೋಸ್‌ನಲ್ಲಿ ಶುಕ್ರವಾರ ಮಧ್ಯಾಹ್ನ 6.9 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದರ ಕೇಂದ್ರಬಿಂದು 16.ಕಿ.ಮೀ ಆಳದಲ್ಲಿ ಪತ್ತೆಯಾಗಿತ್ತು. ಸಮೋಸ್‌ನಲ್ಲಿ ಶುಕ್ರವಾರ ಇಬ್ಬರು ಯುವಕರು ಬಲಿಯಾಗಿದ್ದು, ಕನಿಷ್ಠ 19 ಮಂದಿ ಗಾಯಗೊಂಡಿದ್ದಾರೆ.

ಭಾನುವಾರ ಅವಶೇಷಗಳಡಿಯಿಂದ ಹೊರತೆಗೆಯಲಾಗಿರುವ 70 ವರ್ಷದ ವೃದ್ಧ ಅಹ್ಮೆತ್ ಸಿಟಿಮ್‌ “ನಾನು ಎಂದಿಗೂ ಭರವಸೆ ಕಳೆದುಕೊಂಡಿಲ್ಲ” ಎಂದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟರ್ಕಿಯ ಆರೋಗ್ಯ ಸಚಿವ ಫಹ್ರೆಟಿನ್ ಕೋಕಾ ಟ್ವೀಟ್ ಮಾಡಿದ್ದಾರೆ.

ಭೂಕಂಪದಿಂದ ಕೆಟ್ಟದಾಗಿ ಹಾನಿಗೊಳಗಿರುವ 26 ಕಟ್ಟಡಗಳನ್ನು ನೆಲಸಮ ಮಾಡಲಾಗುವುದು ಎಂದು ಟರ್ಕಿಯ ಉಪಾಧ್ಯಕ್ಷ ಫುವಾಟ್ ಒಕ್ಟೇ ಹೇಳಿದ್ದಾರೆ. ಅವಶೇಷಗಳ ಅಡಿ ಸಿಲುಕಿದವರಿಗಾಗಿ ಶೋಧಕಾರ್ಯ ಮುಂದುವರೆಯುತ್ತಿದೆ.


ಇದನ್ನೂ ಓದಿ: ಪಾಕಿಸ್ತಾನ: ಮದರಸಾದಲ್ಲಿ ಬಾಂಬ್ ಸ್ಫೋಟ, ಮಕ್ಕಳು ಸೇರಿ 7 ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...