Homeಅಂತರಾಷ್ಟ್ರೀಯಟರ್ಕಿ ಭೂಕಂಪ: ಮೃತರ ಸಂಖ್ಯೆ 60ಕ್ಕೆ ಏರಿಕೆ, 900ಕ್ಕೂ ಹೆಚ್ಚು ಗಾಯಾಳುಗಳು

ಟರ್ಕಿ ಭೂಕಂಪ: ಮೃತರ ಸಂಖ್ಯೆ 60ಕ್ಕೆ ಏರಿಕೆ, 900ಕ್ಕೂ ಹೆಚ್ಚು ಗಾಯಾಳುಗಳು

- Advertisement -
- Advertisement -

ಟರ್ಕಿಯ ಕರಾವಳಿ ಮತ್ತು ಗ್ರೀಕ್ ದ್ವೀಪದ ಮಧ್ಯಭಾಗ ಏಜಿಯನ್ ಸಮುದ್ರದಲ್ಲಿ ಶುಕ್ರವಾರ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಮೃತರ ಸಂಖ್ಯೆ ಸುಮಾರು 60ಕ್ಕೆ ಏರಿಕೆಯಾಗಿದೆ. ಸುಮಾರು 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಭೂಕಂಪನದಿಂದ ಪಶ್ಚಿಮ ಟರ್ಕಿಯಲ್ಲಿ ಕಟ್ಟಡ ಕುಸಿದು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 70 ವರ್ಷದ ವೃದ್ಧರನ್ನು 34 ಗಂಟೆಗಳ ನಂತರ ರಕ್ಷಣಾ ಕಾರ್ಯಕರ್ತರು ಹೊರತೆಗೆದಿದ್ದಾರೆ. ಟರ್ಕಿಯ ಮೂರನೇ ಅತಿದೊಡ್ಡ ನಗರವಾದ ಇಜ್ಮಿರ್‌ನಲ್ಲಿ ಕುಸಿದಿರುವ ಮತ್ತು ಹಾನಿಗೊಳಗಾಗಿರುವ ಒಂಬತ್ತು ಕಟ್ಟಡಗಳಲ್ಲಿ ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಈ ವೇಳೆ ಒಬ್ಬ ವೃದ್ಧರನ್ನು ರಕ್ಷಣೆ ಮಾಡಲಾಗಿದೆ.

ಆದರೆ, ಬದುಕುಳಿದವರಿಗಿಂತ ಭಾನುವಾರ ಹೆಚ್ಚಿನ ಮೃತ ದೇಹಗಳನ್ನು ಕಂಡುಬರುತ್ತಿವೆ ಎಂದು ಟರ್ಕಿಯ ವಿಪತ್ತು ಮತ್ತು ತುರ್ತುಸ್ಥಿತಿ ನಿರ್ವಹಣಾ ಪ್ರೆಸಿಡೆನ್ಸಿ ತಿಳಿಸಿದೆ. ಇಜ್ಮಿರ್‌ನ ಸೆಫೆರಿಹಿಸರ್‌ನಲ್ಲಿ ಸಂಭವಿಸಿದ ಸಣ್ಣ ಸುನಾಮಿಯಲ್ಲಿ, ಗ್ರೀಕ್‌ ದ್ವೀಪದಲ್ಲಿ ಒಬ್ಬ ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಏಜಿಯನ್ ಈಶಾನ್ಯ ಭಾಗದ ಸಮೋಸ್‌ನಲ್ಲಿ ಶುಕ್ರವಾರ ಮಧ್ಯಾಹ್ನ 6.9 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದರ ಕೇಂದ್ರಬಿಂದು 16.ಕಿ.ಮೀ ಆಳದಲ್ಲಿ ಪತ್ತೆಯಾಗಿತ್ತು. ಸಮೋಸ್‌ನಲ್ಲಿ ಶುಕ್ರವಾರ ಇಬ್ಬರು ಯುವಕರು ಬಲಿಯಾಗಿದ್ದು, ಕನಿಷ್ಠ 19 ಮಂದಿ ಗಾಯಗೊಂಡಿದ್ದಾರೆ.

ಭಾನುವಾರ ಅವಶೇಷಗಳಡಿಯಿಂದ ಹೊರತೆಗೆಯಲಾಗಿರುವ 70 ವರ್ಷದ ವೃದ್ಧ ಅಹ್ಮೆತ್ ಸಿಟಿಮ್‌ “ನಾನು ಎಂದಿಗೂ ಭರವಸೆ ಕಳೆದುಕೊಂಡಿಲ್ಲ” ಎಂದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟರ್ಕಿಯ ಆರೋಗ್ಯ ಸಚಿವ ಫಹ್ರೆಟಿನ್ ಕೋಕಾ ಟ್ವೀಟ್ ಮಾಡಿದ್ದಾರೆ.

ಭೂಕಂಪದಿಂದ ಕೆಟ್ಟದಾಗಿ ಹಾನಿಗೊಳಗಿರುವ 26 ಕಟ್ಟಡಗಳನ್ನು ನೆಲಸಮ ಮಾಡಲಾಗುವುದು ಎಂದು ಟರ್ಕಿಯ ಉಪಾಧ್ಯಕ್ಷ ಫುವಾಟ್ ಒಕ್ಟೇ ಹೇಳಿದ್ದಾರೆ. ಅವಶೇಷಗಳ ಅಡಿ ಸಿಲುಕಿದವರಿಗಾಗಿ ಶೋಧಕಾರ್ಯ ಮುಂದುವರೆಯುತ್ತಿದೆ.


ಇದನ್ನೂ ಓದಿ: ಪಾಕಿಸ್ತಾನ: ಮದರಸಾದಲ್ಲಿ ಬಾಂಬ್ ಸ್ಫೋಟ, ಮಕ್ಕಳು ಸೇರಿ 7 ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...