Homeಮುಖಪುಟಠೀವಿ ಬಂದು ಮಾಡಿ, ರುವಾಂಡ ಮಾದರಿ ನೋಡಿದರೆ ನಮ್ಮ ದೇಶ ಉಳಿತ್ತೈತೆ

ಠೀವಿ ಬಂದು ಮಾಡಿ, ರುವಾಂಡ ಮಾದರಿ ನೋಡಿದರೆ ನಮ್ಮ ದೇಶ ಉಳಿತ್ತೈತೆ

- Advertisement -
- Advertisement -

ಸಾಮಾನ್ಯ ಭಾರತೀಯನಿಗಿಂತ ಹೆಚ್ಚು ಎತ್ತರದಾಗ ತೇಲಾಡೋ ಹೀರೋ ಅಮಿತಾಬ ಬಚ್ಚನ ಅವರು ʻಹಮ್ʼ (ನಾವು) ಅಂತ ಒಂದು ಪಿಚ್ಚರು ಮಾಡಿದ್ದರು. ಅದರಾಗ ಒಂದು ಡಯಲಾಗು ಇತ್ತು. ʻʻʻದೇಖೋ ಗೊನಸಾಲ್ವಿಸ್. ಇಸ್ ದುನಿಯಾ ಮೆ ದೊ ತರಹ ಕಾ ಕೀಡಾ ಹೋತಾ ಹೈ,ʼʼ ಅಂತ ಶುರು ಆಗುವ ಆ ಮಾತು ಬಹಳ ಜನಪ್ರಿಯವಾಗಿತ್ತು.

ʻʻಎಕ್ ವೊ ಜೊ ಕಚರೇ ಸೆ ಉಠತಾ ಹೈ. ದೂಸರಾ ಪಾಪ ಕಿ ಗಂದಗೀ ಸೆ ಉಠತಾ ಹೈ. ಕಚರೇ ಕಾ ಕೀಡಾ ಇನ್ಸಾನ ಕೋ ಬೀಮಾರ ಕರತಾ ಹೈ. ಲೆಕಿನ್ ಪಾಪ ಕಿ ಗಂದಗೀ ಸೆ ನಿಕಲನೆ ವಾಲಾ ಕೀಡಾ ಪೂರೆ ಸಮಾಜ ಕೊ ಬೀಮಾರ ಕರತಾ ಹೈ. ಕಚರೇ ಕಾ ಕೀಡಾ ಮಾರನೆ ಕೆ ಲಿಯೆ ಫ್ಲಿಟ್ ಬಾಜಾರ್ ಮೆ ಮಿಲತಾ ಹೈ. ಲೆಕಿನ ಪಾಪ ಕಿ ಗಂದಗೀ ಕಾ ಕೀಡಾ ಮಾರನೆ ಕೆ ಲಿಯೆ ಸಾಲಾ ಫ್ಲಿಟ್ ಅಭೀ ತಕ ಬನಾ ನಹೀಂʼʼ ಸಮಾಜದಲ್ಲಿರುವುದು ಎರಡು ರೀತಿಯ ಕ್ರಿಮಿ. ಒಂದು ಕಸದಿಂದ ಬರುವುದು, ಇನ್ನೊಂದು ಪಾಪದಿಂದ ಹುಟ್ಟುವುದು. ಮೊದಲನೆಯದರಿಂದ ಮನುಷ್ಯರಿಗೆ ರೋಗ ಬಂದರೆ ಎರಡನೇಯದರಿಂದ ಇಡೀ ಸಮಾಜಕ್ಕೆ ರೋಗ ಬರತದೆ. ಒಂದನೇಯದಕ್ಕೆ ಔಷಧಿ ಇದೆ. ಇನ್ನೊಂದಕ್ಕಿಲ್ಲ,ʼʼ ಅಂತ.

 

ಇವತ್ತು ನಮ್ಮೆದುರಿಗೆ ಇರುವುದು ಸಹ ಎರಡು – ಕೊರೋನಾ ಕ್ರಿಮಿ ಮತ್ತು ಕೋಮು ಕ್ರಿಮಿ. ಕೊರೋನಾ ರೋಗಿಷ್ಟರ ಕೆಮ್ಮು – ಕಫಾದಾಗ ಇದ್ದರ. ಎರಡನೇದು ಠೀವಿ ಗೂಟಗಳ (ಟೀವಿ ಆಂಕರುಗಳ) ಒದರಿಕೆಯಿಂದ ಬರತೇತಿ. ಕೊರೋನಾ ಬರಾಕ ನೀವು ರೋಗಿ ಎದರಿಗೆ ಇರಬೇಕು. ಎರಡನೇದು ಬರಾಕ ನಿಮ್ಮ ಮನ್ಯಾಗ ಠೀವಿ ಇದ್ದರ ಸಾಕು. ನೀವು ಅದರ ಎದರಿಗೆ ಇರಬೇಕು ಅಂತ ಏನಿಲ್ಲ.


ಇದನ್ನೂ ಓದಿ: ಆನಿ ಬಂದವು ಆನಿ ಎರಡೆರಡು ಆನಿ – ಒಂದು ಅಂಬಾನಿ, ಇನ್ನೊಂದು ಅಡಾನಿ


ಇಂತ ದುರಿತ ಕಾಲದಾಗ ಅವರ ಕೆಲಸ ಏನಪಾ ಅಂದರ ಜನರ ಅಂಜಿಕಿ ಕಮ್ಮಿ ಮಾಡೋದು. ಆದರ ಅವರು ಏನು ಮಾಡಾಕ ಹತ್ಯಾರು ಅಂದರ ಜನರ ಅಂಜಿಕಿ ಜಾಸ್ತಿ ಮಾಡಾಕ ಹತ್ಯಾರು. ಹೆದರಿದವರ ಮ್ಯಾಗ ಹಲ್ಲಿ ಒಗದಿದ್ದರು ಅಂದಂಗ ಇಲ್ಲದ್ದು – ಬಿಟ್ಟದ್ದು ಎಲ್ಲಾ ಹುಡಿಕಿ ಹುಡಿಕಿ ಮಂದೀಗೆ ಹೆದರಸಾಕ ಹತ್ಯಾರು.

ಅವರು ರೋಗದ ಬಗ್ಗೆ- ವೈರಸ್ಸ ಬಗ್ಗೆ ತಪ್ಪು ಮಾಹಿತಿ ಕೊಡತಾರು. ಮತ್ತ ಆ ನೆವದಿಂದ ಜನಾಂಗೀಯ ದ್ವೇಷ ಹುಟ್ಟಸಾಕ- ಹೆಚ್ಚು ಮಾಡಾಕ ಕುಂತಾರು.

ನಮ್ಮ ಒಳಗ ಇದ್ದಿರಬಹುದಾದ ದ್ವೇಷ ಹೊಡದ ಎಬ್ಬಸಾಕ ಹತ್ಯಾರು. ಅವರಿಗೆ ಏನು ಗೊತ್ತಿಲ್ಲಾ ಅಂದರ ಒಂದ ಸಲಾ ಇದು ಸುರು ಆತಂದರ ಅದನ್ನ ನಿಲ್ಲಸಾಕ ಆಗಂಗಿಲ್ಲ. ಅದಕ್ಕ ದಿನಾ ಸಂಜೀಕೆ ನರಬಲಿ ಕೊಡಬೇಕು. ಕಡೀಕೆ ಅದು ಫ್ರಾಂಕೆನ್ ಸ್ಟೈನ್ ರಾಕ್ಷಸನ ಗತೆ, ತಮ್ಮ ಸೃಷ್ಟಿ ಮಾಡಿದವರನ್ನ ತಿಂದು ಬಿಡತೇತಿ.

ಹದಿನೈದನೇ ಶತಮಾನದ ಸಂತ ನಾರ್ಸಿ ಮೆಹತಾ ಅವರ ಭಜನೆಯ ಆಶಯದಂತೆ ಆ ಭಗವಂತ ನಮಗೂ ಅವರಿಗೂ, ಸಬಕೋ ಸನ್ಮತಿ ಕೊಡಲಿ.

ಈ ಕೀಲಿ ಕಿಟಕ್ಕಿನ್ಯಾಗ ಎಲ್ಲಾರೂ ಪಿಚ್ಚರು ನೋಡಾಕ ಹತ್ಯಾರು. ನೀವು ಸಹಿತ ʻಇಂಗೋಮಾನ್ಷಯಾʼ (ಸಿಹಿ ಕನಸು) ಅನ್ನುವ ಒಂದು ಸಾಕ್ಷ ಚಿತ್ರ ಸಿಕ್ಕರೆ ನೋಡ್ರಿ. ಅದು ರುವಾಂಡ ದೇಶದಲ್ಲಿ 1994 ರಾಗ ನಡೆದ ನರಮೇಧದ ನಂತರ ಹುಟು ಮತ್ತು ಟುಟ್ಸಿ ಎಂಬ ವಿರೋಧಿ ಜನಾಂಗೀಯ ಗುಂಪುಗಳ ಹೆಣ್ಣು ಮಕ್ಕಳು ಕೂಡಿ ಒಂದು ಡೊಳ್ಳು ಕುಣಿತದ ತಂಡ ಹಾಗೂ ಒಂದು ಐಸ್ ಕ್ರೀಮು ಅಂಗಡಿ ಹಾಕಿ ಒಗ್ಗಟ್ಟು ಸಾರಿದ್ದರ ಬಗ್ಗೆ ಐತಿ. ಅದನ್ನ ಮಾಡಾಕ ಕೀಕೀ ಅನ್ನೋ ಪಾಪ್ ಹಾಡುಗಾರ್ತಿ ಅವರಿಗೆ ಹುರಿದುಂಬಸತಾಳು.

ಇದರ ಹಿನ್ನೆಲೆ ಎನಂದರ 1994 ಬೇಸಿಗೆಯೊಳಗ ಮಧ್ಯ ಆಫ್ರಿಕಾದ ಸಣ್ಣ ದೇಶ ರುವಾಂಡದಾಗ ಹುಟು ಹಾಗೂ ಟುಟ್ಸಿ ಅವರ ನಡುವೆ ಜನಾಂಗೀಯ ಕದನ ನಡೀತು. ಬಹುಸಂಖ್ಯಾತ ಹುಟುರವರಲ್ಲಿನ ಉಗ್ರವಾದಿಗಳು ಅಲ್ಪ ಸಂಖ್ಯಾತ ಟುಟ್ಸಿ ಹಾಗೂ ಸೌಮ್ಯವಾದಿ ಹುಟು ಜನರನ್ನ ಕೊಂದರು. ಅಸಂಖ್ಯ ಜನ ಸತ್ತರು, ಎಷ್ಟೋ ಜನ ನಾಪತ್ತೆಯಾದರು, ಹಲವರು ವಿದೇಶಗಳಿಗೆ ಓಡಿ ಹೋದರು.


ಇದನ್ನೂ ಓದಿ:  ಜನ ಏನ್‌ ಮಾಡ್ಬೇಕು ಅಂತ ಹೇಳ್ತಿರೋ ಸರ್ಕಾರ ತಾನೇನು ಮಾಡಿದೀನಿ ಅಂತನೇ ಹೇಳ್ತಿಲ್ಲ?


ನಿನ್ನೆ ಮೊನ್ನೆ ನೆರೆಹೊರೆಯವರಾಗಿದ್ದ ಜನರನ್ನ ರಕ್ತ ಪಿಪಾಸುಗಳಾಗುವಂತೆ ಮಾಡಿದ್ದು ಯಾರಂದರ ರುವಾಂಡ ರೇಡಿಯೋದ ಪತ್ರಕರ್ತರು. ʻಟುಟ್ಸಿಗಳು ವಿಷದ ಹಾವು – ಚೇಳು- ಜಿರಲೆ. ಅವರನ್ನು ಕೊಲ್ಲಿರಿ. ದೇವರು ನಿಮಗೆ ಶಹಬ್ಬಾಸು ಗಿರಿ ಕೊಡತಾನೆ. ಚಿಕ್ಕ ಮಕ್ಕಳು ಅಂತ ಬಿಡಬೇಡಿ, ಹಾವುಗಳಲ್ಲಿ ಹುಟ್ಟಿನಿಂದ ವಿಷ ತುಂಬಿರತದೆʼ ಅಂತ ಇಪ್ಪತ್ನಾಕು ತಾಸು ಪ್ರಸಾರ ಮಾಡಿದರು.

ಆರು ವರ್ಷಗಳ ಹಿಂಸೆ- ಕ್ಷಾಮ- ದುರಾಡಳಿತದ ನಂತರ ಚುನಾವಣೆಯಾಗಿ ರುವಾಂಡದಾಗ ಶಾಂತಿ ಪ್ರಿಯ ಸರಕಾರ ಬಂತು. ಈಗ ಆಫ್ರಿಕಾ ಖಂಡದ 54 ದೇಶಗಳೊಳಗ ಅತಿ ವೇಗವಾಗಿ ಬೆಳೆಯುತ್ತಿರುವ ದೇಶ ರವಾಂಡ. ಟುಟ್ಸಿ ರಾಜಮನೆತನಕ್ಕ ಸೇರಿದ ಅದರ ಅಧ್ಯಕ್ಷ ಪಾಲ ಕಗಾಮೆ ಎಲ್ಲಾ ಜನಾಂಗಗಳನ್ನು ಜೊತೆಯಲ್ಲಿ ಸೇರಿಸಿ ಕರೆದುಕೊಂಡು ಹೋಗುವ ಮಾತಾಡತಾನು. ಅಲ್ಲಿನ ಸಂಸತ್ತಿನಲ್ಲಿ ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆದಾಗ ಅದಾರು. ಅರಣ್ಯ – ವನ್ಯಜೀವಿ ರಕ್ಷಣೆ ಛಲೋ ಮಾಡತಾರು ಅಂತ ಹೇಳಿ ಅವರಿಗೆ ಪ್ರಶಸ್ತಿ ಕೊಟ್ಟೇತಿ. ರೇಡಿಯೋ ರವಾಂಡಾದ ಕೆಲವು (ಅನೌನ್ಸರು) ಕಿರಚಾಟಿಗಳ ಮ್ಯಾಲೆ ಮೊಕದ್ದಮೆ ನಡದು ಜೈಲಿಗೆ ಹೋಗ್ಯಾರು. ಅದರಾಗಿನ ಕಾರ್ಯಕ್ರಮದ ಗುಣಮಟ್ಟ ಬ್ಯಾರೆ ಈಗ ಆಗೇತಿ.

ನಮ್ಮ ಮಾಧ್ಯಮಗಳು ಈ ಭೂಮಿಯನ್ನ ಸ್ವರ್ಗ ಮಾಡೋದು ಹೋಗಲಿ. ನರಕಾ ಅಂತೂ ಮಾಡಬಾರದು ಅಂತ ಹೇಳಿ ರಘುಪತಿ ರಾಘವನಲ್ಲೆ ಪ್ರಾರ್ಥನೆ ಮಾಡೋಣು. ಅದರಕಿಂತಾ ಮೊದಲಿಗೆ ಠೀವಿ ಬಂದು ಮಾಡೋಣು, ಅಲ್ಲವೇ ಮನೋಲ್ಲಾಸಿನಿ?


ಇದನ್ನೂ ಓದಿ: ಖಾಲಿ ಹೊಟ್ಟಿಗಿಂತಾ ಖಾಲಿ ಮೆದುಳು ಭಾಳ ಅಪಾಯಕಾರಿ. ಆದರೆ ಸರಕಾರ ಹಾಗೂ ಮಾಧ್ಯಮ ಎರಡೂ ಸರಿಯಾಗಿಲ್ಲ

ವಿಡಿಯೊ ನೋಡಿ: ಕೊರೊನಾಗೆ ಚಿಕಿತ್ಸೆ ಏನು? ವ್ಯಾಕ್ಸೀನ್‌ ತಯಾರಿ ಎಲ್ಲಿಯವರೆಗೆ ಬಂದಿದೆ? ಅಂತಿಮ ಪರಿಹಾರ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...