Homeಮುಖಪುಟಠೀವಿ ಬಂದು ಮಾಡಿ, ರುವಾಂಡ ಮಾದರಿ ನೋಡಿದರೆ ನಮ್ಮ ದೇಶ ಉಳಿತ್ತೈತೆ

ಠೀವಿ ಬಂದು ಮಾಡಿ, ರುವಾಂಡ ಮಾದರಿ ನೋಡಿದರೆ ನಮ್ಮ ದೇಶ ಉಳಿತ್ತೈತೆ

- Advertisement -
- Advertisement -

ಸಾಮಾನ್ಯ ಭಾರತೀಯನಿಗಿಂತ ಹೆಚ್ಚು ಎತ್ತರದಾಗ ತೇಲಾಡೋ ಹೀರೋ ಅಮಿತಾಬ ಬಚ್ಚನ ಅವರು ʻಹಮ್ʼ (ನಾವು) ಅಂತ ಒಂದು ಪಿಚ್ಚರು ಮಾಡಿದ್ದರು. ಅದರಾಗ ಒಂದು ಡಯಲಾಗು ಇತ್ತು. ʻʻʻದೇಖೋ ಗೊನಸಾಲ್ವಿಸ್. ಇಸ್ ದುನಿಯಾ ಮೆ ದೊ ತರಹ ಕಾ ಕೀಡಾ ಹೋತಾ ಹೈ,ʼʼ ಅಂತ ಶುರು ಆಗುವ ಆ ಮಾತು ಬಹಳ ಜನಪ್ರಿಯವಾಗಿತ್ತು.

ʻʻಎಕ್ ವೊ ಜೊ ಕಚರೇ ಸೆ ಉಠತಾ ಹೈ. ದೂಸರಾ ಪಾಪ ಕಿ ಗಂದಗೀ ಸೆ ಉಠತಾ ಹೈ. ಕಚರೇ ಕಾ ಕೀಡಾ ಇನ್ಸಾನ ಕೋ ಬೀಮಾರ ಕರತಾ ಹೈ. ಲೆಕಿನ್ ಪಾಪ ಕಿ ಗಂದಗೀ ಸೆ ನಿಕಲನೆ ವಾಲಾ ಕೀಡಾ ಪೂರೆ ಸಮಾಜ ಕೊ ಬೀಮಾರ ಕರತಾ ಹೈ. ಕಚರೇ ಕಾ ಕೀಡಾ ಮಾರನೆ ಕೆ ಲಿಯೆ ಫ್ಲಿಟ್ ಬಾಜಾರ್ ಮೆ ಮಿಲತಾ ಹೈ. ಲೆಕಿನ ಪಾಪ ಕಿ ಗಂದಗೀ ಕಾ ಕೀಡಾ ಮಾರನೆ ಕೆ ಲಿಯೆ ಸಾಲಾ ಫ್ಲಿಟ್ ಅಭೀ ತಕ ಬನಾ ನಹೀಂʼʼ ಸಮಾಜದಲ್ಲಿರುವುದು ಎರಡು ರೀತಿಯ ಕ್ರಿಮಿ. ಒಂದು ಕಸದಿಂದ ಬರುವುದು, ಇನ್ನೊಂದು ಪಾಪದಿಂದ ಹುಟ್ಟುವುದು. ಮೊದಲನೆಯದರಿಂದ ಮನುಷ್ಯರಿಗೆ ರೋಗ ಬಂದರೆ ಎರಡನೇಯದರಿಂದ ಇಡೀ ಸಮಾಜಕ್ಕೆ ರೋಗ ಬರತದೆ. ಒಂದನೇಯದಕ್ಕೆ ಔಷಧಿ ಇದೆ. ಇನ್ನೊಂದಕ್ಕಿಲ್ಲ,ʼʼ ಅಂತ.

 

ಇವತ್ತು ನಮ್ಮೆದುರಿಗೆ ಇರುವುದು ಸಹ ಎರಡು – ಕೊರೋನಾ ಕ್ರಿಮಿ ಮತ್ತು ಕೋಮು ಕ್ರಿಮಿ. ಕೊರೋನಾ ರೋಗಿಷ್ಟರ ಕೆಮ್ಮು – ಕಫಾದಾಗ ಇದ್ದರ. ಎರಡನೇದು ಠೀವಿ ಗೂಟಗಳ (ಟೀವಿ ಆಂಕರುಗಳ) ಒದರಿಕೆಯಿಂದ ಬರತೇತಿ. ಕೊರೋನಾ ಬರಾಕ ನೀವು ರೋಗಿ ಎದರಿಗೆ ಇರಬೇಕು. ಎರಡನೇದು ಬರಾಕ ನಿಮ್ಮ ಮನ್ಯಾಗ ಠೀವಿ ಇದ್ದರ ಸಾಕು. ನೀವು ಅದರ ಎದರಿಗೆ ಇರಬೇಕು ಅಂತ ಏನಿಲ್ಲ.


ಇದನ್ನೂ ಓದಿ: ಆನಿ ಬಂದವು ಆನಿ ಎರಡೆರಡು ಆನಿ – ಒಂದು ಅಂಬಾನಿ, ಇನ್ನೊಂದು ಅಡಾನಿ


ಇಂತ ದುರಿತ ಕಾಲದಾಗ ಅವರ ಕೆಲಸ ಏನಪಾ ಅಂದರ ಜನರ ಅಂಜಿಕಿ ಕಮ್ಮಿ ಮಾಡೋದು. ಆದರ ಅವರು ಏನು ಮಾಡಾಕ ಹತ್ಯಾರು ಅಂದರ ಜನರ ಅಂಜಿಕಿ ಜಾಸ್ತಿ ಮಾಡಾಕ ಹತ್ಯಾರು. ಹೆದರಿದವರ ಮ್ಯಾಗ ಹಲ್ಲಿ ಒಗದಿದ್ದರು ಅಂದಂಗ ಇಲ್ಲದ್ದು – ಬಿಟ್ಟದ್ದು ಎಲ್ಲಾ ಹುಡಿಕಿ ಹುಡಿಕಿ ಮಂದೀಗೆ ಹೆದರಸಾಕ ಹತ್ಯಾರು.

ಅವರು ರೋಗದ ಬಗ್ಗೆ- ವೈರಸ್ಸ ಬಗ್ಗೆ ತಪ್ಪು ಮಾಹಿತಿ ಕೊಡತಾರು. ಮತ್ತ ಆ ನೆವದಿಂದ ಜನಾಂಗೀಯ ದ್ವೇಷ ಹುಟ್ಟಸಾಕ- ಹೆಚ್ಚು ಮಾಡಾಕ ಕುಂತಾರು.

ನಮ್ಮ ಒಳಗ ಇದ್ದಿರಬಹುದಾದ ದ್ವೇಷ ಹೊಡದ ಎಬ್ಬಸಾಕ ಹತ್ಯಾರು. ಅವರಿಗೆ ಏನು ಗೊತ್ತಿಲ್ಲಾ ಅಂದರ ಒಂದ ಸಲಾ ಇದು ಸುರು ಆತಂದರ ಅದನ್ನ ನಿಲ್ಲಸಾಕ ಆಗಂಗಿಲ್ಲ. ಅದಕ್ಕ ದಿನಾ ಸಂಜೀಕೆ ನರಬಲಿ ಕೊಡಬೇಕು. ಕಡೀಕೆ ಅದು ಫ್ರಾಂಕೆನ್ ಸ್ಟೈನ್ ರಾಕ್ಷಸನ ಗತೆ, ತಮ್ಮ ಸೃಷ್ಟಿ ಮಾಡಿದವರನ್ನ ತಿಂದು ಬಿಡತೇತಿ.

ಹದಿನೈದನೇ ಶತಮಾನದ ಸಂತ ನಾರ್ಸಿ ಮೆಹತಾ ಅವರ ಭಜನೆಯ ಆಶಯದಂತೆ ಆ ಭಗವಂತ ನಮಗೂ ಅವರಿಗೂ, ಸಬಕೋ ಸನ್ಮತಿ ಕೊಡಲಿ.

ಈ ಕೀಲಿ ಕಿಟಕ್ಕಿನ್ಯಾಗ ಎಲ್ಲಾರೂ ಪಿಚ್ಚರು ನೋಡಾಕ ಹತ್ಯಾರು. ನೀವು ಸಹಿತ ʻಇಂಗೋಮಾನ್ಷಯಾʼ (ಸಿಹಿ ಕನಸು) ಅನ್ನುವ ಒಂದು ಸಾಕ್ಷ ಚಿತ್ರ ಸಿಕ್ಕರೆ ನೋಡ್ರಿ. ಅದು ರುವಾಂಡ ದೇಶದಲ್ಲಿ 1994 ರಾಗ ನಡೆದ ನರಮೇಧದ ನಂತರ ಹುಟು ಮತ್ತು ಟುಟ್ಸಿ ಎಂಬ ವಿರೋಧಿ ಜನಾಂಗೀಯ ಗುಂಪುಗಳ ಹೆಣ್ಣು ಮಕ್ಕಳು ಕೂಡಿ ಒಂದು ಡೊಳ್ಳು ಕುಣಿತದ ತಂಡ ಹಾಗೂ ಒಂದು ಐಸ್ ಕ್ರೀಮು ಅಂಗಡಿ ಹಾಕಿ ಒಗ್ಗಟ್ಟು ಸಾರಿದ್ದರ ಬಗ್ಗೆ ಐತಿ. ಅದನ್ನ ಮಾಡಾಕ ಕೀಕೀ ಅನ್ನೋ ಪಾಪ್ ಹಾಡುಗಾರ್ತಿ ಅವರಿಗೆ ಹುರಿದುಂಬಸತಾಳು.

ಇದರ ಹಿನ್ನೆಲೆ ಎನಂದರ 1994 ಬೇಸಿಗೆಯೊಳಗ ಮಧ್ಯ ಆಫ್ರಿಕಾದ ಸಣ್ಣ ದೇಶ ರುವಾಂಡದಾಗ ಹುಟು ಹಾಗೂ ಟುಟ್ಸಿ ಅವರ ನಡುವೆ ಜನಾಂಗೀಯ ಕದನ ನಡೀತು. ಬಹುಸಂಖ್ಯಾತ ಹುಟುರವರಲ್ಲಿನ ಉಗ್ರವಾದಿಗಳು ಅಲ್ಪ ಸಂಖ್ಯಾತ ಟುಟ್ಸಿ ಹಾಗೂ ಸೌಮ್ಯವಾದಿ ಹುಟು ಜನರನ್ನ ಕೊಂದರು. ಅಸಂಖ್ಯ ಜನ ಸತ್ತರು, ಎಷ್ಟೋ ಜನ ನಾಪತ್ತೆಯಾದರು, ಹಲವರು ವಿದೇಶಗಳಿಗೆ ಓಡಿ ಹೋದರು.


ಇದನ್ನೂ ಓದಿ:  ಜನ ಏನ್‌ ಮಾಡ್ಬೇಕು ಅಂತ ಹೇಳ್ತಿರೋ ಸರ್ಕಾರ ತಾನೇನು ಮಾಡಿದೀನಿ ಅಂತನೇ ಹೇಳ್ತಿಲ್ಲ?


ನಿನ್ನೆ ಮೊನ್ನೆ ನೆರೆಹೊರೆಯವರಾಗಿದ್ದ ಜನರನ್ನ ರಕ್ತ ಪಿಪಾಸುಗಳಾಗುವಂತೆ ಮಾಡಿದ್ದು ಯಾರಂದರ ರುವಾಂಡ ರೇಡಿಯೋದ ಪತ್ರಕರ್ತರು. ʻಟುಟ್ಸಿಗಳು ವಿಷದ ಹಾವು – ಚೇಳು- ಜಿರಲೆ. ಅವರನ್ನು ಕೊಲ್ಲಿರಿ. ದೇವರು ನಿಮಗೆ ಶಹಬ್ಬಾಸು ಗಿರಿ ಕೊಡತಾನೆ. ಚಿಕ್ಕ ಮಕ್ಕಳು ಅಂತ ಬಿಡಬೇಡಿ, ಹಾವುಗಳಲ್ಲಿ ಹುಟ್ಟಿನಿಂದ ವಿಷ ತುಂಬಿರತದೆʼ ಅಂತ ಇಪ್ಪತ್ನಾಕು ತಾಸು ಪ್ರಸಾರ ಮಾಡಿದರು.

ಆರು ವರ್ಷಗಳ ಹಿಂಸೆ- ಕ್ಷಾಮ- ದುರಾಡಳಿತದ ನಂತರ ಚುನಾವಣೆಯಾಗಿ ರುವಾಂಡದಾಗ ಶಾಂತಿ ಪ್ರಿಯ ಸರಕಾರ ಬಂತು. ಈಗ ಆಫ್ರಿಕಾ ಖಂಡದ 54 ದೇಶಗಳೊಳಗ ಅತಿ ವೇಗವಾಗಿ ಬೆಳೆಯುತ್ತಿರುವ ದೇಶ ರವಾಂಡ. ಟುಟ್ಸಿ ರಾಜಮನೆತನಕ್ಕ ಸೇರಿದ ಅದರ ಅಧ್ಯಕ್ಷ ಪಾಲ ಕಗಾಮೆ ಎಲ್ಲಾ ಜನಾಂಗಗಳನ್ನು ಜೊತೆಯಲ್ಲಿ ಸೇರಿಸಿ ಕರೆದುಕೊಂಡು ಹೋಗುವ ಮಾತಾಡತಾನು. ಅಲ್ಲಿನ ಸಂಸತ್ತಿನಲ್ಲಿ ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆದಾಗ ಅದಾರು. ಅರಣ್ಯ – ವನ್ಯಜೀವಿ ರಕ್ಷಣೆ ಛಲೋ ಮಾಡತಾರು ಅಂತ ಹೇಳಿ ಅವರಿಗೆ ಪ್ರಶಸ್ತಿ ಕೊಟ್ಟೇತಿ. ರೇಡಿಯೋ ರವಾಂಡಾದ ಕೆಲವು (ಅನೌನ್ಸರು) ಕಿರಚಾಟಿಗಳ ಮ್ಯಾಲೆ ಮೊಕದ್ದಮೆ ನಡದು ಜೈಲಿಗೆ ಹೋಗ್ಯಾರು. ಅದರಾಗಿನ ಕಾರ್ಯಕ್ರಮದ ಗುಣಮಟ್ಟ ಬ್ಯಾರೆ ಈಗ ಆಗೇತಿ.

ನಮ್ಮ ಮಾಧ್ಯಮಗಳು ಈ ಭೂಮಿಯನ್ನ ಸ್ವರ್ಗ ಮಾಡೋದು ಹೋಗಲಿ. ನರಕಾ ಅಂತೂ ಮಾಡಬಾರದು ಅಂತ ಹೇಳಿ ರಘುಪತಿ ರಾಘವನಲ್ಲೆ ಪ್ರಾರ್ಥನೆ ಮಾಡೋಣು. ಅದರಕಿಂತಾ ಮೊದಲಿಗೆ ಠೀವಿ ಬಂದು ಮಾಡೋಣು, ಅಲ್ಲವೇ ಮನೋಲ್ಲಾಸಿನಿ?


ಇದನ್ನೂ ಓದಿ: ಖಾಲಿ ಹೊಟ್ಟಿಗಿಂತಾ ಖಾಲಿ ಮೆದುಳು ಭಾಳ ಅಪಾಯಕಾರಿ. ಆದರೆ ಸರಕಾರ ಹಾಗೂ ಮಾಧ್ಯಮ ಎರಡೂ ಸರಿಯಾಗಿಲ್ಲ

ವಿಡಿಯೊ ನೋಡಿ: ಕೊರೊನಾಗೆ ಚಿಕಿತ್ಸೆ ಏನು? ವ್ಯಾಕ್ಸೀನ್‌ ತಯಾರಿ ಎಲ್ಲಿಯವರೆಗೆ ಬಂದಿದೆ? ಅಂತಿಮ ಪರಿಹಾರ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...