Homeಮುಖಪುಟಠೀವಿ ಬಂದು ಮಾಡಿ, ರುವಾಂಡ ಮಾದರಿ ನೋಡಿದರೆ ನಮ್ಮ ದೇಶ ಉಳಿತ್ತೈತೆ

ಠೀವಿ ಬಂದು ಮಾಡಿ, ರುವಾಂಡ ಮಾದರಿ ನೋಡಿದರೆ ನಮ್ಮ ದೇಶ ಉಳಿತ್ತೈತೆ

- Advertisement -
- Advertisement -

ಸಾಮಾನ್ಯ ಭಾರತೀಯನಿಗಿಂತ ಹೆಚ್ಚು ಎತ್ತರದಾಗ ತೇಲಾಡೋ ಹೀರೋ ಅಮಿತಾಬ ಬಚ್ಚನ ಅವರು ʻಹಮ್ʼ (ನಾವು) ಅಂತ ಒಂದು ಪಿಚ್ಚರು ಮಾಡಿದ್ದರು. ಅದರಾಗ ಒಂದು ಡಯಲಾಗು ಇತ್ತು. ʻʻʻದೇಖೋ ಗೊನಸಾಲ್ವಿಸ್. ಇಸ್ ದುನಿಯಾ ಮೆ ದೊ ತರಹ ಕಾ ಕೀಡಾ ಹೋತಾ ಹೈ,ʼʼ ಅಂತ ಶುರು ಆಗುವ ಆ ಮಾತು ಬಹಳ ಜನಪ್ರಿಯವಾಗಿತ್ತು.

ʻʻಎಕ್ ವೊ ಜೊ ಕಚರೇ ಸೆ ಉಠತಾ ಹೈ. ದೂಸರಾ ಪಾಪ ಕಿ ಗಂದಗೀ ಸೆ ಉಠತಾ ಹೈ. ಕಚರೇ ಕಾ ಕೀಡಾ ಇನ್ಸಾನ ಕೋ ಬೀಮಾರ ಕರತಾ ಹೈ. ಲೆಕಿನ್ ಪಾಪ ಕಿ ಗಂದಗೀ ಸೆ ನಿಕಲನೆ ವಾಲಾ ಕೀಡಾ ಪೂರೆ ಸಮಾಜ ಕೊ ಬೀಮಾರ ಕರತಾ ಹೈ. ಕಚರೇ ಕಾ ಕೀಡಾ ಮಾರನೆ ಕೆ ಲಿಯೆ ಫ್ಲಿಟ್ ಬಾಜಾರ್ ಮೆ ಮಿಲತಾ ಹೈ. ಲೆಕಿನ ಪಾಪ ಕಿ ಗಂದಗೀ ಕಾ ಕೀಡಾ ಮಾರನೆ ಕೆ ಲಿಯೆ ಸಾಲಾ ಫ್ಲಿಟ್ ಅಭೀ ತಕ ಬನಾ ನಹೀಂʼʼ ಸಮಾಜದಲ್ಲಿರುವುದು ಎರಡು ರೀತಿಯ ಕ್ರಿಮಿ. ಒಂದು ಕಸದಿಂದ ಬರುವುದು, ಇನ್ನೊಂದು ಪಾಪದಿಂದ ಹುಟ್ಟುವುದು. ಮೊದಲನೆಯದರಿಂದ ಮನುಷ್ಯರಿಗೆ ರೋಗ ಬಂದರೆ ಎರಡನೇಯದರಿಂದ ಇಡೀ ಸಮಾಜಕ್ಕೆ ರೋಗ ಬರತದೆ. ಒಂದನೇಯದಕ್ಕೆ ಔಷಧಿ ಇದೆ. ಇನ್ನೊಂದಕ್ಕಿಲ್ಲ,ʼʼ ಅಂತ.

 

ಇವತ್ತು ನಮ್ಮೆದುರಿಗೆ ಇರುವುದು ಸಹ ಎರಡು – ಕೊರೋನಾ ಕ್ರಿಮಿ ಮತ್ತು ಕೋಮು ಕ್ರಿಮಿ. ಕೊರೋನಾ ರೋಗಿಷ್ಟರ ಕೆಮ್ಮು – ಕಫಾದಾಗ ಇದ್ದರ. ಎರಡನೇದು ಠೀವಿ ಗೂಟಗಳ (ಟೀವಿ ಆಂಕರುಗಳ) ಒದರಿಕೆಯಿಂದ ಬರತೇತಿ. ಕೊರೋನಾ ಬರಾಕ ನೀವು ರೋಗಿ ಎದರಿಗೆ ಇರಬೇಕು. ಎರಡನೇದು ಬರಾಕ ನಿಮ್ಮ ಮನ್ಯಾಗ ಠೀವಿ ಇದ್ದರ ಸಾಕು. ನೀವು ಅದರ ಎದರಿಗೆ ಇರಬೇಕು ಅಂತ ಏನಿಲ್ಲ.


ಇದನ್ನೂ ಓದಿ: ಆನಿ ಬಂದವು ಆನಿ ಎರಡೆರಡು ಆನಿ – ಒಂದು ಅಂಬಾನಿ, ಇನ್ನೊಂದು ಅಡಾನಿ


ಇಂತ ದುರಿತ ಕಾಲದಾಗ ಅವರ ಕೆಲಸ ಏನಪಾ ಅಂದರ ಜನರ ಅಂಜಿಕಿ ಕಮ್ಮಿ ಮಾಡೋದು. ಆದರ ಅವರು ಏನು ಮಾಡಾಕ ಹತ್ಯಾರು ಅಂದರ ಜನರ ಅಂಜಿಕಿ ಜಾಸ್ತಿ ಮಾಡಾಕ ಹತ್ಯಾರು. ಹೆದರಿದವರ ಮ್ಯಾಗ ಹಲ್ಲಿ ಒಗದಿದ್ದರು ಅಂದಂಗ ಇಲ್ಲದ್ದು – ಬಿಟ್ಟದ್ದು ಎಲ್ಲಾ ಹುಡಿಕಿ ಹುಡಿಕಿ ಮಂದೀಗೆ ಹೆದರಸಾಕ ಹತ್ಯಾರು.

ಅವರು ರೋಗದ ಬಗ್ಗೆ- ವೈರಸ್ಸ ಬಗ್ಗೆ ತಪ್ಪು ಮಾಹಿತಿ ಕೊಡತಾರು. ಮತ್ತ ಆ ನೆವದಿಂದ ಜನಾಂಗೀಯ ದ್ವೇಷ ಹುಟ್ಟಸಾಕ- ಹೆಚ್ಚು ಮಾಡಾಕ ಕುಂತಾರು.

ನಮ್ಮ ಒಳಗ ಇದ್ದಿರಬಹುದಾದ ದ್ವೇಷ ಹೊಡದ ಎಬ್ಬಸಾಕ ಹತ್ಯಾರು. ಅವರಿಗೆ ಏನು ಗೊತ್ತಿಲ್ಲಾ ಅಂದರ ಒಂದ ಸಲಾ ಇದು ಸುರು ಆತಂದರ ಅದನ್ನ ನಿಲ್ಲಸಾಕ ಆಗಂಗಿಲ್ಲ. ಅದಕ್ಕ ದಿನಾ ಸಂಜೀಕೆ ನರಬಲಿ ಕೊಡಬೇಕು. ಕಡೀಕೆ ಅದು ಫ್ರಾಂಕೆನ್ ಸ್ಟೈನ್ ರಾಕ್ಷಸನ ಗತೆ, ತಮ್ಮ ಸೃಷ್ಟಿ ಮಾಡಿದವರನ್ನ ತಿಂದು ಬಿಡತೇತಿ.

ಹದಿನೈದನೇ ಶತಮಾನದ ಸಂತ ನಾರ್ಸಿ ಮೆಹತಾ ಅವರ ಭಜನೆಯ ಆಶಯದಂತೆ ಆ ಭಗವಂತ ನಮಗೂ ಅವರಿಗೂ, ಸಬಕೋ ಸನ್ಮತಿ ಕೊಡಲಿ.

ಈ ಕೀಲಿ ಕಿಟಕ್ಕಿನ್ಯಾಗ ಎಲ್ಲಾರೂ ಪಿಚ್ಚರು ನೋಡಾಕ ಹತ್ಯಾರು. ನೀವು ಸಹಿತ ʻಇಂಗೋಮಾನ್ಷಯಾʼ (ಸಿಹಿ ಕನಸು) ಅನ್ನುವ ಒಂದು ಸಾಕ್ಷ ಚಿತ್ರ ಸಿಕ್ಕರೆ ನೋಡ್ರಿ. ಅದು ರುವಾಂಡ ದೇಶದಲ್ಲಿ 1994 ರಾಗ ನಡೆದ ನರಮೇಧದ ನಂತರ ಹುಟು ಮತ್ತು ಟುಟ್ಸಿ ಎಂಬ ವಿರೋಧಿ ಜನಾಂಗೀಯ ಗುಂಪುಗಳ ಹೆಣ್ಣು ಮಕ್ಕಳು ಕೂಡಿ ಒಂದು ಡೊಳ್ಳು ಕುಣಿತದ ತಂಡ ಹಾಗೂ ಒಂದು ಐಸ್ ಕ್ರೀಮು ಅಂಗಡಿ ಹಾಕಿ ಒಗ್ಗಟ್ಟು ಸಾರಿದ್ದರ ಬಗ್ಗೆ ಐತಿ. ಅದನ್ನ ಮಾಡಾಕ ಕೀಕೀ ಅನ್ನೋ ಪಾಪ್ ಹಾಡುಗಾರ್ತಿ ಅವರಿಗೆ ಹುರಿದುಂಬಸತಾಳು.

ಇದರ ಹಿನ್ನೆಲೆ ಎನಂದರ 1994 ಬೇಸಿಗೆಯೊಳಗ ಮಧ್ಯ ಆಫ್ರಿಕಾದ ಸಣ್ಣ ದೇಶ ರುವಾಂಡದಾಗ ಹುಟು ಹಾಗೂ ಟುಟ್ಸಿ ಅವರ ನಡುವೆ ಜನಾಂಗೀಯ ಕದನ ನಡೀತು. ಬಹುಸಂಖ್ಯಾತ ಹುಟುರವರಲ್ಲಿನ ಉಗ್ರವಾದಿಗಳು ಅಲ್ಪ ಸಂಖ್ಯಾತ ಟುಟ್ಸಿ ಹಾಗೂ ಸೌಮ್ಯವಾದಿ ಹುಟು ಜನರನ್ನ ಕೊಂದರು. ಅಸಂಖ್ಯ ಜನ ಸತ್ತರು, ಎಷ್ಟೋ ಜನ ನಾಪತ್ತೆಯಾದರು, ಹಲವರು ವಿದೇಶಗಳಿಗೆ ಓಡಿ ಹೋದರು.


ಇದನ್ನೂ ಓದಿ:  ಜನ ಏನ್‌ ಮಾಡ್ಬೇಕು ಅಂತ ಹೇಳ್ತಿರೋ ಸರ್ಕಾರ ತಾನೇನು ಮಾಡಿದೀನಿ ಅಂತನೇ ಹೇಳ್ತಿಲ್ಲ?


ನಿನ್ನೆ ಮೊನ್ನೆ ನೆರೆಹೊರೆಯವರಾಗಿದ್ದ ಜನರನ್ನ ರಕ್ತ ಪಿಪಾಸುಗಳಾಗುವಂತೆ ಮಾಡಿದ್ದು ಯಾರಂದರ ರುವಾಂಡ ರೇಡಿಯೋದ ಪತ್ರಕರ್ತರು. ʻಟುಟ್ಸಿಗಳು ವಿಷದ ಹಾವು – ಚೇಳು- ಜಿರಲೆ. ಅವರನ್ನು ಕೊಲ್ಲಿರಿ. ದೇವರು ನಿಮಗೆ ಶಹಬ್ಬಾಸು ಗಿರಿ ಕೊಡತಾನೆ. ಚಿಕ್ಕ ಮಕ್ಕಳು ಅಂತ ಬಿಡಬೇಡಿ, ಹಾವುಗಳಲ್ಲಿ ಹುಟ್ಟಿನಿಂದ ವಿಷ ತುಂಬಿರತದೆʼ ಅಂತ ಇಪ್ಪತ್ನಾಕು ತಾಸು ಪ್ರಸಾರ ಮಾಡಿದರು.

ಆರು ವರ್ಷಗಳ ಹಿಂಸೆ- ಕ್ಷಾಮ- ದುರಾಡಳಿತದ ನಂತರ ಚುನಾವಣೆಯಾಗಿ ರುವಾಂಡದಾಗ ಶಾಂತಿ ಪ್ರಿಯ ಸರಕಾರ ಬಂತು. ಈಗ ಆಫ್ರಿಕಾ ಖಂಡದ 54 ದೇಶಗಳೊಳಗ ಅತಿ ವೇಗವಾಗಿ ಬೆಳೆಯುತ್ತಿರುವ ದೇಶ ರವಾಂಡ. ಟುಟ್ಸಿ ರಾಜಮನೆತನಕ್ಕ ಸೇರಿದ ಅದರ ಅಧ್ಯಕ್ಷ ಪಾಲ ಕಗಾಮೆ ಎಲ್ಲಾ ಜನಾಂಗಗಳನ್ನು ಜೊತೆಯಲ್ಲಿ ಸೇರಿಸಿ ಕರೆದುಕೊಂಡು ಹೋಗುವ ಮಾತಾಡತಾನು. ಅಲ್ಲಿನ ಸಂಸತ್ತಿನಲ್ಲಿ ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆದಾಗ ಅದಾರು. ಅರಣ್ಯ – ವನ್ಯಜೀವಿ ರಕ್ಷಣೆ ಛಲೋ ಮಾಡತಾರು ಅಂತ ಹೇಳಿ ಅವರಿಗೆ ಪ್ರಶಸ್ತಿ ಕೊಟ್ಟೇತಿ. ರೇಡಿಯೋ ರವಾಂಡಾದ ಕೆಲವು (ಅನೌನ್ಸರು) ಕಿರಚಾಟಿಗಳ ಮ್ಯಾಲೆ ಮೊಕದ್ದಮೆ ನಡದು ಜೈಲಿಗೆ ಹೋಗ್ಯಾರು. ಅದರಾಗಿನ ಕಾರ್ಯಕ್ರಮದ ಗುಣಮಟ್ಟ ಬ್ಯಾರೆ ಈಗ ಆಗೇತಿ.

ನಮ್ಮ ಮಾಧ್ಯಮಗಳು ಈ ಭೂಮಿಯನ್ನ ಸ್ವರ್ಗ ಮಾಡೋದು ಹೋಗಲಿ. ನರಕಾ ಅಂತೂ ಮಾಡಬಾರದು ಅಂತ ಹೇಳಿ ರಘುಪತಿ ರಾಘವನಲ್ಲೆ ಪ್ರಾರ್ಥನೆ ಮಾಡೋಣು. ಅದರಕಿಂತಾ ಮೊದಲಿಗೆ ಠೀವಿ ಬಂದು ಮಾಡೋಣು, ಅಲ್ಲವೇ ಮನೋಲ್ಲಾಸಿನಿ?


ಇದನ್ನೂ ಓದಿ: ಖಾಲಿ ಹೊಟ್ಟಿಗಿಂತಾ ಖಾಲಿ ಮೆದುಳು ಭಾಳ ಅಪಾಯಕಾರಿ. ಆದರೆ ಸರಕಾರ ಹಾಗೂ ಮಾಧ್ಯಮ ಎರಡೂ ಸರಿಯಾಗಿಲ್ಲ

ವಿಡಿಯೊ ನೋಡಿ: ಕೊರೊನಾಗೆ ಚಿಕಿತ್ಸೆ ಏನು? ವ್ಯಾಕ್ಸೀನ್‌ ತಯಾರಿ ಎಲ್ಲಿಯವರೆಗೆ ಬಂದಿದೆ? ಅಂತಿಮ ಪರಿಹಾರ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...