Homeಮುಖಪುಟಸಂಭಾಜಿ ಭಿಡೆ ವಿರುದ್ಧ ದೂರು ದಾಖಲಿಸಲು ಮುಂದಾದ ಗಾಂಧೀಜಿ ಮರಿ ಮೊಮ್ಮಗ ತುಷಾರ್ ಗಾಂಧಿ

ಸಂಭಾಜಿ ಭಿಡೆ ವಿರುದ್ಧ ದೂರು ದಾಖಲಿಸಲು ಮುಂದಾದ ಗಾಂಧೀಜಿ ಮರಿ ಮೊಮ್ಮಗ ತುಷಾರ್ ಗಾಂಧಿ

- Advertisement -
- Advertisement -

ಹಿಂದುತ್ವ ನಾಯಕ ಸಂಭಾಜಿ ಭಿಡೆ ಅವರು ತಮ್ಮ ಭಾಷಣದ ವೇಳೆ ಮಹಾತ್ಮಾ ಗಾಂಧಿಯವರ ವಂಶಾವಳಿಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ಇದೀಗ ಅವರ ವಿರುದ್ಧ ಮಹಾತ್ಮಾ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿಯವರು ಅಧಿಕೃತ ದೂರು ದಾಖಲಿಸುವುದಾಗಿ ಗುರುವಾರ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ನಾನು ಪುಣೆಗೆ ಹೋಗುತ್ತಿದ್ದೇನೆ. ಈ ಮಧ್ಯೆ ಇಂದು ಮಧ್ಯಾಹ್ನ ಡೆಕ್ಕನ್ ಪೊಲೀಸ್ ಠಾಣೆಯಲ್ಲಿ ಪ್ರಧಾನಮಂತ್ರಿಯವರ ‘ಪೂಜ್ಯ ಗುರೂಜಿ’ಯಾದ ಭಿಡೆ ವಿರುದ್ಧ ಕ್ರಿಮಿನಲ್ ಮಾನನಷ್ಟ ದೂರು ದಾಖಲಿಸಲಿದ್ದೇನೆ. ನನ್ನ ಪೂರ್ವಜರ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಆಗಬೇಕು” ಎಂದು ಹೇಳಿದ್ದಾರೆ.

ಕಳೆದ ತಿಂಗಳು, ಶ್ರೀ ಶಿವ ಪ್ರತಿಷ್ಠಾನ ಹಿಂದೂಸ್ತಾನ್ ಸಂಘಟನೆಯ ಸಂಸ್ಥಾಪಕ ಭಿಡೆ ಅವರ ಭಾಷಣದಲ್ಲಿ ಮಹಾತ್ಮ ಗಾಂಧಿಯವರ ವಂಶಾವಳಿಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಅಮರಾವತಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಮಹಾತ್ಮಾ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಕೆಯನ್ನು ಖಂಡಿಸಿದ ವಿರೋಧ ಪಕ್ಷಗಳು ಭಿಡೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬೇಡಿಕೆ ಇಟ್ಟಿದ್ದರು. ಕಳೆದ ವಾರ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ರಾಷ್ಟ್ರೀಯ ಐಕಾನ್‌ಗಳನ್ನು ಅವಮಾನಿಸುವುದನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಬುದ್ಧ, ಪುಲೆ, ಪೆರಿಯಾರ್ ವಿರುದ್ಧವೂ ಭಿಡೆ ಅವಹೇಳನ

ಆ ಬಳಿಕ ಭಿಡೆ ಅವರು ಗೌತಮ್ ಬುದ್ಧ, ಜ್ಯೋತಿಬಾ ಫುಲೆ ಮತ್ತು ಪೆರಿಯಾರ್ ನಾಯ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿದೆ.

ದೂರಿನಲ್ಲಿ ಕೆಲವು ಆನ್‌ಲೈನ್ ವೀಡಿಯೋಗಳನ್ನು ಉಲ್ಲೇಖಿಸಲಾಗಿದೆ, ಇದರಲ್ಲಿ ಭಿಡೆ ಸಮಾಜ ಸುಧಾರಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ಕಂಡುಬಂದಿದೆ.

ಇದನ್ನೂ ಓದಿ: ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...