Homeಪುಸ್ತಕ ವಿಮರ್ಶೆತುಂಟ, ಹೈಪರ್ ಆಕ್ಟೀವ್‌ ಹುಡುಗಿಯನ್ನು ಮುದ್ದಾಗಿ ಬೆಳೆಸಿ ಮಾದರಿಯಾದ ತಾಯಿ

ತುಂಟ, ಹೈಪರ್ ಆಕ್ಟೀವ್‌ ಹುಡುಗಿಯನ್ನು ಮುದ್ದಾಗಿ ಬೆಳೆಸಿ ಮಾದರಿಯಾದ ತಾಯಿ

- Advertisement -
- Advertisement -

ಇದು ಬಲು ತೀಟೆ ಅಥವಾ ಹೈಪರ್ ಆ್ಯಕ್ಟೀವಾಗಿದ್ದ ಹುಡುಗಿಯೊಬ್ಬಳು ಕಲಿಯುತ್ತಿದ್ದ ಶಾಲೆಯಿಂದ ಹೊರಹಾಕಲ್ಪಟ್ಟು ನಂತರ ಸಹಜ ಕಲಿಕೆಯ ಶಾಲೆಗೆ ಸೇರಿ ಯಶಸ್ವೀ ಮಹಿಳೆಯಾದ ಕತೆಯಾದರೂ, ಇದು ತೊಮೊಯೆ ಎಂಬ ಶಾಲೆಯು ಮಕ್ಕಳೊಡನೆ ಜೀವ ತಳೆದಿದ್ದ ಕತೆ. ಸೊಸಾಕು ಕೊಬಾಯಾಶಿ ಎಂಬ ಶಿಕ್ಷಣ ತಜ್ಞ ಸಹಜ ಶಿಕ್ಷಣವನ್ನು ಮಕ್ಕಳಿಗೆ ಧಾರೆ ಎರೆದ ಅಮರಕತೆ.

ಹೌದು, ಒಂದು ವ್ಯಕ್ತಿಯ ವ್ಯಕ್ತಿತ್ವದ ನಿರ್ಮಾಣದಲ್ಲಿ, ಅದು ವ್ಯಕ್ತಿಗತವಾಗಿಯಾದರೂ ಅಥವಾ ಸಾಮಾಜಿಕವಾಗಿಯಾದರೂ, ಕುಟುಂಬ, ಶಿಕ್ಷಕರು ಮತ್ತು ಕಲಿಕೆಯ ಕೇಂದ್ರ; ಎಲ್ಲವೂ ಪ್ರಧಾನ ಪಾತ್ರವನ್ನು ವಹಿಸುತ್ತದೆ. ಇವರಲ್ಲಿ ಯಾರೂ ಮಕ್ಕಳ ಬಗ್ಗೆ ಅಲಕ್ಷ್ಯ ಮಾಡಬಾರದು ಎಂದು ತೊತ್ತೊ-ಚಾನ್ ಧ್ವನಿಸುತ್ತದೆ.

ತಾಯಿ

ತನ್ನ ಪುಟ್ಟ ಮಗಳು ತೊತ್ತೊ-ಚಾನ್ ಶಾಲೆಯಲ್ಲಿ ಡೆಸ್ಕನ್ನು ಪದೇಪದೇ ತೆಗೆದು ಮುಚ್ಚುತ್ತಾಗಲಾಟೆ ಮಾಡುವುದನ್ನು ಉಪಾಧ್ಯಾಯಿನಿ ದೂರಿನ ಪಟ್ಟಿಯಲ್ಲಿಟ್ಟರೂ ತಾಯಿ ಅದರ ಹಿಂದಿನ ಕಾರಣ, ಕುತೂಹಲ ಮತ್ತು ಅದರ ಪರಿಣಾಮವನ್ನು ಯೋಚಿಸುತ್ತಾಳೆ. ತಮ್ಮ ಮನೆಯಲ್ಲಿದ್ದ ಮೇಜಿನಲ್ಲಿ ಎಳೆಯುವ ಡ್ರಾಯರ್ ಇದ್ದು, ಶಾಲೆಯಲ್ಲಿ ಡೆಸ್ಕಿನ ಡಬ್ಬಿಯ ಮುಚ್ಚಳದಂತೆ ತೆಗೆದುಹಾಕುವುದಕ್ಕೆ ಅವಳಿಗೆ ಸಂತೋಷ ಎಂದು ತಿಳಿಯುತ್ತಾಳೆ. ಅದರ ಬಗ್ಗೆ ಉಪಾಧ್ಯಾಯರಿಗೂ ಹೇಳುವುದಿಲ್ಲ. ತನ್ನ ಮಗುವಿಗೂ ಹೇಳುವುದಿಲ್ಲ. ತೊತ್ತೋ ಗುಬ್ಬಚ್ಚಿಯ ಬಳಿ ಮಾತಾಡುವುದು, ಕಿಟಕಿಯ ಬಳಿ ನಿಂತುಕೊಂಡು ಸ್ಟ್ರೀಟ್ ಬ್ಯಾಂಡ್‍ರವರನ್ನು ಕರೆದು ಸಂಗೀತವಾದ್ಯಗಳನ್ನು ನುಡಿಸುವಂತೆ ಮಾಡುವುದೇ ಮೊದಲಾದ ಎಲ್ಲಾ ಆರೋಪಗಳ ಪಟ್ಟಿಯು “ನಿಮ್ಮ ಮಗಳನ್ನು ಶಾಲೆಯಿಂದ ಹೊರ ಹಾಕಲಾಗಿದೆ” ಎಂದು ಉಪಾಧ್ಯಾಯಿನಿ ತಾಯಿಗೆ ಹೇಳುವಂತಾಯಿತು. ಶಾಲೆಯಿಂದ ಹೊರಹಾಕುವುದನ್ನು ಸ್ವೀಕರಿಸಿದ ತಾಯಿ, ಅವಳ ಮಗಳ ಮೇಲಿನ ಆರೋಪಗಳ ಪಟ್ಟಿಯನ್ನು ಸ್ವೀಕರಿಸುವುದಿಲ್ಲ. ಬದಲಿಗೆ ನನ್ನ ಮಗಳು ಇವರಿಗರ್ಥವಾಗಲಿಲ್ಲ ಎಂದೇ ಬೇರೆ ಶಾಲೆಗೆ ಹೊರಳುತ್ತಾಳೆ. ಆದರೆ ಮಗಳಿಗೆ ನೀನು ಶಾಲೆಯಿಂದ ಹೊರದೂಡಲ್ಪಟ್ಟವಳೆಂದು ಹೇಳುವುದೇ ಇಲ್ಲ. ಹೇಳುತ್ತಾಳೆ, ತೊತ್ತೋಗೆ ಇಪ್ಪತ್ತನೇ ವರ್ಷದ ಹುಟ್ಟುಹಬ್ಬದಲ್ಲಿ. ಸಣ್ಣ ಮಗುವಿನ ಮೃದು ಮನಸ್ಸಿಗೆ ನೀನು ತಿರಸ್ಕೃತೆ ಎಂಬ ಭಾವಉಂಟಾಗದಿರುವಂತೆ ನೋಡಿಕೊಂಡತಾಯಿ ಅವರು.

ತೊಮೊಯೆ

ತೊಮೊಯೆ ಶಾಲೆಯ ಹೆಸರು. ನಿಸರ್ಗದ ಒಡಲಲ್ಲಿ ಆ ಶಾಲೆ ಮಕ್ಕಳಿಗೆ ಮಡಿಲನ್ನೊದಗಿಸಿತ್ತು. ಇನ್ನು ತರಗತಿಗಳೋ ರೈಲಿನ ಡಬ್ಬಿಗಳು. ಮಕ್ಕಳ ಆಯ್ಕೆಯ ವಿಷಯಗಳು ಅವರ ಕಲಿಕೆಗೆ. ಅವರವರ ಕಲಿಕೆ ಅವರಿಗೆ ಬಿಟ್ಟದ್ದು.ಉಪಾಧ್ಯಾಯರ ಸಹಾಯ ಬೇಕಾದಾಗ ಅವರೊದಗುತ್ತಾರೆ. ಮಧ್ಯಾಹ್ನ ಎಲ್ಲರೂ ಕಲೆತು ಊಟ ಮಾಡಿದ ಮೇಲೆ ತರಗತಿಗಳೆಂದು ಕರೆಸಿಕೊಳ್ಳುವ ರೈಲಿನ ಬೋಗಿಗಳಿಗೆ ಹೋಗುವಷ್ಟಿಲ್ಲ. ಹೊರಗೆ ನಿಸರ್ಗದಲ್ಲಿ ಮಿಕ್ಕೆಲ್ಲಾ ಸಹಜ ಕಲಿಕೆ. ನಿರ್ಬಂಧಿಸುವರಿಲ್ಲ, ತಾಕೀತು ಮಾಡುವವರಿಲ್ಲ, ಕಲಿಸುವಿಕೆ, ಕಲಿಯುವಿಕೆ, ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಸಂಬಂಧ ಎಲ್ಲವೂ ಸಹಜ.

ತೊತ್ತೊ ತನ್ನ ಮುನ್ನುಡಿಯಲ್ಲಿ ಹೇಳುವ ಮಾತು ನಿಜ. “ಈಗ ತೊಮೊಯೆದಂತಹ ಶಾಲೆಗಳಿದ್ದಿದ್ದರೆ ಇಂದು ಕಂಡುಬರುತ್ತಿರುವ ಕ್ರೌರ್ಯ ಎಷ್ಟೋ ಕಡಿಮೆಯಾಗುತ್ತಿತ್ತು.”

ಕೊಬಾಯಾಶಿ

ಸೊಸಾಕು ಕೊಬಾಯಾಶಿಯೇ ತೊತ್ತೊ-ಚಾನ್ ಪುಸ್ತಕದ ನಾಯಕ. ತೊಮೊಯೆ ಶಾಲೆಯ ಅಡಿಪಾಯ. ಅವರ ಶಿಕ್ಷಣ ನೀತಿಯೇ ಮಕ್ಕಳಿಗೆ ಉಸಿರಾಡಲು ತಂಗಾಳಿಯನ್ನು ನೀಡುತ್ತಿದ್ದದ್ದು. ಇಡೀ ಪುಸ್ತಕ ಹೇಳುವುದು ಕೊಬಾಯಾಶಿಯವರ ಸಹಜ ಕಲಿಕೆಯ ಪದ್ಧತಿ ಮಕ್ಕಳ ವ್ಯಕ್ತಿತ್ವ ವಿಕಾಸದಲ್ಲಿಸಾಧಿಸಿದ ಯಶಸ್ಸನ್ನು. ಎಲ್ಲಾ ಮಕ್ಕಳೂ ಸ್ವಾಭಾವಿಕವಾಗಿ ಉತ್ತಮರೇ. ಪರಿಸರ ಮತ್ತುದೊಡ್ಡವರ ಬೇಡದೇ ಇರುವ ಪ್ರಭಾವದಿಂದ ಹಾಳಾಗುತ್ತದೆ ಎಂಬುದು ಅವರ ತಿಳಿವಳಿಕೆ. ಮಕ್ಕಳು ತಮ್ಮ ಸಹಜ ಸ್ವಭಾವದಂತೆ ಕಲಿತುಕೊಂಡು ಹೋಗಲು, ಪ್ರಕೃತಿಯಿಂದ ತಿಳಿವಳಿಕೆ ಪಡೆಯಲು ಸಹಕರಿಸುವುದನ್ನು ತಮ್ಮ ಹೊಣೆಯಾಗಿಸಿಕೊಂಡಿದ್ದರು.

ಅವರ ಶಾಲೆಯಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ಎಲ್ಲರೂ ಗ್ರೂಪ್ ಪೋಟೋ ತೆಗೆಸಿಕೊಳ್ಳುವಾಗ ಕೊಬಾಯಾಶಿ ಅಲ್ಲಿಕಾಣುವ ಇತರ ಮಕ್ಕಳನ್ನೆಲ್ಲಾ ಕರೆದು ಪೋಟೋಗೆ ನಿಲ್ಲಿಸಿಕೊಳ್ಳುತ್ತಿದ್ದರು. ಔಪಚಾರಿಕವಾದ ಪದವೀಧರರ ಚಿತ್ರಗಳಿಗಿಂತ ಮಕ್ಕಳ ಜೀವಂತ ಚಿತ್ರಗಳನ್ನು ನೋಡುವ ಪ್ರೀತಿ ಅವರದು.

ಮೊದಲ ದಿನ ತೊತ್ತೊ ಶಾಲೆಗೆ ಸೇರಲು ಬಂದಾಗ ಕೊಬಾಯಾಶಿ ಮಗುವಿಗೆ ಪ್ರಶ್ನೆಗಳನ್ನು ಕೇಳದೇ ಅವಳೇ ಅವಳಿಷ್ಟದ್ದನ್ನೆಲ್ಲಾ ಹೇಳಲು ಬಿಡುತ್ತಾರೆ. ಇದೇ ಅವರಿಗೆ ಮಗುವಿನ ಪ್ರೀತಿ ಪಡೆಯಲು ಸಾಧ್ಯವಾಗುವುದು. ಅವಳು ಹೇಳಿದ್ದನ್ನೆಲ್ಲಾ ಕೇಳಿ, “ನೀನು ನಮ್ಮ ಶಾಲೆಯ ಹುಡುಗಿಯಾಗಿಬಿಟ್ಟೆ”ಎಂದಾಗ ಅವಳು ಅನುಭವಿಸುವ ವಾತ್ಸಲ್ಯ ಅನುಪಮವಾದದ್ದು.

ಅವರು ಪದೇಪದೇ ಹೇಳುತ್ತಿರುತ್ತಾರೆ, “ನೀನು ನಿಜವಾಗಿ ಒಳ್ಳೆಯ ಹುಡುಗಿ”ಅಂತ. ಇದನ್ನು ಕೇಳಿ ಕೇಳಿಯೇ ತೊತ್ತೋ ಆತ್ಮವಿಶ್ವಾಸವನ್ನು ಮತ್ತು ತನ್ನ ಬಗ್ಗೆ ಧನಾತ್ಮಕ ಧೋರಣೆಯನ್ನು ಹೊಂದಲು ಸಾಧ್ಯವಾಗಿದ್ದು. ಇಲ್ಲವಾಗಿದ್ದರೆ ಕೆಟ್ಟ ಹುಡುಗಿ ಎಂಬ ಕೀಳರಿಮೆಯಲ್ಲಿ ತನ್ನ ವ್ಯಕ್ತಿತ್ವವನ್ನು ತಾನೇ ನಾಶ ಮಾಡಿಕೊಳ್ಳುತ್ತಿದ್ದಳೇನೋ ಎಂದು ತಾನೇ ಹೇಳಿಕೊಳ್ಳುತ್ತಾರೆ. ಮುಂದೆ ತೊಮೊಯೆ ಯುದ್ಧದಲ್ಲಿ ನಾಶವಾದಾಗ ಸಂಕಟವಾಗುತ್ತದೆ.

ಇಡೀ ಪುಸ್ತಕವು ನವಿರಾದ ಹಾಸ್ಯ ಮತ್ತು ಗಂಭೀರದಲ್ಲಿ ವಿಚಾರಗಳನ್ನು ತೆರೆದಿಡುತ್ತದೆ. ನಗಿಸುತ್ತದೆ, ಚಿಂತಿಸುವಂತೆ ಮಾಡುತ್ತದೆ. ಮಕ್ಕಳ ವಿಕಾಸಕ್ಕೆ ಪೂರಕವಾದ ಕಲಿಕೆಯ ಕ್ರಮವನ್ನು ಅರಿವಿಗೆಟಕಿಸುತ್ತದೆ.

ಮಕ್ಕಳನ್ನು ಪ್ರೀತಿಸುವವರು ಈ ಪುಸ್ತಕದ ಓದನ್ನು ತಪ್ಪಿಸಿಕೊಂಡರೆ ಒಂದು ಕೊರತೆಯೆಂದೇ ನನ್ನ ಭಾವನೆ. ಇದನ್ನು ಕನ್ನಡಕ್ಕೆ ವಿ ಗಾಯತ್ರಿಯವರು ತಂದಿದ್ದು, ನ್ಯಾಷನಲ್ ಬುಕ್‍ಟ್ರಸ್ಟ್ ಪ್ರಕಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...