Homeಪುಸ್ತಕ ವಿಮರ್ಶೆತುಂಟ, ಹೈಪರ್ ಆಕ್ಟೀವ್‌ ಹುಡುಗಿಯನ್ನು ಮುದ್ದಾಗಿ ಬೆಳೆಸಿ ಮಾದರಿಯಾದ ತಾಯಿ

ತುಂಟ, ಹೈಪರ್ ಆಕ್ಟೀವ್‌ ಹುಡುಗಿಯನ್ನು ಮುದ್ದಾಗಿ ಬೆಳೆಸಿ ಮಾದರಿಯಾದ ತಾಯಿ

- Advertisement -
- Advertisement -

ಇದು ಬಲು ತೀಟೆ ಅಥವಾ ಹೈಪರ್ ಆ್ಯಕ್ಟೀವಾಗಿದ್ದ ಹುಡುಗಿಯೊಬ್ಬಳು ಕಲಿಯುತ್ತಿದ್ದ ಶಾಲೆಯಿಂದ ಹೊರಹಾಕಲ್ಪಟ್ಟು ನಂತರ ಸಹಜ ಕಲಿಕೆಯ ಶಾಲೆಗೆ ಸೇರಿ ಯಶಸ್ವೀ ಮಹಿಳೆಯಾದ ಕತೆಯಾದರೂ, ಇದು ತೊಮೊಯೆ ಎಂಬ ಶಾಲೆಯು ಮಕ್ಕಳೊಡನೆ ಜೀವ ತಳೆದಿದ್ದ ಕತೆ. ಸೊಸಾಕು ಕೊಬಾಯಾಶಿ ಎಂಬ ಶಿಕ್ಷಣ ತಜ್ಞ ಸಹಜ ಶಿಕ್ಷಣವನ್ನು ಮಕ್ಕಳಿಗೆ ಧಾರೆ ಎರೆದ ಅಮರಕತೆ.

ಹೌದು, ಒಂದು ವ್ಯಕ್ತಿಯ ವ್ಯಕ್ತಿತ್ವದ ನಿರ್ಮಾಣದಲ್ಲಿ, ಅದು ವ್ಯಕ್ತಿಗತವಾಗಿಯಾದರೂ ಅಥವಾ ಸಾಮಾಜಿಕವಾಗಿಯಾದರೂ, ಕುಟುಂಬ, ಶಿಕ್ಷಕರು ಮತ್ತು ಕಲಿಕೆಯ ಕೇಂದ್ರ; ಎಲ್ಲವೂ ಪ್ರಧಾನ ಪಾತ್ರವನ್ನು ವಹಿಸುತ್ತದೆ. ಇವರಲ್ಲಿ ಯಾರೂ ಮಕ್ಕಳ ಬಗ್ಗೆ ಅಲಕ್ಷ್ಯ ಮಾಡಬಾರದು ಎಂದು ತೊತ್ತೊ-ಚಾನ್ ಧ್ವನಿಸುತ್ತದೆ.

ತಾಯಿ

ತನ್ನ ಪುಟ್ಟ ಮಗಳು ತೊತ್ತೊ-ಚಾನ್ ಶಾಲೆಯಲ್ಲಿ ಡೆಸ್ಕನ್ನು ಪದೇಪದೇ ತೆಗೆದು ಮುಚ್ಚುತ್ತಾಗಲಾಟೆ ಮಾಡುವುದನ್ನು ಉಪಾಧ್ಯಾಯಿನಿ ದೂರಿನ ಪಟ್ಟಿಯಲ್ಲಿಟ್ಟರೂ ತಾಯಿ ಅದರ ಹಿಂದಿನ ಕಾರಣ, ಕುತೂಹಲ ಮತ್ತು ಅದರ ಪರಿಣಾಮವನ್ನು ಯೋಚಿಸುತ್ತಾಳೆ. ತಮ್ಮ ಮನೆಯಲ್ಲಿದ್ದ ಮೇಜಿನಲ್ಲಿ ಎಳೆಯುವ ಡ್ರಾಯರ್ ಇದ್ದು, ಶಾಲೆಯಲ್ಲಿ ಡೆಸ್ಕಿನ ಡಬ್ಬಿಯ ಮುಚ್ಚಳದಂತೆ ತೆಗೆದುಹಾಕುವುದಕ್ಕೆ ಅವಳಿಗೆ ಸಂತೋಷ ಎಂದು ತಿಳಿಯುತ್ತಾಳೆ. ಅದರ ಬಗ್ಗೆ ಉಪಾಧ್ಯಾಯರಿಗೂ ಹೇಳುವುದಿಲ್ಲ. ತನ್ನ ಮಗುವಿಗೂ ಹೇಳುವುದಿಲ್ಲ. ತೊತ್ತೋ ಗುಬ್ಬಚ್ಚಿಯ ಬಳಿ ಮಾತಾಡುವುದು, ಕಿಟಕಿಯ ಬಳಿ ನಿಂತುಕೊಂಡು ಸ್ಟ್ರೀಟ್ ಬ್ಯಾಂಡ್‍ರವರನ್ನು ಕರೆದು ಸಂಗೀತವಾದ್ಯಗಳನ್ನು ನುಡಿಸುವಂತೆ ಮಾಡುವುದೇ ಮೊದಲಾದ ಎಲ್ಲಾ ಆರೋಪಗಳ ಪಟ್ಟಿಯು “ನಿಮ್ಮ ಮಗಳನ್ನು ಶಾಲೆಯಿಂದ ಹೊರ ಹಾಕಲಾಗಿದೆ” ಎಂದು ಉಪಾಧ್ಯಾಯಿನಿ ತಾಯಿಗೆ ಹೇಳುವಂತಾಯಿತು. ಶಾಲೆಯಿಂದ ಹೊರಹಾಕುವುದನ್ನು ಸ್ವೀಕರಿಸಿದ ತಾಯಿ, ಅವಳ ಮಗಳ ಮೇಲಿನ ಆರೋಪಗಳ ಪಟ್ಟಿಯನ್ನು ಸ್ವೀಕರಿಸುವುದಿಲ್ಲ. ಬದಲಿಗೆ ನನ್ನ ಮಗಳು ಇವರಿಗರ್ಥವಾಗಲಿಲ್ಲ ಎಂದೇ ಬೇರೆ ಶಾಲೆಗೆ ಹೊರಳುತ್ತಾಳೆ. ಆದರೆ ಮಗಳಿಗೆ ನೀನು ಶಾಲೆಯಿಂದ ಹೊರದೂಡಲ್ಪಟ್ಟವಳೆಂದು ಹೇಳುವುದೇ ಇಲ್ಲ. ಹೇಳುತ್ತಾಳೆ, ತೊತ್ತೋಗೆ ಇಪ್ಪತ್ತನೇ ವರ್ಷದ ಹುಟ್ಟುಹಬ್ಬದಲ್ಲಿ. ಸಣ್ಣ ಮಗುವಿನ ಮೃದು ಮನಸ್ಸಿಗೆ ನೀನು ತಿರಸ್ಕೃತೆ ಎಂಬ ಭಾವಉಂಟಾಗದಿರುವಂತೆ ನೋಡಿಕೊಂಡತಾಯಿ ಅವರು.

ತೊಮೊಯೆ

ತೊಮೊಯೆ ಶಾಲೆಯ ಹೆಸರು. ನಿಸರ್ಗದ ಒಡಲಲ್ಲಿ ಆ ಶಾಲೆ ಮಕ್ಕಳಿಗೆ ಮಡಿಲನ್ನೊದಗಿಸಿತ್ತು. ಇನ್ನು ತರಗತಿಗಳೋ ರೈಲಿನ ಡಬ್ಬಿಗಳು. ಮಕ್ಕಳ ಆಯ್ಕೆಯ ವಿಷಯಗಳು ಅವರ ಕಲಿಕೆಗೆ. ಅವರವರ ಕಲಿಕೆ ಅವರಿಗೆ ಬಿಟ್ಟದ್ದು.ಉಪಾಧ್ಯಾಯರ ಸಹಾಯ ಬೇಕಾದಾಗ ಅವರೊದಗುತ್ತಾರೆ. ಮಧ್ಯಾಹ್ನ ಎಲ್ಲರೂ ಕಲೆತು ಊಟ ಮಾಡಿದ ಮೇಲೆ ತರಗತಿಗಳೆಂದು ಕರೆಸಿಕೊಳ್ಳುವ ರೈಲಿನ ಬೋಗಿಗಳಿಗೆ ಹೋಗುವಷ್ಟಿಲ್ಲ. ಹೊರಗೆ ನಿಸರ್ಗದಲ್ಲಿ ಮಿಕ್ಕೆಲ್ಲಾ ಸಹಜ ಕಲಿಕೆ. ನಿರ್ಬಂಧಿಸುವರಿಲ್ಲ, ತಾಕೀತು ಮಾಡುವವರಿಲ್ಲ, ಕಲಿಸುವಿಕೆ, ಕಲಿಯುವಿಕೆ, ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಸಂಬಂಧ ಎಲ್ಲವೂ ಸಹಜ.

ತೊತ್ತೊ ತನ್ನ ಮುನ್ನುಡಿಯಲ್ಲಿ ಹೇಳುವ ಮಾತು ನಿಜ. “ಈಗ ತೊಮೊಯೆದಂತಹ ಶಾಲೆಗಳಿದ್ದಿದ್ದರೆ ಇಂದು ಕಂಡುಬರುತ್ತಿರುವ ಕ್ರೌರ್ಯ ಎಷ್ಟೋ ಕಡಿಮೆಯಾಗುತ್ತಿತ್ತು.”

ಕೊಬಾಯಾಶಿ

ಸೊಸಾಕು ಕೊಬಾಯಾಶಿಯೇ ತೊತ್ತೊ-ಚಾನ್ ಪುಸ್ತಕದ ನಾಯಕ. ತೊಮೊಯೆ ಶಾಲೆಯ ಅಡಿಪಾಯ. ಅವರ ಶಿಕ್ಷಣ ನೀತಿಯೇ ಮಕ್ಕಳಿಗೆ ಉಸಿರಾಡಲು ತಂಗಾಳಿಯನ್ನು ನೀಡುತ್ತಿದ್ದದ್ದು. ಇಡೀ ಪುಸ್ತಕ ಹೇಳುವುದು ಕೊಬಾಯಾಶಿಯವರ ಸಹಜ ಕಲಿಕೆಯ ಪದ್ಧತಿ ಮಕ್ಕಳ ವ್ಯಕ್ತಿತ್ವ ವಿಕಾಸದಲ್ಲಿಸಾಧಿಸಿದ ಯಶಸ್ಸನ್ನು. ಎಲ್ಲಾ ಮಕ್ಕಳೂ ಸ್ವಾಭಾವಿಕವಾಗಿ ಉತ್ತಮರೇ. ಪರಿಸರ ಮತ್ತುದೊಡ್ಡವರ ಬೇಡದೇ ಇರುವ ಪ್ರಭಾವದಿಂದ ಹಾಳಾಗುತ್ತದೆ ಎಂಬುದು ಅವರ ತಿಳಿವಳಿಕೆ. ಮಕ್ಕಳು ತಮ್ಮ ಸಹಜ ಸ್ವಭಾವದಂತೆ ಕಲಿತುಕೊಂಡು ಹೋಗಲು, ಪ್ರಕೃತಿಯಿಂದ ತಿಳಿವಳಿಕೆ ಪಡೆಯಲು ಸಹಕರಿಸುವುದನ್ನು ತಮ್ಮ ಹೊಣೆಯಾಗಿಸಿಕೊಂಡಿದ್ದರು.

ಅವರ ಶಾಲೆಯಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ಎಲ್ಲರೂ ಗ್ರೂಪ್ ಪೋಟೋ ತೆಗೆಸಿಕೊಳ್ಳುವಾಗ ಕೊಬಾಯಾಶಿ ಅಲ್ಲಿಕಾಣುವ ಇತರ ಮಕ್ಕಳನ್ನೆಲ್ಲಾ ಕರೆದು ಪೋಟೋಗೆ ನಿಲ್ಲಿಸಿಕೊಳ್ಳುತ್ತಿದ್ದರು. ಔಪಚಾರಿಕವಾದ ಪದವೀಧರರ ಚಿತ್ರಗಳಿಗಿಂತ ಮಕ್ಕಳ ಜೀವಂತ ಚಿತ್ರಗಳನ್ನು ನೋಡುವ ಪ್ರೀತಿ ಅವರದು.

ಮೊದಲ ದಿನ ತೊತ್ತೊ ಶಾಲೆಗೆ ಸೇರಲು ಬಂದಾಗ ಕೊಬಾಯಾಶಿ ಮಗುವಿಗೆ ಪ್ರಶ್ನೆಗಳನ್ನು ಕೇಳದೇ ಅವಳೇ ಅವಳಿಷ್ಟದ್ದನ್ನೆಲ್ಲಾ ಹೇಳಲು ಬಿಡುತ್ತಾರೆ. ಇದೇ ಅವರಿಗೆ ಮಗುವಿನ ಪ್ರೀತಿ ಪಡೆಯಲು ಸಾಧ್ಯವಾಗುವುದು. ಅವಳು ಹೇಳಿದ್ದನ್ನೆಲ್ಲಾ ಕೇಳಿ, “ನೀನು ನಮ್ಮ ಶಾಲೆಯ ಹುಡುಗಿಯಾಗಿಬಿಟ್ಟೆ”ಎಂದಾಗ ಅವಳು ಅನುಭವಿಸುವ ವಾತ್ಸಲ್ಯ ಅನುಪಮವಾದದ್ದು.

ಅವರು ಪದೇಪದೇ ಹೇಳುತ್ತಿರುತ್ತಾರೆ, “ನೀನು ನಿಜವಾಗಿ ಒಳ್ಳೆಯ ಹುಡುಗಿ”ಅಂತ. ಇದನ್ನು ಕೇಳಿ ಕೇಳಿಯೇ ತೊತ್ತೋ ಆತ್ಮವಿಶ್ವಾಸವನ್ನು ಮತ್ತು ತನ್ನ ಬಗ್ಗೆ ಧನಾತ್ಮಕ ಧೋರಣೆಯನ್ನು ಹೊಂದಲು ಸಾಧ್ಯವಾಗಿದ್ದು. ಇಲ್ಲವಾಗಿದ್ದರೆ ಕೆಟ್ಟ ಹುಡುಗಿ ಎಂಬ ಕೀಳರಿಮೆಯಲ್ಲಿ ತನ್ನ ವ್ಯಕ್ತಿತ್ವವನ್ನು ತಾನೇ ನಾಶ ಮಾಡಿಕೊಳ್ಳುತ್ತಿದ್ದಳೇನೋ ಎಂದು ತಾನೇ ಹೇಳಿಕೊಳ್ಳುತ್ತಾರೆ. ಮುಂದೆ ತೊಮೊಯೆ ಯುದ್ಧದಲ್ಲಿ ನಾಶವಾದಾಗ ಸಂಕಟವಾಗುತ್ತದೆ.

ಇಡೀ ಪುಸ್ತಕವು ನವಿರಾದ ಹಾಸ್ಯ ಮತ್ತು ಗಂಭೀರದಲ್ಲಿ ವಿಚಾರಗಳನ್ನು ತೆರೆದಿಡುತ್ತದೆ. ನಗಿಸುತ್ತದೆ, ಚಿಂತಿಸುವಂತೆ ಮಾಡುತ್ತದೆ. ಮಕ್ಕಳ ವಿಕಾಸಕ್ಕೆ ಪೂರಕವಾದ ಕಲಿಕೆಯ ಕ್ರಮವನ್ನು ಅರಿವಿಗೆಟಕಿಸುತ್ತದೆ.

ಮಕ್ಕಳನ್ನು ಪ್ರೀತಿಸುವವರು ಈ ಪುಸ್ತಕದ ಓದನ್ನು ತಪ್ಪಿಸಿಕೊಂಡರೆ ಒಂದು ಕೊರತೆಯೆಂದೇ ನನ್ನ ಭಾವನೆ. ಇದನ್ನು ಕನ್ನಡಕ್ಕೆ ವಿ ಗಾಯತ್ರಿಯವರು ತಂದಿದ್ದು, ನ್ಯಾಷನಲ್ ಬುಕ್‍ಟ್ರಸ್ಟ್ ಪ್ರಕಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....