Homeಪುಸ್ತಕ ವಿಮರ್ಶೆತುಂಟ, ಹೈಪರ್ ಆಕ್ಟೀವ್‌ ಹುಡುಗಿಯನ್ನು ಮುದ್ದಾಗಿ ಬೆಳೆಸಿ ಮಾದರಿಯಾದ ತಾಯಿ

ತುಂಟ, ಹೈಪರ್ ಆಕ್ಟೀವ್‌ ಹುಡುಗಿಯನ್ನು ಮುದ್ದಾಗಿ ಬೆಳೆಸಿ ಮಾದರಿಯಾದ ತಾಯಿ

- Advertisement -
- Advertisement -

ಇದು ಬಲು ತೀಟೆ ಅಥವಾ ಹೈಪರ್ ಆ್ಯಕ್ಟೀವಾಗಿದ್ದ ಹುಡುಗಿಯೊಬ್ಬಳು ಕಲಿಯುತ್ತಿದ್ದ ಶಾಲೆಯಿಂದ ಹೊರಹಾಕಲ್ಪಟ್ಟು ನಂತರ ಸಹಜ ಕಲಿಕೆಯ ಶಾಲೆಗೆ ಸೇರಿ ಯಶಸ್ವೀ ಮಹಿಳೆಯಾದ ಕತೆಯಾದರೂ, ಇದು ತೊಮೊಯೆ ಎಂಬ ಶಾಲೆಯು ಮಕ್ಕಳೊಡನೆ ಜೀವ ತಳೆದಿದ್ದ ಕತೆ. ಸೊಸಾಕು ಕೊಬಾಯಾಶಿ ಎಂಬ ಶಿಕ್ಷಣ ತಜ್ಞ ಸಹಜ ಶಿಕ್ಷಣವನ್ನು ಮಕ್ಕಳಿಗೆ ಧಾರೆ ಎರೆದ ಅಮರಕತೆ.

ಹೌದು, ಒಂದು ವ್ಯಕ್ತಿಯ ವ್ಯಕ್ತಿತ್ವದ ನಿರ್ಮಾಣದಲ್ಲಿ, ಅದು ವ್ಯಕ್ತಿಗತವಾಗಿಯಾದರೂ ಅಥವಾ ಸಾಮಾಜಿಕವಾಗಿಯಾದರೂ, ಕುಟುಂಬ, ಶಿಕ್ಷಕರು ಮತ್ತು ಕಲಿಕೆಯ ಕೇಂದ್ರ; ಎಲ್ಲವೂ ಪ್ರಧಾನ ಪಾತ್ರವನ್ನು ವಹಿಸುತ್ತದೆ. ಇವರಲ್ಲಿ ಯಾರೂ ಮಕ್ಕಳ ಬಗ್ಗೆ ಅಲಕ್ಷ್ಯ ಮಾಡಬಾರದು ಎಂದು ತೊತ್ತೊ-ಚಾನ್ ಧ್ವನಿಸುತ್ತದೆ.

ತಾಯಿ

ತನ್ನ ಪುಟ್ಟ ಮಗಳು ತೊತ್ತೊ-ಚಾನ್ ಶಾಲೆಯಲ್ಲಿ ಡೆಸ್ಕನ್ನು ಪದೇಪದೇ ತೆಗೆದು ಮುಚ್ಚುತ್ತಾಗಲಾಟೆ ಮಾಡುವುದನ್ನು ಉಪಾಧ್ಯಾಯಿನಿ ದೂರಿನ ಪಟ್ಟಿಯಲ್ಲಿಟ್ಟರೂ ತಾಯಿ ಅದರ ಹಿಂದಿನ ಕಾರಣ, ಕುತೂಹಲ ಮತ್ತು ಅದರ ಪರಿಣಾಮವನ್ನು ಯೋಚಿಸುತ್ತಾಳೆ. ತಮ್ಮ ಮನೆಯಲ್ಲಿದ್ದ ಮೇಜಿನಲ್ಲಿ ಎಳೆಯುವ ಡ್ರಾಯರ್ ಇದ್ದು, ಶಾಲೆಯಲ್ಲಿ ಡೆಸ್ಕಿನ ಡಬ್ಬಿಯ ಮುಚ್ಚಳದಂತೆ ತೆಗೆದುಹಾಕುವುದಕ್ಕೆ ಅವಳಿಗೆ ಸಂತೋಷ ಎಂದು ತಿಳಿಯುತ್ತಾಳೆ. ಅದರ ಬಗ್ಗೆ ಉಪಾಧ್ಯಾಯರಿಗೂ ಹೇಳುವುದಿಲ್ಲ. ತನ್ನ ಮಗುವಿಗೂ ಹೇಳುವುದಿಲ್ಲ. ತೊತ್ತೋ ಗುಬ್ಬಚ್ಚಿಯ ಬಳಿ ಮಾತಾಡುವುದು, ಕಿಟಕಿಯ ಬಳಿ ನಿಂತುಕೊಂಡು ಸ್ಟ್ರೀಟ್ ಬ್ಯಾಂಡ್‍ರವರನ್ನು ಕರೆದು ಸಂಗೀತವಾದ್ಯಗಳನ್ನು ನುಡಿಸುವಂತೆ ಮಾಡುವುದೇ ಮೊದಲಾದ ಎಲ್ಲಾ ಆರೋಪಗಳ ಪಟ್ಟಿಯು “ನಿಮ್ಮ ಮಗಳನ್ನು ಶಾಲೆಯಿಂದ ಹೊರ ಹಾಕಲಾಗಿದೆ” ಎಂದು ಉಪಾಧ್ಯಾಯಿನಿ ತಾಯಿಗೆ ಹೇಳುವಂತಾಯಿತು. ಶಾಲೆಯಿಂದ ಹೊರಹಾಕುವುದನ್ನು ಸ್ವೀಕರಿಸಿದ ತಾಯಿ, ಅವಳ ಮಗಳ ಮೇಲಿನ ಆರೋಪಗಳ ಪಟ್ಟಿಯನ್ನು ಸ್ವೀಕರಿಸುವುದಿಲ್ಲ. ಬದಲಿಗೆ ನನ್ನ ಮಗಳು ಇವರಿಗರ್ಥವಾಗಲಿಲ್ಲ ಎಂದೇ ಬೇರೆ ಶಾಲೆಗೆ ಹೊರಳುತ್ತಾಳೆ. ಆದರೆ ಮಗಳಿಗೆ ನೀನು ಶಾಲೆಯಿಂದ ಹೊರದೂಡಲ್ಪಟ್ಟವಳೆಂದು ಹೇಳುವುದೇ ಇಲ್ಲ. ಹೇಳುತ್ತಾಳೆ, ತೊತ್ತೋಗೆ ಇಪ್ಪತ್ತನೇ ವರ್ಷದ ಹುಟ್ಟುಹಬ್ಬದಲ್ಲಿ. ಸಣ್ಣ ಮಗುವಿನ ಮೃದು ಮನಸ್ಸಿಗೆ ನೀನು ತಿರಸ್ಕೃತೆ ಎಂಬ ಭಾವಉಂಟಾಗದಿರುವಂತೆ ನೋಡಿಕೊಂಡತಾಯಿ ಅವರು.

ತೊಮೊಯೆ

ತೊಮೊಯೆ ಶಾಲೆಯ ಹೆಸರು. ನಿಸರ್ಗದ ಒಡಲಲ್ಲಿ ಆ ಶಾಲೆ ಮಕ್ಕಳಿಗೆ ಮಡಿಲನ್ನೊದಗಿಸಿತ್ತು. ಇನ್ನು ತರಗತಿಗಳೋ ರೈಲಿನ ಡಬ್ಬಿಗಳು. ಮಕ್ಕಳ ಆಯ್ಕೆಯ ವಿಷಯಗಳು ಅವರ ಕಲಿಕೆಗೆ. ಅವರವರ ಕಲಿಕೆ ಅವರಿಗೆ ಬಿಟ್ಟದ್ದು.ಉಪಾಧ್ಯಾಯರ ಸಹಾಯ ಬೇಕಾದಾಗ ಅವರೊದಗುತ್ತಾರೆ. ಮಧ್ಯಾಹ್ನ ಎಲ್ಲರೂ ಕಲೆತು ಊಟ ಮಾಡಿದ ಮೇಲೆ ತರಗತಿಗಳೆಂದು ಕರೆಸಿಕೊಳ್ಳುವ ರೈಲಿನ ಬೋಗಿಗಳಿಗೆ ಹೋಗುವಷ್ಟಿಲ್ಲ. ಹೊರಗೆ ನಿಸರ್ಗದಲ್ಲಿ ಮಿಕ್ಕೆಲ್ಲಾ ಸಹಜ ಕಲಿಕೆ. ನಿರ್ಬಂಧಿಸುವರಿಲ್ಲ, ತಾಕೀತು ಮಾಡುವವರಿಲ್ಲ, ಕಲಿಸುವಿಕೆ, ಕಲಿಯುವಿಕೆ, ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಸಂಬಂಧ ಎಲ್ಲವೂ ಸಹಜ.

ತೊತ್ತೊ ತನ್ನ ಮುನ್ನುಡಿಯಲ್ಲಿ ಹೇಳುವ ಮಾತು ನಿಜ. “ಈಗ ತೊಮೊಯೆದಂತಹ ಶಾಲೆಗಳಿದ್ದಿದ್ದರೆ ಇಂದು ಕಂಡುಬರುತ್ತಿರುವ ಕ್ರೌರ್ಯ ಎಷ್ಟೋ ಕಡಿಮೆಯಾಗುತ್ತಿತ್ತು.”

ಕೊಬಾಯಾಶಿ

ಸೊಸಾಕು ಕೊಬಾಯಾಶಿಯೇ ತೊತ್ತೊ-ಚಾನ್ ಪುಸ್ತಕದ ನಾಯಕ. ತೊಮೊಯೆ ಶಾಲೆಯ ಅಡಿಪಾಯ. ಅವರ ಶಿಕ್ಷಣ ನೀತಿಯೇ ಮಕ್ಕಳಿಗೆ ಉಸಿರಾಡಲು ತಂಗಾಳಿಯನ್ನು ನೀಡುತ್ತಿದ್ದದ್ದು. ಇಡೀ ಪುಸ್ತಕ ಹೇಳುವುದು ಕೊಬಾಯಾಶಿಯವರ ಸಹಜ ಕಲಿಕೆಯ ಪದ್ಧತಿ ಮಕ್ಕಳ ವ್ಯಕ್ತಿತ್ವ ವಿಕಾಸದಲ್ಲಿಸಾಧಿಸಿದ ಯಶಸ್ಸನ್ನು. ಎಲ್ಲಾ ಮಕ್ಕಳೂ ಸ್ವಾಭಾವಿಕವಾಗಿ ಉತ್ತಮರೇ. ಪರಿಸರ ಮತ್ತುದೊಡ್ಡವರ ಬೇಡದೇ ಇರುವ ಪ್ರಭಾವದಿಂದ ಹಾಳಾಗುತ್ತದೆ ಎಂಬುದು ಅವರ ತಿಳಿವಳಿಕೆ. ಮಕ್ಕಳು ತಮ್ಮ ಸಹಜ ಸ್ವಭಾವದಂತೆ ಕಲಿತುಕೊಂಡು ಹೋಗಲು, ಪ್ರಕೃತಿಯಿಂದ ತಿಳಿವಳಿಕೆ ಪಡೆಯಲು ಸಹಕರಿಸುವುದನ್ನು ತಮ್ಮ ಹೊಣೆಯಾಗಿಸಿಕೊಂಡಿದ್ದರು.

ಅವರ ಶಾಲೆಯಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ಎಲ್ಲರೂ ಗ್ರೂಪ್ ಪೋಟೋ ತೆಗೆಸಿಕೊಳ್ಳುವಾಗ ಕೊಬಾಯಾಶಿ ಅಲ್ಲಿಕಾಣುವ ಇತರ ಮಕ್ಕಳನ್ನೆಲ್ಲಾ ಕರೆದು ಪೋಟೋಗೆ ನಿಲ್ಲಿಸಿಕೊಳ್ಳುತ್ತಿದ್ದರು. ಔಪಚಾರಿಕವಾದ ಪದವೀಧರರ ಚಿತ್ರಗಳಿಗಿಂತ ಮಕ್ಕಳ ಜೀವಂತ ಚಿತ್ರಗಳನ್ನು ನೋಡುವ ಪ್ರೀತಿ ಅವರದು.

ಮೊದಲ ದಿನ ತೊತ್ತೊ ಶಾಲೆಗೆ ಸೇರಲು ಬಂದಾಗ ಕೊಬಾಯಾಶಿ ಮಗುವಿಗೆ ಪ್ರಶ್ನೆಗಳನ್ನು ಕೇಳದೇ ಅವಳೇ ಅವಳಿಷ್ಟದ್ದನ್ನೆಲ್ಲಾ ಹೇಳಲು ಬಿಡುತ್ತಾರೆ. ಇದೇ ಅವರಿಗೆ ಮಗುವಿನ ಪ್ರೀತಿ ಪಡೆಯಲು ಸಾಧ್ಯವಾಗುವುದು. ಅವಳು ಹೇಳಿದ್ದನ್ನೆಲ್ಲಾ ಕೇಳಿ, “ನೀನು ನಮ್ಮ ಶಾಲೆಯ ಹುಡುಗಿಯಾಗಿಬಿಟ್ಟೆ”ಎಂದಾಗ ಅವಳು ಅನುಭವಿಸುವ ವಾತ್ಸಲ್ಯ ಅನುಪಮವಾದದ್ದು.

ಅವರು ಪದೇಪದೇ ಹೇಳುತ್ತಿರುತ್ತಾರೆ, “ನೀನು ನಿಜವಾಗಿ ಒಳ್ಳೆಯ ಹುಡುಗಿ”ಅಂತ. ಇದನ್ನು ಕೇಳಿ ಕೇಳಿಯೇ ತೊತ್ತೋ ಆತ್ಮವಿಶ್ವಾಸವನ್ನು ಮತ್ತು ತನ್ನ ಬಗ್ಗೆ ಧನಾತ್ಮಕ ಧೋರಣೆಯನ್ನು ಹೊಂದಲು ಸಾಧ್ಯವಾಗಿದ್ದು. ಇಲ್ಲವಾಗಿದ್ದರೆ ಕೆಟ್ಟ ಹುಡುಗಿ ಎಂಬ ಕೀಳರಿಮೆಯಲ್ಲಿ ತನ್ನ ವ್ಯಕ್ತಿತ್ವವನ್ನು ತಾನೇ ನಾಶ ಮಾಡಿಕೊಳ್ಳುತ್ತಿದ್ದಳೇನೋ ಎಂದು ತಾನೇ ಹೇಳಿಕೊಳ್ಳುತ್ತಾರೆ. ಮುಂದೆ ತೊಮೊಯೆ ಯುದ್ಧದಲ್ಲಿ ನಾಶವಾದಾಗ ಸಂಕಟವಾಗುತ್ತದೆ.

ಇಡೀ ಪುಸ್ತಕವು ನವಿರಾದ ಹಾಸ್ಯ ಮತ್ತು ಗಂಭೀರದಲ್ಲಿ ವಿಚಾರಗಳನ್ನು ತೆರೆದಿಡುತ್ತದೆ. ನಗಿಸುತ್ತದೆ, ಚಿಂತಿಸುವಂತೆ ಮಾಡುತ್ತದೆ. ಮಕ್ಕಳ ವಿಕಾಸಕ್ಕೆ ಪೂರಕವಾದ ಕಲಿಕೆಯ ಕ್ರಮವನ್ನು ಅರಿವಿಗೆಟಕಿಸುತ್ತದೆ.

ಮಕ್ಕಳನ್ನು ಪ್ರೀತಿಸುವವರು ಈ ಪುಸ್ತಕದ ಓದನ್ನು ತಪ್ಪಿಸಿಕೊಂಡರೆ ಒಂದು ಕೊರತೆಯೆಂದೇ ನನ್ನ ಭಾವನೆ. ಇದನ್ನು ಕನ್ನಡಕ್ಕೆ ವಿ ಗಾಯತ್ರಿಯವರು ತಂದಿದ್ದು, ನ್ಯಾಷನಲ್ ಬುಕ್‍ಟ್ರಸ್ಟ್ ಪ್ರಕಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...