Homeಮುಖಪುಟಟಿವಿ ಚಾನೆಲ್‌ಗಳು ಸಮಾಜವನ್ನು ವಿಭಜಿಸುತ್ತಿವೆ: ಸುಪ್ರೀಂ ಕೋರ್ಟ್

ಟಿವಿ ಚಾನೆಲ್‌ಗಳು ಸಮಾಜವನ್ನು ವಿಭಜಿಸುತ್ತಿವೆ: ಸುಪ್ರೀಂ ಕೋರ್ಟ್

- Advertisement -
- Advertisement -

ಭಾರತದಲ್ಲಿ ಟೆಲಿವಿಷನ್ ಚಾನೆಲ್‌ಗಳು ಸಮಾಜವನ್ನು ವಿಭಜಿಸುತ್ತಿವೆ ಮತ್ತು ಸುದ್ದಿಗಳನ್ನು ಸಂವೇದನಾಶೀಲಗೊಳಿಸುವ ಅಜೆಂಡಾ ಹೊಂದಿವೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಈ ವೇಳೆ ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ಪೀಠವು, ಚಾನಲ್‌ಗಳಿಗೆ ಹಣ ನೀಡುವವರು ತಮ್ಮ ವಿಷಯವನ್ನು ನಿರ್ದೇಶಿಸುತ್ತಾರೆ ಎಂದು ಹೇಳಿದರು.

“ಎಲ್ಲವೂ TRP [ಟೆಲಿವಿಷನ್ ರೇಟಿಂಗ್ ಪಾಯಿಂಟ್] ನಿಂದ ನಡೆಸಲ್ಪಡುತ್ತದೆ, ಹಾಗಾಗಿ ಅವರು ವಿಷಯಗಳನ್ನು ಸಂವೇದನಾಶೀಲಗೊಳಿಸುತ್ತಾರೆ. ಇದರಿಂದ ಹೆಚ್ಚಿನ ವೀಕ್ಷಕರಕರನ್ನು ಸೆಳೆಯುವ ಕಾರ್ಯಸೂಚಿಯನ್ನು ಅವರು ಅನುಸರಿಸುತ್ತಾರೆ. ದೃಶ್ಯ ಮಾಧ್ಯಮವು ಪತ್ರಿಕೆಗಿಂತ ಹೆಚ್ಚು ನಿಮ್ಮ ಮೇಲೆ ಪ್ರಭಾವ ಬೀರುತ್ತದೆ” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ನ್ಯಾಯಪೀಠವು ದ್ವೇಷದ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸುತ್ತಿದೆ. ಟೆಲಿವಿಷನ್ ಸುದ್ದಿ ವಾಹಿನಿಗಳು ದ್ವೇಷ ಭಾಷಣಕ್ಕೆ ಅವಕಾಶ ನೀಡುವುದಲ್ಲದೇ ಅದಕ್ಕೆ ಯಾವುದೇ ಶಿಕ್ಷೆಯಿಲ್ಲದೆ ತಪ್ಪಿಸಿಕೊಳ್ಳುವುದನ್ನು ಸೆಪ್ಟೆಂಬರ್‌ನಲ್ಲಿ ನ್ಯಾಯಾಲಯ ಗಮನಿಸಿತ್ತು. ಒಂದು ತಿಂಗಳ ನಂತರ, ಅಪರಾಧಿಗಳ ಯಾವುದೇ ಧರ್ಮವನ್ನು ಲೆಕ್ಕಿಸದೆ, ದೂರುಗಳಿಗೂ ಕಾಯದೆ ದ್ವೇಷ ಭಾಷಣದ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳುವಂತೆ ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಪೊಲೀಸ್ ಪಡೆಗಳಿಗೆ ಸೂಚಿಸಿದೆ.

ದ್ವೇಷದ ಭಾಷಣವನ್ನು ಉತ್ತೇಜಿಸುವ ಅಥವಾ ತೊಡಗಿಸಿಕೊಳ್ಳುವ ಸುದ್ದಿ ನಿರೂಪಕರನ್ನು ಶಿಕ್ಷಿಸಬೇಕು ಎಂದು ಶುಕ್ರವಾರದ ವಿಚಾರಣೆಯಲ್ಲಿ ನ್ಯಾಯಾಲಯ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

“ವಾಹಿನಿಯಲ್ಲಿ ದ್ವೇಷದ ಮಾತುಗಳನ್ನಾಡಿದರೆ ಆಂಕರ್‌ಗಳ ಮೇಲೆ ದಂಡ ವಿಧಿಸಿಬೇಕು. ಅಂತಹ ಆಂಕರ್‌ಗಳನ್ನು ತೆಗೆಯಬಹುದು ಎಂದು ನ್ಯಾಯಾಲಯ ಹೇಳಿದೆ. ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್‌ನ ಕಾರ್ಯವೈಖರಿಯನ್ನು ಟೀಕಿಸಿದ ಪೀಠ, ನಿಯಂತ್ರಕರು ಏನನ್ನೂ ಮಾಡುತ್ತಿಲ್ಲ ಎಂದು ಹೇಳಿದೆ.

ಲೈವ್ ಕಾರ್ಯಕ್ರಮಗಳ ಕಾನೂನಿನ ಪ್ರಕಾರ, “NBSA ಪಕ್ಷಪಾತ ಮಾಡಬಾರದು” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು. “ನೀವು ಎಷ್ಟು ಬಾರಿ ಆಂಕರ್‌ಗಳನ್ನು ತೆಗೆದಿದ್ದೀರಿ? ಚಾನೆಲ್‌ಗಳು ಜನರನ್ನು ಸಮಾನವಾಗಿ ಮಾತನಾಡಲು ಬಿಡುವುದಿಲ್ಲ. ನಿಮ್ಮ ಅಜೆಂಡಾಗಳ ವಿರುದ್ಧ ಜನರು ಅಥವಾ ವಕ್ತಾರರು ಪ್ರಶ್ನೆಗಳನ್ನು ಕೇಳಲು ಬಯಸಿದಾಗ ಅವರ ಧ್ವನಿಯನ್ನು ಮ್ಯೂಟ್ ಮಾಡಲಾಗುತ್ತದೆ. ಆಗ ಪ್ರಶ್ನೆ ಕೇಳಲು ಅವಕಾಶವೇ ಇರುವುದಿಲ್ಲ ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ಈ ವೇಳೆ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಪರ ವಕೀಲ ಅರವಿಂದ್ ದಾತಾರ್ ಮಾತನಾಡಿ, ‘ಹಲವು ಬಾರಿ ಇಂತಹ ಉಲ್ಲಂಘನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಪೀಠಕ್ಕೆ ತಿಳಿಸಿದರು. ಆದರೆ ಸುದರ್ಶನ್ ಟಿವಿ ಮತ್ತು ರಿಪಬ್ಲಿಕ್ ಟಿವಿಯಂತಹ ದೂರದರ್ಶನ ಚಾನೆಲ್‌ಗಳು ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ವ್ಯಾಪ್ತಿಯೊಳಗೆ ಬರುವುದಿಲ್ಲ ಎಂದು ಅವರು ಹೇಳಿದರು.

2020 ರಲ್ಲಿ ಸುದರ್ಶನ್ ನ್ಯೂಸ್‌ನಲ್ಲಿ “ಯುಪಿಎಸ್‌ಸಿ ಜಿಹಾದ್” ಎಂಬ ಕಾರ್ಯಕ್ರಮಕ್ಕೆ ಪ್ರಸಾರವಾಗಿತ್ತು. ಇದಕ್ಕೆ ಸಂಬಂಧಿಸಿದ ಒಂದು ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ವಿದೇಶದಿಂದ ಬರುವ ಭಯೋತ್ಪಾದಕ ನಿಧಿಯನ್ನು ಬಳಸಿಕೊಂಡು ಮುಸ್ಲಿಮರು ನಾಗರಿಕ ಸೇವೆಗಳಿಗೆ “ನುಸುಳುತ್ತಿದ್ದಾರೆ” ಎಂದು ಚಾನೆಲ್ ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...