Homeಮುಖಪುಟಟಿವಿ ಚಾನೆಲ್‌ಗಳು ಸಮಾಜವನ್ನು ವಿಭಜಿಸುತ್ತಿವೆ: ಸುಪ್ರೀಂ ಕೋರ್ಟ್

ಟಿವಿ ಚಾನೆಲ್‌ಗಳು ಸಮಾಜವನ್ನು ವಿಭಜಿಸುತ್ತಿವೆ: ಸುಪ್ರೀಂ ಕೋರ್ಟ್

- Advertisement -
- Advertisement -

ಭಾರತದಲ್ಲಿ ಟೆಲಿವಿಷನ್ ಚಾನೆಲ್‌ಗಳು ಸಮಾಜವನ್ನು ವಿಭಜಿಸುತ್ತಿವೆ ಮತ್ತು ಸುದ್ದಿಗಳನ್ನು ಸಂವೇದನಾಶೀಲಗೊಳಿಸುವ ಅಜೆಂಡಾ ಹೊಂದಿವೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಈ ವೇಳೆ ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ಪೀಠವು, ಚಾನಲ್‌ಗಳಿಗೆ ಹಣ ನೀಡುವವರು ತಮ್ಮ ವಿಷಯವನ್ನು ನಿರ್ದೇಶಿಸುತ್ತಾರೆ ಎಂದು ಹೇಳಿದರು.

“ಎಲ್ಲವೂ TRP [ಟೆಲಿವಿಷನ್ ರೇಟಿಂಗ್ ಪಾಯಿಂಟ್] ನಿಂದ ನಡೆಸಲ್ಪಡುತ್ತದೆ, ಹಾಗಾಗಿ ಅವರು ವಿಷಯಗಳನ್ನು ಸಂವೇದನಾಶೀಲಗೊಳಿಸುತ್ತಾರೆ. ಇದರಿಂದ ಹೆಚ್ಚಿನ ವೀಕ್ಷಕರಕರನ್ನು ಸೆಳೆಯುವ ಕಾರ್ಯಸೂಚಿಯನ್ನು ಅವರು ಅನುಸರಿಸುತ್ತಾರೆ. ದೃಶ್ಯ ಮಾಧ್ಯಮವು ಪತ್ರಿಕೆಗಿಂತ ಹೆಚ್ಚು ನಿಮ್ಮ ಮೇಲೆ ಪ್ರಭಾವ ಬೀರುತ್ತದೆ” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ನ್ಯಾಯಪೀಠವು ದ್ವೇಷದ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸುತ್ತಿದೆ. ಟೆಲಿವಿಷನ್ ಸುದ್ದಿ ವಾಹಿನಿಗಳು ದ್ವೇಷ ಭಾಷಣಕ್ಕೆ ಅವಕಾಶ ನೀಡುವುದಲ್ಲದೇ ಅದಕ್ಕೆ ಯಾವುದೇ ಶಿಕ್ಷೆಯಿಲ್ಲದೆ ತಪ್ಪಿಸಿಕೊಳ್ಳುವುದನ್ನು ಸೆಪ್ಟೆಂಬರ್‌ನಲ್ಲಿ ನ್ಯಾಯಾಲಯ ಗಮನಿಸಿತ್ತು. ಒಂದು ತಿಂಗಳ ನಂತರ, ಅಪರಾಧಿಗಳ ಯಾವುದೇ ಧರ್ಮವನ್ನು ಲೆಕ್ಕಿಸದೆ, ದೂರುಗಳಿಗೂ ಕಾಯದೆ ದ್ವೇಷ ಭಾಷಣದ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳುವಂತೆ ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಪೊಲೀಸ್ ಪಡೆಗಳಿಗೆ ಸೂಚಿಸಿದೆ.

ದ್ವೇಷದ ಭಾಷಣವನ್ನು ಉತ್ತೇಜಿಸುವ ಅಥವಾ ತೊಡಗಿಸಿಕೊಳ್ಳುವ ಸುದ್ದಿ ನಿರೂಪಕರನ್ನು ಶಿಕ್ಷಿಸಬೇಕು ಎಂದು ಶುಕ್ರವಾರದ ವಿಚಾರಣೆಯಲ್ಲಿ ನ್ಯಾಯಾಲಯ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

“ವಾಹಿನಿಯಲ್ಲಿ ದ್ವೇಷದ ಮಾತುಗಳನ್ನಾಡಿದರೆ ಆಂಕರ್‌ಗಳ ಮೇಲೆ ದಂಡ ವಿಧಿಸಿಬೇಕು. ಅಂತಹ ಆಂಕರ್‌ಗಳನ್ನು ತೆಗೆಯಬಹುದು ಎಂದು ನ್ಯಾಯಾಲಯ ಹೇಳಿದೆ. ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್‌ನ ಕಾರ್ಯವೈಖರಿಯನ್ನು ಟೀಕಿಸಿದ ಪೀಠ, ನಿಯಂತ್ರಕರು ಏನನ್ನೂ ಮಾಡುತ್ತಿಲ್ಲ ಎಂದು ಹೇಳಿದೆ.

ಲೈವ್ ಕಾರ್ಯಕ್ರಮಗಳ ಕಾನೂನಿನ ಪ್ರಕಾರ, “NBSA ಪಕ್ಷಪಾತ ಮಾಡಬಾರದು” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು. “ನೀವು ಎಷ್ಟು ಬಾರಿ ಆಂಕರ್‌ಗಳನ್ನು ತೆಗೆದಿದ್ದೀರಿ? ಚಾನೆಲ್‌ಗಳು ಜನರನ್ನು ಸಮಾನವಾಗಿ ಮಾತನಾಡಲು ಬಿಡುವುದಿಲ್ಲ. ನಿಮ್ಮ ಅಜೆಂಡಾಗಳ ವಿರುದ್ಧ ಜನರು ಅಥವಾ ವಕ್ತಾರರು ಪ್ರಶ್ನೆಗಳನ್ನು ಕೇಳಲು ಬಯಸಿದಾಗ ಅವರ ಧ್ವನಿಯನ್ನು ಮ್ಯೂಟ್ ಮಾಡಲಾಗುತ್ತದೆ. ಆಗ ಪ್ರಶ್ನೆ ಕೇಳಲು ಅವಕಾಶವೇ ಇರುವುದಿಲ್ಲ ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ಈ ವೇಳೆ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಪರ ವಕೀಲ ಅರವಿಂದ್ ದಾತಾರ್ ಮಾತನಾಡಿ, ‘ಹಲವು ಬಾರಿ ಇಂತಹ ಉಲ್ಲಂಘನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಪೀಠಕ್ಕೆ ತಿಳಿಸಿದರು. ಆದರೆ ಸುದರ್ಶನ್ ಟಿವಿ ಮತ್ತು ರಿಪಬ್ಲಿಕ್ ಟಿವಿಯಂತಹ ದೂರದರ್ಶನ ಚಾನೆಲ್‌ಗಳು ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ವ್ಯಾಪ್ತಿಯೊಳಗೆ ಬರುವುದಿಲ್ಲ ಎಂದು ಅವರು ಹೇಳಿದರು.

2020 ರಲ್ಲಿ ಸುದರ್ಶನ್ ನ್ಯೂಸ್‌ನಲ್ಲಿ “ಯುಪಿಎಸ್‌ಸಿ ಜಿಹಾದ್” ಎಂಬ ಕಾರ್ಯಕ್ರಮಕ್ಕೆ ಪ್ರಸಾರವಾಗಿತ್ತು. ಇದಕ್ಕೆ ಸಂಬಂಧಿಸಿದ ಒಂದು ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ವಿದೇಶದಿಂದ ಬರುವ ಭಯೋತ್ಪಾದಕ ನಿಧಿಯನ್ನು ಬಳಸಿಕೊಂಡು ಮುಸ್ಲಿಮರು ನಾಗರಿಕ ಸೇವೆಗಳಿಗೆ “ನುಸುಳುತ್ತಿದ್ದಾರೆ” ಎಂದು ಚಾನೆಲ್ ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....