Homeಮುಖಪುಟಟಿವಿ ಚಾನೆಲ್‌ಗಳು ಸಮಾಜವನ್ನು ವಿಭಜಿಸುತ್ತಿವೆ: ಸುಪ್ರೀಂ ಕೋರ್ಟ್

ಟಿವಿ ಚಾನೆಲ್‌ಗಳು ಸಮಾಜವನ್ನು ವಿಭಜಿಸುತ್ತಿವೆ: ಸುಪ್ರೀಂ ಕೋರ್ಟ್

- Advertisement -
- Advertisement -

ಭಾರತದಲ್ಲಿ ಟೆಲಿವಿಷನ್ ಚಾನೆಲ್‌ಗಳು ಸಮಾಜವನ್ನು ವಿಭಜಿಸುತ್ತಿವೆ ಮತ್ತು ಸುದ್ದಿಗಳನ್ನು ಸಂವೇದನಾಶೀಲಗೊಳಿಸುವ ಅಜೆಂಡಾ ಹೊಂದಿವೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಈ ವೇಳೆ ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ಪೀಠವು, ಚಾನಲ್‌ಗಳಿಗೆ ಹಣ ನೀಡುವವರು ತಮ್ಮ ವಿಷಯವನ್ನು ನಿರ್ದೇಶಿಸುತ್ತಾರೆ ಎಂದು ಹೇಳಿದರು.

“ಎಲ್ಲವೂ TRP [ಟೆಲಿವಿಷನ್ ರೇಟಿಂಗ್ ಪಾಯಿಂಟ್] ನಿಂದ ನಡೆಸಲ್ಪಡುತ್ತದೆ, ಹಾಗಾಗಿ ಅವರು ವಿಷಯಗಳನ್ನು ಸಂವೇದನಾಶೀಲಗೊಳಿಸುತ್ತಾರೆ. ಇದರಿಂದ ಹೆಚ್ಚಿನ ವೀಕ್ಷಕರಕರನ್ನು ಸೆಳೆಯುವ ಕಾರ್ಯಸೂಚಿಯನ್ನು ಅವರು ಅನುಸರಿಸುತ್ತಾರೆ. ದೃಶ್ಯ ಮಾಧ್ಯಮವು ಪತ್ರಿಕೆಗಿಂತ ಹೆಚ್ಚು ನಿಮ್ಮ ಮೇಲೆ ಪ್ರಭಾವ ಬೀರುತ್ತದೆ” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ನ್ಯಾಯಪೀಠವು ದ್ವೇಷದ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸುತ್ತಿದೆ. ಟೆಲಿವಿಷನ್ ಸುದ್ದಿ ವಾಹಿನಿಗಳು ದ್ವೇಷ ಭಾಷಣಕ್ಕೆ ಅವಕಾಶ ನೀಡುವುದಲ್ಲದೇ ಅದಕ್ಕೆ ಯಾವುದೇ ಶಿಕ್ಷೆಯಿಲ್ಲದೆ ತಪ್ಪಿಸಿಕೊಳ್ಳುವುದನ್ನು ಸೆಪ್ಟೆಂಬರ್‌ನಲ್ಲಿ ನ್ಯಾಯಾಲಯ ಗಮನಿಸಿತ್ತು. ಒಂದು ತಿಂಗಳ ನಂತರ, ಅಪರಾಧಿಗಳ ಯಾವುದೇ ಧರ್ಮವನ್ನು ಲೆಕ್ಕಿಸದೆ, ದೂರುಗಳಿಗೂ ಕಾಯದೆ ದ್ವೇಷ ಭಾಷಣದ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳುವಂತೆ ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಪೊಲೀಸ್ ಪಡೆಗಳಿಗೆ ಸೂಚಿಸಿದೆ.

ದ್ವೇಷದ ಭಾಷಣವನ್ನು ಉತ್ತೇಜಿಸುವ ಅಥವಾ ತೊಡಗಿಸಿಕೊಳ್ಳುವ ಸುದ್ದಿ ನಿರೂಪಕರನ್ನು ಶಿಕ್ಷಿಸಬೇಕು ಎಂದು ಶುಕ್ರವಾರದ ವಿಚಾರಣೆಯಲ್ಲಿ ನ್ಯಾಯಾಲಯ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

“ವಾಹಿನಿಯಲ್ಲಿ ದ್ವೇಷದ ಮಾತುಗಳನ್ನಾಡಿದರೆ ಆಂಕರ್‌ಗಳ ಮೇಲೆ ದಂಡ ವಿಧಿಸಿಬೇಕು. ಅಂತಹ ಆಂಕರ್‌ಗಳನ್ನು ತೆಗೆಯಬಹುದು ಎಂದು ನ್ಯಾಯಾಲಯ ಹೇಳಿದೆ. ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್‌ನ ಕಾರ್ಯವೈಖರಿಯನ್ನು ಟೀಕಿಸಿದ ಪೀಠ, ನಿಯಂತ್ರಕರು ಏನನ್ನೂ ಮಾಡುತ್ತಿಲ್ಲ ಎಂದು ಹೇಳಿದೆ.

ಲೈವ್ ಕಾರ್ಯಕ್ರಮಗಳ ಕಾನೂನಿನ ಪ್ರಕಾರ, “NBSA ಪಕ್ಷಪಾತ ಮಾಡಬಾರದು” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು. “ನೀವು ಎಷ್ಟು ಬಾರಿ ಆಂಕರ್‌ಗಳನ್ನು ತೆಗೆದಿದ್ದೀರಿ? ಚಾನೆಲ್‌ಗಳು ಜನರನ್ನು ಸಮಾನವಾಗಿ ಮಾತನಾಡಲು ಬಿಡುವುದಿಲ್ಲ. ನಿಮ್ಮ ಅಜೆಂಡಾಗಳ ವಿರುದ್ಧ ಜನರು ಅಥವಾ ವಕ್ತಾರರು ಪ್ರಶ್ನೆಗಳನ್ನು ಕೇಳಲು ಬಯಸಿದಾಗ ಅವರ ಧ್ವನಿಯನ್ನು ಮ್ಯೂಟ್ ಮಾಡಲಾಗುತ್ತದೆ. ಆಗ ಪ್ರಶ್ನೆ ಕೇಳಲು ಅವಕಾಶವೇ ಇರುವುದಿಲ್ಲ ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ಈ ವೇಳೆ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಪರ ವಕೀಲ ಅರವಿಂದ್ ದಾತಾರ್ ಮಾತನಾಡಿ, ‘ಹಲವು ಬಾರಿ ಇಂತಹ ಉಲ್ಲಂಘನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಪೀಠಕ್ಕೆ ತಿಳಿಸಿದರು. ಆದರೆ ಸುದರ್ಶನ್ ಟಿವಿ ಮತ್ತು ರಿಪಬ್ಲಿಕ್ ಟಿವಿಯಂತಹ ದೂರದರ್ಶನ ಚಾನೆಲ್‌ಗಳು ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ವ್ಯಾಪ್ತಿಯೊಳಗೆ ಬರುವುದಿಲ್ಲ ಎಂದು ಅವರು ಹೇಳಿದರು.

2020 ರಲ್ಲಿ ಸುದರ್ಶನ್ ನ್ಯೂಸ್‌ನಲ್ಲಿ “ಯುಪಿಎಸ್‌ಸಿ ಜಿಹಾದ್” ಎಂಬ ಕಾರ್ಯಕ್ರಮಕ್ಕೆ ಪ್ರಸಾರವಾಗಿತ್ತು. ಇದಕ್ಕೆ ಸಂಬಂಧಿಸಿದ ಒಂದು ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ವಿದೇಶದಿಂದ ಬರುವ ಭಯೋತ್ಪಾದಕ ನಿಧಿಯನ್ನು ಬಳಸಿಕೊಂಡು ಮುಸ್ಲಿಮರು ನಾಗರಿಕ ಸೇವೆಗಳಿಗೆ “ನುಸುಳುತ್ತಿದ್ದಾರೆ” ಎಂದು ಚಾನೆಲ್ ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...