Homeಮುಖಪುಟಟೆಲಿವಿಶನ್ ರೇಟಿಂಗ್ಸ್‌: ಮಾರ್ಗಸೂಚಿಗಳಲ್ಲಿ ಬದಲಾವಣೆ ತರಲು ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಟೆಲಿವಿಶನ್ ರೇಟಿಂಗ್ಸ್‌: ಮಾರ್ಗಸೂಚಿಗಳಲ್ಲಿ ಬದಲಾವಣೆ ತರಲು ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳಲ್ಲಿನ ಬದಲಾವಣೆಗಳ ಮೂಲಕ ದೃಢವಾದ, ಪಾರದರ್ಶಕ ಮತ್ತು ಜವಾಬ್ದಾರಿಯುತ ರೇಟಿಂಗ್ ವ್ಯವಸ್ಥೆಗೆ ಶಿಫಾರಸುಗಳನ್ನು ಮಾಡಲು ಸಮಿತಿಯನ್ನು ಕೋರಿದೆ

- Advertisement -
- Advertisement -

ಭಾರತದಲ್ಲಿ ಟೆಲಿವಿಶನ್ ರೇಟಿಂಗ್ಸ್‌ ಕುರಿತು ಮಾರ್ಗಸೂಚಿಗಳನ್ನು ಪರಿಶೀಲಿಸಲು ಕೇಂದ್ರವು ಸಮಿತಿಯನ್ನು ರಚಿಸಿದ್ದು, ನಾಲ್ಕು ಸದಸ್ಯರ ಸಮಿತಿಯ ನೇತೃತ್ವವನ್ನು ಪ್ರಸಾರ ಭಾರತಿಯ ಮುಖ್ಯಸ್ಥರಾದ ಶಶಿ ಎಸ್.ವೆಂಪತಿ ವಹಿಸಲಿದ್ದಾರೆ.

ಅಸ್ತಿತ್ವದಲ್ಲಿರುವ ಟೆಲಿವಿಶನ್ ರೇಟಿಂಗ್ಸ್ ಮಾರ್ಗಸೂಚಿಗಳಲ್ಲಿ ಬದಲಾವಣೆ ತರುವ ಮೂಲಕ ದೃಢವಾದ, ಪಾರದರ್ಶಕ ಮತ್ತು ಜವಾಬ್ದಾರಿಯುತ ರೇಟಿಂಗ್ ವ್ಯವಸ್ಥೆಗೆ ಶಿಫಾರಸುಗಳನ್ನು ಮಾಡಲು ಸಮಿತಿಯನ್ನು ಕೋರಿದೆ.

“ಮಾರ್ಗಸೂಚಿಗಳ ಕೆಲವು ವರ್ಷಗಳ ಕಾರ್ಯಾಚರಣೆಯ ಆಧಾರದ ಮೇಲೆ, ವಿಶೇಷವಾಗಿ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (TRAI) ಇತ್ತೀಚಿನ ಶಿಫಾರಸುಗಳು, ವ್ಯವಸ್ಥೆಯನ್ನು ಪರಿಹರಿಸಲು ತಾಂತ್ರಿಕ ಪ್ರಗತಿಗಳು/ಆವಿಷ್ಕಾರಗಳನ್ನು ಗಮನದಲ್ಲಿಟ್ಟುಕೊಂಡು ಟೆಲಿವಿಶನ್ ರೇಟಿಂಗ್ಸ್ ಮಾರ್ಗಸೂಚಿಗಳ ಬಗ್ಗೆ ಹೊಸ ನೋಟದ ಅವಶ್ಯಕತೆಯಿದೆ. ವಿಶ್ವಾಸಾರ್ಹ ಮತ್ತು ಪಾರದರ್ಶಕ ರೇಟಿಂಗ್ ವ್ಯವಸ್ಥೆಯ ಕಾರ್ಯವಿಧಾನಗಳನ್ನು ಮತ್ತಷ್ಟು ಬಲಪಡಿಸುವ ಮೂಲಕ ಭಾರತದಲ್ಲಿ ದೂರದರ್ಶನ ರೇಟಿಂಗ್ ವ್ಯವಸ್ಥೆಯ ವಿಭಿನ್ನ ಅಂಶಗಳನ್ನು ಅಧ್ಯಯನ ಮಾಡಲು ಒಂದು ಸಮಿತಿಯನ್ನು ರಚಿಸಲಾಗಿದೆ. ಏಕೆಂದರೆ ಈಗಾಗಲೇ ಇರುವ ವ್ಯವಸ್ಥೆ ಒಂದು ನಿರ್ದಿಷ್ಟ ಅವಧಿಗೆ ಮಾತ್ರ ವಿಕಸನಗೊಂಡವುಗಳಾಗಿವೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಧಿಸೂಚನೆ ತಿಳಿಸಿದೆ.

ಇದನ್ನೂ ಓದಿ: ಟಿಆರ್‌ಪಿ ಹಗರಣ: ವೀಕ್ಷಕರ ಸಂಖ್ಯೆ ಹೆಚ್ಚಿಸಲು 15 ಲಕ್ಷ ಪಾವತಿ ಮಾಡಿದ್ದ ರಿಪಬ್ಲಿಕ್ ಟಿವಿ!

ಸಮಿತಿಯು ಅಸ್ತಿತ್ವದಲ್ಲಿರುವ ಟೆಲಿವಿಶನ್ ರೇಟಿಂಗ್ಸ್ ವ್ಯವಸ್ಥೆಯ ಮೌಲ್ಯಮಾಪನವನ್ನು ಕೈಗೊಳ್ಳುತ್ತದೆ. ಕಾಲಕಾಲಕ್ಕೆ ಸೂಚಿಸಲಾದ TRAI ಶಿಫಾರಸುಗಳು, ಒಟ್ಟಾರೆ ಉದ್ಯಮದ ಸನ್ನಿವೇಶ ಮತ್ತು ಮಧ್ಯಸ್ಥಗಾರರ ಅಗತ್ಯತೆಗಳನ್ನು ಪರಿಹರಿಸುವುದು ಮತ್ತು ಬದಲಾವಣೆ ತರುವ ಮೂಲಕ ದೃಢವಾದ, ಪಾರದರ್ಶಕ ಮತ್ತು ಜವಾಬ್ದಾರಿಯುತ ರೇಟಿಂಗ್ ವ್ಯವಸ್ಥೆಗೆ ಶಿಫಾರಸುಗಳನ್ನು ಮಾಡುತ್ತದೆ ಎಂದು ಅದು ಹೇಳಿದೆ.

ಇತ್ತೀಚೆಗೆ ಕೇಳಿಬಂದಿರುವ ಟಿಆರ್‌ಪಿ ಹಗರಣದ ನಡುವೆ ಕೇಂದ್ರದ ಈ ಕ್ರಮವು ಬಹುಮುಖ್ಯವೆನಿಸಿದೆ.

ಮುಂಬೈ ಪೊಲೀಸರು ಇತ್ತೀಚೆಗೆ ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್‌ಪಿ) ಹಗರಣವನ್ನು ಭೇದಿಸಿದ್ದಾರೆಂದು ಹೇಳಿಕೊಂಡಿದ್ದು, ಈ ಸಂಬಂಧ ನ್ಯೂಸ್ ಚಾನೆಲ್ ನೌಕರರು ಸೇರಿದಂತೆ ಕನಿಷ್ಠ ಐದು ಜನರನ್ನು ಬಂಧಿಸಿದ್ದಾರೆ.

ಆಪಾದಿತ ಹಗರಣದ ವಿವಾದಗಳು ಹೆಚ್ಚಾಗುತ್ತಿದ್ದಂತೆ, ಟಿಆರ್‌ಪಿ ಡೇಟಾವನ್ನು ಒದಗಿಸುವ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್), ಭಾಷೆಗಳಾದ್ಯಂತ ಸುದ್ದಿ ವಾಹಿನಿಗಳ ಸಾಪ್ತಾಹಿಕ ರೇಟಿಂಗ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.


ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...