Homeಮುಖಪುಟಟೆಲಿವಿಶನ್ ರೇಟಿಂಗ್ಸ್‌: ಮಾರ್ಗಸೂಚಿಗಳಲ್ಲಿ ಬದಲಾವಣೆ ತರಲು ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಟೆಲಿವಿಶನ್ ರೇಟಿಂಗ್ಸ್‌: ಮಾರ್ಗಸೂಚಿಗಳಲ್ಲಿ ಬದಲಾವಣೆ ತರಲು ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳಲ್ಲಿನ ಬದಲಾವಣೆಗಳ ಮೂಲಕ ದೃಢವಾದ, ಪಾರದರ್ಶಕ ಮತ್ತು ಜವಾಬ್ದಾರಿಯುತ ರೇಟಿಂಗ್ ವ್ಯವಸ್ಥೆಗೆ ಶಿಫಾರಸುಗಳನ್ನು ಮಾಡಲು ಸಮಿತಿಯನ್ನು ಕೋರಿದೆ

- Advertisement -
- Advertisement -

ಭಾರತದಲ್ಲಿ ಟೆಲಿವಿಶನ್ ರೇಟಿಂಗ್ಸ್‌ ಕುರಿತು ಮಾರ್ಗಸೂಚಿಗಳನ್ನು ಪರಿಶೀಲಿಸಲು ಕೇಂದ್ರವು ಸಮಿತಿಯನ್ನು ರಚಿಸಿದ್ದು, ನಾಲ್ಕು ಸದಸ್ಯರ ಸಮಿತಿಯ ನೇತೃತ್ವವನ್ನು ಪ್ರಸಾರ ಭಾರತಿಯ ಮುಖ್ಯಸ್ಥರಾದ ಶಶಿ ಎಸ್.ವೆಂಪತಿ ವಹಿಸಲಿದ್ದಾರೆ.

ಅಸ್ತಿತ್ವದಲ್ಲಿರುವ ಟೆಲಿವಿಶನ್ ರೇಟಿಂಗ್ಸ್ ಮಾರ್ಗಸೂಚಿಗಳಲ್ಲಿ ಬದಲಾವಣೆ ತರುವ ಮೂಲಕ ದೃಢವಾದ, ಪಾರದರ್ಶಕ ಮತ್ತು ಜವಾಬ್ದಾರಿಯುತ ರೇಟಿಂಗ್ ವ್ಯವಸ್ಥೆಗೆ ಶಿಫಾರಸುಗಳನ್ನು ಮಾಡಲು ಸಮಿತಿಯನ್ನು ಕೋರಿದೆ.

“ಮಾರ್ಗಸೂಚಿಗಳ ಕೆಲವು ವರ್ಷಗಳ ಕಾರ್ಯಾಚರಣೆಯ ಆಧಾರದ ಮೇಲೆ, ವಿಶೇಷವಾಗಿ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (TRAI) ಇತ್ತೀಚಿನ ಶಿಫಾರಸುಗಳು, ವ್ಯವಸ್ಥೆಯನ್ನು ಪರಿಹರಿಸಲು ತಾಂತ್ರಿಕ ಪ್ರಗತಿಗಳು/ಆವಿಷ್ಕಾರಗಳನ್ನು ಗಮನದಲ್ಲಿಟ್ಟುಕೊಂಡು ಟೆಲಿವಿಶನ್ ರೇಟಿಂಗ್ಸ್ ಮಾರ್ಗಸೂಚಿಗಳ ಬಗ್ಗೆ ಹೊಸ ನೋಟದ ಅವಶ್ಯಕತೆಯಿದೆ. ವಿಶ್ವಾಸಾರ್ಹ ಮತ್ತು ಪಾರದರ್ಶಕ ರೇಟಿಂಗ್ ವ್ಯವಸ್ಥೆಯ ಕಾರ್ಯವಿಧಾನಗಳನ್ನು ಮತ್ತಷ್ಟು ಬಲಪಡಿಸುವ ಮೂಲಕ ಭಾರತದಲ್ಲಿ ದೂರದರ್ಶನ ರೇಟಿಂಗ್ ವ್ಯವಸ್ಥೆಯ ವಿಭಿನ್ನ ಅಂಶಗಳನ್ನು ಅಧ್ಯಯನ ಮಾಡಲು ಒಂದು ಸಮಿತಿಯನ್ನು ರಚಿಸಲಾಗಿದೆ. ಏಕೆಂದರೆ ಈಗಾಗಲೇ ಇರುವ ವ್ಯವಸ್ಥೆ ಒಂದು ನಿರ್ದಿಷ್ಟ ಅವಧಿಗೆ ಮಾತ್ರ ವಿಕಸನಗೊಂಡವುಗಳಾಗಿವೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಧಿಸೂಚನೆ ತಿಳಿಸಿದೆ.

ಇದನ್ನೂ ಓದಿ: ಟಿಆರ್‌ಪಿ ಹಗರಣ: ವೀಕ್ಷಕರ ಸಂಖ್ಯೆ ಹೆಚ್ಚಿಸಲು 15 ಲಕ್ಷ ಪಾವತಿ ಮಾಡಿದ್ದ ರಿಪಬ್ಲಿಕ್ ಟಿವಿ!

ಸಮಿತಿಯು ಅಸ್ತಿತ್ವದಲ್ಲಿರುವ ಟೆಲಿವಿಶನ್ ರೇಟಿಂಗ್ಸ್ ವ್ಯವಸ್ಥೆಯ ಮೌಲ್ಯಮಾಪನವನ್ನು ಕೈಗೊಳ್ಳುತ್ತದೆ. ಕಾಲಕಾಲಕ್ಕೆ ಸೂಚಿಸಲಾದ TRAI ಶಿಫಾರಸುಗಳು, ಒಟ್ಟಾರೆ ಉದ್ಯಮದ ಸನ್ನಿವೇಶ ಮತ್ತು ಮಧ್ಯಸ್ಥಗಾರರ ಅಗತ್ಯತೆಗಳನ್ನು ಪರಿಹರಿಸುವುದು ಮತ್ತು ಬದಲಾವಣೆ ತರುವ ಮೂಲಕ ದೃಢವಾದ, ಪಾರದರ್ಶಕ ಮತ್ತು ಜವಾಬ್ದಾರಿಯುತ ರೇಟಿಂಗ್ ವ್ಯವಸ್ಥೆಗೆ ಶಿಫಾರಸುಗಳನ್ನು ಮಾಡುತ್ತದೆ ಎಂದು ಅದು ಹೇಳಿದೆ.

ಇತ್ತೀಚೆಗೆ ಕೇಳಿಬಂದಿರುವ ಟಿಆರ್‌ಪಿ ಹಗರಣದ ನಡುವೆ ಕೇಂದ್ರದ ಈ ಕ್ರಮವು ಬಹುಮುಖ್ಯವೆನಿಸಿದೆ.

ಮುಂಬೈ ಪೊಲೀಸರು ಇತ್ತೀಚೆಗೆ ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್‌ಪಿ) ಹಗರಣವನ್ನು ಭೇದಿಸಿದ್ದಾರೆಂದು ಹೇಳಿಕೊಂಡಿದ್ದು, ಈ ಸಂಬಂಧ ನ್ಯೂಸ್ ಚಾನೆಲ್ ನೌಕರರು ಸೇರಿದಂತೆ ಕನಿಷ್ಠ ಐದು ಜನರನ್ನು ಬಂಧಿಸಿದ್ದಾರೆ.

ಆಪಾದಿತ ಹಗರಣದ ವಿವಾದಗಳು ಹೆಚ್ಚಾಗುತ್ತಿದ್ದಂತೆ, ಟಿಆರ್‌ಪಿ ಡೇಟಾವನ್ನು ಒದಗಿಸುವ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್), ಭಾಷೆಗಳಾದ್ಯಂತ ಸುದ್ದಿ ವಾಹಿನಿಗಳ ಸಾಪ್ತಾಹಿಕ ರೇಟಿಂಗ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.


ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...