Homeಮುಖಪುಟಟೆಲಿವಿಶನ್ ರೇಟಿಂಗ್ಸ್‌: ಮಾರ್ಗಸೂಚಿಗಳಲ್ಲಿ ಬದಲಾವಣೆ ತರಲು ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಟೆಲಿವಿಶನ್ ರೇಟಿಂಗ್ಸ್‌: ಮಾರ್ಗಸೂಚಿಗಳಲ್ಲಿ ಬದಲಾವಣೆ ತರಲು ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳಲ್ಲಿನ ಬದಲಾವಣೆಗಳ ಮೂಲಕ ದೃಢವಾದ, ಪಾರದರ್ಶಕ ಮತ್ತು ಜವಾಬ್ದಾರಿಯುತ ರೇಟಿಂಗ್ ವ್ಯವಸ್ಥೆಗೆ ಶಿಫಾರಸುಗಳನ್ನು ಮಾಡಲು ಸಮಿತಿಯನ್ನು ಕೋರಿದೆ

- Advertisement -
- Advertisement -

ಭಾರತದಲ್ಲಿ ಟೆಲಿವಿಶನ್ ರೇಟಿಂಗ್ಸ್‌ ಕುರಿತು ಮಾರ್ಗಸೂಚಿಗಳನ್ನು ಪರಿಶೀಲಿಸಲು ಕೇಂದ್ರವು ಸಮಿತಿಯನ್ನು ರಚಿಸಿದ್ದು, ನಾಲ್ಕು ಸದಸ್ಯರ ಸಮಿತಿಯ ನೇತೃತ್ವವನ್ನು ಪ್ರಸಾರ ಭಾರತಿಯ ಮುಖ್ಯಸ್ಥರಾದ ಶಶಿ ಎಸ್.ವೆಂಪತಿ ವಹಿಸಲಿದ್ದಾರೆ.

ಅಸ್ತಿತ್ವದಲ್ಲಿರುವ ಟೆಲಿವಿಶನ್ ರೇಟಿಂಗ್ಸ್ ಮಾರ್ಗಸೂಚಿಗಳಲ್ಲಿ ಬದಲಾವಣೆ ತರುವ ಮೂಲಕ ದೃಢವಾದ, ಪಾರದರ್ಶಕ ಮತ್ತು ಜವಾಬ್ದಾರಿಯುತ ರೇಟಿಂಗ್ ವ್ಯವಸ್ಥೆಗೆ ಶಿಫಾರಸುಗಳನ್ನು ಮಾಡಲು ಸಮಿತಿಯನ್ನು ಕೋರಿದೆ.

“ಮಾರ್ಗಸೂಚಿಗಳ ಕೆಲವು ವರ್ಷಗಳ ಕಾರ್ಯಾಚರಣೆಯ ಆಧಾರದ ಮೇಲೆ, ವಿಶೇಷವಾಗಿ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (TRAI) ಇತ್ತೀಚಿನ ಶಿಫಾರಸುಗಳು, ವ್ಯವಸ್ಥೆಯನ್ನು ಪರಿಹರಿಸಲು ತಾಂತ್ರಿಕ ಪ್ರಗತಿಗಳು/ಆವಿಷ್ಕಾರಗಳನ್ನು ಗಮನದಲ್ಲಿಟ್ಟುಕೊಂಡು ಟೆಲಿವಿಶನ್ ರೇಟಿಂಗ್ಸ್ ಮಾರ್ಗಸೂಚಿಗಳ ಬಗ್ಗೆ ಹೊಸ ನೋಟದ ಅವಶ್ಯಕತೆಯಿದೆ. ವಿಶ್ವಾಸಾರ್ಹ ಮತ್ತು ಪಾರದರ್ಶಕ ರೇಟಿಂಗ್ ವ್ಯವಸ್ಥೆಯ ಕಾರ್ಯವಿಧಾನಗಳನ್ನು ಮತ್ತಷ್ಟು ಬಲಪಡಿಸುವ ಮೂಲಕ ಭಾರತದಲ್ಲಿ ದೂರದರ್ಶನ ರೇಟಿಂಗ್ ವ್ಯವಸ್ಥೆಯ ವಿಭಿನ್ನ ಅಂಶಗಳನ್ನು ಅಧ್ಯಯನ ಮಾಡಲು ಒಂದು ಸಮಿತಿಯನ್ನು ರಚಿಸಲಾಗಿದೆ. ಏಕೆಂದರೆ ಈಗಾಗಲೇ ಇರುವ ವ್ಯವಸ್ಥೆ ಒಂದು ನಿರ್ದಿಷ್ಟ ಅವಧಿಗೆ ಮಾತ್ರ ವಿಕಸನಗೊಂಡವುಗಳಾಗಿವೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಧಿಸೂಚನೆ ತಿಳಿಸಿದೆ.

ಇದನ್ನೂ ಓದಿ: ಟಿಆರ್‌ಪಿ ಹಗರಣ: ವೀಕ್ಷಕರ ಸಂಖ್ಯೆ ಹೆಚ್ಚಿಸಲು 15 ಲಕ್ಷ ಪಾವತಿ ಮಾಡಿದ್ದ ರಿಪಬ್ಲಿಕ್ ಟಿವಿ!

ಸಮಿತಿಯು ಅಸ್ತಿತ್ವದಲ್ಲಿರುವ ಟೆಲಿವಿಶನ್ ರೇಟಿಂಗ್ಸ್ ವ್ಯವಸ್ಥೆಯ ಮೌಲ್ಯಮಾಪನವನ್ನು ಕೈಗೊಳ್ಳುತ್ತದೆ. ಕಾಲಕಾಲಕ್ಕೆ ಸೂಚಿಸಲಾದ TRAI ಶಿಫಾರಸುಗಳು, ಒಟ್ಟಾರೆ ಉದ್ಯಮದ ಸನ್ನಿವೇಶ ಮತ್ತು ಮಧ್ಯಸ್ಥಗಾರರ ಅಗತ್ಯತೆಗಳನ್ನು ಪರಿಹರಿಸುವುದು ಮತ್ತು ಬದಲಾವಣೆ ತರುವ ಮೂಲಕ ದೃಢವಾದ, ಪಾರದರ್ಶಕ ಮತ್ತು ಜವಾಬ್ದಾರಿಯುತ ರೇಟಿಂಗ್ ವ್ಯವಸ್ಥೆಗೆ ಶಿಫಾರಸುಗಳನ್ನು ಮಾಡುತ್ತದೆ ಎಂದು ಅದು ಹೇಳಿದೆ.

ಇತ್ತೀಚೆಗೆ ಕೇಳಿಬಂದಿರುವ ಟಿಆರ್‌ಪಿ ಹಗರಣದ ನಡುವೆ ಕೇಂದ್ರದ ಈ ಕ್ರಮವು ಬಹುಮುಖ್ಯವೆನಿಸಿದೆ.

ಮುಂಬೈ ಪೊಲೀಸರು ಇತ್ತೀಚೆಗೆ ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್‌ಪಿ) ಹಗರಣವನ್ನು ಭೇದಿಸಿದ್ದಾರೆಂದು ಹೇಳಿಕೊಂಡಿದ್ದು, ಈ ಸಂಬಂಧ ನ್ಯೂಸ್ ಚಾನೆಲ್ ನೌಕರರು ಸೇರಿದಂತೆ ಕನಿಷ್ಠ ಐದು ಜನರನ್ನು ಬಂಧಿಸಿದ್ದಾರೆ.

ಆಪಾದಿತ ಹಗರಣದ ವಿವಾದಗಳು ಹೆಚ್ಚಾಗುತ್ತಿದ್ದಂತೆ, ಟಿಆರ್‌ಪಿ ಡೇಟಾವನ್ನು ಒದಗಿಸುವ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್), ಭಾಷೆಗಳಾದ್ಯಂತ ಸುದ್ದಿ ವಾಹಿನಿಗಳ ಸಾಪ್ತಾಹಿಕ ರೇಟಿಂಗ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.


ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...