Homeಮುಖಪುಟಟೆಲಿವಿಶನ್ ರೇಟಿಂಗ್ಸ್‌: ಮಾರ್ಗಸೂಚಿಗಳಲ್ಲಿ ಬದಲಾವಣೆ ತರಲು ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಟೆಲಿವಿಶನ್ ರೇಟಿಂಗ್ಸ್‌: ಮಾರ್ಗಸೂಚಿಗಳಲ್ಲಿ ಬದಲಾವಣೆ ತರಲು ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳಲ್ಲಿನ ಬದಲಾವಣೆಗಳ ಮೂಲಕ ದೃಢವಾದ, ಪಾರದರ್ಶಕ ಮತ್ತು ಜವಾಬ್ದಾರಿಯುತ ರೇಟಿಂಗ್ ವ್ಯವಸ್ಥೆಗೆ ಶಿಫಾರಸುಗಳನ್ನು ಮಾಡಲು ಸಮಿತಿಯನ್ನು ಕೋರಿದೆ

- Advertisement -
- Advertisement -

ಭಾರತದಲ್ಲಿ ಟೆಲಿವಿಶನ್ ರೇಟಿಂಗ್ಸ್‌ ಕುರಿತು ಮಾರ್ಗಸೂಚಿಗಳನ್ನು ಪರಿಶೀಲಿಸಲು ಕೇಂದ್ರವು ಸಮಿತಿಯನ್ನು ರಚಿಸಿದ್ದು, ನಾಲ್ಕು ಸದಸ್ಯರ ಸಮಿತಿಯ ನೇತೃತ್ವವನ್ನು ಪ್ರಸಾರ ಭಾರತಿಯ ಮುಖ್ಯಸ್ಥರಾದ ಶಶಿ ಎಸ್.ವೆಂಪತಿ ವಹಿಸಲಿದ್ದಾರೆ.

ಅಸ್ತಿತ್ವದಲ್ಲಿರುವ ಟೆಲಿವಿಶನ್ ರೇಟಿಂಗ್ಸ್ ಮಾರ್ಗಸೂಚಿಗಳಲ್ಲಿ ಬದಲಾವಣೆ ತರುವ ಮೂಲಕ ದೃಢವಾದ, ಪಾರದರ್ಶಕ ಮತ್ತು ಜವಾಬ್ದಾರಿಯುತ ರೇಟಿಂಗ್ ವ್ಯವಸ್ಥೆಗೆ ಶಿಫಾರಸುಗಳನ್ನು ಮಾಡಲು ಸಮಿತಿಯನ್ನು ಕೋರಿದೆ.

“ಮಾರ್ಗಸೂಚಿಗಳ ಕೆಲವು ವರ್ಷಗಳ ಕಾರ್ಯಾಚರಣೆಯ ಆಧಾರದ ಮೇಲೆ, ವಿಶೇಷವಾಗಿ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (TRAI) ಇತ್ತೀಚಿನ ಶಿಫಾರಸುಗಳು, ವ್ಯವಸ್ಥೆಯನ್ನು ಪರಿಹರಿಸಲು ತಾಂತ್ರಿಕ ಪ್ರಗತಿಗಳು/ಆವಿಷ್ಕಾರಗಳನ್ನು ಗಮನದಲ್ಲಿಟ್ಟುಕೊಂಡು ಟೆಲಿವಿಶನ್ ರೇಟಿಂಗ್ಸ್ ಮಾರ್ಗಸೂಚಿಗಳ ಬಗ್ಗೆ ಹೊಸ ನೋಟದ ಅವಶ್ಯಕತೆಯಿದೆ. ವಿಶ್ವಾಸಾರ್ಹ ಮತ್ತು ಪಾರದರ್ಶಕ ರೇಟಿಂಗ್ ವ್ಯವಸ್ಥೆಯ ಕಾರ್ಯವಿಧಾನಗಳನ್ನು ಮತ್ತಷ್ಟು ಬಲಪಡಿಸುವ ಮೂಲಕ ಭಾರತದಲ್ಲಿ ದೂರದರ್ಶನ ರೇಟಿಂಗ್ ವ್ಯವಸ್ಥೆಯ ವಿಭಿನ್ನ ಅಂಶಗಳನ್ನು ಅಧ್ಯಯನ ಮಾಡಲು ಒಂದು ಸಮಿತಿಯನ್ನು ರಚಿಸಲಾಗಿದೆ. ಏಕೆಂದರೆ ಈಗಾಗಲೇ ಇರುವ ವ್ಯವಸ್ಥೆ ಒಂದು ನಿರ್ದಿಷ್ಟ ಅವಧಿಗೆ ಮಾತ್ರ ವಿಕಸನಗೊಂಡವುಗಳಾಗಿವೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಧಿಸೂಚನೆ ತಿಳಿಸಿದೆ.

ಇದನ್ನೂ ಓದಿ: ಟಿಆರ್‌ಪಿ ಹಗರಣ: ವೀಕ್ಷಕರ ಸಂಖ್ಯೆ ಹೆಚ್ಚಿಸಲು 15 ಲಕ್ಷ ಪಾವತಿ ಮಾಡಿದ್ದ ರಿಪಬ್ಲಿಕ್ ಟಿವಿ!

ಸಮಿತಿಯು ಅಸ್ತಿತ್ವದಲ್ಲಿರುವ ಟೆಲಿವಿಶನ್ ರೇಟಿಂಗ್ಸ್ ವ್ಯವಸ್ಥೆಯ ಮೌಲ್ಯಮಾಪನವನ್ನು ಕೈಗೊಳ್ಳುತ್ತದೆ. ಕಾಲಕಾಲಕ್ಕೆ ಸೂಚಿಸಲಾದ TRAI ಶಿಫಾರಸುಗಳು, ಒಟ್ಟಾರೆ ಉದ್ಯಮದ ಸನ್ನಿವೇಶ ಮತ್ತು ಮಧ್ಯಸ್ಥಗಾರರ ಅಗತ್ಯತೆಗಳನ್ನು ಪರಿಹರಿಸುವುದು ಮತ್ತು ಬದಲಾವಣೆ ತರುವ ಮೂಲಕ ದೃಢವಾದ, ಪಾರದರ್ಶಕ ಮತ್ತು ಜವಾಬ್ದಾರಿಯುತ ರೇಟಿಂಗ್ ವ್ಯವಸ್ಥೆಗೆ ಶಿಫಾರಸುಗಳನ್ನು ಮಾಡುತ್ತದೆ ಎಂದು ಅದು ಹೇಳಿದೆ.

ಇತ್ತೀಚೆಗೆ ಕೇಳಿಬಂದಿರುವ ಟಿಆರ್‌ಪಿ ಹಗರಣದ ನಡುವೆ ಕೇಂದ್ರದ ಈ ಕ್ರಮವು ಬಹುಮುಖ್ಯವೆನಿಸಿದೆ.

ಮುಂಬೈ ಪೊಲೀಸರು ಇತ್ತೀಚೆಗೆ ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್‌ಪಿ) ಹಗರಣವನ್ನು ಭೇದಿಸಿದ್ದಾರೆಂದು ಹೇಳಿಕೊಂಡಿದ್ದು, ಈ ಸಂಬಂಧ ನ್ಯೂಸ್ ಚಾನೆಲ್ ನೌಕರರು ಸೇರಿದಂತೆ ಕನಿಷ್ಠ ಐದು ಜನರನ್ನು ಬಂಧಿಸಿದ್ದಾರೆ.

ಆಪಾದಿತ ಹಗರಣದ ವಿವಾದಗಳು ಹೆಚ್ಚಾಗುತ್ತಿದ್ದಂತೆ, ಟಿಆರ್‌ಪಿ ಡೇಟಾವನ್ನು ಒದಗಿಸುವ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್), ಭಾಷೆಗಳಾದ್ಯಂತ ಸುದ್ದಿ ವಾಹಿನಿಗಳ ಸಾಪ್ತಾಹಿಕ ರೇಟಿಂಗ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.


ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...