Homeಮುಖಪುಟಟಿ.ವಿ9 ತೆಲುಗು ಚಾನೆಲ್ ನ ಮಾಜಿ ಸಿಈಓ ರವಿಪ್ರಕಾಶ್ ಹೊರಕ್ಕೆ: ಕಾರಣವೇನು? ಇಲ್ಲಿದೆ ಶಾಕಿಂಗ್ ಸ್ಟೋರಿ

ಟಿ.ವಿ9 ತೆಲುಗು ಚಾನೆಲ್ ನ ಮಾಜಿ ಸಿಈಓ ರವಿಪ್ರಕಾಶ್ ಹೊರಕ್ಕೆ: ಕಾರಣವೇನು? ಇಲ್ಲಿದೆ ಶಾಕಿಂಗ್ ಸ್ಟೋರಿ

ಹಾರ್ವಡ್ ಬ್ಯುಸಿನೆಸ್ ಸ್ಕೂಲ್‍ನಲ್ಲಿ ಮೀಡಿಯಾ ಸ್ಟಾಟಜಿ ವಿಭಾಗದಲ್ಲಿ ಹಿಡಿತ ಸಾಧಿಸಿಬಂದ ರವಿಪ್ರಕಾಶ್, ತೇಜಾ ಟಿವಿಯಲ್ಲಿ ನ್ಯೂಸ್ ಹೆಡ್ಡ್ ಆಗಿ ಕೆಲಸಕ್ಕೆ ಸೇರಿದ ಸಮಯದಲ್ಲಿ ತನ್ನ ವಿಭಿನ್ನ ಶೈಲಿಯ ಕೆಲಸದಿಂದ ಮಾಧ್ಯಮಲೋಕದ ಮಂದಿಗೆ ಪರಿಚಿತನಾದ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಇತ್ತಿಚಿಗೆ ರಾಜಕೀಯ ವಲಯಕ್ಕಿಂತ ಅತಿ ಭ್ರಷ್ಟವಾಗಿರುವುದು ಮಾಧ್ಯಮ ಎಂದು ನೇರವಾದ ಆರೋಪವನ್ನು ಒಬ್ಬ ಹಿರಿಯ ರಾಜಕಾರಣಿ ಮಾಡಿದ್ದರು. ಅದಕ್ಕೆ ಪೂರಕವೆಂಬಂತೆ ನಮ್ಮ ರಾಜ್ಯದಲ್ಲೂ ಹಲವು ಬ್ಲಾಕ್ ಮೈಲ್ ಮಾದ್ಯಮ ಮುಖ್ಯಸ್ಥರು ಜೈಲಿಗೆ ಹೋಗಿ ಬಂದ ನಿರ್ದಶನಗಳು ನಮ್ಮ ಕಣ್ಣ ಮುಂದೆ ಕಾಣಿಸುತ್ತಿವೆ. ದುಡ್ಡಿಗಾಗಿಯೇ ಸುದ್ದಿ ಎನ್ನುಂತಹ ಕಾಲ ಬಂದು ಬಹಳ ವರ್ಷವೇ ಆಗಿ ಹೋಗಿವೆ. 24/7 ಸುಧ್ಧಿವಾಹಿನಿಗಳೂ ಬಂದ ನಂತರವಂತು ನೈಜ ಸುದ್ಧಿಯ ಜಾಗದಲ್ಲಿ ಕೆಲವು ರಾಜಕೀಯ ಪಕ್ಷಗಳ ವಕ್ತಾರರಂತೆ ಪ್ರೊಪಗಂಡ ಹರಡುವ ಸುದ್ಧಿ ಮನೆಗಳಾಗಿ ಬದಲಾಗಿವೆ. ಎಷ್ಟೋ ಸಲ ತನ್ನ ಮಾಲೀಕನ ಹಿತ ಕಾಪಾಡುವ ನಾಯಿಯಂತಿರುವವರನ್ನು ಮಾತ್ರ ಉಳಿಸಿಕೊಂಡು ಉಳಿದವರನ್ನು ಆಚೆ ತಳ್ಳುವ ಸುದ್ದಿ ಮಾಧ್ಯಮಗಳು ಇವೆ. ಅಂತಹ ಒಂದು ಸ್ಟೋರಿ ಓದಿ.

ಇತ್ತಿಚಿಗೆ ಸುದ್ಧಿವಾಹಿನಿಗಳ ಸಾಲಿನಲ್ಲಿ ಅಗ್ರಗಣ್ಯ ಸ್ಥಾನದಲ್ಲಿರುವ ಟಿ.ವಿ9 ತೆಲುಗು ವಾಹಿನಿಯಲ್ಲಿ ಸಾಕಷ್ಟು ಜಗಳಗಳು ನಡೆದು ಹೋಗಿವೆ. ಬಹಳ ತಿಂಗಳುಗಳಿಂದ ನಡೆಯುತ್ತಿದ್ದ ಜಗಳ ಬಹಳ ವರ್ಷಗಳ ಕಾಲ ಟಿ.ವಿ 9 ಸಿ.ಈ.ಓ ಆಗಿದ್ದ ರವಿಪ್ರಕಾಶ್ ರನ್ನು ಸಂಸ್ಥೆ ದಿಢೀರನೆ ತೆಗೆದು ಹಾಕಿ ಅವರ ಮೇಲೆ ಕೇಸ್ ಹಾಕಿದ್ದು ಈಗ ದೊಡ್ಡ ವಿವಾದವಾಗಿದೆ. ಆದ ನಂತರ ಟಿ.ವಿ9 ಪಾಲುಧಾರಿಕೆ ಮಾರಟದ ವಿವಾದ ಹೊರಬಂದ ನಂತರ ತೆಲುಗು ಮಾಧ್ಯಮ ಕ್ಷೇತ್ರದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟು ಹಾಕಿದೆ. ದುಡ್ಡಿಗಾಗಿ ಬೀದಿ ಜಗಳ ಮಾಡಿಕೊಳ್ಳುತ್ತಿರುವ ಮಾಧ್ಯಮ ಮಂದಿಯನ್ನು ನೋಡಿ ಜನ ಸಿಟ್ಟಿಗೆದ್ದಿದ್ದಾರೆ.

ಟಿ.ವಿ.9 ಸಂಸ್ಥೆಯ ಆಡಳಿತ ಮಂಡಳಿ ಮತ್ತು ರವಿ ಪ್ರಕಾಶ್ ನಡುವಿನ ವಿವಾದ

ಟಿ.ವಿ.9 ಮುಖ್ಯ ಕಾರ್ಯನಿರ್ವಹಣಧಿಕಾರಿಯಾಗಿದ್ದ ರವಿಪ್ರಕಾಶ್ ರನ್ನು ಮೇ ತೀಂಗಳಲ್ಲಿ ಏಕಾಏಕಿ ಕೆಳಗಿಳಿಸಿತು. ಅಸೋಸಿಯೇಟೆಡ್ ಬ್ರಾಡ್‍ಕಾಸಟಿಂಗ್ ಕಂಪನಿ ಪ್ರೈ.ಲಿಮಿಟೆಡ್ (ಎ.ಬಿ.ಸಿ.ಬಿ.ಪಿ.ಎಲ್ – ಟಿವಿ9) ಸಂಸ್ಥೆಯ ಲೆಕ್ಕಪತ್ರಗಳನ್ನು ತಿರುಚಿದ್ದು ಮತ್ತು ಸಂಸ್ಥೆಯನ್ನು ಮೋಸಗೊಳಿಸಿದ್ದಾರೆಂದು ರವಿಪ್ರಕಾಶ್ ಮೇಲೆ ಹೊಸ ಆಡಳೀತ ಮಂಡಳಿ ‘ಅಳಂದಾ ಮೀಡಿಯಾ ಸಂಸ್ಥೆ’ಯ ಕೌಶಿಕ್ ರಾವ್ ರವರು ಸೈಬಾರ್ ಬಾದ್ ಪೋಲೀಸರಿಗೆ ದೂರನ್ನು ನೀಡಿದ್ದರು. ಟಿ.ವಿ9 ಸಂಸ್ಥೆಯ ತನ್ನ ಆಸ್ತಿ ಒಡೆತನದ, ಪಾಲುಗಳ ಮಾರಟದ ಬಗ್ಗೆ ರವಿಪ್ರಕಾಶ್ ಸುಳ್ಳು ಪತ್ರಗಳನ್ನು ಸೃಷ್ಟಿಮಾಡಿದ್ದಾರೆ ಮತ್ತು ತೆಲುಗು ಸಿನಿಮಾ ನಟ ಶಿವಾಜಿ, ಟಿವಿ9 ಸಂಸ್ಥೆಯ ಒಡೆತನದ ಹಕ್ಕುಗಳು ರವಿಪ್ರಕಾಶ್ ನಿಂದ ಖರೀದಿಮಾಡಿದ ರೀತಿಯ ನಕಲಿಪತ್ರಗಳು ಸೃಷ್ಟಿ ಮಾಡಿದ್ದಾರೆ ಇದಕ್ಕೆ ಅವರಿಬ್ಬರ ನಡುವೆ ನಡೆದ ಈಮೈಲ್ ವ್ಯವಹಾರಗಳೇ ಸಾಕ್ಷಿ ಎಂದು ಆರೋಪಿಸಿದ್ದಾರೆ.

ರವಿ ಪ್ರಕಾಶ್

ದೂರು ನೀಡಿದ ದಿನವೇ ಬಂಜಾರಾ ಹಿಲ್ಸ್ ನಲ್ಲಿರುವ ರವಿಪ್ರಕಾಶ್ ಮನೆ ಮತ್ತು ಟಿವಿ9 ಕಛೇರಿಯಲ್ಲಿದ್ದ ಕೆಲವು ಹಾರ್ಡಗ ಡಿಸ್ಕ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಕುರಿತು ಪೋಲಿಸರು ಸೆಕ್ಷನ್ 160, 41 ಅಡಿಯಲ್ಲಿ ಎರಡು ಭಾರಿ ಆತ ಮತ್ತು ಆತನ ಜೊತೆಗಾರ ಆರೋಪಿಗಳಿಗೆ ನೋಟಿಸ್ ನೀಡಿದ್ದಾರೆ. ಅದಕ್ಕೆ ಉತ್ತರಿಸದ ಇವರಿಬ್ಬರು ಬಹಳ ದಿನಗಳ ವರೆಗೆ ಅಜ್ಞಾತವಾಸದಲ್ಲಿದ್ದರು. ಹೈಕೋರ್ಟ್‍ಗೆ ಬೇಲ್ ಗಾಗಿ ಹೋದ ರವಿಪ್ರಕಾಶ್ ಗೆ ಬೇಲ್ ಸಿಕ್ಕಿಲ್ಲ ಮತ್ತೆ ಈತ ಸುಪ್ರೀಂಕೋರ್ಟ್‍ನಲ್ಲಿ ಪ್ರಯತ್ನಿಸಿದ್ದಾರೆ. ಆದರೆ ಸುಪ್ರೀಂಕೋರ್ಟ್ ಹೈಕೋರ್ಟ್‍ಗೆ ಹೋಗಿ ಎಂದ ನಂತರ ಹೈಕೋರ್ಟಿನಲ್ಲಿಯೇ ಮಧ್ಯಂತರ ಬೇಲ್ ಸಿಕ್ಕಕಾರಣ ಸೈಬಾರಾಬಾದ್ ಸೈಬರ್ ಪೋಲಿಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ಐದು ಘಂಟೆಗಳ ಕಾಲ ಸುಧೀರ್ಘವಾಗಿ ರವಿಪ್ರಕಾಶ್‍ನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ .

ಕೌಶಿಕ್ ರಾವ್

ಈ ವಿಚಾರಣೆಯ ನಂತರ ಮಾಧ್ಯಮಗಳೊಂದಿಗೆ ಮಾತಾನಾಡಿದ ರವಿಪ್ರಕಾಶ್ ಟಿ.ವಿ9ನನ್ನು ಇಬ್ಬರು ದೊಡ್ಡ ಬಂಡವಾಳಿಗರು ಅಕ್ರಮವಾಗಿ ಕೊಂಡುಕೊಂಡಿದ್ದಾರೆ ಮತ್ತು ನನ್ನ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿದ್ದಾರೆ. ನಿಯಮಗಳನ್ನು ಮೀರಿ ಮಂಡಳಿ ಸಭೆ ನಡೆಸಿ ನನ್ನನ್ನು ಹೊರಗೆ ಕಳುಹಿಸಿದ್ದಾರೆ. ಇದು ಮಾಫೀಯಾಗೂ, ಮಾಧ್ಯಮಕ್ಕು ಮಧ್ಯೆ ನಡೆಯುತ್ತಿರುವ ಧರ್ಮಯುಧ್ಧ, ಕೊನೆಗೆ ಪತ್ರಿಕೋಧ್ಯಮವೇ ಗೆಲ್ಲಲಿದೆ ಎಂದಿದ್ದಾರೆ. ನಾನು ಸಂಪೂರ್ಣವಾಗಿ ತನಿಖೆಗೆ ಪೋಲಿಸರಿಗೆ ಸಹಕರಿಸುತ್ತಿದ್ದೇನೆ ಅವರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ ಎಂದು ಹೇಳಿದ್ದಾರೆ. ಈಗ ಪ್ರಸ್ತುತ ಟಿ.ವಿ9 ಕನ್ನಡದ ಸಿ.ಈ.ಓ ನೇ ತೆಲುಗು ಟಿ.ವಿ.9 ವಾಹಿನಿಯ ಸಿ.ಈ.ಓ ಆಗಿ ನೇಮಕಗೊಂಡಿದ್ದಾರೆ.

ನಟ ಶಿವಾಜಿ

ಯಾರು ಈ ರವಿಪ್ರಕಾಶ್ ?

ಹಾರ್ವಡ್ ಬ್ಯುಸಿನೆಸ್ ಸ್ಕೂಲ್‍ನಲ್ಲಿ ಮೀಡಿಯಾ ಸ್ಟಾಟಜಿ ವಿಭಾಗದಲ್ಲಿ ಹಿಡಿತ ಸಾಧಿಸಿಬಂದ ರವಿಪ್ರಕಾಶ್, ತೇಜಾ ಟಿವಿಯಲ್ಲಿ ನ್ಯೂಸ್ ಹೆಡ್ಡ್ ಆಗಿ ಕೆಲಸಕ್ಕೆ ಸೇರಿದ ಸಮಯದಲ್ಲಿ ತನ್ನ ವಿಭಿನ್ನ ಶೈಲಿಯ ಕೆಲಸದಿಂದ ಮಾಧ್ಯಮಲೋಕದ ಮಂದಿಗೆ ಪರಿಚಿತನಾದ ಎಂದು ಹೇಳಲಾಗುತ್ತಿದೆ. ದೇಶದಲ್ಲಿ ಒಂದೋ ಎರಡೋ ಇಪ್ಪತ್ತನಾಲ್ಕು ಗಂಟೆ ಸುದ್ಧಿ ಮಾಧ್ಯಮಗಳಿದ್ದ ಸಮಯಕ್ಕೆ ಮೊದಲನೇ ಭಾರಿಗೆ ತೆಲುಗಿನಲ್ಲಿ ಟಿವಿ9 ಪ್ರಾರಂಭಿಸಿ ಸಂಚಲನ ಮೂಡಿಸಿದ್ದ. ಟಿವಿ9 ಅನ್ನು ನಂಬರ್ 1 ಮಾಡಲು ಸುದ್ಧಿಯಲ್ಲದ ಸುದ್ದಿಗಳನ್ನು ಡಿಬೇಟ್ ನಡೆಸಿದ ಬಗ್ಗೆ ಮತ್ತು TRP ಹುಚ್ಚು ಹತ್ತಿಸಿದವ ಎಂದು ಈತನ ಬಗ್ಗೆ ಆರೋಪವಿದೆ. ಆದರೆ ಅತಿವೇಗವಾಗಿ ಬೆಳೆದ ಈತ ಈಗ ನೆಲಕ್ಕೆ ಬಿದ್ದಿದ್ದು ಮೀಡೀಯಾ ಮಾಫೀಯಾವೇ ಕಾರಣವಾ? ಅಥವಾ ತನ್ನ ಕೆಡುಕುಬುದ್ದಿ ಕಾರಣವಾ ಎಂಬುದನ್ನು ಕೋರ್ಟ್ ತೀರ್ಮಾನಿಸಲಿದೆ.

ಮೀಡಿಯಾ ಹೌಸ್ ಗಳಲ್ಲಿ ನಿಜವಾಗಲೂ ಏನು ನಡೆಯುತ್ತಿದೆ?

ಸುದ್ಧಿಗಾಗಿ ನಿರಂತರ ಇಪ್ಪತ್ತನಾಲ್ಕು ಗಂಟೆ ತೋರಿಸುವ ಚಾನೆಲ್ ಗಳು ಬಂದಾಗಿನಿಂದ ಜನರು ಬಿಸಿ ಬಿಸಿ ಸುದ್ಧಿಗಳನ್ನು ನೋಡಲು ಶುರುಮಾಡಿದ ನಂತರ ಟಿ.ಆರ್.ಪಿ ಮತ್ತು ರಾಜಕೀಯ ಹಿಡತ ಇದನ್ನು ನಿಯಂತ್ರಿಸಲು ಶುರು ಮಾಡಿತ್ತು. ಈ ಮಾಧ್ಯಮಗಳು ಕೇವಲ ರಾಜಕೀಯ ಪಕ್ಷಗಳ ಬಾಲಗಳಾಗಿ ಕೆಲಸ ಮಾಡಿತ್ತಿರುವುದನ್ನು ಕಾಣಬಹುದಾಗಿದೆ. ಇದರ ನಡುವೆ ಸುದ್ದಿಮಾಧ್ಯಮಗಳನ್ನು ಅಡ್ಡ ಇಟ್ಟಕೊಂಡು ದೊಡ್ಡ ವ್ಯಾಪಾರಗಳೇ ನಡೆಯುತ್ತಿವೆ. ಕೆಲವು ಚಾನೆಲ್ ಗಳಂತು ಟಿ.ಆರ್.ಪಿಯನ್ನು ತೋರಿಸಿ ತಮಗೆ ಬೇಕಾದ ಸುದ್ಧಿಗಳನ್ನು ತೋರಿಸಿ ಪ್ರಪೊಗಂಡ ಮಾಡಲು ಪ್ಯಾಕೇಜ್ ತೆಗೆದುಕೊಳ್ಳುತ್ತಿದ್ದಾರೆ. ಈ ಸುದ್ಧಿ ವಾಹಿನಿಗಳ ಒಳಗಡೆ ಇರುವಂತಹ ಮುಖ್ಯಸ್ಥರು ಲಾಭದ ವಿಚಾರದಲ್ಲಿ ದೊಡ್ಡ ಜಗಳಗಳನ್ನೆ ಮಾಡಿಕೊಂಡಿದ್ದಾರೆ. ಆದರೆ ಈ ಗಲಾಟೆ ಮಾತ್ರ ಹೊರಬಂದು ಸಂಚಲನ ಉಂಟುಮಾಡಿದೆ. ಇನ್ನುಳಿದವರು ಯಾವಾಗ ಹೊರಬರುತ್ತವೊ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...