Homeಮುಖಪುಟಟಿ.ವಿ9 ತೆಲುಗು ಚಾನೆಲ್ ನ ಮಾಜಿ ಸಿಈಓ ರವಿಪ್ರಕಾಶ್ ಹೊರಕ್ಕೆ: ಕಾರಣವೇನು? ಇಲ್ಲಿದೆ ಶಾಕಿಂಗ್ ಸ್ಟೋರಿ

ಟಿ.ವಿ9 ತೆಲುಗು ಚಾನೆಲ್ ನ ಮಾಜಿ ಸಿಈಓ ರವಿಪ್ರಕಾಶ್ ಹೊರಕ್ಕೆ: ಕಾರಣವೇನು? ಇಲ್ಲಿದೆ ಶಾಕಿಂಗ್ ಸ್ಟೋರಿ

ಹಾರ್ವಡ್ ಬ್ಯುಸಿನೆಸ್ ಸ್ಕೂಲ್‍ನಲ್ಲಿ ಮೀಡಿಯಾ ಸ್ಟಾಟಜಿ ವಿಭಾಗದಲ್ಲಿ ಹಿಡಿತ ಸಾಧಿಸಿಬಂದ ರವಿಪ್ರಕಾಶ್, ತೇಜಾ ಟಿವಿಯಲ್ಲಿ ನ್ಯೂಸ್ ಹೆಡ್ಡ್ ಆಗಿ ಕೆಲಸಕ್ಕೆ ಸೇರಿದ ಸಮಯದಲ್ಲಿ ತನ್ನ ವಿಭಿನ್ನ ಶೈಲಿಯ ಕೆಲಸದಿಂದ ಮಾಧ್ಯಮಲೋಕದ ಮಂದಿಗೆ ಪರಿಚಿತನಾದ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಇತ್ತಿಚಿಗೆ ರಾಜಕೀಯ ವಲಯಕ್ಕಿಂತ ಅತಿ ಭ್ರಷ್ಟವಾಗಿರುವುದು ಮಾಧ್ಯಮ ಎಂದು ನೇರವಾದ ಆರೋಪವನ್ನು ಒಬ್ಬ ಹಿರಿಯ ರಾಜಕಾರಣಿ ಮಾಡಿದ್ದರು. ಅದಕ್ಕೆ ಪೂರಕವೆಂಬಂತೆ ನಮ್ಮ ರಾಜ್ಯದಲ್ಲೂ ಹಲವು ಬ್ಲಾಕ್ ಮೈಲ್ ಮಾದ್ಯಮ ಮುಖ್ಯಸ್ಥರು ಜೈಲಿಗೆ ಹೋಗಿ ಬಂದ ನಿರ್ದಶನಗಳು ನಮ್ಮ ಕಣ್ಣ ಮುಂದೆ ಕಾಣಿಸುತ್ತಿವೆ. ದುಡ್ಡಿಗಾಗಿಯೇ ಸುದ್ದಿ ಎನ್ನುಂತಹ ಕಾಲ ಬಂದು ಬಹಳ ವರ್ಷವೇ ಆಗಿ ಹೋಗಿವೆ. 24/7 ಸುಧ್ಧಿವಾಹಿನಿಗಳೂ ಬಂದ ನಂತರವಂತು ನೈಜ ಸುದ್ಧಿಯ ಜಾಗದಲ್ಲಿ ಕೆಲವು ರಾಜಕೀಯ ಪಕ್ಷಗಳ ವಕ್ತಾರರಂತೆ ಪ್ರೊಪಗಂಡ ಹರಡುವ ಸುದ್ಧಿ ಮನೆಗಳಾಗಿ ಬದಲಾಗಿವೆ. ಎಷ್ಟೋ ಸಲ ತನ್ನ ಮಾಲೀಕನ ಹಿತ ಕಾಪಾಡುವ ನಾಯಿಯಂತಿರುವವರನ್ನು ಮಾತ್ರ ಉಳಿಸಿಕೊಂಡು ಉಳಿದವರನ್ನು ಆಚೆ ತಳ್ಳುವ ಸುದ್ದಿ ಮಾಧ್ಯಮಗಳು ಇವೆ. ಅಂತಹ ಒಂದು ಸ್ಟೋರಿ ಓದಿ.

ಇತ್ತಿಚಿಗೆ ಸುದ್ಧಿವಾಹಿನಿಗಳ ಸಾಲಿನಲ್ಲಿ ಅಗ್ರಗಣ್ಯ ಸ್ಥಾನದಲ್ಲಿರುವ ಟಿ.ವಿ9 ತೆಲುಗು ವಾಹಿನಿಯಲ್ಲಿ ಸಾಕಷ್ಟು ಜಗಳಗಳು ನಡೆದು ಹೋಗಿವೆ. ಬಹಳ ತಿಂಗಳುಗಳಿಂದ ನಡೆಯುತ್ತಿದ್ದ ಜಗಳ ಬಹಳ ವರ್ಷಗಳ ಕಾಲ ಟಿ.ವಿ 9 ಸಿ.ಈ.ಓ ಆಗಿದ್ದ ರವಿಪ್ರಕಾಶ್ ರನ್ನು ಸಂಸ್ಥೆ ದಿಢೀರನೆ ತೆಗೆದು ಹಾಕಿ ಅವರ ಮೇಲೆ ಕೇಸ್ ಹಾಕಿದ್ದು ಈಗ ದೊಡ್ಡ ವಿವಾದವಾಗಿದೆ. ಆದ ನಂತರ ಟಿ.ವಿ9 ಪಾಲುಧಾರಿಕೆ ಮಾರಟದ ವಿವಾದ ಹೊರಬಂದ ನಂತರ ತೆಲುಗು ಮಾಧ್ಯಮ ಕ್ಷೇತ್ರದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟು ಹಾಕಿದೆ. ದುಡ್ಡಿಗಾಗಿ ಬೀದಿ ಜಗಳ ಮಾಡಿಕೊಳ್ಳುತ್ತಿರುವ ಮಾಧ್ಯಮ ಮಂದಿಯನ್ನು ನೋಡಿ ಜನ ಸಿಟ್ಟಿಗೆದ್ದಿದ್ದಾರೆ.

ಟಿ.ವಿ.9 ಸಂಸ್ಥೆಯ ಆಡಳಿತ ಮಂಡಳಿ ಮತ್ತು ರವಿ ಪ್ರಕಾಶ್ ನಡುವಿನ ವಿವಾದ

ಟಿ.ವಿ.9 ಮುಖ್ಯ ಕಾರ್ಯನಿರ್ವಹಣಧಿಕಾರಿಯಾಗಿದ್ದ ರವಿಪ್ರಕಾಶ್ ರನ್ನು ಮೇ ತೀಂಗಳಲ್ಲಿ ಏಕಾಏಕಿ ಕೆಳಗಿಳಿಸಿತು. ಅಸೋಸಿಯೇಟೆಡ್ ಬ್ರಾಡ್‍ಕಾಸಟಿಂಗ್ ಕಂಪನಿ ಪ್ರೈ.ಲಿಮಿಟೆಡ್ (ಎ.ಬಿ.ಸಿ.ಬಿ.ಪಿ.ಎಲ್ – ಟಿವಿ9) ಸಂಸ್ಥೆಯ ಲೆಕ್ಕಪತ್ರಗಳನ್ನು ತಿರುಚಿದ್ದು ಮತ್ತು ಸಂಸ್ಥೆಯನ್ನು ಮೋಸಗೊಳಿಸಿದ್ದಾರೆಂದು ರವಿಪ್ರಕಾಶ್ ಮೇಲೆ ಹೊಸ ಆಡಳೀತ ಮಂಡಳಿ ‘ಅಳಂದಾ ಮೀಡಿಯಾ ಸಂಸ್ಥೆ’ಯ ಕೌಶಿಕ್ ರಾವ್ ರವರು ಸೈಬಾರ್ ಬಾದ್ ಪೋಲೀಸರಿಗೆ ದೂರನ್ನು ನೀಡಿದ್ದರು. ಟಿ.ವಿ9 ಸಂಸ್ಥೆಯ ತನ್ನ ಆಸ್ತಿ ಒಡೆತನದ, ಪಾಲುಗಳ ಮಾರಟದ ಬಗ್ಗೆ ರವಿಪ್ರಕಾಶ್ ಸುಳ್ಳು ಪತ್ರಗಳನ್ನು ಸೃಷ್ಟಿಮಾಡಿದ್ದಾರೆ ಮತ್ತು ತೆಲುಗು ಸಿನಿಮಾ ನಟ ಶಿವಾಜಿ, ಟಿವಿ9 ಸಂಸ್ಥೆಯ ಒಡೆತನದ ಹಕ್ಕುಗಳು ರವಿಪ್ರಕಾಶ್ ನಿಂದ ಖರೀದಿಮಾಡಿದ ರೀತಿಯ ನಕಲಿಪತ್ರಗಳು ಸೃಷ್ಟಿ ಮಾಡಿದ್ದಾರೆ ಇದಕ್ಕೆ ಅವರಿಬ್ಬರ ನಡುವೆ ನಡೆದ ಈಮೈಲ್ ವ್ಯವಹಾರಗಳೇ ಸಾಕ್ಷಿ ಎಂದು ಆರೋಪಿಸಿದ್ದಾರೆ.

ರವಿ ಪ್ರಕಾಶ್

ದೂರು ನೀಡಿದ ದಿನವೇ ಬಂಜಾರಾ ಹಿಲ್ಸ್ ನಲ್ಲಿರುವ ರವಿಪ್ರಕಾಶ್ ಮನೆ ಮತ್ತು ಟಿವಿ9 ಕಛೇರಿಯಲ್ಲಿದ್ದ ಕೆಲವು ಹಾರ್ಡಗ ಡಿಸ್ಕ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಕುರಿತು ಪೋಲಿಸರು ಸೆಕ್ಷನ್ 160, 41 ಅಡಿಯಲ್ಲಿ ಎರಡು ಭಾರಿ ಆತ ಮತ್ತು ಆತನ ಜೊತೆಗಾರ ಆರೋಪಿಗಳಿಗೆ ನೋಟಿಸ್ ನೀಡಿದ್ದಾರೆ. ಅದಕ್ಕೆ ಉತ್ತರಿಸದ ಇವರಿಬ್ಬರು ಬಹಳ ದಿನಗಳ ವರೆಗೆ ಅಜ್ಞಾತವಾಸದಲ್ಲಿದ್ದರು. ಹೈಕೋರ್ಟ್‍ಗೆ ಬೇಲ್ ಗಾಗಿ ಹೋದ ರವಿಪ್ರಕಾಶ್ ಗೆ ಬೇಲ್ ಸಿಕ್ಕಿಲ್ಲ ಮತ್ತೆ ಈತ ಸುಪ್ರೀಂಕೋರ್ಟ್‍ನಲ್ಲಿ ಪ್ರಯತ್ನಿಸಿದ್ದಾರೆ. ಆದರೆ ಸುಪ್ರೀಂಕೋರ್ಟ್ ಹೈಕೋರ್ಟ್‍ಗೆ ಹೋಗಿ ಎಂದ ನಂತರ ಹೈಕೋರ್ಟಿನಲ್ಲಿಯೇ ಮಧ್ಯಂತರ ಬೇಲ್ ಸಿಕ್ಕಕಾರಣ ಸೈಬಾರಾಬಾದ್ ಸೈಬರ್ ಪೋಲಿಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ಐದು ಘಂಟೆಗಳ ಕಾಲ ಸುಧೀರ್ಘವಾಗಿ ರವಿಪ್ರಕಾಶ್‍ನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ .

ಕೌಶಿಕ್ ರಾವ್

ಈ ವಿಚಾರಣೆಯ ನಂತರ ಮಾಧ್ಯಮಗಳೊಂದಿಗೆ ಮಾತಾನಾಡಿದ ರವಿಪ್ರಕಾಶ್ ಟಿ.ವಿ9ನನ್ನು ಇಬ್ಬರು ದೊಡ್ಡ ಬಂಡವಾಳಿಗರು ಅಕ್ರಮವಾಗಿ ಕೊಂಡುಕೊಂಡಿದ್ದಾರೆ ಮತ್ತು ನನ್ನ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿದ್ದಾರೆ. ನಿಯಮಗಳನ್ನು ಮೀರಿ ಮಂಡಳಿ ಸಭೆ ನಡೆಸಿ ನನ್ನನ್ನು ಹೊರಗೆ ಕಳುಹಿಸಿದ್ದಾರೆ. ಇದು ಮಾಫೀಯಾಗೂ, ಮಾಧ್ಯಮಕ್ಕು ಮಧ್ಯೆ ನಡೆಯುತ್ತಿರುವ ಧರ್ಮಯುಧ್ಧ, ಕೊನೆಗೆ ಪತ್ರಿಕೋಧ್ಯಮವೇ ಗೆಲ್ಲಲಿದೆ ಎಂದಿದ್ದಾರೆ. ನಾನು ಸಂಪೂರ್ಣವಾಗಿ ತನಿಖೆಗೆ ಪೋಲಿಸರಿಗೆ ಸಹಕರಿಸುತ್ತಿದ್ದೇನೆ ಅವರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ ಎಂದು ಹೇಳಿದ್ದಾರೆ. ಈಗ ಪ್ರಸ್ತುತ ಟಿ.ವಿ9 ಕನ್ನಡದ ಸಿ.ಈ.ಓ ನೇ ತೆಲುಗು ಟಿ.ವಿ.9 ವಾಹಿನಿಯ ಸಿ.ಈ.ಓ ಆಗಿ ನೇಮಕಗೊಂಡಿದ್ದಾರೆ.

ನಟ ಶಿವಾಜಿ

ಯಾರು ಈ ರವಿಪ್ರಕಾಶ್ ?

ಹಾರ್ವಡ್ ಬ್ಯುಸಿನೆಸ್ ಸ್ಕೂಲ್‍ನಲ್ಲಿ ಮೀಡಿಯಾ ಸ್ಟಾಟಜಿ ವಿಭಾಗದಲ್ಲಿ ಹಿಡಿತ ಸಾಧಿಸಿಬಂದ ರವಿಪ್ರಕಾಶ್, ತೇಜಾ ಟಿವಿಯಲ್ಲಿ ನ್ಯೂಸ್ ಹೆಡ್ಡ್ ಆಗಿ ಕೆಲಸಕ್ಕೆ ಸೇರಿದ ಸಮಯದಲ್ಲಿ ತನ್ನ ವಿಭಿನ್ನ ಶೈಲಿಯ ಕೆಲಸದಿಂದ ಮಾಧ್ಯಮಲೋಕದ ಮಂದಿಗೆ ಪರಿಚಿತನಾದ ಎಂದು ಹೇಳಲಾಗುತ್ತಿದೆ. ದೇಶದಲ್ಲಿ ಒಂದೋ ಎರಡೋ ಇಪ್ಪತ್ತನಾಲ್ಕು ಗಂಟೆ ಸುದ್ಧಿ ಮಾಧ್ಯಮಗಳಿದ್ದ ಸಮಯಕ್ಕೆ ಮೊದಲನೇ ಭಾರಿಗೆ ತೆಲುಗಿನಲ್ಲಿ ಟಿವಿ9 ಪ್ರಾರಂಭಿಸಿ ಸಂಚಲನ ಮೂಡಿಸಿದ್ದ. ಟಿವಿ9 ಅನ್ನು ನಂಬರ್ 1 ಮಾಡಲು ಸುದ್ಧಿಯಲ್ಲದ ಸುದ್ದಿಗಳನ್ನು ಡಿಬೇಟ್ ನಡೆಸಿದ ಬಗ್ಗೆ ಮತ್ತು TRP ಹುಚ್ಚು ಹತ್ತಿಸಿದವ ಎಂದು ಈತನ ಬಗ್ಗೆ ಆರೋಪವಿದೆ. ಆದರೆ ಅತಿವೇಗವಾಗಿ ಬೆಳೆದ ಈತ ಈಗ ನೆಲಕ್ಕೆ ಬಿದ್ದಿದ್ದು ಮೀಡೀಯಾ ಮಾಫೀಯಾವೇ ಕಾರಣವಾ? ಅಥವಾ ತನ್ನ ಕೆಡುಕುಬುದ್ದಿ ಕಾರಣವಾ ಎಂಬುದನ್ನು ಕೋರ್ಟ್ ತೀರ್ಮಾನಿಸಲಿದೆ.

ಮೀಡಿಯಾ ಹೌಸ್ ಗಳಲ್ಲಿ ನಿಜವಾಗಲೂ ಏನು ನಡೆಯುತ್ತಿದೆ?

ಸುದ್ಧಿಗಾಗಿ ನಿರಂತರ ಇಪ್ಪತ್ತನಾಲ್ಕು ಗಂಟೆ ತೋರಿಸುವ ಚಾನೆಲ್ ಗಳು ಬಂದಾಗಿನಿಂದ ಜನರು ಬಿಸಿ ಬಿಸಿ ಸುದ್ಧಿಗಳನ್ನು ನೋಡಲು ಶುರುಮಾಡಿದ ನಂತರ ಟಿ.ಆರ್.ಪಿ ಮತ್ತು ರಾಜಕೀಯ ಹಿಡತ ಇದನ್ನು ನಿಯಂತ್ರಿಸಲು ಶುರು ಮಾಡಿತ್ತು. ಈ ಮಾಧ್ಯಮಗಳು ಕೇವಲ ರಾಜಕೀಯ ಪಕ್ಷಗಳ ಬಾಲಗಳಾಗಿ ಕೆಲಸ ಮಾಡಿತ್ತಿರುವುದನ್ನು ಕಾಣಬಹುದಾಗಿದೆ. ಇದರ ನಡುವೆ ಸುದ್ದಿಮಾಧ್ಯಮಗಳನ್ನು ಅಡ್ಡ ಇಟ್ಟಕೊಂಡು ದೊಡ್ಡ ವ್ಯಾಪಾರಗಳೇ ನಡೆಯುತ್ತಿವೆ. ಕೆಲವು ಚಾನೆಲ್ ಗಳಂತು ಟಿ.ಆರ್.ಪಿಯನ್ನು ತೋರಿಸಿ ತಮಗೆ ಬೇಕಾದ ಸುದ್ಧಿಗಳನ್ನು ತೋರಿಸಿ ಪ್ರಪೊಗಂಡ ಮಾಡಲು ಪ್ಯಾಕೇಜ್ ತೆಗೆದುಕೊಳ್ಳುತ್ತಿದ್ದಾರೆ. ಈ ಸುದ್ಧಿ ವಾಹಿನಿಗಳ ಒಳಗಡೆ ಇರುವಂತಹ ಮುಖ್ಯಸ್ಥರು ಲಾಭದ ವಿಚಾರದಲ್ಲಿ ದೊಡ್ಡ ಜಗಳಗಳನ್ನೆ ಮಾಡಿಕೊಂಡಿದ್ದಾರೆ. ಆದರೆ ಈ ಗಲಾಟೆ ಮಾತ್ರ ಹೊರಬಂದು ಸಂಚಲನ ಉಂಟುಮಾಡಿದೆ. ಇನ್ನುಳಿದವರು ಯಾವಾಗ ಹೊರಬರುತ್ತವೊ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...